< ಯಾಕೋಬನು ಬರೆದ ಪತ್ರಿಕೆ 1 >

1 ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.
परमेश्वर को अऊर प्रभु यीशु मसीह को सेवक याकूब को तरफ सी, उन बारा गोत्रों ख जो तितर-बितर हुयो हंय उन्ख नमस्कार।
2 ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ.
हे मोरो भाऊवों अऊर बहिनों, जब तुम नाना तरह की परीक्षावों म पड़ो, त येख अपनो आप म बहुत आनन्द कि बात समझो,
3 ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ.
तुम जानय हय कि तुम्हरो विश्वास ख परख्यो जानो सी धीरज तैयार होवय हय।
4 ಆ ದೃಢ ನಿಷ್ಠೆಯು ನಿಮ್ಮಲ್ಲಿ ಪೂರ್ಣ ಕ್ರಿಯೆಯನ್ನು ಉಂಟುಮಾಡಿದಾಗ, ಆಗ ನೀವು ಪರಿಪಕ್ವತೆಗೆ ಬಂದವರೂ ಪರಿಪೂರ್ಣರೂ ಯಾವ ಕೊರತೆಯೂ ಇಲ್ಲದವರೂ ಆಗಿರುವಿರಿ.
पर धीरज ख अपनो पूरो काम करन देवो कि तुम पूरो अऊर सिद्ध होय जावो, अऊर तुम म कोयी बात की कमी नहीं रहे।
5 ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.
पर यदि तुम म सी कोयी ख बुद्धि की कमी हय त परमेश्वर सी मांगो, जो अनुग्रह अऊर उदारता सी देवय हय, अऊर ओख दियो जायेंन।
6 ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು.
पर विश्वास सी मांगे, अऊर कुछ शक मत करो, कहालीकि शक करन वालो समुन्दर की लहर को जसो हय जो हवा सी बहय अऊर उछलय हय।
7 ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ.
असो आदमी यो नहीं समझे कि मोख प्रभु सी कुछ मिलेंन,
8 ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ.
ऊ आदमी शक्की हय अऊर अपनी बातों म अस्थिर हय।
9 ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ.
गरीब विश्वासियों जब परमेश्वर तुम्ख ऊचो पद देवय हय तब खुशी मनाये,
10 ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು.
अऊर धनवान आदमी घास को फूल को जसो हय जो नाश होय जावय हय।
11 ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.
कहालीकि सूरज निकलतो समय कड़ी धूप पड़य हय अऊर पौधा मुरझाय जावय हय, अऊर ओको फूल झड़ जावय हय अऊर ओकी शोभा कम होत जावय हय। योच तरह धनवान भी अपनो कार्य म चलतो चलतो नाश होय जायेंन।
12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.
धन्य हय ऊ आदमी जो परीक्षा म स्थिर रह्य हय, कहालीकि ऊ खरो निकल क जीवन को ऊ मुकुट पायेंन जेकी प्रतिज्ञा प्रभु न अपनो प्रेम करन वालो सी करी हय।
13 ಯಾರಿಗಾದರೂ ಶೋಧನೆ ಬಂದಾಗ, “ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು,” ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ.
परीक्षा की घड़ी म कोयी ख यो नहीं कहनो चाहिये कि परमेश्वर मोरी परीक्षा ले रह्यो हय, कहालीकि बुरी बातों सी परमेश्वर ख कोयी लेनो देनो नहाय। ऊ कोयी की परीक्षा नहीं लेवय।
14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು.
पर हर एक आदमी अपनी बुरी इच्छा सी खिच क अऊर फस क परीक्षा म पड़य हय।
15 ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.
तब बुरी इच्छा गर्भवती होय क पाप ख जनम देवय हय अऊर जब पाप पूरी रीति सी बढ़ जावय हय त मृत्यु ख पैदा करय हय।
16 ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
हे मोरो प्रिय भाऊवों अऊर बहिनों, धोका मत खावो।
17 ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.
कहालीकि हर एक अच्छो दान अऊर हर एक अच्छो परिपूर्ण उपहार स्वर्ग सीच आवय हय, अऊर ऊ परमेश्वर को द्वारा जेन स्वर्गीय प्रकाश ख बनायो हय, ओख खल्लो लायो जावय हय, ऊ हमेशा बदलतो रहन वाली छाव को जसो नहीं बदलय।
18 ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.
ओन अपनीच इच्छा सी हम्ख सच को वचन को द्वारा पैदा करयो, ताकि हम ओकी सृष्टि करी हुयी चिजों म सी एक तरह को पहिलो फर हो।
19 ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
हे मोरो प्रिय भाऊवों अऊर बहिनों, या बात तुम जान लेवो: हर एक आदमी सुनन लायी तत्पर अऊर बोलन म धीमो अऊर गुस्सा म भी धीमो हो,
20 ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ.
कहालीकि आदमी को गुस्सा परमेश्वर को सच्चो उद्देश्य हासिल नहीं कर सकय।
21 ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
येकोलायी पूरी मलिनता अऊर कपट पन की बढ़ती ख दूर कर क्, ऊ वचन ख नम्रता सी स्वीकार कर लेवो जो दिल म बोयो गयो अऊर जो तुम्हरो उद्धार कर सकय हय।
22 ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
केवल सुनन वालो नहीं जो अपनो आप ख धोका देवय हंय पर वचन पर चलन वालो बने।
23 ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡ ಮನುಷ್ಯನಂತಿರುವನು.
कहालीकि जो कोयी वचन ख सुनन वालो हय अऊर ओको पर चलन वालो नहीं हो, त ऊ आदमी को जसो हय जो अपनो स्वाभाविक मुंह आरसा म देखय हय।
24 ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.
ऊ अपनो आप ख देख क चली जावय अऊर तुरतच भूल जावय हय कि मय कसो होतो।
25 ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.
पर जो आदमी स्वतंत्रता की सिद्ध व्यवस्था पर ध्यान करतो रह्य हय, ऊ सुन क भूलय नहीं पर वसोच काम करय हय, येकोलायी परमेश्वर ओको काम म आशीष देयेंन।
26 ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.
का कोयी अपनो आप ख सच्चो समझय हय? अऊर यदि खुद अपनी जीबली ख वश म नहीं कर सकतो त अपनो आप ख धोका दे रह्यो हय, त ओकी भक्ति बेकार हय।
27 ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.
हमरो परमेश्वर अऊर बाप को जवर शुद्ध अऊर निर्मल भक्ति यो हय कि अनाथों अऊर विधवावों को कठिनायी म ओकी सुधि ले, अऊर अपनो आप ख जगत सी निष्कलंक रखे।

< ಯಾಕೋಬನು ಬರೆದ ಪತ್ರಿಕೆ 1 >