< ಯೆರೆಮೀಯನು 10 >

1 ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ.
أَنْصِتُوا إِلَى الْقَضَاءِ الَّذِي تَكَلَّمَ بِهِ الرَّبُّ عَلَيْكُمْ يَا ذُرِّيَّةَ إِسْرَائِيلَ.١
2 ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ.
هَكَذَا قَالَ الرَّبُّ: «لا تَتَعَلَّمُوا طَرِيقَ الأُمَمِ، وَلا تَرْتَعِبُوا مِنْ آيَاتِ السَّمَاءِ الَّتِي تَرْتَعِبُ مِنْهَا الشُّعُوبُ.٢
3 ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.
لأَنَّ عَادَاتِ الأُمَمِ بَاطِلَةٌ، إِذْ تُقْطَعُ الشَّجَرَةُ مِنَ الْغَابَةِ ثُمَّ تُشَذِّبُهَا وَتَنْحَتُهَا يَدَا صَانِعٍ بِفَأْسٍ.٣
4 ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ. ಮೊಳೆಗಳಿಂದಲೂ ಸುತ್ತಿಗೆಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
ثُمَّ يُزَيِّنُونَهَا بِالْفِضَّةِ وَالذَّهَبِ وَتُثَبَّتُ بِالْمَسَامِيرِ وَالْمَطَارِقِ لِئَلَّا تَتَحَرَّكَ.٤
5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.
فَتَكُونُ كَفَزَّاعَةٍ فِي حَقْلِ قِثَّاءٍ لَا تَنْطِقُ، بَلْ تُحْمَلُ لأَنَّهَا عَاجِزَةٌ عَنِ الْمَشْيِ. فَلا تَخَافُوهَا لأَنَّهَا لَا تَضُرُّ وَلا تَنْفَعُ».٥
6 ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.
أَنْتَ لَا نَظِيرَ لَكَ يَا رَبُّ. عَظِيمٌ أَنْتَ، وَاسْمُكَ عَظِيمٌ فِي الْجَبَرُوتِ.٦
7 ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.
مَنْ لَا يَتَّقِيكَ يَا مَلِكَ الأُمَمِ؟ فَالْخَوْفُ يَلِيقُ بِكَ، إِذْ لَا يُوْجَدُ بَيْنَ حُكَمَاءِ الشُّعُوبِ وَفِي جَمِيعِ مَمَالِكِهِمْ مَنْ هُوَ نَظِيرُكَ.٧
8 ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.
جَمِيعُهُمْ بُلَدَاءُ وَحَمْقَى، يَتَلَقَّفُونَ الْعِلْمَ مِنْ أَصْنَامٍ خَشَبِيَّةٍ.٨
9 ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.
يُحْضِرُونَ لِصُنْعِهَا الْفِضَّةَ الْمُطَرَّقَةَ مِنْ تَرْشِيشَ، وَالذَّهَبَ مِنْ أُوفَازَ، فَهِيَ عَمَلُ صَانِعٍ مَاهِرٍ وَصَوْغُ يَدَيْ صَائِغٍ، وَتُكْسَى بِثِيَابٍ زَرْقَاءَ وَأُرْجُوَانِيَّةٍ. كُلُّهَا صَنْعَةُ صُنَّاعٍ مَهَرَةٍ.٩
10 ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.
أَمَّا الرَّبُّ فَهُوَ الإِلَهُ الْحَقُّ، الإِلَهُ الْحَيُّ وَالْمَلِكُ السَّرْمَدِيُّ. تَرْتَعِدُ الأَرْضُ أَمَامَ غَضَبِهِ وَلا تَتَحَمَّلُ الأُمَمُ فَرْطَ سُخْطِهِ.١٠
11 “ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’”
«وَهَذَا مَا تَقُولُونَهُ لَهُمْ: إِنَّ الآلِهَةَ الَّتِي لَمْ تَصْنَعِ السَّمَاوَاتِ وَالأَرْضَ يَجِبُ أَنْ تُسْتَأْصَلَ مِنَ الأَرْضِ وَمِنْ تَحْتِ السَّمَاءِ».١١
12 ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.
فَالرَّبُّ هُوَ الَّذِي صَنَعَ السَّمَاوَاتِ وَالأَرْضَ بِقُدْرَتِهِ، وَأَسَّسَ الدُّنْيَا بِحِكْمَتِهِ وَمَدَّ السَّمَاوَاتِ بِفِطْنَتِهِ.١٢
13 ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.
مَا إِنْ يَنْطِقُ بِصَوْتِهِ حَتَّى تَتَجَمَّعَ غِمَارُ الْمِيَاهِ فِي السَّمَاوَاتِ، وَتَصْعَدَ السُّحُبُ مِنْ أَقَاصِي الأَرْضِ. يَجْعَلُ لِلْمَطَرِ بُرُوقاً، وَيُطْلِقُ الرِّيحَ مِنْ خَزَائِنِهِ.١٣
14 ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.
كُلُّ إِنْسَانٍ خَامِلٌ وَعَدِيمُ الْمَعْرِفَةِ، وَكُلُّ صَائِغٍ أَخْزَاهُ تِمْثَالُهُ لأَنَّ صَنَمَهُ الْمَسْبُوكَ كَاذِبٌ وَلا حَيَاةَ فِيهِ.١٤
15 ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.
جَمِيعُ الأَصْنَامِ بَاطِلَةٌ، صَنْعَةُ ضَلالٍ، وَفِي زَمَنِ عِقَابِهَا تَبِيدُ.١٥
16 ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.
أَمَّا نَصِيبُ يَعْقُوبَ فَلَيْسَ مِثْلَ هَذِهِ الأَوْثَانِ، بَلْ هُوَ جَابِلُ كُلِّ الأَشْيَاءِ، وَشَعْبُ إِسْرَائِيلَ هُوَ شَعْبُ مِيرَاثِهِ، وَاسْمُهُ الرَّبُّ الْقَدِيرُ.١٦
17 ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು ನಿಮ್ಮ ಸೊತ್ತುಗಳನ್ನು ಕೂಡಿಸಿರಿ.
اجْمَعِي مِنَ الأَرْضِ حِزَمَكِ أَيَّتُهَا الْمُقِيمَةُ تَحْتَ الْحِصَارِ.١٧
18 ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.”
لأَنَّ هَذَا مَا يُعْلِنُهُ الرَّبُّ: «هَا أَنَا أَقْذِفُ بِمِقْلاعٍ سُكَّانَ الأَرْضِ فِي هَذِهِ الْمَرَّةِ، وَأُعَرِّضُهُمْ لِلضِّيقِ حَتَّى يَعْرِفُوا مُعَانَاتَهُ».١٨
19 ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ವಾಸಿಪಡಿಸಲಾಗದು. ಆದರೆ ನಾನು ನಿಶ್ಚಯವಾಗಿ, “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು.
وَيْلٌ لِي مِنْ أَجْلِ انْسِحَاقِي، فَجُرْحِي لَا شِفَاءَ مِنْهُ، وَلَكِنِّي قُلْتُ: «حَقّاً هَذِهِ بَلِيَّةٌ وَعَلَيَّ أَنْ أَتَحَمَّلَهَا».١٩
20 ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ.
قَدْ تَهَدَّمَ خِبَائِي وَتَقَطَّعَتْ حِبَالِي، وَهَجَرَنِي أَبْنَائِي وَلَمْ يَعُدْ لَهُمْ وُجُودٌ. لَيْسَ مَنْ يُقِيمُ خِبَائِي ثَانِيَةً وَيَبْسُطُ سُجُوفِي.٢٠
21 ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.
فَرُعَاةُ شَعْبِي بُلَدَاءُ لَمْ يَلْتَمِسُوا الرَّبَّ، لِذَلِكَ لَمْ يُفْلِحُوا وَتَشَتَّتَتْ جَمِيعُ رَعِيَّتِهِمْ.٢١
22 ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
اسْمَعُوا، هَا أَخْبَارٌ تَتَوَاتَرُ عَنْ جَيْشٍ عَظِيمٍ مُقْبِلٍ مِنَ الشِّمَالِ لِيُحَوِّلَ مُدُنَ يَهُوذَا إِلَى خَرَائِبَ وَمَأْوَى لِبَنَاتِ آوَى.٢٢
23 ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.
أَدْرَكْتُ يَا رَبُّ أَنَّ الإِنْسَانَ لَا يَمْلِكُ زِمَامَ طَرِيقِهِ، وَلَيْسَ فِي وُسْعِ الإِنْسَانِ أَنْ يُوَجِّهَ خُطَى نَفْسِهِ.٢٣
24 ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.
قَوِّمْنِي يَا رَبُّ بِحَقِّكَ لَا بِغَضَبِكَ، لِئَلَّا تُلاشِيَنِي.٢٤
25 ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.
لِيَنْصَبَّ سُخْطُكَ عَلَى الأُمَمِ الَّتِي لَمْ تَعْرِفْكَ، وَعَلَى الشُّعُوبِ الَّتِي لَا تَدْعُو بِاسْمِكَ، لأَنَّهُمْ قَدِ افْتَرَسُوا ذُرِّيَّةَ يَعْقُوبَ وَالْتَهَمُوهَا وَخَرَّبُوا مَسْكَنَهَا.٢٥

< ಯೆರೆಮೀಯನು 10 >