< ಯೆರೆಮೀಯನು 11 >

1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,
ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
2 “ಒಡಂಬಡಿಕೆಯ ಈ ವಚನಗಳನ್ನು ಕೇಳಿ, ಯೆಹೂದ್ಯರಿಗೂ ಯೆರೂಸಲೇಮಿನ ನಿವಾಸಿಗಳಿಗೂ ಸಾರು.
“ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಹಾಗೂ ಯೆರೂಸಲೇಮಿನ ನಿವಾಸಿಗಳಿಗೂ,
3 ನೀನು ಅವರಿಗೆ ಹೇಳಬೇಕಾದುದು: ಇಸ್ರಾಯೇಲ್ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
4 ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.
ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.
5 ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.
ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.
6 ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ.
ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.
7 ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ.
ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.
8 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’”
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.
9 ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ.
ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
10 ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.
೧೦ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.
11 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.
೧೧ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.
12 ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ.
೧೨ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’
13 ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’
೧೩ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
14 “ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು.
೧೪ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.
15 “ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”
೧೫ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?
16 ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು.
೧೬ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
17 ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.
೧೭ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.
18 ಯೆಹೋವ ದೇವರು ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.
೧೮ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.
19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.”
೧೯ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.
20 ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.
೨೦ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.
21 ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ,
೨೧ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.
22 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.
೨೨ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.
23 ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.”
೨೩ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.

< ಯೆರೆಮೀಯನು 11 >