< ಯೆರೆಮೀಯನು 11 >

1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,
यिर्मयाला परमेश्वराकडून मिळालेले वचन, ते म्हणाले:
2 “ಒಡಂಬಡಿಕೆಯ ಈ ವಚನಗಳನ್ನು ಕೇಳಿ, ಯೆಹೂದ್ಯರಿಗೂ ಯೆರೂಸಲೇಮಿನ ನಿವಾಸಿಗಳಿಗೂ ಸಾರು.
“यिर्मया, या कराराची वचने ऐक, आणि यहूदाच्या प्रत्येक मनुष्यास आणि यरूशलेममध्ये राहणाऱ्या हे घोषीत कर.
3 ನೀನು ಅವರಿಗೆ ಹೇಳಬೇಕಾದುದು: ಇಸ್ರಾಯೇಲ್ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
त्यांना असे सांग की, परमेश्वर, इस्राएलचा देव असे म्हणतो ‘जो कोणी या कराराची वचने ऐकत नाही, तो शापित असो.’
4 ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.
तुमच्या पूर्वजांना मिसर देशातून, लोखंडाच्या भट्टीतून बाहेर काढून आणले, त्यावेळी मी त्यांना हा करार आज्ञापिला आणि ही वचने आचरनात आणा, तर तुम्ही माझे व्हाल व मी तुमचा देव होईन.
5 ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.
तुमच्या पूर्वजांना दिलेल्या वचनाकरिता मी हे करीन, दूध व मध यांची रेलचेल असलेली सुपीक भूमी द्यायचे मी त्यांना कबूल केले होते. त्याच भूमीवर तुम्ही आता राहत आहात.” तेव्हा मी म्हणालो होय, परमेश्वरा!
6 ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ.
परमेश्वर मला म्हणाला, “यहूदाच्या शहरांतून व यरूशलेमेच्या रस्त्यांतून हे वचन घोषीत कर, कराराची वचने ऐका आणि त्यांचे पालन करा.
7 ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ.
कारण मी त्यांना मिसरच्या बाहेर काढले त्या दिवसापासून या दिवसापर्यंत मी तुमच्या पूर्वजांना इशारा देत आलो आहे की माझा शब्द ऐका.
8 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’”
पण त्यांनी माझे ऐकले नाही आणि लक्ष दिले नाही. ते दुराग्रही हृदयाचे बनले आणि आवडेल तेच त्यांनी केले. म्हणून मी त्यांना माझ्या आज्ञा पाळण्यास सांगितले, पण त्यांनी ते ऐकले नाही, म्हणून करारात उल्लेखलेल्या सर्व शापित गोष्टी मला त्यांच्याबाबत कराव्या लागल्या.”
9 ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ.
नंतर परमेश्वर मला म्हणाला, “यहूदातील आणि यरूशलेममधील लोकांमध्ये कट सापडला आहे.
10 ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.
१०ते त्यांच्या पूर्वजांनी केलेल्या पापांकडे वळले आहेत. त्यांच्या पूर्वजांनी माझे ऐकण्याचे नाकारले. त्यांनी दुसऱ्या देवांचे अनुसरण केले. त्यांची पूजा केली. इस्राएल व यहूदाच्या वंशजांनी, त्यांच्या पूर्वजांनी माझ्याशी केलेल्या, कराराचा भंग केला आहे.”
11 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.
११म्हणून परमेश्वर म्हणतो, मी त्यांना भयंकर संकटात टाकीन, ज्यातून त्यांना सुटका करून घेता येणार नाही. तेव्हा ते मदतीसाठी माझा धावा करतील, पण मी त्यांचे ऐकणार नाही.
12 ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ.
१२यहूदातील शहरे व यरूशलेममधील रहिवासी ज्यांना ते अर्पणे देत असत, आणि धूप जाळीत असत, असे ते त्यांच्या देवांकडे आरोळी करतील, पण त्या भयंकर संकटकाळी लोकांस मदत करणे त्या मूर्तीना शक्य होणार नाही.
13 ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’
१३कारण यहूदा तुझ्या नगरा इतकेच तुझे देव झाले आहेत, आणि तू लज्जास्पद बाल देवाच्या वेद्या, बाल देवाच्या धूप वेद्या, यरूशलेमामधल्या रस्त्यांच्या संख्येइतक्याच केल्या आहेत.
14 “ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು.
१४यिर्मया, तू या लोकांसाठी प्रार्थना करु नकोस आणि त्यांच्यासाठी विनंती करु नकोस. कारण जेव्हा ते दु: खात माझा धावा करतील, तेव्हा मी त्यांचे ऐकणार नाही.
15 “ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”
१५“माझ्या प्रिय लोकांनी, ज्यांनी इतके दुष्ट हेतू धरले आहेत, ते माझ्या घरात का आहेत? कारण तुझ्या अर्पणाचे मांस तुझा बचाव करु शकणार नाही, कारण तू वाईट केले आणि नंतर आनंद केला.”
16 ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು.
१६“दिसावयास देखणे असणाऱ्या हिरव्यागार फळाचे जैतूनाचे झाड असे नाव परमेश्वराने तुला दिले होते. पण आता मोठ्या गर्जनेच्या आवाजासहित त्याने त्यावर अग्नी पेटवला आहे. आणि त्याच्या फांद्या तोडल्या आहेत.
17 ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.
१७कारण सेनाधीश परमेश्वर, ज्याने तुला लावले आहे, तो तुझ्या विरूद्ध अरिष्ट बोलला आहे. कारण इस्राएल आणि यहूदाच्या लोकांनी कुकर्मे केली. त्यांनी ‘बाल’ देवाला यज्ञ अर्पण केले म्हणून मला राग आला.”
18 ಯೆಹೋವ ದೇವರು ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.
१८परमेश्वराने मला या गोष्टींचे ज्ञान दिले. म्हणून मला त्या समजल्या. परमेश्वरा, तू मला त्यांची कृत्ये दाखवली.
19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.”
१९ते माझ्याविरूद्ध योजना आखत आहेत हे मला माहीत नव्हते. मी कत्तल होण्याची वाट पाहणाऱ्या गरीब कोकरासारखा होतो. “आपण या झाडाचा आणि त्याच्या फळांचा नाश करु. आपण त्यास जीवंताच्या देशातून तोडून टाकू म्हणजे त्याचे नाव आठवणीत राहणार नाही.”
20 ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.
२०पण सेनाधीश परमेश्वर, जो तू सत्याने न्याय करतोस, जो तू हृदय व मन पारखतोस. तू त्यांच्यावर केलेला प्रतिकार मी साक्ष देईन, कारण मी आपला वाद तुझ्याजवळ उघड केला आहे.
21 ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ,
२१अनाथोथच्या लोकांबद्दल परमेश्वर या गोष्टी म्हणतो, जे तुझा जीव घेण्यास पाहत आहेत. ते म्हणातात, “परमेश्वराच्या नावावर भविष्यकथन करु नकोस, नाहीतर आम्ही तुला आमच्या हाताने ठार करु.”
22 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.
२२यास्तव सेनाधीश परमेश्वर असे म्हणतो, पाहा! “त्यांना मी शिक्षा करीन. त्यांचे तरुण तलवारीने मरण पावतील. त्यांची मुले आणि त्यांच्या मुली दुष्काळाने मरतील.
23 ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.”
२३त्यांच्यातील एकही मनुष्य शिल्लक राहणार नाही. कारण मी अनाथोथच्या लोकांवर वाईट, म्हणजे त्यांच्या शासनाचे वर्ष आणतो.”

< ಯೆರೆಮೀಯನು 11 >