< ಯೆರೆಮೀಯನು 17 >
1 “ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, ವಜ್ರದ ಮೊನೆಯಿಂದಲೂ ಬರೆಯಲಾಗಿದೆ. ಅದು ಅವರ ಹೃದಯದ ಹಲಗೆಯ ಮೇಲೆಯೂ ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ.
၁ယုဒအမျိုး၏ အပြစ်သည် သံကညစ်၊ စိန်ချွန်နှင့် သူတို့နှလုံးပြား၌၎င်း၊ ယဇ်ပလ္လင် ဦးချို၌၎င်း အက္ခရာ တင်၍ မှတ်သားလျက်ရှိ၏။
2 ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.
၂သူငယ်တို့ပင် မြင့်သောတောင်ပေါ်၊ စိမ်းသော သစ်ပင်နားမှာရှိသော ယဇ်ပလ္လင်များ၊ အာရှရပင်များကို အောက်မေ့တတ်ကြ၏။
3 ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
၃အချင်းငါ၏တောင်၊ လယ်၌ရှိသော သင်၏ဥစ္စာ နှင့်သိုထားသမျှသော ဥစ္စာကို၎င်း၊ ပြည်တရှောက်လုံး၌ သင်ပြစ်မှားရာ၊ မြင့်သောအရပ်တို့ကို၎င်း၊ လုယူသော သူတို့လက်သို့ ငါအပ်မည်။
4 ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”
၄သင့်ကိုယ်တိုင်လည်း ငါပေးသောအမွေမှ ရွေ့ သွားရလိမ့်မည်။ သင်မသိသော ပြည်တွင်၊ ရန်သူလက်၌ သင့်ကို ငါကျွန်ခံစေမည်။ အကြောင်းမူကား၊ အစဉ် အလာသောငါ၏ အမျက်မီးကို သင်တို့သည် မွေးကြပြီ။
5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.
၅ထာဝရဘုရား မိန့်တော်မူသည်ကား၊ လူကို ကိုးစား၍ လူသတ္တဝါကို အမှီပြုသဖြင့်၊ စိတ်နှလုံးထဲ၌ ထာဝရဘုရားထံတော်မှ ထွက်သွားသော သူသည် ကျိန်အပ်သောသူဖြစ်၏။
6 ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
၆ထိုသူသည် လွင်ပြင်၌ရှိသော သစ်ပင်ခြောက် ကဲ့သို့ဖြစ်၍၊ ကောင်းကျိုးရောက်ကြောင်းကို မသိရ။ အဘယ်သူမျှမနေသော ဆားမြေ၊ သွေ့ခြောက်သော လွင်ပြင်၌ နေရလိမ့်မည်။
7 “ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ, ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು.
၇ထာဝရဘုရားကို ကိုးစားသောသူ၊ ထာဝရ ဘုရားကို မိမိကိုးစားရာ အကြောင်းဖြစ် စေသော သူသည် ကောင်းကြီးမင်္ဂလာကို ခံအပ်သော သူဖြစ်၏။
8 ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”
၈ထိုသူသည်ကား၊ ရေရှိသော အရပ်၌စိုက်၍ မြစ်နားမှာ အမြစ်ဖြာသဖြင့်၊ ပူသောအရှိန် ရောက် ကြောင်းကို မသိ၊ အရွက်မညှိုးနွမ်း၊ မိုဃ်းခေါင်သော ကာလ၌ စိုးရိမ်စရာမရှိဘဲ၊ အစဉ်အမြဲ အသီးကို သီးတတ် သော အပင်နှင့်အတူ၏။
9 ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?
၉စိတ်နှလုံးသည် ခပ်သိမ်းသော အရာထက် စဉ်းလဲတတ်၏။ အလွန်ယိုယွင်းသော သဘောရှိ၏။ စိတ်နှလုံးသဘောကို အဘယ်သူသိနိုင်သနည်း။
10 “ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”
၁၀ငါထာဝရဘုရားသည် လူအသီးအသီးတို့အား မိမိတို့အကျင့်အတိုင်း၊ မိမိတို့ခံထိုက်သော အကျိုးအပြစ် ကို ပေးခြင်းငှါ၊ နှလုံးကျောက်ကပ်တို့ကို စေ့စေ့စစ်ကြော တတ်၏။
11 ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.
၁၁ကောရငှာက်သည် မိမိမဥသော ဥကို ဝပ်သကဲ့ သို့၊ မတရားသဖြင့် ဥစ္စာဆည်းဖူးသော သူသည် အသက် ပျိုစဉ်ကပင်၊ ဆင်းရဲခြင်းသို့ ရောက်၍ အဆုံး၌ကား၊ လူမိုက်ဖြစ်လိမ့်မည်။
12 ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
၁၂ရှေ့ဦးစွာမှစ၍ မြင့်သော အရပ်၌ ဘုန်းကြီး တော်မူသော ရာဇပလ္လင်သည် ငါတို့သန့်ရှင်းရာ ဌာန တော် အရပ်ဖြစ်၏။
13 ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.
၁၃အိုဣသရေလအမျိုး၏ မြော်လင့်စရာ အကြောင်းဖြစ်သော ထာဝရဘုရား၊ ကိုယ်တော်ကို စွန့်ပစ်သော သူအပေါင်းတို့သည် အရှက်ကွဲ ရကြပါလိမ့် မည်။ ငါ့ထံမှ ထွက်သွားသော သူတို့သည် မြေစာရင်းသို့ ဝင်ရကြပါလိမ့်မည်။ အကြောင်းမူကား၊ အသက်စမ်းရေ တွင်းတည်းဟူသော ထာဝရဘုရားကို စွန့်ပစ်ကြ သတည်း။
14 ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. ಏಕೆಂದರೆ, ನೀವೇ ನನಗೆ ಸ್ತುತ್ಯರು.
၁၄အို ထာဝရဘုရား၊ အကျွန်ုပ်၏ အနာကို ငြိမ်း စေတော်မူပါ။ သို့ပြုလျှင်၊ အကျွန်ုပ်သည် အနာငြိမ်းပါလိမ့် မည်။ အကျွန်ုပ်ကို ကယ်တင်တော်မူပါ။ သို့ပြုလျှင်၊ အကျွန်ုပ်သည် ကယ်တင်ခြင်းသို့ ရောက်ပါလိမ့်မည်။ ကိုယ်တော်သည် အကျွန်ုပ် ချီးမွမ်းရာဖြစ်တော်မူ၏။
15 ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ? ಅದು ಈಗ ನೆರವೇರಲಿ,” ಅನ್ನುತ್ತಾರೆ.
၁၅ထာဝရဘုရား၏ နှုတ်ကပတ်တော်သည် အဘယ်မှာရှိသနည်း။ ယခုလာပါစေတော့ဟု ဤသူတို့ သည် အကျွန်ုပ်အား ဆိုတတ်ကြပါ၏။
16 ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
၁၆အကျွန်ုပ်သည် နောက်တော်သို့ လိုက်သော ဆရာ၏အရာကို မရှောင်ပါ။ အမင်္ဂလာနေ့ကို မတောင့် တပါ။ အကျွန်ုပ်ဟောပြောချက်ကို ကိုယ်တော်သိတော် မူ၏။ ကိုယ်တော်မျက်မှောက်၌ ရှိပါ၏။
17 ನೀವು ನನ್ನನ್ನು ಭಯಪಡಿಸಬೇಡಿ. ಕೇಡಿನ ದಿನದಲ್ಲಿ ನೀವೇ ನನ್ನ ಆಶ್ರಯವಾಗಿದ್ದೀರಿ.
၁၇အကျွန်ုပ်ကို ထိတ်လန့်စေတော်မမူပါနှင့်။ ဘေး ရောက်သော ကာလ၌ ကိုယ်တော်သည် အကျွန်ုပ်ခိုလှုံရာ ဖြစ်တော်မူ၏။
18 ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ.
၁၈အကျွန်ုပ်ကို ညှဉ်းဆဲသောသူတို့သည် အရှက်ကွဲ ကြပါစေသော။ အကျွန်ုပ်မူကား၊ အရှက်မကွဲပါစေနှင့်။ သူတို့သည် စိတ်ပျက်ကြပါစေသော။ အကျွန်ုပ်မူကား၊ စိတ်မပျက်ပါစေနှင့်။ သူတို့အပေါ်မှာ ဘေးအန္တရာယ် ကာလကို ရောက်စေတော်မူပါ။ အထပ်ထပ်ဖျက်ဆီးတော် မူပါ။
19 ಯೆಹೋವ ದೇವರು ನನಗೆ, “ಹೋಗಿ, ಯೆಹೂದದ ಅರಸರು ಪ್ರವೇಶಿಸುವ, ಹೊರಡುವ ಜನರ ಬಾಗಿಲಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು,
၁၉ထာဝရဘုရားသည် ငါ့အားမိန့်တော်မူသည် ကား၊ ယုဒရှင်ဘုရင် ထွက်ဝင်သော အမျိုးသားချင်း မြို့တံခါးမှစ၍၊ ခပ်သိမ်းသော ယေရုရှလင် မြို့တံခါးဝ၌ သွား၍ရပ်လျက်၊
20 ಅವರಿಗೆ ಹೀಗೆ ಹೇಳು: ‘ಯೆಹೂದದ ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.
၂၀လူများတို့အား ပြောဆိုရမည်မှာ၊ ဤတံခါးတို့ဖြင့် ထွက်ဝင်သော ယုဒရှင်ဘုရင်များနှင့် ယုဒပြည်သူ ယေရု ရှလင်မြို့သားများအပေါင်းတို့၊ ထာဝရဘုရား၏ နှုတ် ကပတ်တော်ကို နားထောင်ကြလော့။
21 ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮಗೆ ನೀವೇ ಎಚ್ಚರಿಕೆಯಾಗಿರಿ. ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತೆಗೆದುಕೊಂಡು ಬರಬೇಡಿರಿ.
၂၁ထာဝရဘုရား မိန့်တော်မူသည်ကား၊ ဥပုသ်နေ့ ၌ ဝန်ကိုမထမ်းမရွက်၊ ယေရုရှလင်မြို့တံခါးဖြင့် မဆောင် မသွင်းမည်အကြောင်း၊ သတိပြုကြလော့။
22 ಸಬ್ಬತ್ ದಿನದಲ್ಲಿ ಹೊರೆಯನ್ನು ನಿಮ್ಮ ಮನೆಗಳಿಂದ ತೆಗೆದುಕೊಂಡು ಹೋಗಬೇಡಿರಿ. ಯಾವ ಕೆಲಸವನ್ನೂ ಮಾಡಬೇಡಿರಿ. ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರಕಾರವೇ, ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು.
၂၂ဥပုသ်နေ့၌ သင်တို့အိမ်ထဲက ဝန်ကို မထုတ် မဆောင်ကြနှင့်။ အဘယ်အလုပ်ကိုမျှ မလုပ်ကြနှင့်။ သင်တို့ဘိုးဘေးများကို ငါမှာထားသည်အတိုင်း၊ ဥပုသ်နေ့ ကို သန့်ရှင်းစေကြလော့။
23 ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.
၂၃ဘိုးဘေးတို့သည် နားမထောင်၊ နားကိုမလှည့်ဘဲ နေကြ၏။ နားမကြား၊ ဆုံးမခြင်းကို မခံမည်အကြောင်း၊ မိမိတို့လည်ပင်းကို ခိုင်မာစေကြ၏။
24 ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ,
၂၄ထာဝရဘုရား မိန့်တော်မူသည်ကား၊ သင်တို့ သည် ဥပုသ်နေ့၌ ဤမြို့တံခါးဖြင့် ဝန်ကို မသွင်းမဆောင်၊ အဘယ်အလုပ်ကိုမျှမလုပ်၊ ဥပုသ်နေ့ကို သန့်ရှင်းစေသည် တိုင်အောင်၊ ငါ့စကားကို စေ့စေ့နားထောင်လျှင်၊
25 ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು.
၂၅ဒါဝိဒ်မင်းကြီး၏ ရာဇပလ္လင်ပေါ်မှာ ထိုင်သော ရထားစီး၊ မြင်းစီးရှင်ဘုရင်၊ မင်းသားမှစ၍ သူတို့မှူးမတ်၊ ယုဒပြည်သူ၊ ယေရုရှလင်မြို့သားတို့သည် ဤမြို့တံခါးများ သို့ ဝင်လျက်ရှိကြလိမ့်မည်။ ဤမြို့သည်လည်း အစဉ်အမြဲ တည်လိမ့်မည်။
26 ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು.
၂၆မီးရှို့ရာယဇ်မှစ၍ အခြားသော ယဇ်များ၊ ပူဇော်သက္ကာများ၊ မီးရှို့ ရာနံ့သာပေါင်း၊ ချီးမွမ်းရာ ယဇ်တို့ကို ထာဝရဘုရား၏ အိမ်တော်သို့ ဆောင်ခဲ့သော သူတို့သည် ယုဒမြို့များ၊ ယေရုရှလင်မြို့ပတ်ဝန်းကျင် အရပ်များ၊ ဗင်္ယာမိန်ပြည်၊ မြေညီခရိုင်၊ တောင်ရိုးခရိုင်၊ တောင်မျက်နှာ ခရိုင်မှလာကြလိမ့်မည်။
27 ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’”
၂၇သို့မဟုတ်၊ ဥပုသ်နေ့၌ဝန်ကို ထမ်းရွက်၍၊ ယေရု ရှလင်မြို့တံခါးများသို့မဝင်၊ ဥပုသ်နေပကို သန့်ရှင်းစေ သည်တိုင်အောင်၊ သင်တို့သည် ငါ့စကားကို နားမထောင် လျှင်၊ ငါသည် ထိုမြို့တံခါးတို့ကို မီးရှို့၍၊ ထိုမီးသည် မငြိမ်းမသေဘဲ ယေရုရှလင်မြို့ဘုံဗိမာန်တို့ကို လောင်ရ လိမ့်မည်။