< ಯೆರೆಮೀಯನು 18 >
1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,
१यिर्मयाला परमेश्वराकडून आलेले वचन ते आहे, ते म्हणाले:
2 “ನೀನು ಎದ್ದು ಕುಂಬಾರನ ಮನೆಗೆ ಇಳಿದು ಹೋಗು. ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೊಡುತ್ತೇನೆ,” ಎಂದರು.
२“उठ आणि कुंभाराच्या घरी जा, कारण मी तेथे तुला माझी वचने देईन.”
3 ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು. ಇಗೋ, ಅವನು ಚಕ್ರದ ಮೇಲೆ ಕೆಲಸ ಮಾಡುತ್ತಿದ್ದನು.
३म्हणून मी कुंभाराच्या घरी गेलो, आणि पाहा! तो कुंभार चाकावर काम करीत होता,
4 ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟು ಹೋಯಿತು. ಆಗ ಕುಂಬಾರನಿಗೆ ಒಳ್ಳೆಯದೆಂದು ತೋರುವ ಪ್ರಕಾರ, ಅದನ್ನು ಮತ್ತೊಂದು ಪಾತ್ರೆಯನ್ನಾಗಿ ಮಾಡಿದನು.
४पण जे मातीचे पात्र तो तयार करत होता ते त्याच्या हातात असतांनाच बिघडले, म्हणून त्याने आपले विचार बदलले आणि त्याच्या दृष्टीस चांगले वाटणारे त्याचे त्याने पुन्हा एक दुसरे पात्र तयार केले.
5 ಅನಂತರ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,
५तेव्हा परमेश्वराचे वचन माझ्याकडे आले आणि म्हणाले:
6 “ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
६परमेश्वर असे म्हणतो, “इस्राएलाच्या घराण्यांनो, तुमच्याबरोबर या कुंभार सारखे वागण्यास मी सक्षम नाही काय? अहो, इस्राएलाच्या घराण्यांनो पाहा! जशी माती कुंभाराच्या हातात असती तसे तुम्ही माझ्या हातात आहात.
7 ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವುದಕ್ಕೂ ಕೆಡವುದಕ್ಕೂ ನಾಶಮಾಡುವುದಕ್ಕೂ ಮಾತಾಡುತ್ತೇನೋ,
७एखाद्यावेळी मी राष्ट्र व राज्य ह्याबद्दल बोलेल, ते बाहर काढने, फाडून टाकने किंवा नाश करणे असे बोलेल.
8 ನಾನು ಆ ಜನಾಂಗಕ್ಕೆ ವಿರೋಧವಾಗಿ ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ, ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.
८पण जर ज्या राष्ट्राविषयी मी बोललो, ते आपल्या दुष्कृत्यांपासून फिरले तर मी जे त्यांच्याविषयी करण्याचे योजिले होते त्याबद्दल अनुतापेन.
9 ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಮಾತನಾಡುತ್ತೇನೋ,
९आणि दुसऱ्या क्षणी, मी एखाद्या राष्ट्राबद्दल किंवा राज्याबद्दल ते बांधावे किंवा लावावे असे म्हणीन.
10 ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ, ನಾನು ಅದಕ್ಕೆ ಉಪಕಾರ ಮಾಡುತ್ತೇನೆಂದು ಹೇಳಿದ ಒಳ್ಳೆಯದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.
१०पण त्यांनी माझ्या दृष्टीमध्ये वाईट असे केले, तर मी जे चांगले सांगत होतो ते थांबवीन आणि त्यांच्यासाठी मी ते करीन.
11 “ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.
११तर आता, यहूदाच्या मनुष्यांशी आणि यरूशलेम येथे राहणाऱ्यांना असे सांग, की परमेश्वर असे म्हणतो: पाहा! मी तुमच्यावर संकटे आणण्याचे पाहत आहे. मी तुमच्याविरुध्द बेत आखत आहे. तेव्हा प्रत्येक आपल्या दुष्ट मार्गाविषयी पश्चाताप करा, आणि आपली मार्गे व आपली कर्मे नीट करा.
12 ಆದರೆ ಅವರೋ ಏನೂ ಪ್ರಯೋಜನ ಇಲ್ಲ. ಏಕೆಂದರೆ ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು. ನಾವೆಲ್ಲರೂ ನಮ್ಮ ದುಷ್ಟ ಹೃದಯದ ಮೊಂಡುತನವನ್ನು ಅನುಸರಿಸುತ್ತೇವೆ,’ ಎಂದರು.”
१२पण ते म्हणतात, आशा नाही, यास्तव आपण आपल्या योजनांनुसार कार्य करूया. आम्ही प्रत्येक आपल्या दुष्ट हृदयाच्या इच्छेप्रमाणे वागू.
13 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ಇತರ ಜನಾಂಗಗಳಲ್ಲಿ ವಿಚಾರಿಸಿರಿ. ಇಂಥವುಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾ ಭಯಂಕರವಾದದ್ದನ್ನು ಮಾಡಿದ್ದಾಳೆ.
१३यास्तव परमेश्वर असे म्हणतो: दुसऱ्या राष्ट्रांना विचारा, या अशा गोष्टी कोणी केल्याचे तुम्ही ऐकले आहे का? इस्राएलाच्या कुमारीने भयंकर असे काम केले आहे.
14 ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮವು ತಪ್ಪುವುದೇ? ದೂರದಿಂದ ಇಳಿದು ಹರಿಯುವ ತಂಪಾದ ಪ್ರವಾಹದ ನೀರು ಬತ್ತುವುದೇ?
१४लबानोन पर्वतांवरचे बर्फ शिखरावरील खडकाला कधी सोडील काय? दूर पर्वतातून वाहणाऱ्या झऱ्यांचे पाणी कधी आटेल काय?
15 ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.
१५पण माझे लोक मला विसरले आहेत, ते कवडी मोलाच्या मूर्तींना वस्तू अर्पण करतात आणि आपल्या मार्गात अडखळणे करतात. त्यांनी पूर्वजांच्या जुन्या वाटा सोडून ते आडवळणाने चालतात.
16 ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
१६यास्तव जे राष्ट्र भयानक आणि सर्वकाळासाठी फुत्काराची गोष्ट असा होईल. तिच्याजवळून जाणारा प्रत्येक हादरेल आणि आपले डोके हालवेल.
17 ಮೂಡಣ ಗಾಳಿಯಿಂದ ಆದ ಹಾಗೆ, ಅವರನ್ನು ಶತ್ರುವಿನ ಮುಂದೆ ಚದರಿಸುವೆನು. ಅವರ ಆಪತ್ತಿನ ದಿವಸದಲ್ಲಿ ಅವರಿಗೆ ಮುಖವನ್ನಲ್ಲ ಬೆನ್ನನ್ನು ತೋರಿಸುವೆನು.”
१७मी त्यांना पूर्वेचा वारा उडवतो तसे त्यांच्या वैऱ्यांपुढे उडवीन. त्यांच्या संकटाच्या समयी मी त्यांना मुख दाखवणार नाही तर पाठ दाखवीन.”
18 ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.
१८तेव्हा ते लोक म्हणाले, “या आपण यिर्मयाविरूद्ध योजना करु, कारण याजकापासून नियमशास्त्र, ज्ञानी लोकांकडून सल्ला, आणि संदेष्ट्यांपासून येणारे वचन हे नष्ट होणार नाहीत. चला आपण त्यास शब्दांचा मारा देऊ, आणि तो सांगत असलेल्या कोणत्याही गोष्टीकडे आपण लक्ष देऊ नाही.”
19 ಓ ಯೆಹೋವ ದೇವರೇ, ನನಗೆ ಕಿವಿಗೊಡು. ನನ್ನ ಸಂಗಡ ವ್ಯಾಜ್ಯವಾಡುವವರ ಮಾತನ್ನು ಕೇಳು.
१९हे परमेश्वरा, माझ्याकडे लक्ष दे! आणि माझ्या वैऱ्यांचा आवाज ऐक.
20 ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
२०त्यांच्यासाठी चांगले असून पण, अरिष्ट हेच माझी परतफेड असणार काय? कारण त्यांनी माझ्या जीवासाठी खड्डा खोदला आहे. त्यांच्या कल्याणासाठी बोलायला आणि तुझा क्रोध त्यांच्यापासून फिरवायला मी तुझ्यासमोर कसा उभा राहिलो ते आठव.
21 ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.
२१यास्तव त्यांच्या मुलांना दुष्काळात सोड, आणि तलवार या कडे त्यांना सोपवून दे. त्यांच्या स्त्रिया वांझ आणि विधवा होवोत, आणि त्यांचे पुरुष मरणाने मारले जावोत, युद्धात तेथील तरुण मारले जावोत.
22 ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ, ಕೂಗು ಅವರ ಮನೆಗಳೊಳಗಿಂದ ಕೇಳ ಬರಲಿ. ಏಕೆಂದರೆ, ನನ್ನನ್ನು ಹಿಡಿಯುವುದಕ್ಕೆ ಕುಳಿ ಅಗೆದಿದ್ದಾರೆ. ನನ್ನ ಕಾಲುಗಳಿಗೆ ಉರುಲುಗಳನ್ನು ಒಡ್ಡಿದ್ದಾರೆ.
२२तू त्यांच्यावर अचानक टोळी आणशील तेव्हा त्यांच्या घरातून आरोळी ऐकू येवो, कारण त्यांनी माझ्या पायाकरीता सापळा रचला आहे आणि मला पकडण्यासाठी त्यांनी खड्डा खोदला आहे.
23 ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.
२३परमेश्वरा, मला मारण्यासाठी त्यांनी रचलेले बेत तुला माहीत आहेतच. त्यांना त्यांच्या अपराधांबद्दल क्षमा करु नकोस. त्यांची पापे पुसून टाकू नकोस. त्याऐवजी ते तुझ्यासमोरुन फेकले जावोत, तू रागाच्या समयी त्यांच्याविरुद्ध कार्य कर.