< ಯೆರೆಮೀಯನು 30 >

1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,
यिर्मयाला परमेश्वरापासून जे वचन आले ते हे आहे आणि म्हणाले,
2 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು.
परमेश्वर, इस्राएलाचा देव, जे काही बोलला, तो म्हणतो, “मी तुझ्याशी बोललेले सर्व वचने आपणासाठी पुस्तकात लिहून ठेव.
3 ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”
कारण पाहा, परमेश्वराचे हे निवेदन आहे, असे दिवस येतील की, ज्यात मी आपल्या लोकांचे इस्राएल आणि यहूदा यांचे भविष्य प्रस्थापित करील. कारण मी त्यांच्या पूर्वजांना दिलेल्या देशात त्यांना परत आणीन आणि ते त्याचा ताबा घेतील.” असे मी परमेश्वर म्हणत आहे.
4 ಯೆಹೋವ ದೇವರು ಇಸ್ರಾಯೇಲನ್ನೂ, ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ,
इस्राएलाविषयी व यहूदाविषयी ही परमेश्वराने जाहीर केलेली वचने आहेत.
5 “ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನಾವು ನಡುಗುವಿಕೆಯ ಮತ್ತು ಭಯದ ಧ್ವನಿಯನ್ನು ಕೇಳಿದ್ದೇವೆಯೇ ಹೊರತು, ಸಮಾಧಾನದ್ದಲ್ಲ.
कारण परमेश्वर हे म्हणाला, “आम्ही दहशतीने थरथर कापणाऱ्याची वाणी ऐकली आहे शांतीची नाही.
6 ಈಗ ವಿಚಾರಿಸಿ ನೋಡಿರಿ. ಪುರುಷನು ಮಗುವನ್ನು ಹೆರಬಲ್ಲನೇ. ನಾನು ಏಕೆ ಪುರುಷರೆಲ್ಲರೂ ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲಕ್ಕೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಏಕೆ ಮುಖಗಳೆಲ್ಲಾ ಕಳೆಗುಂದಿದವು?
विचारा व पाहा जर पुरुष बालकाला जन्म देईल. प्रत्येक तरुण पुरुषाचा हात प्रसवणाऱ्या स्त्रीप्रमाणे त्याच्या कमरेवर दिला आहे हे मी का पाहत आहे? त्या सर्वांची चेहरे फिक्के का पडली आहेत?
7 ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’
हायहाय! तो दिवस महान आहे, त्याच्यासारखा कोणताही नाही. तो याकोबासाठी चिंतेचा समय आहे, पण त्यातून त्यांचे रक्षण होईल.
8 “ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ, ‘ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದು ಬಿಟ್ಟು, ಬಂಧನಗಳನ್ನು ಕಿತ್ತು ಹಾಕುವೆನು; ಇನ್ನು ವಿದೇಶಿಯರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.
सेनाधीश परमेश्वर म्हणतो त्या दिवशी असे होईल की, मी तुमच्या मानेवरील जोखड मोडीन आणि तुमची बंधने तोडीन, यापुढे परके तुला गुलाम करणार नाहीत.
9 ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ, ನಾನು ಅವರಿಗೋಸ್ಕರ ಎಬ್ಬಿಸುವ ಅವರ ಅರಸನಾದ ದಾವೀದನಿಗೂ ಸೇವೆಮಾಡುವರು.
पण परमेश्वर त्यांचा देव याची आणि दावीद त्यांचा राजा ज्याला मी त्यांच्यावर स्थापीन त्याची ते सेवा करतील.
10 “‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.
१०परमेश्वर असे म्हणतो, म्हणून तू याकोबा, माझ्या सेवका, घाबरु नकोस, आणि इस्राएला, हिंमत खचू नको. कारण पाहा, मी तुला दूर स्थानातून परत आणीन आणि तुझ्या वंशजांना बंदिवासाच्या देशातून तारीन. याकोब पुन्हा येईल आणि शांती असेल; तो सुरक्षित राहील आणि तेथे कोणी दहशत घालणार नाही.
11 ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’
११कारण परमेश्वर असे म्हणतो, मी तुला तारायला तुम्हाबरोबर आहे. मग मी ज्या राष्ट्रातून तुझी पांगापांग केली आहे. त्या सर्वांचा मी पूर्ण शेवट करीन, पण मी खात्रीने तुझा शेवट करणार नाही, तरी मी तुला न्यायाने शासन करीन आणि खचीत तुला शिक्षा केल्यावाचून सोडणार नाही.
12 “ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ನಿನ್ನ ಗಾಯವು ಗುಣವಾಗದಂಥಾದ್ದು. ನಿನ್ನ ಬಾಸುಂಡೆಯು ಅಘೋರವಾದದ್ದು.
१२कारण परमेश्वर असे म्हणतो, तुझी जखम बरी न होऊ शकणारी आहे; तुझा घाय संसर्गजन्य आहे.
13 ನಿನಗೋಸ್ಕರ ವಾದಿಸುವವರು ಯಾರೂ ಇರುವುದಿಲ್ಲ. ನಿನ್ನ ಗಾಯವನ್ನು ನಿನಗೆ ಕಟ್ಟುವ ಹಾಗೆ ವಾಸಿಮಾಡುವ ಔಷಧಗಳು ನಿನಗೆ ಇಲ್ಲ.
१३तुझा वाद चालवणारा कोणीही नाही; तुझा घाय बरा करण्यासाठी कोणताही उपाय नाही.
14 ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;
१४तुझे सर्व प्रियकर तुला विसरले आहेत. ते तुला शोधत नाहीत, कारण तुझ्या पुष्कळ अन्यायामुळे आणि अगणित पापांमुळे, मी तुला शत्रूप्रमाणे जखम करून आणि क्रूर धन्याप्रमाणे शिक्षा करून, मी तुला घायाळ केले आहे.
15 ನಿನ್ನ ಗಾಯದ ನೋವಿನ ನಿಮಿತ್ತ ಏಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗದಂಥಾದ್ದೇ. ನಿನ್ನ ಅಕ್ರಮ ಬಹಳವಾಗಿರುವುದರಿಂದಲೂ, ನಿನ್ನ ಪಾಪಗಳು ಪ್ರಬಲವಾಗಿರುವುದರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
१५तुझ्या जखमेमुळे तू मदतीसाठी का ओरडतो? तुझ्या यातना बऱ्या न होऊ शकणाऱ्या आहेत. कारण तुझ्या पुष्कळ अन्यायामुळे, तुझ्या असंख्य पापामुळे मी तुला या गोष्टी केल्या आहेत.
16 “‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
१६म्हणून जे प्रत्येकजण तुला खाऊन टाकतील ते खाऊन टाकले जातील, आणि तुझे सर्व शत्रू बंदिवासात जातील. कारण ज्या कोणी तुला लुटले त्यांची लूट होईल आणि तुला लुटणाऱ्या सर्वांना मी लुटीस देईन.
17 ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.
१७कारण मी तुला आरोग्य देईन; मी तुमच्या जखमा बऱ्या करीन. हे परमेश्वराचे निवेदन आहे. मी हे करीन कारण की, त्यांनी तुला टाकून दिलेले म्हटले आहे. कोणीही या सियोनेची काळजी घेत नाही.
18 “ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.
१८परमेश्वर असे म्हणतो, पाहा, मी याकोबाच्या डेऱ्याचे भविष्य परत फिरवीन आणि त्याच्या घराण्यावर दया करीन. मग नगर नाशाच्या ढिगाऱ्यावर बांधण्यात येईल आणि ज्याठिकाणी किल्ले होते त्याच जागी पुन्हा होतील.
19 ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ.
१९नंतर त्यांच्यामधून उपकारस्तुती आणि आनंदोत्सव करणाऱ्यांचा आवाज निघेल, कारण मी त्यांची वाढ करीन आणि ती कमी होणार नाही; मी त्यांचे गौरव करीन म्हणजे ते हलके होणार नाहीत.
20 ಅವರ ಮಕ್ಕಳು ಸಹ ಪೂರ್ವಕಾಲದ ಹಾಗೆ ಇರುವರು. ಅವರ ಸಭೆಯು ನನ್ನ ಮುಂದೆ ಸ್ಥಾಪಿತವಾಗುವುದು. ಅವರನ್ನು ಬಾಧಿಸುವವರೆಲ್ಲರನ್ನು ಶಿಕ್ಷಿಸುವೆನು.
२०मग त्यांचे लोक पूर्वीच्या सारखे होतील आणि त्यांची मंडळी माझ्यासमोर प्रस्थापित होईल जेव्हा त्यांच्या सर्व लोकांना जे कोणी त्यांना आता पीडा देतील त्यांना मी शिक्षा करीन.
21 ಅವರ ಪ್ರಮುಖನು ಅವರೊಳಗೆ ಇರುವರು. ಅವರನ್ನು ಆಳುವವನು ಅವರ ಮಧ್ಯದಲ್ಲಿಂದ ಹೊರಡುವನು. ನಾನು ಅವನನ್ನು ಹತ್ತಿರ ಬರಮಾಡುವೆನು. ಅವನು ನನಗೆ ಸಮೀಪಿಸುವನು. ಆದರೆ ನನಗೆ ಸಮೀಪಿಸುವುದಕ್ಕೆ ತನ್ನ ಹೃದಯ ನಿಶ್ಚಯಮಾಡಿಕೊಂಡ ಇವನ್ಯಾರು,’ ಎಂದು ಯೆಹೋವ ದೇವರು ಹೇಳುತ್ತಾರೆ.
२१त्यांचा पुढारी त्यांच्यातलाच होईल. तो त्यांच्यामधूनच निघेल जेव्हा मी त्यास जवळ येऊ देईन आणि जेव्हा तो माझ्याजवळ येईल. कारण जो माझ्याजवळ यायला कोणाची हिंमत आहे? हे परमेश्वराचे निवेदन आहे.
22 ‘ನೀವು ನನಗೆ ಪ್ರಜೆಯಾಗಿರುವಿರಿ. ನಾನು ನಿಮಗೆ ದೇವರಾಗಿರುವೆನು.’”
२२मग तुम्ही लोक माझे व्हाल आणि मी तुमचा देव होईन.”
23 ಇಗೋ, ಯೆಹೋವ ದೇವರ ಬಿರುಗಾಳಿ ರೌದ್ರವಾಗಿ ಹೊರಡುತ್ತದೆ. ಅದು ಬಡಿದುಕೊಂಡು ಹೋಗುವ ಬಿರುಗಾಳಿಯೇ. ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವುದು.
२३पाहा, परमेश्वराचे क्रोधरूप तुफान सुटले आहे. ते तुफान निरंतर आहे. ते धुव्वा उडविणारी वावटळ दुष्ट लोकांच्या डोक्यावर आदळेल.
24 ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.
२४परमेश्वर आपल्या हृदयाचे उद्देश पूर्ण करून सिद्धीस नेईपर्यंत त्याचा संतप्त क्रोध परत जाणार नाही. अंतीम दिवसात, तुम्हास ते समजतील.

< ಯೆರೆಮೀಯನು 30 >