< ಯೆರೆಮೀಯನು 31 >

1 “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.
“उन दिनों में मैं सारे इस्राएली कुलों का परमेश्वर ठहरूँगा और वे मेरी प्रजा ठहरेंगे, यहोवा की यही वाणी है।”
2 ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.”
यहोवा यह कहता है: “जो प्रजा तलवार से बच निकली, उन पर जंगल में अनुग्रह हुआ; मैं इस्राएल को विश्राम देने के लिये तैयार हुआ।”
3 ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.
“यहोवा ने मुझे दूर से दर्शन देकर कहा है। मैं तुझ से सदा प्रेम रखता आया हूँ; इस कारण मैंने तुझ पर अपनी करुणा बनाए रखी है।
4 ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.
हे इस्राएली कुमारी कन्या! मैं तुझे फिर बनाऊँगा; वहाँ तू फिर श्रृंगार करके डफ बजाने लगेगी, और आनन्द करनेवालों के बीच में नाचती हुई निकलेगी।
5 ಸಮಾರ್ಯದ ಪರ್ವತಗಳಲ್ಲಿ ತಿರುಗಿ ದ್ರಾಕ್ಷಿಗಿಡಗಳನ್ನು ನೆಡುವೆ. ರೈತರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭವಿಸುವರು.
तू सामरिया के पहाड़ों पर अंगूर की बारियाँ फिर लगाएगी; और जो उन्हें लगाएँगे, वे उनके फल भी खाने पाएँगे।
6 ಒಂದು ದಿನ ಬರುವದು, ಆಗ ಎಫ್ರಾಯೀಮನ ಪರ್ವತಗಳ ಮೇಲಿರುವ ಕಾವಲುಗಾರರು, ‘ಏಳಿರಿ, ಚೀಯೋನಿಗೆ, ನಮ್ಮ ಯೆಹೋವ ದೇವರ ಬಳಿಗೆ ಹೋಗೋಣ,’” ಎಂದು ಕೂಗುವರು.
क्योंकि ऐसा दिन आएगा, जिसमें एप्रैम के पहाड़ी देश के पहरुए पुकारेंगे: ‘उठो, हम अपने परमेश्वर यहोवा के पास सिय्योन को चलें।’”
7 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.
क्योंकि यहोवा यह कहता है: “याकूब के कारण आनन्द से जयजयकार करो: जातियों में जो श्रेष्ठ है उसके लिये ऊँचे शब्द से स्तुति करो, और कहो, ‘हे यहोवा, अपनी प्रजा इस्राएल के बचे हुए लोगों का भी उद्धार कर।’
8 ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ. ಅವರಲ್ಲಿ ಕುರುಡರೂ, ಕುಂಟರೂ, ಗರ್ಭಿಣಿಯಾದವರೂ, ದಿನತುಂಬಿದ ಗರ್ಭಿಣಿಯರೂ ಇರುವರು. ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗಿ ಬರುವರು.
देखो, मैं उनको उत्तर देश से ले आऊँगा, और पृथ्वी के कोने-कोने से इकट्ठे करूँगा, और उनके बीच अंधे, लँगड़े, गर्भवती, और जच्चा स्त्रियाँ भी आएँगी; एक बड़ी मण्डली यहाँ लौट आएगी।
9 ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.
वे आँसू बहाते हुए आएँगे और गिड़गिड़ाते हुए मेरे द्वारा पहुँचाए जाएँगे, मैं उन्हें नदियों के किनारे-किनारे से और ऐसे चौरस मार्ग से ले आऊँगा, जिससे वे ठोकर न खाने पाएँगे; क्योंकि मैं इस्राएल का पिता हूँ, और एप्रैम मेरा जेठा है।
10 “ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.
१०“हे जाति-जाति के लोगों, यहोवा का वचन सुनो, और दूर-दूर के द्वीपों में भी इसका प्रचार करो; कहो, ‘जिसने इस्राएलियों को तितर- बितर किया था, वही उन्हें इकट्ठे भी करेगा, और उनकी ऐसी रक्षा करेगा जैसी चरवाहा अपने झुण्ड की करता है।’
11 ಏಕೆಂದರೆ ಯೆಹೋವ ದೇವರು ಯಾಕೋಬ್ಯರನ್ನು ವಿಮೋಚಿಸಿದ್ದಾರೆ. ಅವರಿಗಿಂತ ಬಲಿಷ್ಠರ ಕೈಯೊಳಗಿಂದ ಅವರನ್ನು ಬಿಡಿಸಿದ್ದಾರೆ.
११क्योंकि यहोवा ने याकूब को छुड़ा लिया, और उस शत्रु के पंजे से जो उससे अधिक बलवन्त है, उसे छुटकारा दिया है।
12 ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.
१२इसलिए वे सिय्योन की चोटी पर आकर जयजयकार करेंगे, और यहोवा से अनाज, नया दाखमधु, टटका तेल, भेड़-बकरियाँ और गाय-बैलों के बच्चे आदि उत्तम-उत्तम दान पाने के लिये ताँता बाँधकर चलेंगे; और उनका प्राण सींची हुई बारी के समान होगा, और वे फिर कभी उदास न होंगे।
13 ಆಗ ಕನ್ನಿಕೆಯರೂ, ಪ್ರಾಯದವರೂ, ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು.
१३उस समय उनकी कुमारियाँ नाचती हुई हर्ष करेंगी, और जवान और बूढ़े एक संग आनन्द करेंगे। क्योंकि मैं उनके शोक को दूर करके उन्हें आनन्दित करूँगा, मैं उन्हें शान्ति दूँगा, और दुःख के बदले आनन्द दूँगा।
14 ಇದಲ್ಲದೆ ಯಾಜಕರನ್ನು ಹೇರಳವಾಗಿ ತೃಪ್ತಿಗೊಳಿಸುವೆನು. ನನ್ನ ಜನರು ನನ್ನ ಒಳ್ಳೆಯತನದಿಂದ ತೃಪ್ತಿಪಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ.
१४मैं याजकों को चिकनी वस्तुओं से अति तृप्त करूँगा, और मेरी प्रजा मेरे उत्तम दानों से सन्तुष्ट होगी,” यहोवा की यही वाणी है।
15 ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”
१५यहोवा यह भी कहता है: “सुन, रामाह नगर में विलाप और बिलक-बिलककर रोने का शब्द सुनने में आता है। राहेल अपने बालकों के लिये रो रही है; और अपने बालकों के कारण शान्त नहीं होती, क्योंकि वे नहीं रहे।”
16 ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು.
१६यहोवा यह कहता है: “रोने-पीटने और आँसू बहाने से रुक जा; क्योंकि तेरे परिश्रम का फल मिलनेवाला है, और वे शत्रुओं के देश से लौट आएँगे।
17 ನಿನ್ನ ಭವಿಷ್ಯದಲ್ಲಿ ನಿರೀಕ್ಷೆಯಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ಮಕ್ಕಳು ತಮ್ಮ ಸ್ವಂತ ದೇಶಕ್ಕೆ ತಿರುಗಿ ಬರುವರು.”
१७अन्त में तेरी आशा पूरी होगी, यहोवा की यह वाणी है, तेरे वंश के लोग अपने देश में लौट आएँगे।
18 “ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.
१८निश्चय मैंने एप्रैम को ये बातें कहकर विलाप करते सुना है, ‘तूने मेरी ताड़ना की, और मेरी ताड़ना ऐसे बछड़े की सी हुई जो निकाला न गया हो; परन्तु अब तू मुझे फेर, तब मैं फिरूँगा, क्योंकि तू मेरा परमेश्वर है।
19 ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’
१९भटक जाने के बाद मैं पछताया; और सिखाए जाने के बाद मैंने छाती पीटी; पुराने पापों को स्मरण कर मैं लज्जित हुआ और मेरा मुँह काला हो गया।’
20 ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’” ಎಂದು ಯೆಹೋವ ದೇವರು ಹೇಳುತ್ತಾರೆ.
२०क्या एप्रैम मेरा प्रिय पुत्र नहीं है? क्या वह मेरा दुलारा लड़का नहीं है? जब जब मैं उसके विरुद्ध बातें करता हूँ, तब-तब मुझे उसका स्मरण हो आता है। इसलिए मेरा मन उसके कारण भर आता है; और मैं निश्चय उस पर दया करूँगा, यहोवा की यही वाणी है।
21 “ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
२१“हे इस्राएली कुमारी, जिस राजमार्ग से तू गई थी, उसी में खम्भे और झण्डे खड़े कर; और अपने इन नगरों में लौट आने पर मन लगा।
22 ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”
२२हे भटकनेवाली कन्या, तू कब तक इधर-उधर फिरती रहेगी? यहोवा की एक नई सृष्टि पृथ्वी पर प्रगट होगी, अर्थात् नारी पुरुष की सहायता करेगी।”
23 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.
२३इस्राएल का परमेश्वर सेनाओं का यहोवा यह कहता है “जब मैं यहूदी बन्दियों को उनके देश के नगरों में लौटाऊँगा, तब उनमें यह आशीर्वाद फिर दिया जाएगाः ‘हे धर्मभरे वासस्थान, हे पवित्र पर्वत, यहोवा तुझे आशीष दे!’
24 ಯೆಹೂದದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ, ಮಂದೆಯ ಸಂಗಡ ಹೊರಡುವವರೂ ವಾಸವಾಗುವರು.
२४यहूदा और उसके सब नगरों के लोग और किसान और चरवाहे भी उसमें इकट्ठे बसेंगे।
25 ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ. ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.”
२५क्योंकि मैंने थके हुए लोगों का प्राण तृप्त किया, और उदास लोगों के प्राण को भर दिया है।”
26 ಅಷ್ಟರಲ್ಲಿ ಎಚ್ಚೆತ್ತು ನೋಡಿದೆನು. ನನ್ನ ನಿದ್ದೆ ನನಗೆ ಮಧುರವಾಗಿತ್ತು.
२६इस पर मैं जाग उठा, और देखा, और मेरी नींद मुझे मीठी लगी।
27 ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು.
२७“देख, यहोवा की यह वाणी है, कि ऐसे दिन आनेवाले हैं जिनमें मैं इस्राएल और यहूदा के घरानों के बाल-बच्चों और पशु दोनों को बहुत बढ़ाऊँगा।
28 ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
२८जिस प्रकार से मैं सोच-सोचकर उनको गिराता और ढाता, नष्ट करता, काट डालता और सत्यानाश ही करता था, उसी प्रकार से मैं अब सोच-सोचकर उनको रोपूँगा और बढ़ाऊँगा, यहोवा की यही वाणी है।
29 “ಆ ದಿನಗಳಲ್ಲಿ, “‘ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದದ್ದರಿಂದ, ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳುವುದಿಲ್ಲ.’
२९उन दिनों में वे फिर न कहेंगे: ‘पिताओं ने तो खट्टे अंगूर खाए, परन्तु उनके वंश के दाँत खट्टे हो गए हैं।’
30 ಆದರೆ ಒಬ್ಬೊಬ್ಬನು ಸ್ವಂತ ಪಾಪಕ್ಕಾಗಿ ಸಾಯುವನು. ಹುಳಿ ದ್ರಾಕ್ಷಿಯನ್ನು ತಿಂದ ಮನುಷ್ಯನು ಯಾವನೋ, ಅವನ ಹಲ್ಲುಗಳು ಚಳಿತು ಹೋಗುವುವು.”
३०क्योंकि जो कोई खट्टे अंगूर खाए उसी के दाँत खट्टे हो जाएँगे, और हर एक मनुष्य अपने ही अधर्म के कारण मारा जाएगा।
31 ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.
३१“फिर यहोवा की यह भी वाणी है, सुन, ऐसे दिन आनेवाले हैं जब मैं इस्राएल और यहूदा के घरानों से नई वाचा बाँधूँगा।
32 ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.
३२वह उस वाचा के समान न होगी जो मैंने उनके पुरखाओं से उस समय बाँधी थी जब मैं उनका हाथ पकड़कर उन्हें मिस्र देश से निकाल लाया, क्योंकि यद्यपि मैं उनका पति था, तो भी उन्होंने मेरी वह वाचा तोड़ डाली।
33 “ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.
३३परन्तु जो वाचा मैं उन दिनों के बाद इस्राएल के घराने से बाँधूँगा, वह यह है: मैं अपनी व्यवस्था उनके मन में समवाऊँगा, और उसे उनके हृदय पर लिखूँगा; और मैं उनका परमेश्वर ठहरूँगा, और वे मेरी प्रजा ठहरेंगे, यहोवा की यह वाणी है।
34 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”
३४और तब उन्हें फिर एक दूसरे से यह न कहना पड़ेगा कि यहोवा को जानो, क्योंकि, यहोवा की यह वाणी है कि छोटे से लेकर बड़े तक, सब के सब मेरा ज्ञान रखेंगे; क्योंकि मैं उनका अधर्म क्षमा करूँगा, और उनका पाप फिर स्मरण न करूँगा।”
35 ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು.
३५जिसने दिन को प्रकाश देने के लिये सूर्य को और रात को प्रकाश देने के लिये चन्द्रमा और तारागण के नियम ठहराए हैं, जो समुद्र को उछालता और उसकी लहरों को गरजाता है, और जिसका नाम सेनाओं का यहोवा है, वही यहोवा यह कहता है:
36 “ಈ ನಿಯಮಗಳು ನನ್ನ ಸನ್ನಿಧಿಯಿಂದ ಯಾವಾಗ ಇಲ್ಲದೆ ಹೋಗುವುವೋ, ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತುಹೋಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.
३६“यदि ये नियम मेरे सामने से टल जाएँ तब ही यह हो सकेगा कि इस्राएल का वंश मेरी दृष्टि में सदा के लिये एक जाति ठहरने की अपेक्षा मिट सकेगा।”
37 ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” ಎಂದು ಯೆಹೋವ ದೇವರು ಹೇಳುತ್ತಾರೆ.
३७यहोवा यह भी कहता है, “यदि ऊपर से आकाश मापा जाए और नीचे से पृथ्वी की नींव खोद खोदकर पता लगाया जाए, तब ही मैं इस्राएल के सारे वंश को उनके सब पापों के कारण उनसे हाथ उठाऊँगा।”
38 ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ಹನನೇಲನ ಬುರುಜು ಮೊದಲುಗೊಂಡು ಮೂಲೆಯ ಬಾಗಿಲಿನವರೆಗೂ ಪಟ್ಟಣವು ಕರ್ತರಿಗೆ ಕಟ್ಟಲಾಗುವ ದಿನಗಳು ಬರಲಿದೆ.
३८“देख, यहोवा की यह वाणी है, ऐसे दिन आ रहे हैं जिनमें यह नगर हननेल के गुम्मट से लेकर कोने के फाटक तक यहोवा के लिये बनाया जाएगा।
39 ಅಳತೆ ದಾರವು ಅದಕ್ಕೆ ಎದುರಾಗಿ ಗಾರೇಬಿನ ಗುಡ್ಡದ ಮೇಲೆ ನೇರವಾಗಿ ಹೊರಟು, ಗೋಯದವರೆಗೂ ಆವರಿಸಿಕೊಳ್ಳುವುದು.
३९मापने की रस्सी फिर आगे बढ़कर सीधी गारेब पहाड़ी तक, और वहाँ से घूमकर गोआ को पहुँचेगी।
40 ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”
४०शवों और राख की सब तराई और किद्रोन नाले तक जितने खेत हैं, घोड़ों के पूर्वी फाटक के कोने तक जितनी भूमि है, वह सब यहोवा के लिये पवित्र ठहरेगी। सदा तक वह नगर फिर कभी न तो गिराया जाएगा और न ढाया जाएगा।”

< ಯೆರೆಮೀಯನು 31 >