< ಯೆರೆಮೀಯನು 31 >
1 “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.
ख़ुदावन्द फ़रमाता है, मैं उस वक़्त इस्राईल के सब घरानों का ख़ुदा हूँगा और वह मेरे लोग होंगे।
2 ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.”
ख़ुदावन्द यूँ फ़रमाता है कि: इस्राईल में से जो लोग तलवार से बचे, जब वह राहत की तलाश में गए तो वीराने में मक़बूल ठहरे।
3 ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.
“ख़ुदावन्द फहले से मुझ पर ज़ाहिर हुआ और कहा कि मैंने तुझ से हमेशा की मुहब्बत रख्खी; इसीलिए मैंने अपनी शफ़क़त तुझ पर बढ़ाई।
4 ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.
ऐ इस्राईल की कुँवारी! मैं तुझे फिर आबाद करूँगा और तू आबाद हो जाएगी; तू फिर दफ़ उठाकर आरास्ता होगी, और ख़ुशी करने वालों के नाच में शामिल होने को निकलेगी।
5 ಸಮಾರ್ಯದ ಪರ್ವತಗಳಲ್ಲಿ ತಿರುಗಿ ದ್ರಾಕ್ಷಿಗಿಡಗಳನ್ನು ನೆಡುವೆ. ರೈತರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭವಿಸುವರು.
तू फिर सामरिया के पहाड़ों पर ताकिस्तान लगाएगी, बाग़ लगाने वाले लगायेंगे और उसका फल खाएँगे।
6 ಒಂದು ದಿನ ಬರುವದು, ಆಗ ಎಫ್ರಾಯೀಮನ ಪರ್ವತಗಳ ಮೇಲಿರುವ ಕಾವಲುಗಾರರು, ‘ಏಳಿರಿ, ಚೀಯೋನಿಗೆ, ನಮ್ಮ ಯೆಹೋವ ದೇವರ ಬಳಿಗೆ ಹೋಗೋಣ,’” ಎಂದು ಕೂಗುವರು.
क्यूँकि एक दिन आएगा कि इफ़्राईम की पहाड़ियों पर निगहबान पुकारेंगे कि 'उठो, हम सिय्यून पर ख़ुदावन्द अपने ख़ुदा के सामने चलें।”
7 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.
क्यूँकि ख़ुदावन्द यूँ फ़रमाता है कि: या'क़ूब के लिए ख़ुशी से गाओ और क़ौमों के सरताज के लिए ललकारो; 'ऐलान करो, हम्द करो और कहो, 'ऐ ख़ुदावन्द, अपने लोगों को, या'नी इस्राईल के बक़िये को बचा।
8 ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ. ಅವರಲ್ಲಿ ಕುರುಡರೂ, ಕುಂಟರೂ, ಗರ್ಭಿಣಿಯಾದವರೂ, ದಿನತುಂಬಿದ ಗರ್ಭಿಣಿಯರೂ ಇರುವರು. ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗಿ ಬರುವರು.
देखो, मैं उत्तरी मुल्क से उनको लाऊँगा, और ज़मीन की सरहदों से उनको जमा' करूँगा, और उनमें अंधे, और लंगड़े, और हामिला और ज़च्चा सब होंगे; उनकी बड़ी जमा'अत यहाँ वापस आएगी।
9 ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.
वह रोते और मुनाजात करते हुए आएँगे, मैं उनकी रहबरी करूँगा; मैं उनको पानी की नदियों की तरफ़ राह — ए — रास्त पर चलाऊँगा, जिसमें वह ठोकर न खाएँगे; क्यूँकि मैं इस्राईल का बाप हूँ और इफ़्राईम मेरा पहलौठा है।
10 “ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.
“ऐ क़ौमों, ख़ुदावन्द का कलाम सुनो, और दूर के जज़ीरों में 'ऐलान करो; और कहो, 'जिसने इस्राईल को तितर — बितर किया, वही उसे जमा' करेगा और उसकी ऐसी निगहबानी करेगा, जैसी गड़रिया अपने गल्ले की,
11 ಏಕೆಂದರೆ ಯೆಹೋವ ದೇವರು ಯಾಕೋಬ್ಯರನ್ನು ವಿಮೋಚಿಸಿದ್ದಾರೆ. ಅವರಿಗಿಂತ ಬಲಿಷ್ಠರ ಕೈಯೊಳಗಿಂದ ಅವರನ್ನು ಬಿಡಿಸಿದ್ದಾರೆ.
क्यूँकि ख़ुदावन्द ने या'क़ूब का फ़िदिया दिया है, और उसे उसके हाथ से जो उससे ताक़तवर था रिहाई बख़्शी है।
12 ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.
तब वह आएँगे और सिय्यून की चोटी पर गाएँगे, और ख़ुदावन्द की ने'मतों या'नी अनाज और मय और तेल, और गाय — बैल के और भेड़ — बकरी के बच्चों की तरफ़ इकट्ठे रवाँ होंगे; और उनकी जान सैराब बाग़ की तरह होगी, और वह फिर कभी ग़मज़दा न होंगे।
13 ಆಗ ಕನ್ನಿಕೆಯರೂ, ಪ್ರಾಯದವರೂ, ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು.
उस वक़्त कुवाँरियाँ और पीर — ओ — जवान ख़ुशी से रक़्स करेंगे, क्यूँकि मैं उनके ग़म को ख़ुशी से बदल दूँगा और उनको तसल्ली देकर ग़म के बाद ख़ुश करूँगा।
14 ಇದಲ್ಲದೆ ಯಾಜಕರನ್ನು ಹೇರಳವಾಗಿ ತೃಪ್ತಿಗೊಳಿಸುವೆನು. ನನ್ನ ಜನರು ನನ್ನ ಒಳ್ಳೆಯತನದಿಂದ ತೃಪ್ತಿಪಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ.
मैं काहिनों की जान को चिकनाई से सेर करूँगा, और मेरे लोग मेरी ने'मतों से आसूदा होंगे, ख़ुदावन्द फ़रमाता है।”
15 ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”
ख़ुदावन्द यूँ फ़रमाता है कि: “रामा में एक आवाज़ सुनाई दी, नौहा और ज़ार — ज़ार रोना; राख़िल अपने बच्चों को रो रही है, वह अपने बच्चों के बारे में तसल्ली पज़ीर नहीं होती, क्यूँकि वह नहीं हैं।”
16 ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು.
ख़ुदावन्द यूँ फ़रमाता है कि: अपनी रोने की आवाज़ को रोक, और अपनी आँखों को आँसुओं से बाज़ रख; क्यूँकि तेरी मेहनत के लिए बदला है, ख़ुदावन्द फ़रमाता है; और वह दुश्मन के मुल्क से वापस आएँगे।
17 ನಿನ್ನ ಭವಿಷ್ಯದಲ್ಲಿ ನಿರೀಕ್ಷೆಯಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ಮಕ್ಕಳು ತಮ್ಮ ಸ್ವಂತ ದೇಶಕ್ಕೆ ತಿರುಗಿ ಬರುವರು.”
और ख़ुदावन्द फ़रमाता है, तेरी 'आक़बत के बारे में उम्मीद है क्यूँकि तेरे बच्चे फिर अपनी हदों में दाख़िल होंगे।
18 “ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.
हक़ीक़त में मैंने इफ़्राईम को अपने आप पर यूँ मातम करते सुना, 'तू ने मुझे तम्बीह की, और मैंने उस बछड़े की तरह जो सधाया नहीं गया तम्बीह पाई। तू मुझे फेर तो मैं फिरूँगा, क्यूँकि तू ही मेरा ख़ुदावन्द ख़ुदा है।
19 ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’
क्यूँकि फिरने के बाद मैंने तौबा की, और तरबियत पाने के बाद मैंने अपनी रान पर हाथ मारा; मैं शर्मिन्दा बल्कि परेशान ख़ातिर हुआ, इसलिए कि मैंने अपनी जवानी की मलामत उठाई थी।
20 ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’” ಎಂದು ಯೆಹೋವ ದೇವರು ಹೇಳುತ್ತಾರೆ.
क्या इफ़्राईम मेरा प्यारा बेटा है? क्या वह पसन्दीदा फ़र्ज़न्द है? क्यूँकि जब — जब मैं उसके ख़िलाफ़ कुछ कहता हूँ, तो उसे जी जान से याद करता हूँ। इसलिए मेरा दिल उसके लिए बेताब है; मैं यक़ीनन उस पर रहमत करूँगा, ख़ुदावन्द फ़रमाता है।
21 “ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
“अपने लिए सुतून खड़े कर, अपने लिए खम्बे बना; उस शाहराह पर दिल लगा, हाँ, उसी राह से जिससे तू गई थी वापस आ। ऐ इस्राईल की कुँवारी, अपने इन शहरों में वापस आ।
22 ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”
ऐ नाफ़रमान बेटी, तू कब तक आवारा फिरेगी? क्यूँकि ख़ुदावन्द ने ज़मीन पर एक नई चीज़ पैदा की है, कि 'औरत मर्द की हिमायत करेगी।”
23 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.
रब्ब — उल — अफ़वाज, इस्राईल का ख़ुदा यूँ फ़रमाता है: “जब मैं उनके ग़ुलामों को वापस लाऊँगा, तो वह यहूदाह के मुल्क और उसके शहरों में फिर यूँ कहेंगे, ऐ सदाक़त के घर, ऐ कोह — ए — मुक़द्दस, ख़ुदावन्द तुझे बरकत बख़्शे।”
24 ಯೆಹೂದದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ, ಮಂದೆಯ ಸಂಗಡ ಹೊರಡುವವರೂ ವಾಸವಾಗುವರು.
और यहूदाह और उसके सब शहर उसमें इकट्ठे आराम करेंगे, किसान और वह जो गल्ले लिए फिरते हैं।
25 ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ. ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.”
क्यूँकि मैंने थकी जान को आसूदा, और हर ग़मगीन रूह को सेर किया है।
26 ಅಷ್ಟರಲ್ಲಿ ಎಚ್ಚೆತ್ತು ನೋಡಿದೆನು. ನನ್ನ ನಿದ್ದೆ ನನಗೆ ಮಧುರವಾಗಿತ್ತು.
अब मैंने बेदार होकर निगाह की, और मेरी नींद मेरे लिए मीठी थी।
27 ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು.
देखो, वह दिन आते हैं, ख़ुदावन्द फ़रमाता है, जब मैं इस्राईल के घर में और यहूदाह के घर में इंसान का बीज और हैवान का बीज बोऊँगा।
28 ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
और ख़ुदावन्द फ़रमाता है, जिस तरह मैंने उनकी घात में बैठ कर उनको उखाड़ा और ढाया और गिराया और बर्बाद किया और दुख दिया; उसी तरह मैं निगहबानी करके उनको बनाऊँगा और लगाऊँगा।
29 “ಆ ದಿನಗಳಲ್ಲಿ, “‘ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದದ್ದರಿಂದ, ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳುವುದಿಲ್ಲ.’
उन दिनों में फिर यूँ न कहेंगे, 'बाप — दादा ने कच्चे अंगूर खाए और औलाद के दाँत खट्टे हो गए।
30 ಆದರೆ ಒಬ್ಬೊಬ್ಬನು ಸ್ವಂತ ಪಾಪಕ್ಕಾಗಿ ಸಾಯುವನು. ಹುಳಿ ದ್ರಾಕ್ಷಿಯನ್ನು ತಿಂದ ಮನುಷ್ಯನು ಯಾವನೋ, ಅವನ ಹಲ್ಲುಗಳು ಚಳಿತು ಹೋಗುವುವು.”
क्यूँकि हर एक अपनी ही बदकिरदारी की वजह से मरेगा; हर एक जो कच्चे अँगूर खाता है, उसी के दाँत खट्टे होंगे।
31 ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.
“देख, वह दिन आते हैं, ख़ुदावन्द फ़रमाता है, जब मैं इस्राईल के घराने और यहूदाह के घराने के साथ नया 'अहद बाधूँगा;
32 ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.
उस 'अहद के मुताबिक़ नहीं, जो मैंने उनके बाप — दादा से किया जब मैंने उनकी दस्तगीरी की, ताकि उनको मुल्क — ए — मिस्र से निकाल लाऊँ; और उन्होंने मेरे उस 'अहद को तोड़ा अगरचे मैं उनका मालिक था, ख़ुदावन्द फ़रमाता है।
33 “ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.
बल्कि यह वह 'अहद है जो मैं उन दिनों के बाद इस्राईल के घराने से बाधूँगा, ख़ुदावन्द फ़रमाता है: मैं अपनी शरी'अत उनके बातिन में रख्खूँगा, और उनके दिल पर उसे लिखूँगा; और मैं उनका ख़ुदा हूँगा, और वह मेरे लोग होंगे;
34 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”
और वह फिर अपने — अपने पड़ोसी और अपने — अपने भाई को यह कह कर ता'लीम नहीं देंगे कि ख़ुदावन्द को पहचानो, क्यूँकि छोटे से बड़े तक वह सब मुझे जानेंगे, ख़ुदावन्द फ़रमाता है; इसलिए कि मैं उनकी बदकिरदारी को बख़्श दूँगा और उनके गुनाह को याद न करूँगा।”
35 ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು.
ख़ुदावन्द जिसने दिन की रोशनी के लिए सूरज को मुक़र्रर किया, और जिसने रात की रोशनी के लिए चाँद और सितारों का निज़ाम क़ाईम किया, जो समन्दर को मौजज़न करता है जिससे उसकी लहरें शोर करतीं है यूँ फ़रमाता है; उसका नाम रब्ब — उल — अफ़वाज है।
36 “ಈ ನಿಯಮಗಳು ನನ್ನ ಸನ್ನಿಧಿಯಿಂದ ಯಾವಾಗ ಇಲ್ಲದೆ ಹೋಗುವುವೋ, ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತುಹೋಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.
ख़ुदावन्द फ़रमाता है: “अगर यह निज़ाम मेरे सामने से ख़त्म हो जाए, तो इस्राईल की नसल भी मेरे सामने से जाती रहेगी कि हमेशा तक फिर क़ौम न हो।”
37 ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” ಎಂದು ಯೆಹೋವ ದೇವರು ಹೇಳುತ್ತಾರೆ.
ख़ुदावन्द यूँ फ़रमाता है कि: “अगर कोई ऊपर आसमान को नाप सके और नीचे ज़मीन की बुनियाद का पता लगा ले, तो मैं भी बनी — इस्राईल को उनके सब 'आमाल की वजह से रद्द कर दूँगा, ख़ुदावन्द फ़रमाता है।”
38 ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ಹನನೇಲನ ಬುರುಜು ಮೊದಲುಗೊಂಡು ಮೂಲೆಯ ಬಾಗಿಲಿನವರೆಗೂ ಪಟ್ಟಣವು ಕರ್ತರಿಗೆ ಕಟ್ಟಲಾಗುವ ದಿನಗಳು ಬರಲಿದೆ.
देख, वह दिन आते हैं, ख़ुदावन्द फ़रमाता है कि “यह शहर हननेल के बुर्ज से कोने के फाटक तक ख़ुदावन्द के लिए ता'मीर किया जाएगा।
39 ಅಳತೆ ದಾರವು ಅದಕ್ಕೆ ಎದುರಾಗಿ ಗಾರೇಬಿನ ಗುಡ್ಡದ ಮೇಲೆ ನೇರವಾಗಿ ಹೊರಟು, ಗೋಯದವರೆಗೂ ಆವರಿಸಿಕೊಳ್ಳುವುದು.
और फिर जरीब सीधी कोह — ए — जारेब पर से होती हुई जोआता को घेर लेगी।
40 ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”
और लाशों और राख की तमाम वादी और सब खेत क़िद्रोन के नाले तक, और घोड़े फाटक के कोने तक पूरब की तरफ़ ख़ुदावन्द के लिए पाक होंगे; फिर वह हमेशा तक न कभी उखाड़ा, न गिराया जाएगा।”