< ಯೆರೆಮೀಯನು 39 >
1 ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು.
शाह — ए — यहूदाह सिदक़ियाह के नवें बरस के दसवें महीने में, शाह — ए — बाबुल नबूकदनज़र अपनी तमाम फ़ौज लेकर येरूशलेम पर चढ़ आया और उसका घिराव किया।
2 ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು.
सिदक़ियाह के ग्यारहवें बरस के चौथे महीने की नवीं तारीख़ को शहर — की — फ़सील में रख़ना हो गया;
3 ನೇರ್ಗಲ್ ಸರೆಚರ್, ಸಮ್ಗರ್ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಚೋಯಿಸರ ಮುಖ್ಯಸ್ಥ ನೇರ್ಗಲ್ ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲಾ ಪದಾಧಿಕಾರಿಗಳು ಪುರಪ್ರವೇಶ ಮಾಡಿ, ಮಧ್ಯಮ ದ್ವಾರದೊಳಗೆ ಕುಳಿತುಕೊಂಡರು.
और शाह — ए — बाबुल के सब सरदार या'नी नेयिरीगल सराज़र, समगर नबू, सरसकीम, ख़्वाजासराओ का सरदार नेयिरीगल सराज़र मजूसियों का सरदार और शाह — ए — बाबुल के बाक़ी सरदार दाख़िल हुए और बीच के फाटक पर बैठे।
4 ಇವರನ್ನು ನೋಡಿ ಯೆಹೂದದ ಅರಸನಾದ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
और शाह — ए — यहूदाह सिदक़ियाह और सब जंगी मर्द उनको देख कर भागे, और दोनों दीवारों के बीच जो फाटक शाही बाग़ के बराबर था, उससे वह रात ही रात भाग निकले और वीराने की राह ली।
5 ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
लेकिन कसदियों की फ़ौज ने उनका पीछा किया और यरीहू के मैदान में सिदक़ियाह को जा लिया, और उसको पकड़ कर रिब्ला में शाह — ए — बाबुल नबूकदनज़र के पास हमात के 'इलाक़े में ले गए; और उसने उस पर फ़तवा दिया।
6 ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಶ್ರೇಷ್ಠರನ್ನೂ ರಿಬ್ಲದಲ್ಲಿ ಕೊಲ್ಲಿಸಿದನು.
और शाह — ए — बाबुल ने सिदक़ियाह के बेटों को रिब्ला में उसकी ऑखों के सामने ज़बह किया, और यहूदाह के सब शुरफ़ा को भी क़त्ल किया।
7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.
और उसने सिदक़ियाह की आँखें निकाल डालीं और बाबुल को ले जाने के लिए उसे ज़ंजीरों से जकड़ा।
8 ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
और कसदियों ने शाही महल को और लोगों के घरों को आग से जला दिया, और येरूशलेम की फ़सील को गिरा दिया।
9 ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು.
इसके बाद जिलौदारों का सरदार नबूज़रादान बाक़ी लोगों को, जो शहर में रह गए थे और उनको जो उसकी तरफ़ होकर उसके पास भाग आए थे, या'नी क़ौम के सब बाक़ी लोगों को ग़ुलाम करके बाबुल को ले गया।
10 ಆದರೆ ಜನರೊಳಗೆ ಏನಿಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶದಲ್ಲಿ ಬಿಟ್ಟು, ಅವರಿಗೆ ಆಗಲೇ ದ್ರಾಕ್ಷಿತೋಟಗಳನ್ನೂ, ಹೊಲಗಳನ್ನೂ ಕೊಟ್ಟನು.
लेकिन क़ौम के ग़रीबों को जिनके पास कुछ न था, जिलौदारों के सरदार नबूज़रादान ने यहूदाह के मुल्क में रहने दिया और उसी वक़्त उनको ताकिस्तान और खेत बख़्शे।
11 ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ:
और शाह — ए — बाबुल नबूकदनज़र ने यरमियाह के बारे में जिलौदारों के सरदार नबूज़रादान को ताकीद करके यूँ कहा,
12 “ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು.
कि “उसे लेकर उस पर ख़ूब निगाह रख, और उसे कुछ दुख न दे, बल्कि तू उससे वही कर जो वह तुझे कहे।”
13 ಹೀಗೆ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನನ್ನೂ, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳನ್ನೂ ಕಳುಹಿಸಿದನು.
तब जिलौदारों के सरदार नबूज़रादान, नाबूशज़बान ख़्वाजासराओं के सरदार, और नेयिरिगल सराज़र, मजूसियों के सरदार, और बाबुल के सब सरदारों ने आदमी भेजकर
14 ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
यरमियाह को क़ैदख़ाने के सहन से निकलवा लिया, और जिदलियाह — बिन — अख़ीक़ाम — बिन — साफ़न के सुपुर्द किया कि उसे घर ले जाए। इसलिए वह लोगों के साथ रहने लगा।
15 ಯೆರೆಮೀಯನು ಸೆರೆಮನೆಯ ಅಂಗಳದಲ್ಲಿರುವಾಗ ಯೆಹೋವ ದೇವರ ವಾಕ್ಯವು ಅವನಿಗೆ ಹೇಳಿದ್ದೇನೆಂದರೆ:
और जब यरमियाह क़ैदख़ाने के सहन में बन्द था, ख़ुदावन्द का यह कलाम उस पर नाज़िल हुआ:
16 “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ, ಹೇಳತಕ್ಕದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಒಳ್ಳೆಯದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ. ಅವು ಆ ದಿವಸಗಳಲ್ಲಿ ನಿನ್ನ ಮುಂದೆಯೇ ನೆರವೇರುವುವು.
कि “जा, 'अब्द मलिक कूशी से कह, 'रब्ब — उल — अफ़वाज, इस्राईल का ख़ुदा, यूँ फ़रमाता है कि: देख, मैं अपनी बातें इस शहर की भलाई कि लिए नहीं, बल्कि ख़राबी के लिए पूरी करूँगा; और वह उस रोज़ तेरे सामने पूरी होंगी।
17 ಆದರೆ ಆ ದಿವಸದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲಾಗುವುದಿಲ್ಲ.
लेकिन उस दिन मैं तुझे रिहाई दुँगा, ख़ुदावन्द फ़रमाता है, और तू उन लोगों के हवाले न किया जाएगा जिनसे तू डरता है।
18 ಏಕೆಂದರೆ ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು. ನೀನು ಖಡ್ಗದಿಂದ ಬೀಳುವುದಿಲ್ಲ. ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ, ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವುದೆಂದು ಯೆಹೋವ ದೇವರು ಹೇಳುತ್ತಾರೆ,’” ಎಂಬುದು.
क्यूँकि मैं तुझे ज़रूर बचाऊँगा और तू तलवार से मारा न जाएगा, बल्कि तेरी जान तेरे लिए ग़नीमत होगी; इसलिए कि तूने मुझ पर भरोसा किया, ख़ुदावन्द फ़रमाता है।”