< ಯೆರೆಮೀಯನು 41 >
1 ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ,
सातौँ महिनामा एलीशामाको नाति, नतन्याहको छोरो इश्माएल, जो राजकीय घरानाका थिए, तिनी राजाका दस जना अधिकारीसँगै मिस्पामा अहीकामका छोरा गदल्याहकहाँ आए । मिस्पामा तिनीहरूले सँगसँगै खानपान गरे ।
2 ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.
तर नतन्याहको छोरो इश्माएल र तिनीसित भएका दस जना मानिस उठे, र शापानका नाति, अहीकामका छोरा गदल्याहलाई तरवारले आक्रमण गरे । इश्माएलले गदल्याहलाई मारे, जसलाई बेबिलोनका राजाले देशको गभर्नर नियुक्त गरेका थिए ।
3 ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಅಲ್ಲಿ ಸಿಕ್ಕಿದ ಯೆಹೂದ್ಯರೆಲ್ಲರನ್ನೂ, ಕಸ್ದೀಯರೆಲ್ಲರನ್ನೂ, ಸೈನಿಕರನ್ನೂ ಇಷ್ಮಾಯೇಲನು ಕೊಂದುಹಾಕಿದನು.
त्यसपछि इश्माएलले मिस्पामा गदल्याहसित भएका सबै यहूदी र त्यहाँ भेट्टाइएका कल्दी योद्धाहरूलाई मारे ।
4 ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೆಯ ದಿನದಲ್ಲಿ, ಅದು ಯಾರಿಗೂ ತಿಳಿಯದ ವೇಳೆಯಲ್ಲಿ
तब गदल्याह मारिएको दोस्रो दिन भएको थयो तर पनि कसैलाई थाहा थिएन ।
5 ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.
शकेम, शीलो र सामरियाबाट आ-आफ्ना दारी खौरेका, लुगा च्यातेका र शरीर चिरै-चिरा पारेका असी जना मानिस आ-आफ्ना हातमा खानाका भेटीहरू र धुप लिएर परमप्रभुको मन्दिरमा जानलाई आए ।
6 ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು. ಅವರನ್ನು ಎದುರುಗೊಂಡ ಮೇಲೆ ಅವರಿಗೆ, “ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ,” ಎಂದನು.
तिनीहरू रुँदै जाँदै गर्दा नतन्याहको छोरो इश्माएल मिस्पाबाट तिनीहरूलाई भेट्न निस्के । तिनीहरूसित तिनको भेट हुँदा तिनले तिनीहरूलाई भने, “अहीकामका छोरा गदल्याहकहाँ आओ ।”
7 ಆಗ ಅವರು ಪಟ್ಟಣದ ಮಧ್ಯಕ್ಕೆ ಬಂದಾಗ, ನೆತನ್ಯನ ಮಗ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು, ಬಾವಿಯೊಳಗೆ ಹಾಕಿಬಿಟ್ಟರು.
जब तिनीहरू सहरभित्र प्रवेश गरे, तब नतन्याहको छोरो इश्माएलले तिनीहरूको हत्या गरे, तिनी र तिनका मानिसहरूका लाशलाई एउटा खाडलमा फाले ।
8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ.
तर तिनीहरूका बिचमा भएका दस जना यस्ता मानिस थिए जसले इश्माएललाई भने, “हामीलाई नमार्नुहोस्, किनकि हामीसित खेतमा लुकाइएका हाम्रा खाद्यपदार्थहरू अर्थात् गहूँ, जौ, तेल र मह छन् ।” त्यसैले तिनले तिनीहरू र तिनका साथीहरूलाई मारेनन् ।
9 ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು.
इश्माएलले हत्या गरी जुन इनारमा ती लाशहरू फलेका थिए, त्यो एउटा ठुलो इनार थियो जसलाई आसा राजाले इस्राएलका राजा बाशाको विरुद्धमा सुरक्षाको निम्ति खनेका थिए । नतन्याहको छोरो इश्माएलले यसलाई लाशहरूले भरे ।
10 ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.
त्यसपछि इश्माएलले मिस्पामा भएका अरू सबै मानिस, राजाका छोरीहरू र अहीकामका छोरा गदल्याहको जिम्मामा अङ्गरक्षकका कप्तान नबूजरदानले मिस्पामा छाडेका सबै मानिसलाई समाते । यसरी नतन्याहको छोरो इश्माएलले तिनीहरूलाई कैद गरे र सिमाना पार गरेर अम्मोनका मानिसहरूकहाँ गए ।
11 ಆದರೆ ಕಾರೇಹನ ಮಗ ಯೋಹಾನಾನನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ,
तर कारेहका छोरा योहानान र तिनीसित भएका सबै सेनाका कप्तानले नतन्याहको छोरो इश्माएलले ल्याएका सबै हानिको विषयमा सुने ।
12 ಆ ಮನುಷ್ಯರನ್ನೆಲ್ಲಾ ಕರೆದುಕೊಂಡು ನೆತನ್ಯನ ಮಗ ಇಷ್ಮಾಯೇಲನ ಸಂಗಡ ಯುದ್ಧಮಾಡುವುದಕ್ಕೆ ಹೋಗಿ, ಗಿಬ್ಯೋನಿನಲ್ಲಿರುವ ದೊಡ್ಡ ಕೆರೆಯ ಬಳಿಯಲ್ಲಿ ಅವನನ್ನು ಕಂಡರು.
त्यसैले तिनीहरूले आफ्ना सबै मानिसलाई लिए र नतन्याहको छोरो इश्माएलको विरुद्धमा युद्ध गर्न गए । तिनीहरूले तिनलाई गिबोनको ठुलो तलाउमा फेला पारे ।
13 ಆಗ ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ, ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ನೋಡಿದಾಗ, ಸಂತೋಷಪಟ್ಟರು.
जब इश्माएलसित भएका सबै मानिसले कारेहका छोरा योहानान र तिनीसित भएका सबै सेनाका कप्तानलाई देखे, तब तिनीहरू साह्रै खुसी भए ।
14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರು ಸುತ್ತಿಕೊಂಡು ತಿರುಗಿಕೊಂಡು, ಕಾರೇಹನ ಮಗನಾದ ಯೋಹಾನಾನನ ಬಳಿಗೆ ಬಂದರು.
इश्माएलले मिस्पामा समातेका सबै मानिस फर्के र कारेहका छोरा योहानानकहाँ गए ।
15 ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು.
तर नतन्याहको छोरो इश्माएल आठ जना मानिससँगै योहानानबाट भागे । तिनी अम्मेनका मानिसहरूकहाँ गए ।
16 ಆಗ ಕಾರೇಹನ ಮಗನಾದ ಯೋಹಾನಾನನೂ, ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗ ಗೆದಲ್ಯನನ್ನು ಕೊಂದುಹಾಕಿದ ತರುವಾಯ, ತಪ್ಪಿಸಿಬಿಟ್ಟಿದ್ದ ಉಳಿದ ಜನರೆಲ್ಲರನ್ನು ಎಂದರೆ, ಗಿಬ್ಯೋನನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಕಂಚುಕಿಯರನ್ನೂ ಮಿಚ್ಪದಿಂದ ಕರೆದುಕೊಂಡು ಹೊರಟು,
कारेहका छोरा योहानान र तिनीसित भएका सबै सेनाका कप्तानले नतन्याहको छोरो इश्माएलबाट उद्धार गरिएका सबै मानिसलाई मिस्पाबाट लगे । यो इश्माएलले अहीकामका छोरा गदल्याहलाई मारेपछिको कुरो थियो । योहानान र तिनका साथीहरूले गिबोनमा उद्धार गरिएका बलिया पुरुषहरू, योद्धाहरू, स्त्रीहरू, बालबालिका र नपुंसकहरूलाई लगे ।
17 ಈಜಿಪ್ಟಿಗೆ ಹೋಗುವುದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.
त्यसपछि तिनीहरू गए, र केही समय बेथलेहेम नजिकै गेरूथ-किम्हाममा बसे ।
18 ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.
कल्दीहरूको कारणले तिनीहरू मिश्रदेश जाँदै थिए । तिनीहरू उनीहरूदेखि डराएका थिए, किनकि नतन्याहको छोरो इश्माएलले अहीकामका छोरा गदल्याहलाई मारेका थिए, जसलाई बेबिलोनका राजाले देशको गभर्नर बनाएका थिए ।