< ಯೆರೆಮೀಯನು 41 >

1 ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ,
और सातवें महीने में यूँ हुआ कि इस्माईल बिन — नतनियाह — बिन — इलीसमा' जो शाही नसल से और बादशाह के सरदारों में से था, दस आदमी साथ लेकर जिदलियाह — बिन — अख़ीक़ाम के पास मिस्फ़ाह में आया; और उन्होंने वहाँ मिस्फ़ाह में मिल कर खाना खाया।
2 ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.
तब इस्माईल — बिन — नतनियाह उन दस आदमियों के साथ जो उसके साथ थे उठा और जिदलियाह — बिन — अख़ीक़ाम बिन साफ़न को जिसे शाह — ए — बाबुल ने मुल्क का हाकिम मुक़र्रर किया था, तलवार से मारा और उसे क़त्ल किया।
3 ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಅಲ್ಲಿ ಸಿಕ್ಕಿದ ಯೆಹೂದ್ಯರೆಲ್ಲರನ್ನೂ, ಕಸ್ದೀಯರೆಲ್ಲರನ್ನೂ, ಸೈನಿಕರನ್ನೂ ಇಷ್ಮಾಯೇಲನು ಕೊಂದುಹಾಕಿದನು.
और इस्माईल ने उन सब यहूदियों को जो जिदलियाह के साथ मिस्फ़ाह में थे, और कसदी सिपाहियों को जो वहाँ हाज़िर थे क़त्ल किया।
4 ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೆಯ ದಿನದಲ್ಲಿ, ಅದು ಯಾರಿಗೂ ತಿಳಿಯದ ವೇಳೆಯಲ್ಲಿ
जब वह जिदलियाह को मार चुका, और किसी को ख़बर न हुई, तो उसके दूसरे दिन यूँ हुआ।
5 ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.
कि सिकम और शीलोह और सामरिया से कुछ लोग जो सब के सब अस्सी आदमी थे, दाढ़ी मुंडाए और कपड़े फाड़े और अपने आपको घायल किए और हदिये और लुबान हाथों में लिए हुए वहाँ आए, ताकि ख़ुदावन्द के घर में पेश करें।
6 ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು. ಅವರನ್ನು ಎದುರುಗೊಂಡ ಮೇಲೆ ಅವರಿಗೆ, “ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ,” ಎಂದನು.
और इस्माईल — बिन — नतनियाह मिस्फ़ाह से उनके इस्तक़बाल को निकला, और रोता हुआ चला; और यूँ हुआ कि जब वह उनसे मिला तो उनसे कहने लगा कि जिदलियाह बिन अख़ीक़ाम के पास चलो।
7 ಆಗ ಅವರು ಪಟ್ಟಣದ ಮಧ್ಯಕ್ಕೆ ಬಂದಾಗ, ನೆತನ್ಯನ ಮಗ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು, ಬಾವಿಯೊಳಗೆ ಹಾಕಿಬಿಟ್ಟರು.
और फिर जब वह शहर के वस्त में पहुँचे, तो इस्माईल — बिन — नतनियाह और उसके साथियों ने उनको क़त्ल करके हौज़ में फेंक दिया।
8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ.
लेकिन उनमें से दस आदमी थे जिन्होंने इस्माईल से कहा, हम को क़त्ल न कर, क्यूँकि हमारे गेहूँ और जौ और तेल और शहद के ज़ख़ीरे खेतों में पोशीदा हैं। इसलिए वह बाज़ रहा और उनको उनके भाइयों के साथ क़त्ल न किया।
9 ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು.
वह हौज़ जिसमें इस्माईल ने उन लोगों की लाशों को फेंका था, जिनको उसने जिदलियाह के साथ क़त्ल किया वही है जिसे आसा बदशाह ने शाह — ए — इस्राईल बाशा के डर से बनाया था और इस्मा'ईल — बिन — नतनियाह ने उसको मक़्तूलों की लाशों से भर दिया।
10 ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.
तब इस्माईल बाक़ी सब लोगों को, या'नी शहज़ादियों और उन सब लोगों को जो मिस्फ़ाह में रहते थे जिनको जिलौदारों के सरदार नबूज़रादान ने जिदलियाह — बिन — अख़ीक़ाम के सुपुर्द किया था, ग़ुलाम करके ले गया; इस्मा'ईल — बिन — नतनियाह उनको ग़ुलाम करके रवाना हुआ कि पार होकर बनी 'अम्मोन में जा पहुँचे।
11 ಆದರೆ ಕಾರೇಹನ ಮಗ ಯೋಹಾನಾನನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ,
लेकिन जब यूहनान — बिन — क़रीह ने और लश्कर कि सब सरदारों ने जो उसके साथ थे, इस्माईल — बिन — नतनियाह की तमाम शरारत के बारे में जो उसने की थी सुना,
12 ಆ ಮನುಷ್ಯರನ್ನೆಲ್ಲಾ ಕರೆದುಕೊಂಡು ನೆತನ್ಯನ ಮಗ ಇಷ್ಮಾಯೇಲನ ಸಂಗಡ ಯುದ್ಧಮಾಡುವುದಕ್ಕೆ ಹೋಗಿ, ಗಿಬ್ಯೋನಿನಲ್ಲಿರುವ ದೊಡ್ಡ ಕೆರೆಯ ಬಳಿಯಲ್ಲಿ ಅವನನ್ನು ಕಂಡರು.
तो वह सब लोगों को लेकर उससे लड़ने को गए और जिबा'ऊन के बड़े तालाब पर उसे जा लिया।
13 ಆಗ ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ, ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ನೋಡಿದಾಗ, ಸಂತೋಷಪಟ್ಟರು.
और यूँ हुआ कि जब उन सब लोगों ने जो इस्माईल के साथ थे यूहनान — बिन — क़रीह को और उसके साथ सब फ़ौजी सरदारों को देखा, तो वह ख़ुश हुए।
14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರು ಸುತ್ತಿಕೊಂಡು ತಿರುಗಿಕೊಂಡು, ಕಾರೇಹನ ಮಗನಾದ ಯೋಹಾನಾನನ ಬಳಿಗೆ ಬಂದರು.
तब वह सब लोग जिनको इस्माईल मिस्फ़ाह से पकड़ ले गया था, पलटे और यूहनान — बिनक़रीह के पास वापस आए।
15 ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು.
लेकिन इस्माईल — बिन — नतनियाह आठ आदमियों के साथ यूहनान के सामने से भाग निकला और बनी 'अमोन की तरफ़ चला गया।
16 ಆಗ ಕಾರೇಹನ ಮಗನಾದ ಯೋಹಾನಾನನೂ, ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗ ಗೆದಲ್ಯನನ್ನು ಕೊಂದುಹಾಕಿದ ತರುವಾಯ, ತಪ್ಪಿಸಿಬಿಟ್ಟಿದ್ದ ಉಳಿದ ಜನರೆಲ್ಲರನ್ನು ಎಂದರೆ, ಗಿಬ್ಯೋನನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಕಂಚುಕಿಯರನ್ನೂ ಮಿಚ್ಪದಿಂದ ಕರೆದುಕೊಂಡು ಹೊರಟು,
तब यूहनान — बिन क़रीह और वह फ़ौजी सरदार जो उसके हमराह थे, सब बाक़ी मान्दा लोगों को वापस लाए, जिनको इस्माईल बिन नतनियाह जिदलियाह बिन — अख़ीक़ाम को क़त्ल करने के बाद मिस्फ़ाह से ले गया था या'नी जंगी मर्दों और 'औरतों और लड़कों और ख़्वाजासराओं को, जिनको वह जिबा'ऊन से वापस लाया था।
17 ಈಜಿಪ್ಟಿಗೆ ಹೋಗುವುದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.
और वह रवाना हुए और सराय — ए — किमहाम में जो बैतलहम के नज़दीक है, आ रहे ताकि मिस्र को जाएँ।
18 ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.
क्यूँकि वह कसदियों से डरे; इसलिए कि इस्माईल — बिन — नतनियाह ने जिदलियाह — बिन — अख़ीक़ाम को, जिसे शाहए — बाबुल ने उस मुल्क पर हाकिम मुक़र्रर किया था, क़त्ल कर डाला।

< ಯೆರೆಮೀಯನು 41 >