< ಯೆರೆಮೀಯನು 5 >

1 “ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
اذْرَعُوا شَوَارِعَ أُورُشَلِيمَ ذِهَاباً وَإِيَاباً، وَانْظُرُوا وَاعْتَبِرُوا. ابْحَثُوا فِي أَرْجَاءِ سَاحَاتِهَا لَعَلَّكُمْ تَجِدُونَ رَجُلاً وَاحِداً يُجْرِي الْعَدْلَ وَيَنْشُدُ الْحَقَّ، فَأَصْفَحَ عَنْهَا.١
2 ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”
فَإِنَّهُمْ وَإِنْ قَالُوا: حَيٌّ هُوَ الرَّبُّ، فَإِنَّمَا يَحْلِفُونَ زُوراً.٢
3 ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.
أَيُّهَا الرَّبُّ، أَلَيْسَتْ عَيْنَاكَ تَطْلُبَانِ الْحَقَّ؟ لَقَدْ عَاقَبْتَهُمْ وَلَكِنَّهُمْ لَمْ يَتَوَجَّعُوا. أَهْلَكْتَهُمْ وَلَكِنَّهُمْ أَبَوْا التَّقْوِيمَ. صَلَّبُوا وُجُوهَهُمْ أَكْثَرَ مِنَ الصَّخْرِ، وَرَفَضُوا التَّوْبَةَ.٣
4 ಆದ್ದರಿಂದ ನಾನು, “ನಿಶ್ಚಯವಾಗಿ ಇವರು ಬಡವರು ಮತ್ತು ಬುದ್ಧಿಹೀನರು. ಏಕೆಂದರೆ, ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ಅರಿಯರು.
فَقُلْتُ فِي نَفْسِي: «إِنَّمَا هُمْ مَسَاكِينُ حَمْقَى، يَجْهَلُونَ طَرِيقَ الرَّبِّ وَقَضَاءَ إِلَهِهِمْ.٤
5 ನಾನು ನಾಯಕರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡುವೆನು. ಏಕೆಂದರೆ, ಅವರು ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿದಿದ್ದಾರೆ,” ಆದರೆ ಇವರು ಕೂಡ ಒಮ್ಮತವಾಗಿ ನೊಗವನ್ನು ಮುರಿದು, ಬಂಧನಗಳನ್ನು ಹರಿದುಬಿಟ್ಟಿದ್ದಾರೆ.
فَلأَقْصِدَنَّ الْعُظَمَاءَ وَأُكَلِّمْهُمْ لأَنَّهُمْ يَعْرِفُونَ طَرِيقَ الرَّبِّ وَقَضَاءَ إِلَهِهِمْ». فَإِذَا هَؤُلاءِ جَمِيعاً قَدْ حَطَّمُوا النِّيرَ وَقَطَعُوا الرُّبُطَ.٥
6 ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.
لِذَلِكَ يَنْقَضُّ عَلَيْهِمْ أَسَدٌ مِنَ الْغَابِ وَيَقْتُلُهُمْ، وَيَفْتَرِسُهُمْ ذِئْبٌ مِنَ الصَّحْرَاءِ، وَيَكْمُنُ النَّمِرُ حَوْلَ مُدُنِهِمْ، فَيُمَزِّقُ إِرْباً كُلَّ مَنْ يَخْرُجُ مِنْهُمْ، لأَنَّ آثَامَهُمْ كَثِيرَةٌ، وَارْتِدَادَاتِهِمْ مُتَعَاظِمَةٌ.٦
7 ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ.
«كَيْفَ أَعْفُو عَنْ أَعْمَالِكِ؟ تَخَلَّى عَنِّي أَبْنَاؤُكِ وَأَقْسَمُوا بِأَوْثَانٍ. وَعِنْدَمَا أَشْبَعْتُهُمْ ارْتَكَبُوا الْفِسْقَ، وَهَرْوَلُوا طَوَائِفَ إِلَى مَوَاخِيرِ الزَّانِيَاتِ.٧
8 ಅವರು ಕುದುರೆಗಳಂತೆ, ಬಲಶಾಲಿ ಮತ್ತು ಕಾಮವನ್ನು ಹೊಂದಿದವರಾಗಿದ್ದಾರೆ. ತಮ್ಮ ತಮ್ಮ ನೆರೆಯವರ ಹೆಂಡತಿಯರನ್ನು ಕಂಡು ಹೇಕರಿಸುತ್ತಾರೆ.
صَارُوا كَحُصُنٍ مَعْلُوفَةٍ سَائِبَةٍ يَصْهَلُ كُلُّ وَاحِدٍ مِنْهُمْ عَلَى امْرَأَةِ صَاحِبِهِ.٨
9 ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? ಎಂದು ಯೆಹೋವ ದೇವರು ಹೇಳುತ್ತಾರೆ.
أَلا أُعَاقِبُهُمْ عَلَى هَذِهِ الأُمُورِ؟» يَقُولُ الرَّبُّ، «أَلا أَنْتَقِمُ لِنَفْسِي مِنْ أُمَّةٍ مِثْلَ هَذِهِ؟٩
10 ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.
اذْهَبُوا إِلَى أَتْلامِ كُرُومِهَا وَدَمِّرُوهَا وَلَكِنْ لَا تُفْنُوهَا. انْزِعُوا أَغْصَانَهَا لأَنَّهَا لَيْسَتْ لِلرَّبِّ.١٠
11 ಇಸ್ರಾಯೇಲನ ಮನೆತನದವರೂ, ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.
فَذُرِّيَّةُ إِسْرَائِيلَ وَذُرِّيَّةُ يَهُوذَا قَدْ غَدَرَتَا بِي»، يَقُولُ الرَّبُّ.١١
12 ಆ ಜನರು ಯೆಹೋವ ದೇವರನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ,
قَدْ أَنْكَرُوا الرَّبَّ وَقَالُوا: «لَنْ يُعَاقِبَنَا وَلَنْ يُصِيبَنَا مَكْرُوهٌ، وَلَنْ نَرَى سَيْفاً وَلَنْ نَتَعَرَّضَ لِجُوعٍ،١٢
13 ಪ್ರವಾದಿಗಳು ಆಡುವುದೆಲ್ಲಾ ಬರೀ ಗಾಳಿ ಮಾತುಗಳು, ದೈವೋಕ್ತಿ ಎಂಬುದು ಅವುಗಳಲ್ಲಿ ಇಲ್ಲ, ಅವರು ಹೇಳುವುದೆಲ್ಲಾ ಅವರಿಗೇ ತಗಲಲಿ,” ಎಂದುಕೊಂಡಿದ್ದಾರೆ.
وَالأَنْبِيَاءُ كَالرِّيحِ وَوَحْيُ الرَّبِّ لَيْسَ مَعَهُمْ. فَلْيَأْتِ عَلَيْهِمْ مَا تَنَبَّأُوا بِهِ».١٣
14 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”
لِذَلِكَ يُعْلِنُ السَّيِّدُ الرَّبُّ الْقَدِيرُ: «لأَنَّكُمْ قُلْتُمْ هَذَا الْكَلامَ، فَهَا أَنَا أَجْعَلُ كَلِمَاتِي فِي فَمِكَ نَاراً، وَهَذَا الشَّعْبَ حَطَباً، فَتَلْتَهِمُهُمُ النَّارُ.١٤
15 ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
هَا أَنَا أَجْلِبُ عَلَيْكُمْ يَا ذُرِّيَّةَ إِسْرَائِيلَ، أُمَّةً قَدِيمَةً قَوِيَّةً مِنْ أَرْضٍ نَائِيَةٍ، تَجْهَلُونَ لُغَةَ أَهْلِهَا وَلا تَفْهَمُونَ مَا يَقُولُونَ.١٥
16 ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ. ಅವರೆಲ್ಲರೂ ಪರಾಕ್ರಮಶಾಲಿಗಳೇ.
جُعْبَتُهَا كَقَبْرٍ مَفْتُوحٍ، وَكُلُّ رِجَالِهَا جَبَابِرَةٌ،١٦
17 ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.
فَيَأْكُلُونَ حَصَادَكُمْ وَطَعَامَكُمْ، وَيُهْلِكُونَ أَبْنَاءَكُمْ وَبَنَاتِكُمْ، وَيَلْتَهِمُونَ مَوَاشِيَكُمْ وَقُطْعَانَكُمْ، وَيَأْكُلُونَ كُرُومَكُمْ وَأَشْجَارَ تِينِكُمْ، وَيُدَمِّرُونَ بِالسَّيْفِ مُدُنَكُمُ الْحَصِينَةَ الَّتِي عَلَيْهَا تَتَوَكَّلُونَ.١٧
18 “ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ.
وَلَكِنْ حَتَّى فِي تِلْكَ الأَيَّامِ لَنْ أُفْنِيَكُمْ»، يَقُولُ الرَّبُّ.١٨
19 “‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’
«وَعِنْدَمَا يَسْأَلُونَ:’لِمَاذَا صَنَعَ الرَّبُّ إِلَهُنَا بِنَا هَذِهِ الأُمُورَ كُلَّهَا؟‘تَقُولُ لَهُمْ:’كَمَا أَنَّكُمْ تَخَلَّيْتُمْ عَنِّي وَعَبَدْتُمُ الأَوْثَانَ الْغَرِيبَةَ فِي أَرْضِكُمْ، كَذَلِكَ تُسْتَعْبَدُونَ لِلْغُرَبَاءِ فِي أَرْضٍ لَيْسَتْ لَكُمْ‘».١٩
20 “ಯಾಕೋಬ ವಂಶಜರಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ.
وَأَذيعُوا أَيْضاً هَذَا فِي ذُرِّيَّةِ يَعْقُوبَ، وَأَعْلِنُوهُ لِبَنِي يَهُوذَا قَائِلِينَ:٢٠
21 ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
«اسْمَعْ هَذَا أَيُّهَا الشَّعْبُ الأَحْمَقُ الْغَبِيُّ، يَا مَنْ لَهُ عُيُونٌ وَلَكِنَّهُ لَا يُبْصِرُ، وَلَهُ آذَانٌ وَلَكِنَّهُ لَا يَسْمَعُ.٢١
22 ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು.
أَلا تَخْشَوْنَنِي؟»، يَقُولُ الرَّبُّ، «أَلا تَرْتَعِدُونَ فِي حَضْرَتِي؟ قَدْ جَعَلْتُ الرَّمْلَ حَدّاً لِمِيَاهِ الْبَحْرِ، حَاجِزاً أَبَدِيًّا لَا يَتَخَطَّاهُ. تَتَلاطَمُ أَمْوَاجُهُ وَلَكِنَّهَا تَعْجَزُ عَنْ تَعَدِّيهِ، وَتَهْدِرُ وَلَكِنَّهَا لَا تَتَجَاوَزُهُ.٢٢
23 ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ.
أَمَّا هَذَا الشَّعْبُ فَذُو قَلْبٍ مُتَمَرِّدٍ عَاصٍ، ثَارُوا عَلَيَّ وَمَضَوْا،٢٣
24 ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.
وَلَمْ يَتَنَاجَوْا فِي قُلُوبِهِمْ قَائِلِينَ:’لِنَتَّقِ الرَّبَّ إِلَهَنَا الَّذِي يُغْدِقُ الْمَطَرَ فِي مَوَاعِيدِهِ فِي مَوْسِمَيِ الرَّبِيعِ وَالْخَرِيفِ، وَيَحْفَظُ لَنَا أَسَابِيعَ الْحَصَادِ حَسَبَ مَوَاقِيتِهَا.‘٢٤
25 ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ; ನಿಮ್ಮ ಪಾಪಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಗೆದಿವೆ.
غَيْرَ أَنَّ آثَامَكُمْ قَدْ حَوَّلَتْ عَنْكُمْ هَذِهِ الْبَرَكَاتِ، وَخَطَايَاكُمْ حَرَمَتْكُمْ مِنَ الْخَيْرِ.٢٥
26 “ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ.
فَفِي وَسَطِ شَعْبِي قَوْمٌ أَشْرَارٌ يَكْمُنُونَ كَمَا يَكْمِنُ الْقَنَّاصُونَ لِلطُّيُورِ، وَيَنْصِبُونَ الْفَخَّ لاقْتِنَاصِ النَّاسِ.٢٦
27 ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ, ಅವರ ಮನೆಗಳು ಮೋಸದಿಂದ ತುಂಬಿವೆ. ಆದ್ದರಿಂದ ಅವರು ಶಕ್ತಿವಂತರೂ, ಐಶ್ವರ್ಯವಂತರೂ ಆಗಿದ್ದಾರೆ.
بُيُوتُهُمْ تَكْتَظُّ بِالْخَدِيعَةِ كَقَفَصٍ مَمْلُوءٍ طُيُوراً، لِذَلِكَ عَظُمُوا وَأَثْرَوْا.٢٧
28 ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.
ازْدَادُوا سِمَنةً وَنُعُومَةً، وَارْتَكَبُوا الشَّرَّ مُتَجَاوِزِينَ كُلَّ حَدٍّ. لَمْ يَحْكُمُوا بِعَدْلٍ فِي دَعْوَى الْيَتِيمِ حَتَّى تَنْجَحَ، وَلَمْ يُدَافِعُوا عَنْ حُقُوقِ الْمَسَاكِينِ.٢٨
29 ಇವುಗಳ ನಿಮಿತ್ತ ನಾನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?
أَفَلا أُعَاقِبُهُمْ عَلَى هَذِهِ الأُمُورِ؟» يَقُولُ الرَّبُّ. «أَلا أَنْتَقِمُ لِنَفْسِي مِنْ أُمَّةٍ كَهَذِهِ؟٢٩
30 “ಭಯಂಕರವಾದ ಮತ್ತು ಆಶ್ಚರ್ಯವಾದ ಕಾರ್ಯವು ದೇಶದಲ್ಲಿ ನಡೆಯುತ್ತದೆ.
قَدْ جَرَى فِي الْبِلادِ حَدَثٌ مُذْهِلٌ فَظِيعٌ.٣٠
31 ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?
فَالأَنْبِيَاءُ يَتَنَبَّأُونَ زُوراً، وَالْكَهَنَةُ يَتَصَرَّفُونَ بِمُقْتَضَى أَحْكَامِهِمْ، وَشَعْبِي أَحَبَّ مِثْلَ هَذَا. وَلَكِنْ مَاذَا تَصْنَعُونَ فِي نِهَايَةِ الْمَطَافِ؟»٣١

< ಯೆರೆಮೀಯನು 5 >