< ಯೋಬನು 28 >

1 ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.
নিশ্চয়ে ৰূপৰ আকৰ আছে আৰু যি সোণ খপা যায়; সেই সোণৰ ঠাইও আছে।
2 ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ.
লোহা মাটিৰ পৰা উলিওৱা হয়, আৰু শিল গলাই তাম উলিয়ায়।
3 ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ; ಕಾರ್ಗತ್ತಲಲ್ಲಿಯೂ ಮರೆಯಾಗಿರುವ ಲೋಹಗಳಿಗಾಗಿ ಭೂಮಿಯ ಆಳ ಪ್ರದೇಶದೊಳಗೆ ಅವರು ಶೋಧಿಸುತ್ತಾರೆ.
মানুহে অন্ধকাৰ শেষ কৰে, নিচেই তলিলৈকে খান্দে, আন্ধাৰ আৰু মৃত্যুচ্ছায়াৰ শিল বিচাৰি উলিয়ায়।
4 ಜನ ನಿವಾಸದಿಂದ ದೂರವಾಗಿ ಗಣಿ ತೋಡಿ, ಮನುಷ್ಯರು ನಡೆದಾಡದ ಸ್ಥಳಗಳಲ್ಲಿ ಇತರರಿಂದ ಪ್ರತ್ಯೇಕವಾಗಿ ಕೆಲಸ ಮಾಡುತ್ತಾರೆ.
সিহঁতে আকৰ খান্দি গৈ মানুহ থকা ঠাইৰ পৰা দূৰৈ হয়, আৰু ওপৰত ফুৰা লোকে সিহঁতৰ গম নাপায়; সিহঁতে মানুহৰ পৰা দুৰৈত ওলমি জুলি থাকে।
5 ಭೂಮಿ ಆಹಾರವನ್ನು ಕೊಡುತ್ತದೆ; ಆದರೆ ಅದರ ಕೆಳಭಾಗವು ಬೆಂಕಿಯ ಹಾಗೆ ಬದಲಾಗುವುದು.
যি পৃথিবীৰ পৰা শস্য উৎপন্ন হয়, তাৰ তল ভাগ জুইৰ দ্বাৰাই লণ্ডভণ্ড কৰাৰ নিচিনা।
6 ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ; ಅದರ ಧೂಳಿನಲ್ಲಿ ಬಂಗಾರದ ಗಟ್ಟಿಗಳು ಇರುತ್ತವೆ.
তাৰ শিলবোৰ নীলকান্ত বাখৰ থকা ঠাই, আৰু গুড়ি সোণ তাত আছিল।
7 ಆ ದಾರಿ ಯಾವ ಪಕ್ಷಿಗೂ ತಿಳಿಯದು; ಹದ್ದಿನ ಕಣ್ಣು ಸಹ ಅದನ್ನು ಕಂಡಿಲ್ಲ.
সেই পথ হিংসক পক্ষীয়ে নাজানে, আৰু শেনৰ চকুৱেও তাক নেদেখে।
8 ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ; ಸಿಂಹವು ಅದನ್ನು ದಾಟಲಿಲ್ಲ.
গৰ্ব্বী হিংসুক জন্তুবোৰে তাত খোজ দিয়া নাই, আৰু সিংহও সেই ফালেদি যোৱা নাই।
9 ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ; ಪರ್ವತಗಳ ಬುಡಗಳನ್ನು ಸಹ ಬರಿದಾಗಿ ಮಾಡುತ್ತವೆ.
মানুহে অতি টান শিলত হাত দিয়ে; সি পৰ্ব্বতবোৰ মূলে সৈতে লুটিয়াই পেলায়।
10 ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ.
১০সি শিলৰ মাজে মাজে নলা কাটে, আৰু তাৰ চকুৱে সকলো বিধৰ বহুমূল্য বস্তু দেখা পায়।
11 ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ; ಅಡಗಿದ್ದ ಸಂಗತಿಗಳನ್ನು ಬೆಳಕಿಗೆ ತರುತ್ತಾರೆ.
১১সি জুৰিবোৰ পানী এটোপাও সৰকিব নোৱাৰাকৈ ভেটে, আৰু গুপুতে থকা বস্তু পোহৰলৈ উলিয়ায়।
12 ಆದರೆ ಜ್ಞಾನವು ಎಲ್ಲಿ ದೊರಕುವುದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
১২কিন্তু জ্ঞান ক’ত পোৱা যায়? আৰু সুবিবেচনাৰ ঠাই বা ক’ত?
13 ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
১৩মনুষ্যই তাৰ মূল্য নাজানে, আৰু জীৱিতসকলৰ দেশত তাক পোৱা নাযায়।
14 ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ; ಸಮುದ್ರವು, “ಜ್ಞಾನವು ನನ್ನ ಬಳಿಯಲ್ಲಿ ಇಲ್ಲ,” ಎನ್ನುತ್ತದೆ.
১৪অগাধ জলে কয়, এইটি মোত নাই, আৰু সাগৰে কয়, মোৰ ইয়াতো নাই।
15 ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು; ಜ್ಞಾನದ ಬೆಲೆಗೆ ಬೆಳ್ಳಿಯನ್ನು ತೂಕಮಾಡಲಾಗದು.
১৫শুদ্ধ সোণ দিওঁ তাক পোৱা নাযায়, আৰু তাৰ বেচ বুলি ৰূপকো জুখি দিব নোৱাৰি।
16 ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.
১৬ওফীৰৰ সুবৰ্ণ আৰু বহুমূল্য বৈদূৰ্য্য, আৰু নীলকান্ত বাখৰও জোখত তাৰ সমান নহয়।
17 ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ.
১৭সোণ আৰু আৰ্চি তাৰ তুল্য হ’ব নোৱাৰে, আৰু তাৰ সলনি শুদ্ধ সোণৰ অলঙ্কাৰবোৰকো দিব নোৱাৰি।
18 ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!
১৮তাৰ আগত পোৱাল আৰু স্ফটিকৰো নাম লব নোৱাৰি, এনে কি, পদ্মৰাগ বাখৰত্কৈয়ো জ্ঞানৰ মূল্য অধিক।
19 ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ; ಶುದ್ಧ ಬಂಗಾರದಿಂದಲೂ ಜ್ಞಾನವನ್ನು ಕೊಂಡುಕೊಳ್ಳಲಾಗದು.
১৯কুচ দেশীয় গোমেদক বাখৰও তাৰ তুল্য নহয়, আৰু জোখত শুদ্ধ সোণো তাৰ সমান নহয়।
20 ಆದರೆ ಜ್ಞಾನವು ಎಲ್ಲಿಂದ ಬರುವುದು? ಗ್ರಹಿಕೆಯ ಸ್ಥಳವು ಎಲ್ಲಿ?
২০তেন্তে জ্ঞান ক’ৰ পৰা আহে? আৰু সুবিবেচনাৰ ঠাই বা ক’ত?
21 ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು.
২১এইটো সকলো প্ৰাণীৰ চকুৰ পৰা গুপ্ত, আৰু আকাশৰ পক্ষীৰ পৰাও অদৃশ্য।
22 ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅಷ್ಟೇ,” ಎನ್ನುತ್ತವೆ.
২২বিনাশ আৰু মৃত্যুৱে কয়, আমি নিজ কাণে সেই বিষয়ে ঘুনুক-ঘানাককৈহে শুনিছোঁ।
23 ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ.
২৩তাৰ পথ ঈশ্বৰেহে জানে, আৰু তাৰ ঠাই তেওঁৰহে জনা আছে।
24 ದೇವರೊಬ್ಬರೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ, ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವರಾಗಿದ್ದಾರೆ.
২৪কিয়নো তেওঁ পৃথিবীৰ অন্তলৈকে দেখে, আৰু আকাশ-মণ্ডলৰ তলৰ আটাই ঠাইলৈকে তেওঁৰ চকু যায়।
25 ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ,
২৫তেওঁ যেতিয়া বায়ুৰ গুৰুত্ব নিৰূপণ কৰিলে, যেতিয়া পৰিমান অনুসাৰে জল সমূহ জুখি জুখি দিলে,
26 ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ
২৬যেতিয়া তেওঁ বৃষ্টিৰ নিয়ম নিৰূপণ কৰিলে, আৰু মিঘ-গৰ্জ্জনৰ সৈতে ওলোৱা বিজুলীৰ পথ স্থিৰ কৰিলে,
27 ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು.
২৭তেতিয়া তেওঁ জ্ঞানক দেখিলে, আৰু প্ৰকাশ কৰিলে, তেওঁ তাক স্থাপন কৰিলে, আৰু তাৰ তদন্তও কৰিলে;
28 ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.
২৮আৰু তেওঁ মনুষ্যক কলে, চোৱা, প্ৰভুলৈ ভয় ৰখাই জ্ঞান, আৰু কুকৰ্ম ত্যাগ কৰাই সুবিবেচনা।

< ಯೋಬನು 28 >