< ಯೋಬನು 28 >

1 ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.
“खरोखर चांदी मिळते अशा खाणी आहेत, सोने शुद्ध करण्याची जागा असते.
2 ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ.
जमिनीतून लोखंड काढतात, पाषाणामधून तांबे वितळवले जाते.
3 ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ; ಕಾರ್ಗತ್ತಲಲ್ಲಿಯೂ ಮರೆಯಾಗಿರುವ ಲೋಹಗಳಿಗಾಗಿ ಭೂಮಿಯ ಆಳ ಪ್ರದೇಶದೊಳಗೆ ಅವರು ಶೋಧಿಸುತ್ತಾರೆ.
मनुष्य अंधाराचे निवारण करतो, अगदी खोलवर जाऊन, गडद अंधारातील व मृत्यूछायेतील पाषाणाचा तो शोध करीतो.
4 ಜನ ನಿವಾಸದಿಂದ ದೂರವಾಗಿ ಗಣಿ ತೋಡಿ, ಮನುಷ್ಯರು ನಡೆದಾಡದ ಸ್ಥಳಗಳಲ್ಲಿ ಇತರರಿಂದ ಪ್ರತ್ಯೇಕವಾಗಿ ಕೆಲಸ ಮಾಡುತ್ತಾರೆ.
लोकांच्या राहण्याच्या जागेपासून तो दूर खाण खणतो, जिथे आजपर्यंत कोणाचेही पाऊल गेले नसेल तिथे तो जातो, तो दोरीला लोंबकळतो इतरांपेक्षा खूप खोल जातो.
5 ಭೂಮಿ ಆಹಾರವನ್ನು ಕೊಡುತ್ತದೆ; ಆದರೆ ಅದರ ಕೆಳಭಾಗವು ಬೆಂಕಿಯ ಹಾಗೆ ಬದಲಾಗುವುದು.
जसे जमिनीकडे पाहा, तिच्यातून आपणास अन्न मिळते, जसे अग्नीने तिला उलटवले जाते.
6 ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ; ಅದರ ಧೂಳಿನಲ್ಲಿ ಬಂಗಾರದ ಗಟ್ಟಿಗಳು ಇರುತ್ತವೆ.
जमिनीच्या खालचे पाषाण म्हणजे जेथे नीलमणी मिळतात, आणि त्या मातीमध्ये सोने असते.
7 ಆ ದಾರಿ ಯಾವ ಪಕ್ಷಿಗೂ ತಿಳಿಯದು; ಹದ್ದಿನ ಕಣ್ಣು ಸಹ ಅದನ್ನು ಕಂಡಿಲ್ಲ.
पक्ष्यांना त्या वाटांविषयी काही माहिती नसते, कोणत्याही बहिरी ससाण्याच्या डोळ्यांनी त्या वाटा पाहिलेल्या नसतात.
8 ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ; ಸಿಂಹವು ಅದನ್ನು ದಾಟಲಿಲ್ಲ.
रानटी जनावरे त्या वाटांवरुन गेलेली नसतात, सिंहही त्या वाटेने गेलेला नसतो.
9 ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ; ಪರ್ವತಗಳ ಬುಡಗಳನ್ನು ಸಹ ಬರಿದಾಗಿ ಮಾಡುತ್ತವೆ.
मनुष्य कठीण खडकावर हात टाकतो, तो ते डोंगर पूर्ण मुळापासून उलटवून टाकतो.
10 ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ.
१०ते खडकातून बोगदा खणतात, आणि त्यांचे डोळे खडकातला खजिना बघतात.
11 ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ; ಅಡಗಿದ್ದ ಸಂಗತಿಗಳನ್ನು ಬೆಳಕಿಗೆ ತರುತ್ತಾರೆ.
११ते पाण्याचे प्रवाह बंद करतात म्हणजे त्यातून पाणि बाहेर पडत नाही, ते दडलेल्या वस्तू बाहेर प्रकाशात आणतात.
12 ಆದರೆ ಜ್ಞಾನವು ಎಲ್ಲಿ ದೊರಕುವುದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
१२पण मनुष्यास शहाणपण कुठे मिळेल? समजूतदारपणा शोधण्यासाठी आपल्याला कुठे जावे लागेल?
13 ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
१३शहाणपण किती मोलाचे आहे हे मनुष्याला कळत नाही, पृथ्वीवरचे लोक जमीन खणून शहाणपण शोधू शकत नाहीत.
14 ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ; ಸಮುದ್ರವು, “ಜ್ಞಾನವು ನನ್ನ ಬಳಿಯಲ್ಲಿ ಇಲ್ಲ,” ಎನ್ನುತ್ತದೆ.
१४पृथ्वीवरील मोठे खोल जलाशय असे म्हणते, ‘माझ्यामध्ये ते नाही.’ सागर म्हणतो, ‘माझ्याजवळीही ते नाही.’
15 ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು; ಜ್ಞಾನದ ಬೆಲೆಗೆ ಬೆಳ್ಳಿಯನ್ನು ತೂಕಮಾಡಲಾಗದು.
१५तुम्ही सोने देऊन ते विकत घेऊ शकत नाही, ते विकत घेण्यासाठी जगात तेवढी चांदी नाही.
16 ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.
१६तुम्ही ओफीरच्या सोन्याने किंवा मौल्यवान गोमेद किंवा नीलमण्याने शहाणपण विकत घेऊ शकत नाही.
17 ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ.
१७शहाणपण सोन्यापेक्षा किंवा स्फटिकापेक्षा मौल्यवान असते, सोन्यात जडवलेले मौल्यवान खडेही शहाणपण विकत घेऊ शकत नाही.
18 ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!
१८शहाणपण पोवळ्यापेक्षा व स्फटिकापेक्षाही मौल्यवान आहे, माणकापेक्षा ही त्याचे मोल अधिक आहे.
19 ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ; ಶುದ್ಧ ಬಂಗಾರದಿಂದಲೂ ಜ್ಞಾನವನ್ನು ಕೊಂಡುಕೊಳ್ಳಲಾಗದು.
१९इथिओपियातील (कूश) पीतमणी त्याच्या बरोबरीचा नाही, शुध्द सोन्याने तुम्ही तो विकत घेऊ शकत नाही.
20 ಆದರೆ ಜ್ಞಾನವು ಎಲ್ಲಿಂದ ಬರುವುದು? ಗ್ರಹಿಕೆಯ ಸ್ಥಳವು ಎಲ್ಲಿ?
२०मग शहाणपणा कुठून येते? समजूतदारपणा आपल्याला कुठे मिळेल?
21 ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು.
२१पृथ्वीवरील सर्व जिवंत प्राण्यापासून शहाणपण लपवून ठेवले आहे, आकाशातले पक्षीसुध्दा ते बघू शकत नाहीत.
22 ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅಷ್ಟೇ,” ಎನ್ನುತ್ತವೆ.
२२मृत्यू आणि विनाश म्हणतात, ‘आम्हास शहाणपण सापडले नाही, आम्ही त्याबद्दलच्या फक्त अफवाच ऐकल्या आहेत.’
23 ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ.
२३फक्त देवालाच शहाणपणाकडे नेणारा मार्ग माहीत आहे, फक्त देवालाच तो कुठे आहे हे माहीत आहे.
24 ದೇವರೊಬ್ಬರೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ, ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವರಾಗಿದ್ದಾರೆ.
२४देवाला पृथ्वीचे अगदी शेवटचे टोकसुध्दा दिसू शकते, त्यास आकाशाखालचे सर्वकाही दिसते.
25 ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ,
२५देवाने वाऱ्याला त्यांची शक्ती दिली, सागराला किती मोठे करायचे ते त्यानेच ठरवले.
26 ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ
२६पावसास कोठे पाठवायचे ते त्यानेच ठरवले आणि वादळाने कुठे जायचे तेही त्यानेच ठरवले.
27 ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು.
२७तेव्हा देवाला शहाणपण दिसले आणि त्याने त्याचा विचार केला, शहाणपणाचे मूल्य किती आहे ते त्याने पारखले आणि त्या शहाणपणाला संमती दिली.
28 ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.
२८आणि देव लोकांस म्हणाला, परमेश्वराची भीती बाळगा व त्यास मान द्या हेच शहाणपण आहे, वाईट गोष्टी करु नका तोच समजूतदारपणा आहे.”

< ಯೋಬನು 28 >