< ಯೆಹೋಶುವನು 10 >

1 ಈ ಸಮಯದಲ್ಲಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡು, ಅದರ ಅರಸನನ್ನು ಸಂಹರಿಸಿಬಿಟ್ಟು ಸಂಪೂರ್ಣ ನಾಶಮಾಡಿದನೆಂಬ ಸಂಗತಿಯನ್ನು ಅವನು ಕೇಳಿದ್ದನು. ಹಾಗೆಯೇ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದರೆಂದೂ ಕೇಳಿದ್ದನು.
యెహోషువ యెరికోనూ, దాని రాజునూ నిర్మూలం చేసినట్టు హాయినీ దాని రాజునూ నిర్మూలం చేసిన సంగతీ గిబియోను నివాసులు ఇశ్రాయేలీయులతో సంధి చేసుకుని వారితో కలిసిపోయిన సంగతీ యెరూషలేం రాజైన అదోనీసెదెకు విన్నప్పుడు అతడూ అతని ప్రజలూ చాలా భయపడ్డారు.
2 ಅದೋನೀಚೆದೆಕನು ಅವನ ಜನರೂ ಬಹು ಭಯಪಟ್ಟರು. ಏಕೆಂದರೆ ಗಿಬ್ಯೋನ್ ಒಂದು ರಾಜಧಾನಿಯಷ್ಟು ಶ್ರೇಷ್ಠ ಪಟ್ಟಣವೂ ಅದು ಆಯಿ ಪಟ್ಟಣಕ್ಕಿಂತಲೂ ದೊಡ್ಡದಾಗಿತ್ತು. ಇದಲ್ಲದೆ ಅದರಲ್ಲಿರುವ ಜನರು ಪರಾಕ್ರಮಶಾಲಿಗಳಾಗಿದ್ದರು.
ఎందుకంటే గిబియోనును నాటి రాజధానుల్లో ప్రధాన పట్టణంగా ఎంచేవారు. అది హాయి కంటే పెద్దది, అక్కడి ప్రజలందరూ శూరులు. కాబట్టి యెరూషలేము రాజైన అదోనీసెదెకు “గిబియోనీయులు యెహోషువతో ఇశ్రాయేలీయులతో సంధి చేసుకున్నారు. మీరు నా దగ్గరికి వచ్చి నాకు సహాయం చేస్తే మనం వారి పట్టణాన్ని నాశనం చేద్దాం” అని
3 ಆದ್ದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ದೂತರನ್ನು ಕಳುಹಿಸಿದನು:
హెబ్రోను రాజు హోహాముకూ యర్మూతు రాజు పిరాముకూ
4 “ಗಿಬ್ಯೋನರು ಯೆಹೋಶುವನ ಮತ್ತು ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡದ್ದರಿಂದ ನಾವು ಅದನ್ನು ದಾಳಿಮಾಡುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ,” ಎಂದು ಹೇಳಿ ಕಳುಹಿಸಿದನು.
లాకీషురాజు యాఫీయకూ ఎగ్లోను రాజు దెబీరుకూ వార్త పంపాడు.
5 ಹಾಗೆಯೇ ಅಮೋರಿಯರ ಐದು ಮಂದಿ ಅರಸರಾದ, ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಒಟ್ಟುಸೇರಿದರು. ಇವರೂ ಇವರ ಸೈನ್ಯವೂ ಹೊರಟುಹೋಗಿ ಗಿಬ್ಯೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು.
కాబట్టి అమోరీయుల ఐదుగురు రాజులూ కలిసి, తమ సేనలతో బయలుదేరి, గిబియోను ముందు దిగి, గిబియోనీయులతో యుద్ధం చేశారు.
6 ಆಗ ಗಿಬ್ಯೋನಿನ ಜನರು, “ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿಬಂದಿದ್ದಾರೆ. ನಿನ್ನ ಸೇವಕರರಾದ ನಮ್ಮನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು, ನಮ್ಮನ್ನು ಕಾಪಾಡು! ನಮಗೆ ಸಹಾಯಮಾಡು,” ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
అప్పుడు “గిబియోనీయుల కొండ ప్రాంతాల్లో నివసించే అమోరీయుల రాజులందరూ ఏకమై మాపైకి దండెత్తి వచ్చారు, కాబట్టి నీ దాసుల చెయ్యి విడిచిపెట్టక త్వరగా వచ్చి మాకు సహాయం చేసి మమ్మల్ని రక్షించు” అని గిల్గాలులో శిబిరంలో ఉన్న యెహోషువకు వార్త పంపారు.
7 ಆಗ ಯೆಹೋಶುವನು ಗಿಲ್ಗಾಲಿನಿಂದ, ಸಮಸ್ತ ಯುದ್ಧವೀರರೂ ಉಳಿದ ಪರಾಕ್ರಮಶಾಲಿಗಳ ಸಮೇತ ಹೊರಟನು.
వెంటనే యెహోషువ, అతని దగ్గరున్న యోధులూ, పరాక్రమవంతులైన శూరులూ అందరూ గిల్గాలు నుండి బయలుదేరారు.
8 ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು.
అప్పుడు యెహోవా “వారికి భయపడవద్దు, వారిని నీ చేతికి అప్పగించాను, వారిలో ఎవరూ నీ ముందు నిలబడలేరు” అని యెహోషువతో చెప్పగానే,
9 ಆದ್ದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣಮಾಡಿ, ತಕ್ಷಣವೇ ಅವರ ಮೇಲೆ ದಾಳಿಮಾಡಿದನು.
యెహోషువ గిల్గాలు నుండి ఆ రాత్రి అంతా నడచి వారి మీద హఠాత్తుగా దాడి చేశాడు.
10 ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.
౧౦అప్పుడు యెహోవా ఇశ్రాయేలు ప్రజల ముందు వారిని గందరగోళానికి గురి చెయ్యగానే యెహోషువ గిబియోను ముందే మహా ఘోరంగా వారిని హతం చేశాడు. బేత్‌హోరోనుకు పైకి వెళ్ళే మార్గంలో అజేకా వరకూ, మక్కేదా వరకూ, యోధులు వారిని తరిమి హతం చేస్తూనే ఉన్నారు.
11 ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.
౧౧వారు ఇశ్రాయేలీయుల నుండి బేత్‌హోరోనుకు దిగిపోయే తోవలో పారిపోతుండగా, వారు అజేకాకు వచ్చే వరకూ యెహోవా ఆకాశం నుండి గొప్ప వడగళ్ళను వారి మీద కురిపించాడు. కాబట్టి వారు దాని వల్ల చనిపోయారు. ఇశ్రాయేలీయులు కత్తితో చంపిన వారికంటే ఆ వడగండ్ల వలన చచ్చినవారు ఎక్కువమంది అయ్యారు.
12 ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”
౧౨యెహోవా ఇశ్రాయేలీయులకు అమోరీయులను అప్పగించిన ఆ రోజున, ఇశ్రాయేలీయులు వింటుండగా యెహోషువ యెహోవాకు ఈ విధంగా ప్రార్థన చేశాడు, “సూర్యుడా, నీవు గిబియోనులో నిలిచిపో. చంద్రుడా, నీవు అయ్యాలోను లోయలో నిలిచిపో.”
13 ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರ್ ಪುಸ್ತಕದಲ್ಲಿ ಬರೆದಿದೆ. ಹೀಗೆ ಸೂರ್ಯ ಅಸ್ತಮಿಸಲು ತ್ವರೆಮಾಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿತು.
౧౩“ప్రజలు తమ శత్రువుల మీద పగ తీర్చుకొనే వరకూ సూర్యుడు నిలిచిపోయాడు, చంద్రుడు ఆగిపోయాడు” అనే మాట యాషారు గ్రంథంలో రాసి ఉంది కదా. సూర్యుడు ఆకాశం మధ్యలో నిలిచిపోయి ఇంచుమించు ఒక రోజంతా అస్తమించ లేదు.
14 ಯೆಹೋವ ದೇವರು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥ ಆ ದಿನಕ್ಕೆ ಸಮಾನವಾದ ದಿನವು ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ. ಏಕೆಂದರೆ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.
౧౪యెహోవా ఒక నరుని మనవి విన్న ఆ రోజులాంటి మరొక రోజు, దాని ముందు గానీ దాని తరువాత గానీ లేదు, ఆ రోజు యెహోవా, ఇశ్రాయేలీయుల పక్షంగా యుద్ధం చేశాడు.
15 ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿದನು.
౧౫అప్పుడు యెహోషువ, అతనితో కూడా ఉన్న ఇశ్రాయేలీయులంతా గిల్గాలులోని శిబిరానికి తిరిగి వచ్చారు.
16 ಆದರೆ ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.
౧౬ఆ రాజులు ఐదు గురూ పారిపోయి మక్కేదాలో ఉన్న గుహలో దాక్కున్నారు.
17 ಆ ಐದು ಮಂದಿ ಅರಸರು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಯಿತು.
౧౭మక్కేదా గుహలో దాక్కున్న ఐదుగురు ఆ రాజులు దొరికారని యెహోషువకు తెలిసినప్పుడు,
18 ಆಗ ಯೆಹೋಶುವನು, “ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಹೊರಳಿಸಿರಿ. ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಕೆಲವರನ್ನು ನೇಮಿಸಿರಿ.
౧౮యెహోషువ “ఆ గుహ ద్వారానికి అడ్డంగా పెద్ద రాళ్ళు దొర్లించి వారిని కాపలా కాయడానికి మనుషులను ఉంచండి.
19 ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ದಾಳಿಮಾಡಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ. ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದನು.
౧౯మీరు అక్కడే ఆగిపోకండి. మీ దేవుడు యెహోవా మీ శత్రువులను మీ చేతికి అప్పగించాడు కాబట్టి వారిని తమ పట్టణాల్లోకి తిరిగి వెళ్లనీయకుండా వారిని తరిమి, వెనుక ఉన్న వారిని కూల్చండి” అని చెప్పాడు.
20 ಯೆಹೋಶುವನೂ ಇಸ್ರಾಯೇಲರೂ ಅವರನ್ನು ಸಂಪೂರ್ಣವಾಗಿ ಸಂಹರಿಸಿದರು. ಆದರೂ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿಕೊಂಡರು.
౨౦వారు పూర్తిగా నశించే వరకూ యెహోషువ, ఇశ్రాయేలీయులు గొప్ప జనసంహారం చేసి వారిని వధించిన తరువాత వారిలో తప్పించుకొన్న కొద్దిమంది, ప్రాకారాలు ఉన్న పట్టణాల్లోకి చొరబడిపోయారు.
21 ಇಸ್ರಾಯೇಲರು ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಹಿಂದಿರುಗಿ ಬಂದರು. ಇಸ್ರಾಯೇಲರಿಗೆ ವಿರೋಧವಾಗಿ ಒಬ್ಬನೂ ಮಾತಾಡಲಿಲ್ಲ.
౨౧ప్రజలందరూ మక్కేదాలో శిబిరంలో ఉన్న యెహోషువ దగ్గరికి సురక్షితంగా తిరిగి వచ్చారు. ఇశ్రాయేలీయులకు వ్యతిరేకంగా ఒక్క మాటైనా మాట్లాడటానికి ఎవరికీ గుండెల్లేక పోయాయి.
22 ಆಗ ಯೆಹೋಶುವನು, “ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸರನ್ನು ಗವಿಯೊಳಗಿಂದ ನನ್ನ ಬಳಿಗೆ ತನ್ನಿರಿ,” ಎಂದನು.
౨౨యెహోషువ “ఆ గుహకు అడ్దం తీసివేసి గుహలో నుండి ఆ ఐదుగురు రాజులను నాదగ్గరికి తీసుకు రండి” అని చెప్పగానే,
23 ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ, ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.
౨౩వారు అలా చేసి, యెరూషలేము రాజు, హెబ్రోను రాజు, యర్మూతు రాజు, లాకీషు రాజు, ఎగ్లోను రాజు-ఈ ఐదుగురినీ ఆ గుహలో నుండి అతని దగ్గరికి తీసుకువచ్చారు.
24 ಅವರನ್ನು ಯೆಹೋಶುವನ ಬಳಿ ತೆಗೆದುಕೊಂಡು ಬಂದಾಗ, ಯೆಹೋಶುವನು ಇಸ್ರಾಯೇಲರೆಲ್ಲರನ್ನು ಕರೆಸಿ ತನ್ನ ಸಂಗಡ ಬಂದ ಯುದ್ಧಭಟರಾದ ಅಧಿಕಾರಿಗಳಿಗೆ, “ನೀವು ಸಮೀಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸರ ಕೊರಳಿನ ಮೇಲೆ ಇಡಿರಿ,” ಎಂದನು. ಆಗ ಅವರು ಸಮೀಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕೊರಳಿನ ಮೇಲೆ ಇಟ್ಟರು.
౨౪వారు ఆ రాజులను యెహోషువ దగ్గరికి తీసుకు వచ్చినప్పుడు యెహోషువ ఇశ్రాయేలీయులందరిని పిలిపించి, తనతో యుద్ధానికి వెళ్లి వచ్చిన యోధుల అధిపతులతో “మీరు దగ్గరికి రండి, ఈ రాజుల మెడలపై మీ పాదాలను ఉంచండి” అని చెప్పగా, వారు దగ్గరికి వచ్చి వారి మెడలపై తమ పాదాలను ఉంచారు.
25 ಆಗ ಯೆಹೋಶುವನು ಅವರಿಗೆ, “ಭಯಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರಿ. ಏಕೆಂದರೆ ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಯೆಹೋವ ದೇವರು ಹೀಗೆಯೇ ಮಾಡುವರು,” ಎಂದನು.
౨౫అప్పుడు యెహోషువ వారితో “మీరు భయపడవద్దు, జడియవద్దు, ధీరత్వంతో ధైర్యంగా ఉండండి, మీరు ఎవరితో యుద్ధం చేస్తారో ఆ శత్రువులందరికీ యెహోవా వీరికి చేసినట్టు చేస్తాడు” అన్నాడు.
26 ಆ ತರುವಾಯ ಯೆಹೋಶುವನು ಅವರನ್ನು ದಂಡಿಸಿ, ಐದು ಮರಗಳಲ್ಲಿ ತೂಗುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಮರಗಳಲ್ಲಿ ತೂಗಾಡುತ್ತಿದ್ದವು.
౨౬తరువాత యెహోషువ వారిని కొట్టి చంపి ఐదు చెట్ల మీద వారిని ఉరితీశాడు, వారి శవాలు సాయంకాలం వరకూ ఆ చెట్ల మీద వేలాడుతూనే ఉన్నాయి.
27 ಆದರೆ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಆಜ್ಞಾಪಿಸಲು, ಶವವನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿಯಲ್ಲಿಯೇ ಅವರನ್ನು ಹಾಕಿ, ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
౨౭పొద్దుగుంకే సమయంలో యెహోషువ అనుమతి ఇయ్యగా ప్రజలు చెట్ల మీద నుండి వారిని దించి, వారు దాగిన గుహలోనే ఆ శవాలను పడేసి ఆ గుహ ద్వారం దగ్గర పెద్ద రాళ్లను వేశారు. ఆ రాళ్లు ఈ రోజు వరకూ ఉన్నాయి.
28 ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು.
౨౮ఆ రోజు యెహోషువ మక్కేదాను వశం చేసుకుని దాని రాజుతో సహా అందులోని వారందరినీ కత్తితో చంపేశాడు. అతడు దానిలో ఎవరినీ ప్రాణాలతో వదలకుండా నిర్మూలం చేసాడు. యెరికో రాజుకు చేసినట్టు మక్కేదా రాజుకూ చేశాడు.
29 ಆಗ ಯೆಹೋಶುವನೂ ಅವನ ಸಂಗಡ ಇದ್ದ ಸಮಸ್ತ ಇಸ್ರಾಯೇಲರೆಲ್ಲರೂ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದರು.
౨౯యెహోషువ, అతనితో కూడా ఇశ్రాయేలీయులంతా మక్కేదా నుండి లిబ్నాకు వచ్చి లిబ్నావారితో యుద్ధం చేశారు.
30 ಯೆಹೋವ ದೇವರು ಲಿಬ್ನವನ್ನೂ, ಅದರ ಅರಸನನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟರು. ಯೆಹೋಶುವನು ಅದನ್ನೂ, ಅದರಲ್ಲಿರುವ ಎಲ್ಲರನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಖಡ್ಗದಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
౩౦యెహోవా దానినీ, దాని రాజునూ, ఇశ్రాయేలీయులకు అప్పగించగా వారు ఎవ్వరూ మిగలకుండా దాన్నీ, దానిలో ప్రాణాలతో ఉన్నవారందరినీ కత్తితో చంపేశారు. అతడు యెరికో రాజుకు చేసినట్టు దాని రాజుకూ చేశారు.
31 ಅಲ್ಲಿಂದ ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೋಗಿ, ಅದರ ಎದುರಿಗೆ ಪಾಳೆಯ ಮಾಡಿಕೊಂಡು, ಅದರ ಮೇಲೆ ಯುದ್ಧಮಾಡಿದನು.
౩౧తరువాత యెహోషువ, ఇశ్రాయేలీయులందరితో లిబ్నా నుండి లాకీషుకు వచ్చి అక్కడ దిగి లాకీషు వారితో యుద్దం చేయగా
32 ಯೆಹೋವ ದೇವರು ಲಾಕೀಷನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಅವರು ಅದನ್ನು ಎರಡನೆಯ ದಿವಸದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲರನ್ನು ಖಡ್ಗದಿಂದ ಹೊಡೆದರು.
౩౨యెహోవా లాకీషుని ఇశ్రాయేలీయుల చేతికి అప్పగించాడు. వారు రెండవ రోజు దాన్ని ఆక్రమించుకుని తాము లిబ్నాకు చేసినట్టే దాన్నీ, దానిలో ఉన్న వారందరినీ కత్తితో చంపేశారు.
33 ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಯೆಹೋಶುವನು ಒಬ್ಬರೂ ಉಳಿಯದಂತೆ ಅವನನ್ನೂ, ಅವನ ಜನರನ್ನೂ ಸದೆಬಡಿದನು.
౩౩లాకీషుకు సహాయం చేయడానికి గెజెరు రాజైన హోరాము రాగా యెహోషువ అతన్నీ అతని ప్రజలనూ హతం చేశాడు.
34 ಯೆಹೋಶುವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಲಾಕೀಷಿನಿಂದ ಎಗ್ಲೋನಿಗೆ ಹೋಗಿ, ಅದಕ್ಕೆದುರಾಗಿ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು.
౩౪తరువాత యెహోషువ, అతనితో కూడా ఇశ్రాయేలు ప్రజలందరూ లాకీషు నుండి ఎగ్లోనుకు వచ్చి దాని ముందు దిగి దాని నివాసులతో యుద్ధం చేసి
35 ಅದೇ ದಿನದಲ್ಲಿ ಎಗ್ಲೋನನ್ನು ಹಿಡಿದು, ಅದರ ಜನರನ್ನು ಖಡ್ಗದಿಂದ ಹೊಡೆದರು. ಅವರು ಲಾಕೀಷಿಗೆ ಮಾಡಿದ ಹಾಗೆ ಅದಕ್ಕೆ ಮಾಡಿ, ಅದೇ ದಿನದಲ್ಲಿ ಅದರಲ್ಲಿರುವ ಸಕಲ ಜನರನ್ನು ಸಂಪೂರ್ಣವಾಗಿ ನಾಶಮಾಡಿದರು.
౩౫ఆ రోజు దాన్ని ఆక్రమించుకుని, కత్తితో వారిని హతం చేశారు. అతడు లాకీషుకు చేసినట్టే వారు దానిలో ఉన్నవారందరినీ ఆ రోజు నిర్మూలం చేశారు.
36 ಅನಂತರ ಯೆಹೋಶುವನು ಸಮಸ್ತ ಇಸ್ರಾಯೇಲರ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟುಹೋಗಿ, ಅದರ ಮೇಲೆ ಯುದ್ಧಮಾಡಿದನು.
౩౬అప్పుడు యెహోషువ, అతనితో కూడా ఇశ్రాయేలీయులందరూ ఎగ్లోను నుండి హెబ్రోను మీదికి పోయి దాని ప్రజలతో యుద్ధం చేసి
37 ಹೆಬ್ರೋನನ್ನು ಹಿಡಿದು ಅದನ್ನೂ, ಅದರ ಅರಸನನ್ನೂ ಅದರ ಸಮಸ್ತ ಊರುಗಳನ್ನೂ ಅವುಗಳಲ್ಲಿರುವ ಸಮಸ್ತ ಜನರನ್ನೂ ಖಡ್ಗದಿಂದ ಸದೆಬಡಿದು ಎಗ್ಲೋನಿಗೆ ಮಾಡಿದ ಹಾಗೆ ಒಬ್ಬರನ್ನೂ ಉಳಿಸದೆ, ಅದನ್ನೂ, ಅದರಲ್ಲಿರುವ ಎಲ್ಲರನ್ನೂ ಸಂಪೂರ್ಣ ನಾಶಮಾಡಿದನು.
౩౭దాన్ని స్వాధీనం చేసుకుని దాన్నీ దాని రాజునూ దాని పట్టణాలన్నిటినీ దానిలో ఉన్న వారందరినీ కత్తితో హతం చేశారు. అతడు ఎగ్లోనుకు చేసినట్టే దాన్నీ దానిలో ఉన్న వారందరినీ నిర్మూలం చేశారు.
38 ಯೆಹೋಶುವನು ಸಮಸ್ತ ಇಸ್ರಾಯೇಲರ ಕೂಡ ದೆಬೀರಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದನು.
౩౮అక్కడి నుండి యెహోషువ, అతనితో కూడ ఇశ్రాయేలీయులందరు దెబీరు వైపు తిరిగి దానితో యుద్ధం చేసి
39 ದೆಬೀರನ್ನೂ ಅದರ ಅರಸನನ್ನೂ, ಅದರ ಸಮಸ್ತ ಊರುಗಳನ್ನೂ ಹಿಡಿದು ಅವುಗಳನ್ನು ಖಡ್ಗದಿಂದ ದಾಳಿಮಾಡಿ, ಒಬ್ಬರನ್ನೂ ಉಳಿಸದೆ ಅದರಲ್ಲಿದ್ದ ಎಲ್ಲರನ್ನೂ, ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.
౩౯దానినీ దాని రాజునూ దాని సమస్త పట్టణాలనూ పట్టుకుని కత్తి చేత హతం చేసి దానిలో ఉన్న వారినందరినీ నిర్మూలం చేశారు. అతడు హెబ్రోనుకూ లిబ్నాకూ దాని రాజుకూ చేసినట్లు, దెబీరుకూ దాని రాజుకూ చేశాడు.
40 ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.
౪౦తరువాత యెహోషువ పర్వత ప్రాంతాలనూ, దక్షిణ ప్రదేశాన్నీ షెఫేలా ప్రదేశాన్నీ చరియల ప్రదేశాన్నీ వాటి రాజులందరినీ జయించాడు. ఇశ్రాయేలీయుల దేవుడైన యెహోవా ఆజ్ఞాపించిన విధంగా అతడు ఏదీ మిగలకుండా ఊపిరిగల సమస్తాన్నీ నిర్మూలం చేశాడు.
41 ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು.
౪౧కాదేషు బర్నేయ మొదలు గాజా వరకూ గిబియోను వరకూ గోషేను దేశమంతటినీ యెహోషువ జయించాడు.
42 ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.
౪౨ఇశ్రాయేలు దేవుడైన యెహోవా ఇశ్రాయేలీయుల పక్షంగా యుద్ధం చేస్తున్నాడు కాబట్టి ఆ సమస్త రాజులనూ వారి దేశాలనూ యెహోషువ ఒక దెబ్బతోనే పట్టుకున్నాడు.
43 ಅನಂತರ ಯೆಹೋಶುವನು ಇಸ್ರಾಯೇಲರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿ ಬಂದನು.
౪౩తరువాత యెహోషువ, అతనితో కూడా ఇశ్రాయేలీయులంతా గిల్గాలులోని శిబిరానికి తిరిగి వచ్చారు.

< ಯೆಹೋಶುವನು 10 >