< ಯೆಹೋಶುವನು 20 >
1 ಯೆಹೋವ ದೇವರು ಯೆಹೋಶುವನಿಗೆ,
फिर याहवेह ने यहोशू से कहा:
2 “ನಾನು ಮೋಶೆಯ ಮುಖಾಂತರ ನಿನಗೆ ಹೇಳಿದ ಆಶ್ರಯದ ಪಟ್ಟಣಗಳನ್ನು ಗೊತ್ತುಮಾಡಿಕೊಳ್ಳುವಂತೆ ನೀನು ಇಸ್ರಾಯೇಲರಿಗೆ ಹೇಳು.
“इस्राएल वंश से कहो, कि मैंने मोशेह के द्वारा जैसा तुमसे कहा था, कि अपने लिए शरण के शहर बनाओ,
3 ಯಾವನಾದರು ಅರಿಯದೆ ಅಕಸ್ಮಾತ್ತಾಗಿ ಕೈತಪ್ಪಿ ಕೊಂದುಹಾಕಿದರೆ, ಅಂಥವನು ಅಲ್ಲಿಗೆ ಓಡಿಹೋಗಲಿ. ಅವನಿಗೆ ರಕ್ತದ ಸೇಡು ತೀರಿಸುವವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರಲಿ.
ताकि यदि किसी व्यक्ति से अनजाने में किसी की हत्या हो जाए, तब विरोधियों से अपने आपको बचाने के लिए उस शरण के शहर में जाकर छिप सके.
4 ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು, ಪಟ್ಟಣದ ಬಾಗಿಲ ದ್ವಾರದಲ್ಲಿ ನಿಂತುಕೊಂಡು, ಆ ಪಟ್ಟಣದ ಹಿರಿಯರ ಮುಂದೆ ತನ್ನ ವ್ಯಾಜ್ಯವನ್ನು ತಿಳಿಸಬೇಕು. ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಳ್ಳಲಿ. ಅವರು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಲಿ.
वो व्यक्ति अपनी भूल-चूक को बुजुर्गों को बताए और वे उसे नगर के अंदर ले लें, और उसे ठहरने को जगह दे, ताकि वह उनके साथ रहने लगे.
5 ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ, ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು. ಏಕೆಂದರೆ ಅವನು ತನ್ನ ನೆರೆಯವನನ್ನು ಅಕಸ್ಮಾತ್ತಾಗಿ ಕೊಂದನು ಮತ್ತು ಪೂರ್ವದಲ್ಲಿ ಅವನ ಬಗ್ಗೆ ದ್ವೇಷ ಇರಲಿಲ್ಲ.
यदि हत्या का विरोधी उसका पीछा करता है, तो वे उस व्यक्ति को विरोधी के हाथ में न छोड़े, क्योंकि उससे यह हत्या जानबूझकर नहीं हुई है, और न उनके बीच कोई दुश्मनी थी.
6 ಇದಲ್ಲದೆ ಅವನು ನ್ಯಾಯ ವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆ ದಿವಸಗಳಲ್ಲಿ ಇರುವ ಮಹಾಯಾಜಕನು ಮರಣ ಹೊಂದುವವರೆಗೂ ಆ ಪಟ್ಟಣದಲ್ಲೇ ವಾಸವಾಗಿರಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿ ಹೋದ ತನ್ನ ಪಟ್ಟಣಕ್ಕೂ, ತನ್ನ ಮನೆಗೂ ತಿರುಗಿಬರಬಹುದು,” ಎಂದು ಹೇಳಿದರು.
हत्यारा उस नगर में तब तक रह सकता है, जब तक वह सभा में न्याय के लिए खड़ा न हो जाए, या जब तक उस समय के महापुरोहित की मृत्यु न हो जाए. उसके बाद ही वह हत्यारा अपने घर जा सकता है.”
7 ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.
इसके लिए उन्होंने नफताली के पर्वतीय प्रदेश के गलील में केदेश, एफ्राईम के पर्वतीय प्रदेश में शेकेम तथा यहूदिया के पर्वतीय प्रदेश में किरयथ-अरबा, अर्थात् हेब्रोन को शरण के शहर निश्चित किया.
8 ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.
और यरदन के पार येरीख़ो के पूर्व में रियूबेन के गोत्र के मैदानी निर्जन प्रदेश में बेज़र, गाद के गोत्र के गिलआद के रामोथ तथा मनश्शेह गोत्र के बाशान के गोलान भी चुने गये.
9 ಕೈತಪ್ಪಿ ಅರಿಯದೆ ಅಕಸ್ಮಾತ್ತಾಗಿ ಕೊಂದವನು ಯಾವನಾದರೂ ನ್ಯಾಯಸಭೆಯ ಮುಂದೆ ಬಂದು ನಿಲ್ಲುವ ತನಕ, ಸೇಡು ತೀರಿಸಿಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿಹೋಗುವುದಕ್ಕೆ ಇಸ್ರಾಯೇಲರೆಲ್ಲರಿಗೂ, ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲಾದ ಪಟ್ಟಣಗಳು ಇವೇ.
ये सभी नगर उन इस्राएली तथा विदेशी लोगों के लिए हैं, जिनसे अनजाने में किसी की हत्या हो जाती है, वह यहां आ जाए और सुरक्षित रहें ताकि विरोधी उसको मार न सके, जब तक सभा के सामने खूनी को नहीं लाया जाता तब तक वह व्यक्ति शरण शहर में ही रह सकता है!