< ಯೆಹೋಶುವನು 22 >
1 ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧ ಗೋತ್ರದವರನ್ನೂ ಕರಿಸಿ ಅವರಿಗೆ,
तब यहोशू ने रियूबेन और गाद के गोत्र तथा मनश्शेह के आधे गोत्र को बुलवाया
2 “ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಗೊಂಡು, ನಾನು ನಿಮಗೆ ಆಜ್ಞಾಪಿಸಿದ ಎಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾಗಿದ್ದೀರಿ.
और उनसे कहा, “याहवेह के सेवक मोशेह ने जो आज्ञाएं तुम्हें दी थीं, तुमने उन सबका पालन किया, तथा मेरी भी सब बातों को माना है.
3 ನೀವು ಬಹಳ ದಿವಸಗಳಿಂದ ಇಂದಿನವರೆಗೂ ನಿಮ್ಮ ಸಹೋದರರನ್ನು ಕೈಬಿಡದೆ, ನಿಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಅಪ್ಪಣೆಯನ್ನು ಪಾಲಿಸುತ್ತಾ ಬಂದಿದ್ದೀರಿ.
तुमने बीते दिनों से आज तक अपने भाई-बंधुओं की बुराई नहीं की, परंतु तुमने याहवेह, अपने परमेश्वर द्वारा दिए गए आदेशों को माना है.
4 ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.
और अब, उनसे की गई अपनी प्रतिज्ञा के अनुसार याहवेह, तुम्हारे परमेश्वर ने तुम्हारे भाई-बंधुओं को शान्तिपूर्ण और आरामदायक वातावरण दिया. अब तुम अपने तंबू में जाओ, जिसका अधिकार तुम्हें दिया गया है, जो तुम्हें यरदन के पार याहवेह के सेवक मोशेह द्वारा मिला है.
5 ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು.
तुम मोशेह द्वारा दिये आदेशों व नियमों को सावधानी से मानते रहना, और याहवेह अपने परमेश्वर से प्रेम करना, उनकी विधियों को मानना, उनके प्रति एक मन होकर रहना, तथा उनकी सेवा पूरे हृदय से करते रहना.”
6 ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿಬಿಟ್ಟಾಗ ಅವರು ತಮ್ಮ ಗುಡಾರಗಳಿಗೆ ಹೋದರು.
यह कहते हुए यहोशू ने उन्हें आशीष देकर विदा किया और वे सब अपने-अपने तंबू में चले गए.
7 ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಅವರ ಅರ್ಧ ಗೋತ್ರಕ್ಕೆ ಯೆಹೋಶುವನು ಸಹ ಯೊರ್ದನ್ ನದಿ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಅವರ ಗುಡಾರಗಳಿಗೆ ಕಳುಹಿಸುವಾಗ ಅವರನ್ನು ಆಶೀರ್ವದಿಸಿ ಅವರಿಗೆ,
मोशेह ने मनश्शेह के आधे गोत्र को बाशान में संपत्ति दी थी, किंतु अन्य आधे गोत्र को यहोशू ने यरदन के पश्चिम में उनके बंधुओं के साथ भूमि दी थी. यहोशू ने उन्हें उनके तंबू में जाने को कहा और यहोशू ने उन्हें आशीष देकर विदा किया.
8 “ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು.
यहोशू ने कहा, “अपने-अपने तंबू में से संपत्ति एवं पशु, चांदी, सोना, कांसा, लोहा तथा वस्त्र को लेकर आओ, और अपने भाई-बंधुओं के साथ शत्रुओं से लूटी गई सामग्री बांट लो.”
9 ರೂಬೇನನ ಗೋತ್ರದವರು, ಗಾದ್ಯ ಗೋತ್ರದವರು, ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು, ಯೆಹೋವ ದೇವರು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ತಾವು ವಶಮಾಡಿಕೊಂಡ ತಮ್ಮ ಗಿಲ್ಯಾದ್ ನಾಡಿಗೆ ಹೋದರು.
तब रियूबेन, गाद तथा मनश्शेह के आधे गोत्र अपने-अपने घर को चले गये और कनान देश में शीलो पर जाकर इस्राएल वंश से अलग हो गए, और गिलआद देश की ओर बढ़ गए, जहां उनकी संपत्ति थी, जिसे उन्होंने मोशेह के द्वारा याहवेह से पाया था.
10 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದಲ್ಲಿರುವ ಯೊರ್ದನ್ ನದಿ ಪ್ರಾಂತಕ್ಕೆ ಬಂದಾಗ, ಅಲ್ಲಿ ದೊಡ್ಡ ಬಲಿಪೀಠವನ್ನು ಕಟ್ಟಿದರು.
जब वे यरदन पहुंचे, जो कनान देश में है, रियूबेन, गाद तथा मनश्शेह के आधे गोत्र के लोगों ने यरदन के तट पर एक वेदी बनाई, जो बहुत बड़ी थी.
11 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲರು ದಾಟಿಬಂದ ಯೊರ್ದನ್ ನದಿ ಪ್ರಾಂತದಲ್ಲಿ ಬಲಿಪೀಠವನ್ನು ಕಟ್ಟಿದರೆಂಬ ಸುದ್ದಿ ಇಸ್ರಾಯೇಲರಿಗೆ ಮುಟ್ಟಿತು.
जब इस्राएलियों को यह पता चला, तो वे कहने लगे, “देखो, रियूबेन, गाद तथा मनश्शेह के आधे गोत्र ने कनान देश के द्वार पर एक वेदी बनाई है, जो यरदन में उस ओर है, जो इस्राएल के वंश की संपत्ति है.”
12 ಇಸ್ರಾಯೇಲರು ಅದನ್ನು ಕೇಳಿದಾಗ, ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಶೀಲೋವಿನಲ್ಲಿ ಕೂಡಿದರು.
जब इस्राएल वंश ने यह सुना तब पूरा इस्राएल शीलो में उनसे युद्ध करने के इच्छा से जमा हुआ.
13 ಅವರು ಗಿಲ್ಯಾದ್ ನಾಡಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಯಾಜಕ ಎಲಿಯಾಜರನ ಮಗ ಫೀನೆಹಾಸನನ್ನೂ
तब इस्राएल वंश ने एलिएज़र के पुत्र फिनिहास को गिलआद देश में रियूबेन, गाद तथा मनश्शेह के आधे गोत्र से मिलने के लिए भेजा.
14 ಅವನ ಸಂಗಡ ಇಸ್ರಾಯೇಲಿನ ಗೋತ್ರದ ಪ್ರತಿಯೊಂದು ಗೋತ್ರದಿಂದ ಒಬ್ಬೊಬ್ಬನನ್ನು ಅಂದರೆ ಮುಖ್ಯಸ್ಥನ ಪ್ರಕಾರ ಹತ್ತು ಮಂದಿ ಪ್ರಧಾನರನ್ನೂ ಕಳುಹಿಸಿದರು.
उसके साथ उन्होंने दस प्रधान भी भेजे जो इस्राएल के हर गोत्र के परिवार की ओर से एक-एक था. उनमें से हर एक इस्राएल के पूर्वजों के घरानों का प्रधान था.
15 ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,
इन सबने गिलआद में रियूबेन, गाद गोत्र तथा मनश्शेह के आधे गोत्र से मिलकर उनसे कहा,
16 “ಯೆಹೋವ ದೇವರ ಸರ್ವ ಸಮೂಹವು ಹೇಳುವುದೇನೆಂದರೆ: ‘ನೀವು ಈ ಹೊತ್ತು ಯೆಹೋವ ದೇವರ ಕಡೆಗೆ ತಿರುಗದೆ, ಅವರಿಗೆ ವಿರೋಧವಾಗಿ ತಿರುಗಿಬೀಳುವ ಹಾಗೆ ನಿಮಗೆ ಒಂದು ಬಲಿಪೀಠವನ್ನು ಕಟ್ಟಿಕೊಂಡು, ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?
“याहवेह की पूरी प्रजा की ओर से यह संदेश है: ‘इस्राएल के परमेश्वर के प्रति तुमने गलत काम क्यों किया? तुमने उनके वचन पर चलना छोड़ दिया और तुमने अपने लिए एक वेदी बनाई है. तुमने याहवेह के विरुद्ध पाप किया है!
17 ಪೆಯೋರದವರ ದುಷ್ಟತನವು ನಮಗೆ ಅಲ್ಪವೋ? ಯೆಹೋವ ದೇವರ ಜನರ ಮೇಲೆ ವ್ಯಾಧಿ ಬಂದಿದ್ದರೂ ಈ ದಿನದವರೆಗೂ ಆ ಪಾಪದಿಂದ ನಾವು ಶುದ್ಧವಾಗಲಿಲ್ಲ.
क्या पेओर का अपराध कम था, जिससे हम अब तक बाहर न आ सके, जिसके कारण याहवेह के लोगों में महामारी फैल गई थी;
18 ನೀವು ಈಗ ಯೆಹೋವ ದೇವರ ಕಡೆಯಿಂದ ತಿರುಗಿ ಹೋಗುತ್ತೀರಲ್ಲಾ? “‘ಈ ಹೊತ್ತು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬಿದ್ದರೆ, ನಾಳೆ ಅವರು ಇಸ್ರಾಯೇಲ್ ಜನಾಂಗದ ಮೇಲೆ ರೌದ್ರವುಳ್ಳವರಾಗುವರು.
क्या, तुम्हें भी याहवेह के पीछे चलना छोड़ना पड़ रहा है? “‘यदि आज तुम लोग याहवेह के विरुद्ध विद्रोह करोगे तो वह इस्राएल की सारी प्रजा से रुठ जाएंगे.
19 ನೀವು ಸ್ವಾಧೀನಪಡಿಸುವ ನಾಡು ಅಶುದ್ಧವಾಗಿದ್ದರೆ, ಯೆಹೋವ ದೇವರ ಗುಡಾರವಿರುವ ಯೆಹೋವ ದೇವರ ನಾಡಿಗೆ ನೀವು ಬಂದು, ನಮ್ಮ ಮಧ್ಯದಲ್ಲಿ ಸೊತ್ತನ್ನು ತೆಗೆದುಕೊಳ್ಳಿರಿ. ಯೆಹೋವ ದೇವರ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವುದರಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿ ಬೀಳಬೇಡಿರಿ. ನಮಗೆ ವಿರೋಧವಾಗಿಯೂ ತಿರುಗಿ ಬೀಳಬೇಡಿರಿ.
फिर भी, यदि तुम्हारा यह देश अशुद्ध है, तो इस देश से चले जाओ, जो याहवेह के अधीन है, जहां याहवेह की उपस्थिति है और हमारे मध्य आकर बस जाओ. बस, याहवेह हमारे परमेश्वर की वेदी के बदले अपने लिए वेदी बनाकर याहवेह तथा हमारे विरुद्ध विद्रोह मत करो.
20 ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’” ಎಂದು ಹೇಳಿದರು.
क्या, तुम्हें याद नहीं कि ज़ेराह के पुत्र आखान ने भेंट की हुई वस्तुओं के संबंध में छल किया, और पूरे इस्राएल पर दंड आया? उसकी गलती के कारण केवल उसकी ही मृत्यु नहीं हुई.’”
21 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರಿಗೆ ಉತ್ತರವಾಗಿ,
यह सुन रियूबेन तथा गाद गोत्र और मनश्शेह के आधे गोत्र ने इस्राएल के परिवारों के प्रधानों को उत्तर दिया,
22 “ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.
“सर्वशक्तिमान हैं परमेश्वर याहवेह! सर्वशक्तिमान परमेश्वर हैं, याहवेह! वह सर्वज्ञानी हैं, और इस्राएल को भी यह मालूम हो जाए, कि यदि यह विद्रोह के उद्देश्य से किया गया है, और यदि यह याहवेह के प्रति धोखा है तो, आज आप हमें न छोड़ें!
23 ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ.
यदि हमने इस वेदी को याहवेह से अलग होने के लिए किया है, या इसलिये कि इस पर होमबलि अन्नबलि अथवा मेल बलि चढ़ाएं तो, स्वयं याहवेह हमसे इसका हिसाब लें.
24 “ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವ ದೇವರಲ್ಲಿ ನಿಮಗೇನು ಪಾಲಿದೆ?
“यह करने के पीछे हमारी यह इच्छा थी: भविष्य में कहीं वह समय न आ जाए, जब आपके बच्चे हमारे बच्चों से कहें, ‘इस्राएल के परमेश्वर याहवेह से तुम्हारा क्या लेना देना है?
25 ರೂಬೇನ್ಯರೇ, ಗಾದ್ಯರೇ ಯೆಹೋವ ದೇವರು ನಿಮಗೂ ನಮಗೂ ನಡುವೆ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದರಿಂದ ಯೆಹೋವ ದೇವರ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲ,’ ಎಂದು ಹೇಳಿ, ನಮ್ಮ ಮಕ್ಕಳನ್ನು ಯೆಹೋವ ದೇವರಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು.
क्योंकि याहवेह ने तुम्हारे तथा हमारे बीच में यरदन को एक सीमा बना दिया है. तुम, जो रियूबेन तथा गाद वंश के हो; याहवेह में तुम्हारा कोई भाग नहीं है.’ ऐसा कहकर आपकी संतान हमारी संतान को याहवेह के प्रति जो भय और आदर के योग्य है उससे दूर कर देगी तो?
26 “ಆದ್ದರಿಂದ, ‘ನಾವು ಸಿದ್ಧರಾಗಿ ಬಲಿಪೀಠವನ್ನು ಕಟ್ಟೋಣ ಎಂದು ಹೇಳಿದ ಕಾರಣ, ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕೆ ಅಲ್ಲ.’
“इसलिये हमने सोचा है, ‘हम एक वेदी बनाये जो होमबलि और मेल बलि के लिए नहीं,’
27 ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.
परंतु इसलिये कि यह आपके तथा हमारे और हमारी आनेवाली पीढ़ियों के बीच गवाह हो, कि हम अपनी होमबलियों, तथा मेल बलियों के द्वारा याहवेह के समक्ष उनकी सेवा-आराधना करेंगे, और आपकी संतान हमारी संतान से कभी यह न कहे, ‘तुम्हारे याहवेह से हमारा कोई लेना देना नहीं है.’
28 “ಇದಲ್ಲದೆ ನಾವು, ‘ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತತಿಯವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ: ಯೆಹೋವ ದೇವರ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿರಿ, ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ. ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.
“तब हमने यह विचार भी किया, कि हो सकता है कि भविष्य में यदि वे हमसे अथवा हमारी पीढ़ी के लोगों से यह पूछे, तब उनके लिए हमारा उत्तर होगा, ‘हमारे पूर्वजों द्वारा बनाया याहवेह की वेदी देख लो, जो न तो होमबलि के लिए है और न ही मेल बलि के लिए, परंतु यह हमारे और तुम्हारे बीच एक गवाह बनने के लिए है.’
29 “ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.
“कभी ऐसा न हो कि हम याहवेह हमारे परमेश्वर की वेदी को छोड़कर होमबलि, अन्नबलि तथा मेल बलि चढ़ाने के लिए दूसरी वेदी बनाकर याहवेह से दूर हो जायें, उनके पीछे चलना छोड़ दें.”
30 ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರೂ ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರು ಹೇಳಿದ ಮಾತುಗಳನ್ನು ಕೇಳಿದಾಗ ಅವರಿಗೆ ಮೆಚ್ಚಿಕೆಯಾಯಿತು.
जब पुरोहित फिनिहास, सभा के नेताओं तथा इस्राएल के परिवारों के प्रधानों ने, जो उस समय वहां थे, रियूबेन, गाद तथा मनश्शेह के वंश से जब यह सब सुना, तब वे खुश हो गये.
31 ಯಾಜಕನಾಗಿರುವ ಎಲಿಯಾಜರನ ಪುತ್ರ ಫೀನೆಹಾಸನು ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರಿಗೆ, “ನೀವು ಯೆಹೋವ ದೇವರಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಅವರು ನಮ್ಮ ಮಧ್ಯದಲ್ಲಿರುತ್ತಾರೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವ ದೇವರ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ,” ಎಂದನು.
एलिएज़र के पुत्र फिनिहास ने रियूबेन, गाद तथा मनश्शेह वंश को बताया, “आज हमें विश्वास हो गया हैं कि याहवेह हमारे साथ है, क्योंकि तुमने याहवेह की दृष्टि में कोई बुरा नहीं किया हैं. तुमने इस्राएल वंश को याहवेह के द्वारा सजा पाने से बचा लिया है.”
32 ಯಾಜಕನಾದ ಎಲಿಯಾಜರನ ಮಗ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನ್ಯರನ್ನೂ ಗಾದ್ಯರನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲರ ಬಳಿಗೆ ತಿರುಗಿಬಂದು, ಅವರಿಗೆ ವರ್ತಮಾನವನ್ನು ತಿಳಿಸಿದರು.
तब एलिएज़र के पुत्र पुरोहित फिनिहास तथा सभी प्रधान, रियूबेन तथा गाद वंश के देश गिलआद से इस्राएल वंश के देश कनान को लौट गए और उन्हें सब बात बता दी.
33 ಆ ಮಾತನ್ನು ಇಸ್ರಾಯೇಲರು ಕೇಳಿ ಸಂತೋಷಪಟ್ಟು ದೇವರನ್ನು ಕೊಂಡಾಡಿದರು. ಆದ್ದರಿಂದ ಅವರು ರೂಬೇನ್ಯರೂ ಗಾದ್ಯರೂ ನಿವಾಸವಾಗಿದ್ದ ನಾಡಿನ ಮೇಲೆ ಯುದ್ಧಮಾಡಿ ಅವರನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.
सब बात सुनकर इस्राएल वंशी खुश हो गए. उन्होंने परमेश्वर की महिमा की. और उन्होंने उस देश को, जिसमें रियूबेन तथा गाद वंश के लोग रह रहे थे, नष्ट करने के उद्देश्य से उनसे युद्ध करने का विचार छोड़ दिया.
34 ರೂಬೇನ್ಯರೂ ಗಾದ್ಯರೂ ಆ ಬಲಿಪೀಠಕ್ಕೆ, “ನಮ್ಮ ನಡುವೆ ಯೆಹೋವ ದೇವರೇ ದೇವರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ,” ಎಂದು ಹೆಸರಿಟ್ಟರು.
रियूबेन एवं गाद वंश ने उस वेदी को एद अर्थात् स्मारक नाम दिया, क्योंकि यह वेदी याहवेह परमेश्वर तथा उनके मध्य एक यादगार थी.