< ಯೆಹೋಶುವನು 6 >

1 ಆಗ ಯೆರಿಕೋವಿನ ಜನರು ಇಸ್ರಾಯೇಲರ ನಿಮಿತ್ತವಾಗಿ, ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದರು.
इस्राएल सैन्याच्या भीतीमुळे यरीहोची सर्व प्रवेशद्वारे मजबूत लावून घेण्यात आली होती; कोणी बाहेर गेला नाही की आत आला नाही.
2 ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
परमेश्वर यहोशवाला म्हणाला, “पाहा, यरीहो, त्याचा राजा व त्याचे कसलेले योद्धे मी तुझ्या हाती दिले आहेत.
3 ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣವನ್ನು ಒಂದು ಸಾರಿ ಸುತ್ತಬೇಕು. ಈ ಪ್ರಕಾರ ಆರು ದಿವಸ ಮಾಡಬೇಕು.
तुम्ही सगळे योद्धे या नगरासभोवती एक प्रदक्षिणा घाला. असे सहा दिवस करा.
4 ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.
सात याजकांनी एडक्याच्या शिंगाचे सात कर्णे घेऊन कराराच्या कोशापुढे चालावे; सातव्या दिवशी तुम्ही नगराला सात प्रदक्षिणा घालाव्यात आणि याजकांनी कर्णे वाजवावेत,
5 ಅವರು ಟಗರು ಕೊಂಬುಗಳ ತುತೂರಿಗಳಿಂದ ದೀರ್ಘಧ್ವನಿಗೈಯುವಾಗ, ಆ ತುತೂರಿಯ ಧ್ವನಿಯನ್ನು ಕೇಳುವ ಜನರೆಲ್ಲರೂ ಮಹಾ ರಭಸದಿಂದ ಆರ್ಭಟಿಸಬೇಕು. ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದುಹೋಗುವುದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಒಳಗೆ ನುಗ್ಗಿಹೋಗಬಹುದು,” ಎಂದು ಹೇಳಿದರು.
नंतर ते एडक्याच्या शिंगाच्या कर्ण्यानी दीर्घ नाद करतील आणि जेव्हा तुम्ही कर्ण्याचा आवाज ऐकाल तेव्हा सर्व लोकांनी मोठा जयघोष करावा म्हणजे नगराच्या भिंती जागच्या जागी कोसळतील; मग तुम्ही प्रत्येकाने सरळ आत चालून जावे.”
6 ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.
नंतर नूनाचा पुत्र यहोशवा याने याजकांना बोलावले आणि त्यांना म्हटले, “कराराचा कोश उचलून घ्या आणि सात याजकांनी सात एडक्याच्या शिंगाचे कर्णे घेऊन परमेश्वराच्या कोशापुढे चालत जावे.”
7 ಜನರಿಗೆ, “ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ದರು ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.
तो लोकांस म्हणाला, “चला, नगराला प्रदक्षिणा घाला, आणि सशस्त्र पुरुषांनी परमेश्वराच्या कराराच्या कोशापुढे चालावे.”
8 ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ, ಏಳು ಟಗರು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಮುಂದೆ ನಡೆದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರನ್ನು ಹಿಂಬಾಲಿಸಿತು.
यहोशवाने लोकांस सांगितल्याप्रमाणे सात याजक परमेश्वर देवापुढे एडक्याच्या शिंगांचे सात कर्णे वाजवत चालले आणि परमेश्वराच्या कराराचा कोश त्यांच्या मागोमाग निघाला.
9 ಹೀಗೆ ಯುದ್ಧ ಸನ್ನದ್ಧರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
सशस्त्र लोक कर्णे वाजविणाऱ्या याजकांपुढे चालत होते आणि कर्ण्याची गर्जना होत असताना पाठीमागचे संरक्षक सैन्य कराराच्या कोशाच्या मागोमाग येत होते.
10 ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಶಬ್ದವು ಕೇಳಿಸಲೂಬಾರದು. ನಿಮ್ಮ ಬಾಯಿಂದ ಯಾವ ಮಾತು ಹೊರಡಲೂಬಾರದು, ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು.
१०मग यहोशवाने लोकांस अशी आज्ञा केली की, मी तुम्हाला सांगेपर्यंत जयघोष करू नका, “त्यांच्या कानी तुमचा आवाज जाऊ देऊ नका व तुम्ही आपल्या तोंडातून एक शब्दही काढू नका; मग मी सांगेन तेव्हाच जयघोष करा.”
11 ಹೀಗೆಯೇ ಯೆಹೋವ ದೇವರ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ರಾತ್ರಿಯನ್ನು ಕಳೆದರು.
११या प्रकारे परमेश्वराच्या कराराच्या कोशाची नगरासभोवती एक वेळ प्रदक्षिणा झाली. त्यानंतर त्यांनी छावणीत येऊन तेथे रात्री मुक्काम केला.
12 ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡರು.
१२यहोशवा मोठ्या पहाटेस उठला आणि याजकांनी परमेश्वराचा कराराचा कोश उचलून घेतला.
13 ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧವಾದ ಜನರು ಅವರ ಮುಂದೆ ಹೋದರು. ಆದರೆ ಹಿಂದಿನ ಸೈನ್ಯದವರು ಯೆಹೋವ ದೇವರ ಮಂಜೂಷದ ಹಿಂದೆ ನಡೆದರು. ಯಾಜಕರು ತುತೂರಿಗಳನ್ನು ಊದುತ್ತಾ ಹೊರಟರು.
१३सात याजक एडक्याच्या शिंगांचे कर्णे घेऊन परमेश्वराच्या कोशापुढे ती एकसारखी वाजवीत निघाले आणि सशस्त्र लोक त्यांच्यापुढे चालले; कर्णे वाजवले जात असताना पिछाडीचे लोक परमेश्वराच्या कराराच्या कोशामागे चालत होते.
14 ಹೀಗೆ ಎರಡನೆಯ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿಬಂದು ಪಾಳೆಯಕ್ಕೆ ಹಿಂದಿರುಗಿದರು. ಹೀಗೆಯೇ ಆರು ದಿನ ಮಾಡಿದರು.
१४ते दुसऱ्या दिवशीही नगराला एक प्रदक्षिणा घालून छावणीत परत आले; असे त्यांनी सहा दिवस केले.
15 ಆದರೆ ಏಳನೆಯ ದಿನ ಸೂರ್ಯೋದಯವಾಗುವಾಗ, ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು. ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿಬಂದರು.
१५सातव्या दिवशी अगदी पहाटेस उठून त्यांनी अशाच प्रकारे त्या नगराला सात प्रदक्षिणा घातल्या; त्या दिवशी मात्र त्यांनी त्या नगराला सात प्रदक्षिणा घातल्या.
16 ಏಳನೆಯ ಸಾರಿ ಯಾಜಕರು ತುತೂರಿಗಳನ್ನು ಊದುವಾಗ, ಯೆಹೋಶುವನು ಜನರಿಗೆ, “ಆರ್ಭಟಿಸಿರಿ! ಯೆಹೋವ ದೇವರು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾರೆ.
१६सातव्या वेळी याजक कर्णे वाजवीत असताना यहोशवा लोकांस म्हणाला, “जयघोष करा, कारण परमेश्वराने हे नगर तुमच्या हाती दिले आहे;
17 ಆದರೂ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರಿಗೆ ಅರ್ಪಿತವಾದವುಗಳು. ರಾಹಾಬಳೆಂಬ ವೇಶ್ಯೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಆಕೆಯು ಬಚ್ಚಿಟ್ಟಿದ್ದಳು.
१७हे नगर व ह्यात जे काही असेल ते सर्व परमेश्वरास समर्पित करावे; मात्र राहाब वेश्येला आणि जे कोणी तिच्यासोबत तिच्या घरी असतील त्यांना जिवंत ठेवावे, कारण आपण पाठवलेल्या जासुदांना तिने लपवून ठेवले होते.
18 ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ.
१८तुम्ही मात्र समर्पित वस्तूंपासून सर्वदा दूरच राहा; त्या समर्पित झाल्यावर त्यातली एखादी वस्तू तुम्ही घ्याल, तर इस्राएलाच्या छावणीवर शाप आणाल व तिला संकटात पाडाल.
19 ಎಲ್ಲಾ ಬೆಳ್ಳಿಬಂಗಾರ, ಕಂಚು, ಕಬ್ಬಿಣ ಪಾತ್ರೆಗಳು ಯೆಹೋವ ದೇವರಿಗೆ ಅರ್ಪಿತವಾಗಿರಬೇಕು. ಅವು ಯೆಹೋವ ದೇವರ ಭಂಡಾರಕ್ಕೆ ಸೇರಿರಬೇಕು,” ಎಂದು ಆಜ್ಞಾಪಿಸಿದನು.
१९पण सर्व सोने, रुपे आणि तांब्याची व लोखंडाची सर्व पात्रे परमेश्वराकरता पवित्र आहेत; ती परमेश्वराच्या भांडारात जमा केली पाहिजेत.”
20 ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.
२०तेव्हा लोकांनी जयघोष केला आणि कर्णे वाजत राहिले, कर्ण्यांचा आवाज ऐकताच लोकांनी मोठ्याने जयघोष केला आणि तट जागच्या जागी कोसळला; लगेच लोकांनी आपआपल्यासमोर त्या नगरात सरळ चालून जाऊन ते काबीज केले.
21 ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀಪುರುಷರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ಖಡ್ಗದಿಂದ ಸಂಪೂರ್ಣವಾಗಿ ನಾಶಮಾಡಿದರು.
२१त्या नगरातील पुरुष, स्त्रिया, तरुण, वृद्ध, बैल व मेंढरे, गाढवे वगैरे सर्वांचा त्यांनी तलवारीने समूळ नाश केला.
22 ಆ ನಾಡನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ ಯೆಹೋಶುವನು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳನ್ನೂ ಅವಳಿಗೆ ಇರುವ ಸಮಸ್ತವನ್ನೂ ನೀವು ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತೆಗೆದುಕೊಂಡು ಬನ್ನಿರಿ,” ಎಂದನು.
२२तेव्हा जे दोन पुरुष तो देश हेरावयाला गेले होते त्यांना यहोशवा म्हणाला, “तुम्ही शपथ वाहिल्याप्रमाणे त्या वेश्येच्या घरी जाऊन तिला आणि तिचे जे कोणी असतील त्यांना बाहेर आणा.”
23 ಅದರಂತೆ ಆ ಯೌವನಸ್ಥರು ಒಳಗೆ ಹೋಗಿ, ರಾಹಾಬಳನ್ನೂ ಅವಳ ತಂದೆಯನ್ನೂ ಅವಳ ತಾಯಿಯನ್ನೂ ಅವಳ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಗೋತ್ರದ ಎಲ್ಲಾ ಸಂಬಂಧಿಕರನ್ನೂ ಹೊರಗೆ ಕರೆತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.
२३तेव्हा त्या तरुण हेरांनी आत जाऊन राहाबेला, तिच्या आई-वडीलांना, भाऊबंदांना, तिचे जे कोणी होते त्या सर्वांना म्हणजे तिच्या सर्व आप्तजनांना बाहेर आणून इस्राएलाच्या छावणीबाहेर नेऊन ठेवले.
24 ಆದರೆ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿಬಂಗಾರವನ್ನೂ ಕಂಚು ಕಬ್ಬಿಣ ಪಾತ್ರೆಗಳನ್ನು ಮಾತ್ರ ಯೆಹೋವ ದೇವರ ಮನೆಯ ಭಂಡಾರದಲ್ಲಿ ಇಟ್ಟರು.
२४मग त्यांनी ते नगर व त्यातले सर्वकाही आग लावून जाळले; मात्र सोने, रुपे आणि तांब्याची व लोखंडाची पात्रे ही त्यांनी परमेश्वराच्या घराच्या भांडारात ठेवली.
25 ಆದರೆ ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ, ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿವಸದವರೆಗೂ ಇಸ್ರಾಯೇಲರಲ್ಲಿ ವಾಸವಾಗಿದ್ದಾಳೆ. ಏಕೆಂದರೆ ಯೆರಿಕೋವನ್ನು ಸಂಚರಿಸಿ ನೋಡಲು, ಯೆಹೋಶುವನು ಕಳುಹಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.
२५यहोशवाने राहाब वेश्या, तिच्या वडिलांचा परिवार व तिचे जे कोणी होते ते सर्व वाचवले; तिचा वंश आजपर्यंत इस्राएल लोकांमध्ये वस्ती करून आहे; कारण जे जासूद यरीहो हेरायला यहोशवाने पाठवले होते, त्यांना तिने लपवून ठेवले होते.
26 ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. “ಅದರ ಅಸ್ತಿವಾರವನ್ನು ಹಾಕುವವನು, ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. ಪಟ್ಟಣದ ಬಾಗಿಲುಗಳನ್ನಿಡುವಾಗ ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.”
२६त्या वेळी यहोशवाने त्यांना शपथ घातली आणि तो त्यांना म्हणाला की, “जो कोणी यरीहो नगर पुन्हा बांधील त्यास परमेश्वराचा शाप लागेल. त्याचा पाया घालताच त्याचा ज्येष्ठ पुत्र मरेल आणि त्याच्या वेशी उभारताच त्याचा कनिष्ठ पुत्र मरेल.”
27 ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು.
२७याप्रमाणे परमेश्वर यहोशवाबरोबर राहिला, आणि त्याची कीर्ती सर्व देशभर पसरली.

< ಯೆಹೋಶುವನು 6 >