< ಯೆಹೋಶುವನು 7 >

1 ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.
శాపానికి గురైన దాన్ని నాశనం చేసే విషయంలో ఇశ్రాయేలీయులు అపనమ్మకంగా ప్రవర్తించారు. యూదాగోత్రంలో జెరహు మునిమనుమడు, జబ్ది మనుమడు, కర్మీ కుమారుడు, ఆకాను నాశనం చేయాల్సిన వస్తువుల్లో కొన్నిటిని సొంతానికి తీసుకున్నాడు. కాబట్టి యెహోవా ఇశ్రాయేలీయుల మీద కోపగించాడు.
2 ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು.
యెహోషువ “మీరు వెళ్లి దేశాన్ని వేగు చూడండి” అని చెప్పి బేతేలుకు తూర్పున బేతావెను దగ్గర ఉన్న హాయి అనే పట్టణానికి యెరికో నుండి గూఢచారులను పంపాడు.
3 ಯೆಹೋಶುವನ ಬಳಿಗೆ ತಿರುಗಿಬಂದು ಅವನಿಗೆ, “ಜನರೆಲ್ಲರೂ ಹೋಗುವ ಅವಶ್ಯಕತೆ ಇಲ್ಲ, ಆಯಿ ಎಂಬ ಪಟ್ಟಣವನ್ನು ಹೊಡೆಯುವುದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಹೋದರೆ ಸಾಕು. ಸೈನ್ಯವನ್ನು ಕಳುಹಿಸಿ ದಣಿಸಬೇಡ. ಏಕೆಂದರೆ ಸ್ವಲ್ಪ ಜನರು ಮಾತ್ರ ಅಲ್ಲಿ ಇದ್ದಾರೆ,” ಎಂದರು.
వారు వెళ్లి, హాయి పట్టణాన్ని వేగు చూసి యెహోషువ దగ్గరికి తిరిగి వచ్చి “ప్రజలందరినీ పంపించకు, రెండు మూడు వేలమంది వెళ్లి హాయిని పట్టుకోవచ్చు, అందరూ ప్రయాసపడి అక్కడికి వెళ్లనక్కరలేదు, హాయి ప్రజలు కొద్దిమందే ఉన్నారు” అన్నారు.
4 ಆದ್ದರಿಂದ ಜನರಲ್ಲಿ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಅಲ್ಲಿಗೆ ಹೋದರು. ಆದರೆ ಅವರು ಆಯಿ ಎಂಬ ಪಟ್ಟಣದ ಮನುಷ್ಯರನ್ನು ಎದುರಿಸಲಾಗದೆ ಓಡಿಹೋದರು.
కాబట్టి సుమారు మూడు వేలమంది సైనికులు అక్కడికి వెళ్ళారు గాని వారు హాయి ప్రజల ముందు నిలవలేక పారిపోయారు.
5 ಆಯಿ ಎಂಬ ಪಟ್ಟಣದವರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಪಟ್ಟಣದ ಬಾಗಿಲಿನಿಂದ ಪ್ರಾರಂಭಿಸಿ ಶೆಬಾರಿಮಿನವರೆಗೂ ಅವರನ್ನು ಹಿಂದಟ್ಟಿ, ಅವರನ್ನು ಹೊಡೆದರು. ಆದ್ದರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
హాయి ప్రజలు వారిలో ముప్ఫై ఆరుగురిని చంపేశారు. అదీ కాకుండా వారి పట్టణ ద్వారం దగ్గర నుండి షేబారీము వరకూ తరిమి మోరాదులో వారిని చంపేశారు. కాబట్టి ఇశ్రాయేలీయుల గుండెలు కరిగి నీరైపోయాయి.
6 ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.
యెహోషువ తన బట్టలు చింపుకున్నాడు. అతడూ ఇశ్రాయేలీయుల పెద్దలూ సాయంకాలం వరకూ యెహోవా మందసం ముందు నేలమీద ముఖాలు మోపి తలల మీద దుమ్మెత్తి పోసుకొంటూ
7 ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
“అయ్యో, ప్రభూ, యెహోవా, మమ్మల్ని నాశనం చేయడానికీ అమోరీయుల చేతికి అప్పగించడానికీ ఈ ప్రజలను యొర్దాను నదిని ఎందుకు దాటించావు? మేము యొర్దాను అవతల నివసించడమే మేలు కదా.
8 ಯೆಹೋವ ದೇವರೇ, ಈಗ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದರಲ್ಲಾ. ನಾನು ಏನು ಹೇಳಲಿ.
ప్రభూ, కనికరించు, ఇశ్రాయేలీయులు తమ శత్రువులను ఎదుర్కోలేక వెన్ను చూపినందుకు నేనేమి చెప్పాలి?
9 ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.
కనానీయులు, ఈ దేశ ప్రజలంతా ఇది విని, మమ్మల్ని చుట్టుముట్టి మా పేరు భూమి మీద ఉండకుండాా తుడిచి పెట్టేస్తారు. అప్పుడు ఘనమైన నీ నామం కోసం నువ్వు ఏం చేస్తావు” అని ప్రార్థించారు.
10 ಯೆಹೋವ ದೇವರು ಯೆಹೋಶುವನಿಗೆ, “ನೀನು ಎದ್ದೇಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇನು?
౧౦అప్పుడు యెహోవా యెహోషువతో ఇలా అన్నాడు “లే, ఎందుకు ఇక్కడ నేల మీద ముఖం మోపుకున్నావు?
11 ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
౧౧ఇశ్రాయేలీయులు పాపం చేశారు. నేను వారితో చేసిన నిబంధనను ఉల్లంఘించారు. శపితమైన దాన్ని కొంత దొంగిలించి, తమ సామానులో దాన్ని పెట్టుకున్నారు. ఆ పాపాన్ని కప్పిపుచ్చారు.
12 ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನು ತೋರಿಸಿದ್ದಾರೆ. ಅದರಿಂದ ಅವರು ನಾಶನಕ್ಕೆ ಪಾತ್ರರಾದರು. ನೀವು ಶಾಪಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ, ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವುದಿಲ್ಲ.
౧౨కాబట్టి ఇశ్రాయేలీయులు తమ శత్రువుల ముందు నిలవలేరు. వారు తమకు తామే నాశనానికి గురయ్యారు కాబట్టి తమ శత్రువులకు వెన్నుచూపించారు. శాపగ్రస్తమైన వాటిని మీ మధ్య ఉండకుండాా నిర్మూలం చేస్తే తప్ప నేను మీతో ఉండను.
13 “ನೀನು ಎದ್ದು ಜನರನ್ನು ಶುದ್ಧೀಕರಿಸಿ, ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ, ಏಕೆಂದರೆ, ‘ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು, ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವವರೆಗೂ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರೆ,’ ಎಂದು ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುತ್ತಾರೆ.
౧౩నీవు వెళ్లి వారితో ఇలా చెప్పు, ‘రేపు ఉదయం మిమ్మల్ని మీరు పరిశుద్ధపరచుకోండి, ఇశ్రాయేలీయుల దేవుడు యెహోవా చెప్పేదేమంటే, ఇశ్రాయేలీయులారా, మీ మధ్య శాపగ్రస్తమైనదొకటి ఉంది, మీరు దాన్ని మీ మధ్య ఉండకుండా నిర్మూలం చేసేవరకూ మీ శత్రువుల ముందు మీరు నిలబడలేరు.’
14 “‘ಆದ್ದರಿಂದ ಬೆಳಿಗ್ಗೆ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಯೆಹೋವ ದೇವರು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರವಾಗಿಯೂ ಯೆಹೋವ ದೇವರು ಹಿಡಿಯುವ ಕುಟುಂಬವು ಮನೆಮನೆಯಾಗಿಯೂ ಯೆಹೋವ ದೇವರು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
౧౪ఉదయాన యెహోవా సూచించిన ప్రకారం మీ గోత్రాలు, వంశాలు, కుటుంబాల వారీగా పురుషులు ఒక్కొక్కరు వరుసగా యెహోవా దగ్గరికి రావాలి.
15 ಆಗ ಶಾಪಕ್ಕೀಡಾದದ್ದನ್ನು ತೆಗೆದುಕೊಂಡವನೆಂದು ಹಿಡಿಯಲಾಗುವನು. ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ, ಇಸ್ರಾಯೇಲಿನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲಾಗಬೇಕು, ಎಂದು ಅವರಿಗೆ ಹೇಳು,’ ಎಂದರು.”
౧౫అప్పుడు శాపానికి గురైనది ఎవరి దగ్గర దొరుకుతుందో అతన్నీ అతని వాళ్ళందరినీ అగ్నితో కాల్చివేయాలి. ఎందుకంటే అతడు యెహోవా నిబంధన మీరి ఇశ్రాయేలులో దుష్కార్యం చేశాడు” అని చెప్పాడు.
16 ಮರುದಿನ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರ ಗೋತ್ರವಾಗಿ ಕರೆದಾಗ, ಯೆಹೂದ ಗೋತ್ರವು ಸಿಕ್ಕಿಕೊಂಡಿತು.
౧౬కాబట్టి యెహోషువ ఉదయాన్నే లేచి ఇశ్రాయేలీయులను వారి గోత్రాల వరుసలో రప్పించినప్పుడు యూదాగోత్రం పట్టుబడింది.
17 ಅವನು ಯೆಹೂದ ಕುಟುಂಬವನ್ನು ಕರೆದಾಗ, ಜೆರಹನ ಗೋತ್ರ ಸಿಕ್ಕಿಕೊಂಡಿತು. ಜೆರಹನ ಗೋತ್ರವನ್ನು ಕರೆದಾಗ ಜಿಮ್ರಿಯು ಸಿಕ್ಕಿಕೊಂಡಿತು.
౧౭యూదా వంశాన్ని రప్పించినప్పుడు జెరహీయుల వంశం పట్టుబడింది. జెరహీయుల వంశాన్ని ఒక్కొక్కరిని రప్పించినప్పుడు జబ్ది దొరికాడు.
18 ಅವನ ಕುಟುಂಬಗಳು ಕುಟುಂಬಗಳಾಗಿ, ವ್ಯಕ್ತಿಗಳು ವ್ಯಕ್ತಿಗಳಾಗಿ ಬಂದಾಗ, ಜಿಮ್ರಿಯ ಮಗನಾದ ಕರ್ಮೀಯ ಮಗನಾದ ಆಕಾನನೂ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಸಿಕ್ಕಿದನು.
౧౮అతడినీ అతని ఇంటివారిని పురుషుల వరుస ప్రకారం రప్పించినప్పుడు యూదా గోత్రంలో జెరహు మునిమనుమడూ జబ్ది మనుమడూ కర్మీ కుమారుడూ అయిన ఆకాను దొరికాడు.
19 ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.
౧౯అప్పుడు యెహోషువ ఆకానుతో “నా కుమారా, ఇశ్రాయేలు దేవుడు యెహోవాకు మహిమ కలిగేలా, ఆయన ముందు ఏదీ దాచకుండా ఒప్పుకో, నీవు చేసినదాన్ని నాకు చెప్పు” అని అన్నాడు.
20 ಆಕಾನನು ಯೆಹೋಶುವನಿಗೆ, “ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಇಂಥಿಂಥವುಗಳನ್ನು ಮಾಡಿದ್ದೇನೆ.
౨౦అందుకు ఆకాను యెహోషువతో “ఇశ్రాయేలీయుల దేవుడు యెహోవాకు విరోధంగా నేను పాపం చేసింది నిజమే.
21 ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.
౨౧దోపుడు సొమ్ములో ఒక మంచి షీనారు పైవస్త్రాన్నీ, రెండువందల తులాల వెండినీ, యాభై తులాల బరువైన ఒక బంగారు కమ్మీనీ చూసి ఆశపడి వాటిని తీసుకున్నాను. అదిగో, వాటిని నా డేరా మధ్య నేలలో పాతిపెట్టాను. ఆ వెండి కూడా దాని కింద ఉంది” అని తాను చేసిన దాన్ని ఒప్పుకున్నాడు.
22 ಆಗ ಯೆಹೋಶುವನು ದೂತರನ್ನು ಕಳುಹಿಸಿದನು. ಅವರು ಡೇರೆಗಳಿಗೆ ಓಡಿದರು. ಆ ಡೇರೆಯಲ್ಲಿ ಹೂತಿಟ್ಟವುಗಳನ್ನು ತೆಗೆದರು. ಬೆಳ್ಳಿಯು ಅದರ ಕೆಳಗೆ ಮರೆಮಾಡಲಾಗಿತ್ತು.
౨౨అప్పుడు యెహోషువ దూతలను పంపినప్పుడు వారు అతని డేరా దగ్గరికి పరుగెత్తి చూశారు. వారు ఆ వస్తువులనూ వాటి కింద ఆ వెండినీ కనుక్కున్నారు.
23 ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲರ ಬಳಿಗೂ ತಂದು, ಯೆಹೋವ ದೇವರ ಮುಂದೆ ಇಟ್ಟರು.
౨౩కాబట్టి వారు డేరా మధ్య నుండి వాటిని తీసుకు యెహోషువ దగ్గరకూ ఇశ్రాయేలీయుల దగ్గరకూ తెచ్చి యెహోవా సన్నిధిలో పోశారు.
24 ಆಗ ಯೆಹೋಶುವನೂ ಅವನೊಂದಿಗೆ ಇಸ್ರಾಯೇಲರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಪುತ್ರಪುತ್ರಿಯರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ಕಣಿವೆಗೆ ತಂದರು.
౨౪తరువాత యెహోషువ, ఇశ్రాయేలీయులు అందరూ జెరహు కుమారుడు ఆకానునూ, ఆ వెండినీ పైవస్త్రాన్నీ, బంగారు కమ్మీనీ, ఆకాను కుమారులనూ, కుమార్తెలనూ, ఎద్దులనూ, గాడిదలనూ, మందనూ, డేరానూ, అతనికి కలిగిన సమస్తాన్నీ పట్టుకుని ఆకోరు లోయలోకి తీసుకొచ్చారు.
25 ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,
౨౫అప్పుడు యెహోషువ “నీవెందుకు మమ్మల్ని బాధపెట్టావు? ఈ రోజు యెహోవా నిన్ను బాధిస్తాడు” అనగానే ఇశ్రాయేలీయులంతా అతణ్ణి రాళ్లతో చావగొట్టారు.
26 ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ.
౨౬తరువాత ఆ వస్తువులనూ రాళ్ళతో కొట్టి అగ్నితో కాల్చి వాటి మీద రాళ్లను పెద్ద కుప్పగా వేశారు. అది ఈ రోజు వరకూ ఉంది. అప్పుడు యెహోవా తన కోపోద్రేకాన్ని విడిచిపెట్టాడు. అందుచేత ఇప్పటి వరకూ ఆ చోటికి “ఆకోరు లోయ” అని పేరు.

< ಯೆಹೋಶುವನು 7 >