< ನ್ಯಾಯಸ್ಥಾಪಕರು 21 >

1 ಇಸ್ರಾಯೇಲರು ತಮ್ಮಲ್ಲಿ, “ಯಾವನೂ ತನ್ನ ಮಗಳನ್ನು ಬೆನ್ಯಾಮೀನ್ಯರಿಗೆ ಮದುವೆಮಾಡಿ ಕೊಡುವುದಿಲ್ಲ,” ಎಂದು ಮಿಚ್ಪೆಯಲ್ಲಿ ಆಣೆಯಿಟ್ಟಿದ್ದರು.
ဣသရေလအမျိုးသားတို့သည် အဘယ်သူမျှ မိမိသမီးကို ဗင်္ယာမိန်အမျိုးသား၌ မပေးစားရမည် အကြောင်း၊ မိဇပါမြို့မှာ ကျိန်ဆိုခြင်းကို ပြုနှင့်ကြပြီ။
2 ಆದ್ದರಿಂದ ಜನರು ಬೇತೇಲಿಗೆ ಬಂದು, ಅಲ್ಲಿ ದೇವರ ಮುಂದೆ ಸಾಯಂಕಾಲದವರೆಗೆ ಇದ್ದು, ತಮ್ಮ ಧ್ವನಿ ಎತ್ತಿ ಬಹಳವಾಗಿ ಅತ್ತು,
လူများတို့သည် ဘုရားသခင့် အိမ်တော်သို့ လာ၍ ဘုရားသခင့် ရှေ့တော်၌ ညဦးတိုင်အောင် နေလျက်၊ အသံကို လွှင့်၍ ငိုကြွေးလျက်၊-
3 “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದದ್ದೇನು?” ಎಂದರು.
အိုဣသရေလအမျိုး၏ ဘုရားသခင် ထာဝရဘုရား၊ ဣသရေလအမျိုးအနွယ်တို့တွင် ယနေ့တမျိုး ချို့တဲ့ရသော အမှုသည် အဘယ်ကြောင့် ဖြစ်ရပါသနည်းဟု လျှောက်ဆိုကြ၏။
4 ಜನರು ಮಾರನೆಯ ದಿವಸ ಉದಯದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ, ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.
နက်ဖြန်နံနက်စောစော လူများတို့သည် ထပြီးလျှင်၊ ယဇ်ပလ္လင်ကိုတည်၍ မီးရှို့ရာယဇ်၊ မိဿဟာယ ယဇ်တို့ကို ပူဇော်ကြ၏။
5 ಅನಂತರ ಅವರು, “ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಬಾರದವರು ಯಾರು?” ಎಂದರು. ಏಕೆಂದರೆ ಯೆಹೋವ ದೇವರ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆ ಇಟ್ಟುಕೊಂಡಿದ್ದರು.
ဣသရေလအမျိုးသားတို့ကလည်း၊ ဣသရေလအမျိုးအနွယ်အပေါင်းတို့တွင် အဘယ်သူသည် ပရိ သတ်အပေါင်းနှင့်အတူ ထာဝရဘုရားထံတော်သို့ မလာဘဲနေသနည်းဟု မေးကြ၏။ အကြောင်း မူကား၊ မိဇပါမြို့ထာဝရဘုရားထံတော်သို့ မလာဘဲ နေသောသူသည် ဧကန်အမှန် အသေသတ်ခြင်းကို ခံစေဟု ကြီးစွာသော ကျိန်ဆိုခြင်းကို ပြုနှင့်ကြပြီ။
6 ಆಗ ಇಸ್ರಾಯೇಲರು ತಮ್ಮ ಸಹೋದರರಾದ ಬೆನ್ಯಾಮೀನನ ವಿಷಯವಾಗಿ ಪಶ್ಚಾತ್ತಾಪಪಟ್ಟು, “ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಕಡಿದು ಹೋಯಿತು.
ဣသရေလအမျိုးသားတို့သည်လည်း၊ ညီဗင်္ယာမိန်အတွက် နောင်တရလျက်၊ ဣသရေလ အမျိုးအနွယ် တို့တွင် ယနေ့တမျိုးဆုံးပြီ။
7 ನಾವು ನಮ್ಮ ಪುತ್ರಿಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವುದಿಲ್ಲ, ಎಂದು ನಾವು ಯೆಹೋವ ದೇವರ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ?
ငါတို့သည် ကိုယ်သမီးကို သူတို့အား မပေးစားရမည်အကြောင်း၊ ထာဝရဘုရားကို တိုင်တည်၍ ကျိန်ဆိုသောကြောင့်၊ ကျန်ကြွင်းသော သူတို့အဘို့ မိန်းမတို့ကို အဘယ်သို့ ရနိုင်သနည်းဟူ၍၎င်း၊
8 ಇಸ್ರಾಯೇಲಿನ ಗೋತ್ರಗಳಲ್ಲಿ ಮಿಚ್ಪೆಗೆ ಯೆಹೋವ ದೇವರ ಬಳಿಗೆ ಬಾರದವರು ಯಾರಾದರೂ ಒಬ್ಬರಿದ್ದಾರೋ?” ಎಂದರು. ಆಗ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದಿರಲಿಲ್ಲ.
ဣသရေလအမျိုးအနွယ်တို့တွင် အဘယ်သူသည် မိဇပါမြို့ ထာဝရဘုရားထံတော်သို့ မလာဘဲ နေသနည်းဟူ၍၎င်း မေးမြန်းလျှင်၊ ဂိလဒ်ပြည်ယာ ဗက်မြို့သားတယောက်မျှ စုဝေးရာ တပ်သို့ မရောက်မလာကြောင်းကို သိကြ၏။
9 ಜನರು ಲೆಕ್ಕಿಸಿದಾಗ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಇರಲಿಲ್ಲ.
လူများတို့ကို ရေတွက်သောအခါ၊ ဂိလဒ်ပြည်ယာဗက်မြို့သားတယောက်မျှမပါ။
10 ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ, ಅವರಿಗೆ, “ನೀವು ಹೋಗಿ, ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡ, ಖಡ್ಗದಿಂದ ಸಂಹರಿಸಿಬಿಡಿರಿ.
၁၀ထိုအခါ စုဝေးသော သူတို့သည် စစ်သူရဲတသောင်းနှစ်ထောင်တို့ကို စေလွှတ်လျက်၊ သင်တို့သည် သွား၍ ဂိလဒ်ပြည် ယာဗက်မြို့သားယောက်ျား မိန်းမသူငယ်တို့ကို ထားနှင့်လုပ်ကြံကြလော့။
11 ಎಲ್ಲಾ ಗಂಡಸರನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲ ಮಾಡಿರಿ,” ಎಂದು ಆಜ್ಞಾಪಿಸಿದರು.
၁၁သို့ဆိုသော်၊ ယောက်ျားအပေါင်းကို၎င်း၊ ယောက်ျားနှင့်ဆက်ဆံသော မိန်းမအပေါင်းကို၎င်း၊ ရှင်းရှင်း ပယ်ရှားကြလော့ဟု မှာထားသည်အတိုင်း၊-
12 ಹಾಗೆಯೇ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡರು. ಅವರು ಯಾವುದೇ ಪುರುಷರೊಂದಿಗೆ ಸಂಬಂಧ ಹೊಂದಿರಲಿಲ್ಲ. ಅವರನ್ನು ಕಾನಾನ್ ದೇಶದಲ್ಲಿರುವ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತಂದರು.
၁၂စစ်သူရဲတို့သည် ဂိလဒ်ပြည် ယာဗက်မြို့သားတို့တွင်၊ ယောက်ျားနှင့် မဆက်ဆံသေးသော ကညာ မိန်းမပျိုလေးရာတို့ကို တွေ့၍ ခါနာန်ပြည်၌ တပ်ချရာ၊ ရှိလောမြို့သို့ ဆောင်ခဲ့ကြ၏။
13 ಆಗ ಸಭೆಯವರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾಮೀನ್ಯರ ಸಂಗಡ ಮಾತನಾಡಿ, ಅವರಿಗೆ ಸಮಾಧಾನವನ್ನು ಸಾರಲು ಕೆಲವರನ್ನು ಕಳುಹಿಸಿದರು.
၁၃တဖန်စုဝေးသော သူအပေါင်းတို့သည်၊ ရိမ္မုန်ကျောက်၌နေသော ဗင်္ယာမိန်လူတို့ကို နှုတ်ဆက်၍ အသင့်အတင့်ခေါ်ခြင်းငှါ လူတို့ကို စေလွှတ်ကြ၏။
14 ಆ ಕಾಲದಲ್ಲಿ ಬೆನ್ಯಾಮೀನ್ಯರು ತಿರುಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯರಲ್ಲಿ ಜೀವದಿಂದ ಉಳಿಸಿದ ಕನ್ನಿಕೆಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಆದರೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.
၁၄ထိုအခါ ဗင်္ယာမိန်လူတို့သည် လာပြန်၍၊ ဣသရေလလူတို့သည် အရှင်ချန်ထားသော ဂိလဒ်ပြည် ယာဗက်မြို့သူ မိန်းမတို့နှင့် ပေးစားကြ၏။ သို့သော်လည်း မိန်းမတို့သည် မလောက်မကြေ။
15 ಯೆಹೋವ ದೇವರು ಇಸ್ರಾಯೇಲ್ ಗೋತ್ರಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನರಿಗಾಗಿ ಪಶ್ಚಾತ್ತಾಪ ಪಟ್ಟರು.
၁၅ထိုသို့ ထာဝရဘုရားသည် ဣသရေလအမျိုးအနွယ်တို့တွင် ပြိုပျက်ရာကို ပြုတော်မူသောကြောင့်၊ ဣသရေလလူတို့သည် ဗင်္ယာမိန်အတွက် နောင်တရကြ၏။
16 ಸಮೂಹದ ಹಿರಿಯರು, “ಬೆನ್ಯಾಮೀನನ ಗೋತ್ರದ ಸ್ತ್ರೀಯರು ನಾಶವಾದದ್ದರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವುದಕ್ಕಾಗಿ ಏನು ಮಾಡೋಣ?
၁၆စုဝေးရာ ပရိသတ် အသက်ကြီးသူတို့ကလည်း၊ ဗင်္ယာမိန် အမျိုးထဲက မိန်းမတို့ကို ပယ်ရှင်း သောကြောင့်၊ ကျန်ကြွင်းသော သူတို့အဘို့ မိန်းမတို့ကို အဘယ်သို့ ရနိုင်သနည်းဟူ၍၎င်း၊-
17 ಇಸ್ರಾಯೇಲಿನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾಮೀನ್ಯರಿಗೆ ಬಾಧ್ಯತೆ ಇರಬೇಕು.
၁၇ဣသရေလအမျိုးတို့တွင် တမျိုးကို မပျောက်စေခြင်းငှါ သေဘေးမှ လွှတ်သော ဗင်္ယာမိန်လူတို့ အမွေ ခံစရာမြေရှိရမည်။
18 ‘ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ,’ ಎಂದು ಆಣೆ ಇಟ್ಟುಕೊಂಡಿದ್ದರಿಂದ, ನಾವಾದರೋ ನಮ್ಮ ಪುತ್ರಿಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು,” ಎಂದರು.
၁၈သို့သော်လည်း အကြင်သူသည် ဗင်္ယာမိန်လူ၌ သမီးကို ပေးစား၏။ ထိုသူသည် ကျိန်အပ်သောသူ ဖြစ်စေဟု ဣသရေလလူတို့သည် ကျိန်ဆိုခြင်းကို ပြုသောကြောင့် ငါတို့သည် ကိုယ်သမီးတို့ကို မပေး စားရဟူ၍၎င်း၊
19 ಅವರು ಬೇತೇಲಿಗೆ ಉತ್ತರದಲ್ಲಿಯೂ, ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವ ದೇವರ ಹಬ್ಬವುಂಟೆಂದು ಹೇಳಿದರು.
၁၉ဗေသလမြို့ မြောက်ဘက်၊ ဗေသလမြို့မှ ရှေခင်မြို့သို့သွားသောလမ်း အရှေ့ဘက်၊ လေဗောနမြို့တောင် ဘက်၊ ရှိလောမြို့နယ်တွင် ထာဝရဘုရားအဘို့ နှစ်စဉ် ပွဲခံတတ်သည်ဟူ၍၎င်း၊ တိုင်ပင်ကြသည်နှင့် အညီ၊-
20 ಅವರು ಬೆನ್ಯಾಮೀನ್ಯರಿಗೆ, “ನೀವು ಹೋಗಿ ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ.
၂၀ဗင်္ယာမိန်လူတို့ကို ခေါ်၍ သင်တို့သည် သွားကြလော့။ စပျစ်ဥယျာဉ်တို့၌ ချောင်းမြောင်းလျက်နေ ကြလော့။ ရှိလောမြို့သမီးတို့သည် ပွဲခံအံ့သောငှါ ကလျက်လာကြသောအခါ၊-
21 ಶೀಲೋವಿನ ಪುತ್ರಿಯರು ನಾಟ್ಯವಾಡುತ್ತಾ ಹೊರಟು ಬರುವರು. ನೀವು ಅವರನ್ನು ಕಂಡಾಗ, ದ್ರಾಕ್ಷಿ ತೋಟಗಳಿಂದ ಹೊರಟು, ಶೀಲೋವಿನ ಪುತ್ರಿಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡಿದುಕೊಂಡು, ಬೆನ್ಯಾಮೀನನ ದೇಶಕ್ಕೆ ಹೋಗಿರಿ,” ಎಂದು ಆಜ್ಞಾಪಿಸಿದರು.
၂၁စပျစ်ဥယျာဉ်ထဲက ထွက်ပြီးလျှင်၊ ထိုမြို့သမီးတို့ကို အသီးအသီး ကိုယ်မယားဖြစ်စေဘို့ ဘမ်းဆီး၍ ဗင်္ယာမိန်ပြည်သို့ ဆောင်သွားကြလော့။
22 ಅವರ ತಂದೆಗಳಾದರೂ, ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯವಾಡುವುದಕ್ಕೆ ಬಂದರೆ, ನಾವು ಅವರಿಗೆ, “ಯುದ್ಧದಲ್ಲಿ ನಾವು ಅವನವನಿಗೆ ಹೆಂಡತಿಯನ್ನು ದೊರಕಿಸಿದ ಕಾರಣ, ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಏಕೆಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ,” ಎಂದರು.
၂၂သူတို့အဘနှင့်မောင်တို့သည် ငါတို့ထံသို့လာ၍ အမှုလုပ်သောအခါ၊ ငါတို့က ငါတို့မျက်နှာကို ထောက်၍ သူတို့ကို သနားကြပါ။ စစ်တိုက်ရာတွင် သူတို့ အသီးအသီးဆိုင်သော မယားတို့ကို သူတို့ အဘို့ ငါတို့သည် မချန်မထားမိပါ။ သင်တို့၌ အပြစ်ရောက်စေခြင်းငှါ ယခုပေးစားကြသည် မဟုတ်ဟု သူတို့အား ပြန်ပြောမည်ဟု မှာထားကြသည်အတိုင်း၊-
23 ಆಗ ಬೆನ್ಯಾಮೀನ್ಯರು ಅದೇ ಪ್ರಕಾರಮಾಡಿ, ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡಿದುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು, ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ, ಪಟ್ಟಣಗಳನ್ನು ಕಟ್ಟಿ, ಅವುಗಳಲ್ಲಿ ವಾಸಿಸಿದರು.
၂၃ဗင်္ယာမိန်လူတို့သည်ပြု၍ ပွဲခံလျက်ကသော မိန်းမတို့ကို ကိုယ်အရေအတွက်အတိုင်း မယားဖြစ်ဘို့ ရာ ဘမ်းဆီး၍ ယူသွားကြ၏။ ကိုယ်အမွေခံရာမြေသို့ ပြန်ရောက်ပြီးလျှင်၊ မြို့တို့ကို အသစ်ပြင်ဆင်၍ နေကြ၏။
24 ಇಸ್ರಾಯೇಲರು ಆ ಕಾಲದಲ್ಲಿ ಆ ಸ್ಥಳವನ್ನು ಬಿಟ್ಟು, ತಮ್ಮ ತಮ್ಮ ಗೋತ್ರಕ್ಕೂ, ತಮ್ಮ ತಮ್ಮ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟುಹೋದನು.
၂၄ထိုအခါ ဣသရေလလူအပေါင်းတို့သည်လည်း ကိုယ်အမျိုး၊ ကိုယ်အဆွေနေရာ ကိုယ်အမွေခံရာမြေ သို့ ပြန်သွားကြ၏။
25 ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.
၂၅ထိုကာလ၌ ဣသရေလရှင်ဘုရင်မရှိ၊ လူတိုင်း မိမိစိတ်အလိုရှိသည်အတိုင်း ပြုသတည်း။

< ನ್ಯಾಯಸ್ಥಾಪಕರು 21 >