< ಮಾರ್ಕನು 8 >

1 ಆ ದಿವಸಗಳಲ್ಲಿ ದೊಡ್ಡ ಜನಸಮೂಹ ಕೂಡಿಬಂದಿತು. ಅವರಿಗೆ ಊಟಕ್ಕೆ ಏನೂ ಇಲ್ಲದ್ದರಿಂದ ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು,
उन दिनों में जब फिर बड़ी भीड़ जमा हुई, और उनके पास कुछ खाने को न था, तो उसने अपने शागिर्दों को पास बुलाकर उनसे कहा।
2 “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ.
“मुझे इस भीड़ पर तरस आता है, क्यूँकि ये तीन दिन से बराबर मेरे साथ रही है और इनके पास कुछ खाने को नहीं।
3 ನಾನು ಇವರನ್ನು ಹಸಿವೆಯಿಂದ ತಮ್ಮ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರೆ,” ಎಂದರು.
अगर मैं इनको भूखा घर को रुख़्सत करूँ तो रास्ते में थक कर रह जाएँगे और कुछ इन में से दूर के हैं।”
4 ಅದಕ್ಕೆ ಶಿಷ್ಯರು ಯೇಸುವಿಗೆ, “ಈ ನಿರ್ಜನ ಪ್ರದೇಶದಲ್ಲಿ ಈ ಜನರನ್ನು ತೃಪ್ತಿಪಡಿಸಲು ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತರುವುದು?” ಎಂದರು.
उस के शागिर्दों ने उसे जवाब दिया, “इस वीराने में कहाँ से कोई इतनी रोटियाँ लाए कि इनको खिला सके?”
5 ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಶಿಷ್ಯರು, “ಏಳು ರೊಟ್ಟಿಗಳಿವೆ,” ಎಂದರು.
उसने उनसे पूछा, “तुम्हारे पास कितनी रोटियाँ हैं?” उन्होंने कहा, “सात।”
6 ಆಗ ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ಮುರಿದು ಜನಸಮೂಹಕ್ಕೆ ಹಂಚಲು ತಮ್ಮ ಶಿಷ್ಯರಿಗೆ ಕೊಟ್ಟರು. ಅವರು ಜನಸಮೂಹಕ್ಕೆ ಹಂಚಿದರು.
फिर उसने लोगों को हुक्म दिया कि ज़मीन पर बैठ जाएँ। उसने वो सात रोटियाँ लीं और शुक्र करके तोड़ीं, और अपने शागिर्दों को देता गया कि उनके आगे रख्खें, और उन्होंने लोगों के आगे रख दीं।
7 ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚುವಂತೆ ಆಜ್ಞಾಪಿಸಿದರು.
उनके पास थोड़ी सी छोटी मछलियाँ भी थीं उसने उन पर बर्क़त देकर कहा कि ये भी उनके आगे रख दो।
8 ಜನರು ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಿದಾಗ ಏಳು ಬುಟ್ಟಿಗಳು ತುಂಬಿದವು.
पस वो खा कर सेर हुए और बचे हुए बे इस्तेमाल खाने के सात टोकरे उठाए।
9 ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ. ಯೇಸು ಅವರನ್ನು ಕಳುಹಿಸಿದ ನಂತರ,
और वो लोग चार हज़ार के क़रीब थे, फिर उसने उनको रुख़्सत किया।
10 ತಮ್ಮ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.
वो फ़ौरन अपने शागिर्दों के साथ नाव में बैठ कर दलमनूता के सूबा में गया।
11 ಫರಿಸಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ಮಾಡಬೇಕೆಂದು ಕೇಳಿ, ಅವರೊಂದಿಗೆ ತರ್ಕಿಸುವುದಕ್ಕೆ ಆರಂಭಿಸಿದರು.
फिर फ़रीसी निकल कर उस से बहस करने लगे, और उसे आज़माने के लिए उससे कोई आसमानी निशान तलब किया।
12 ಯೇಸು ತಮ್ಮ ಆತ್ಮದಲ್ಲಿ ನೊಂದುಕೊಂಡು, “ಈ ಸಂತತಿಯು ಸೂಚಕಕಾರ್ಯವನ್ನು ಹುಡುಕುವುದು ಏಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲಾಗುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.
उसने अपनी रूह में आह खींच कर कहा, “इस ज़माने के लोग क्यूँ निशान तलब करते हैं? मै तुम से सच कहता हूँ, कि इस ज़माने के लोगों को कोई निशान न दिया जाएगा।”
13 ಯೇಸು ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೆದಡಕ್ಕೆ ಹೊರಟು ಹೋದರು.
और वो उनको छोड़ कर फिर नाव में बैठा और पार चला गया।
14 ಶಿಷ್ಯರು ರೊಟ್ಟಿಬುತ್ತಿಯನ್ನು ತೆಗೆದುಕೊಳ್ಳುವುದಕ್ಕೆ ಮರೆತಿದ್ದರು. ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದೇ ಒಂದು ರೊಟ್ಟಿ ಇತ್ತು.
वो रोटी लेना भूल गए थे, और नाव में उनके पास एक से ज़्यादा रोटी न थी।
15 ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು.
और उसने उनको ये हुक्म दिया; “ख़बरदार, फ़रीसियों के तालीम और हेरोदेस की तालीम से होशियार रहना।”
16 ಅವರು ತಮ್ಮೊಳಗೆ, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು,” ಎಂದು ಚರ್ಚಿಸಿಕೊಂಡರು.
वो आपस में चर्चा करने और कहने लगे, “हमारे पास रोटियाँ नहीं।”
17 ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಏಕೆ ಚರ್ಚಿಸಿಕೊಳ್ಳುತ್ತೀರಿ? ನೀವು ಇನ್ನೂ ಕಾಣದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣ ಮಾಡಿಕೊಂಡಿದ್ದೀರೋ?
मगर ईसा ने ये मा'लूम करके कहा, “तुम क्यूँ ये चर्चा करते हो कि हमारे पास रोटी नहीं? क्या अब तक नहीं जानते, और नहीं समझते हो? क्या तुम्हारा दिल सख़्त हो गया है?
18 ಕಣ್ಣುಗಳಿದ್ದೂ ನೀವು ಕಾಣುವುದಿಲ್ಲವೋ? ಕಿವಿಗಳಿದ್ದೂ ನೀವು ಕೇಳುವುದಿಲ್ಲವೋ?
आँखें हैं और तुम देखते नहीं कान हैं और सुनते नहीं और क्या तुम को याद नहीं।
19 ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಬುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಕೂಡಿಸಿದಿರಿ ಎಂದು ನಿಮಗೆ ನೆನಪಿಲ್ಲವೇ?” ಎಂದು ಕೇಳಲು ಅವರು ಯೇಸುವಿಗೆ, “ಹನ್ನೆರಡು ಬುಟ್ಟಿಗಳು,” ಎಂದರು.
जिस वक़्त मैने वो पाँच रोटियाँ पाँच हज़ार के लिए तोड़ीं तो तुम ने कितनी टोकरियाँ बे इस्तेमाल खाने से भरी हुई उठाईं?” उन्हों ने उस से कहा “बारह”।
20 “ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಬುಟ್ಟಿಗಳ ತುಂಬ ತುಂಡುಗಳನ್ನು ಕೂಡಿಸಿದಿರಿ?” ಎಂದು ಕೇಳಲು ಅವರು, “ಏಳು ಬುಟ್ಟಿಗಳು,” ಎಂದರು.
“और जिस वक़्त सात रोटियाँ चार हज़ार के लिए तोड़ीं तो तुम ने कितने टोकरे बे इस्तेमाल खाने से भरे हुए उठाए?” उन्हों ने उस से कहा “सात।”
21 ಯೇಸು ಅವರಿಗೆ, “ಹಾಗಾದರೆ ನೀವು ಇನ್ನೂ ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.
उस ने उनसे कहा “क्या तुम अब तक नहीं समझते?”
22 ಯೇಸು ಬೇತ್ಸಾಯಿದಕ್ಕೆ ಬಂದಾಗ, ಕೆಲವರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.
फिर वो बैत सैदा में आये और लोग एक अंधे को उसके पास लाए और उसकी मिन्नत की, कि उसे छूए।
23 ಯೇಸು ಆ ಕುರುಡನ ಕೈಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ, ಅವನ ಕಣ್ಣುಗಳ ಮೇಲೆ ಉಗುಳಿ ಅವನ ಮೇಲೆ ತಮ್ಮ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತದೋ?” ಎಂದು ಅವನನ್ನು ಕೇಳಿದರು.
वो उस अंधे का हाथ पकड़ कर उसे गाँव से बाहर ले गया, और उसकी आँखें में थूक कर अपने हाथ उस पर रख्खे और उस से पूछा, “क्या तू कुछ देखता है?”
24 ಅವನು ಮೇಲಕ್ಕೆ ನೋಡಿ, “ಮನುಷ್ಯರು ಮರಗಳ ಹಾಗೆ ಕಾಣುತ್ತಿದ್ದಾರೆ. ಆದರೂ ಅವರು ನಡೆದಾಡುವುದನ್ನು ನೋಡುತ್ತಿದ್ದೇನೆ,” ಎಂದನು.
उसने नज़र उठा कर कहा “मैं आदमियों को देखता हूँ क्यूँकि वो मुझे चलते हुए ऐसे दिखाई देते हैं जैसे दरख़्त।”
25 ತರುವಾಯ ಯೇಸು ತಿರುಗಿ ಅವನ ಕಣ್ಣುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. ಆಗ ಅವನು ಗುಣಹೊಂದಿದವನಾಗಿ ಎಲ್ಲವನ್ನೂ ಬಹುಸ್ಪಷ್ಟವಾಗಿ ಕಂಡನು.
उसने फिर दोबारा उसकी आँखों पर अपने हाथ रख्खे और उसने ग़ौर से नज़र की और अच्छा हो गया और सब चीज़ें साफ़ साफ़ देखने लगा।
26 ಯೇಸು ಅವನಿಗೆ, “ನೀನು ಊರೊಳಕ್ಕೆ ಹೋಗಬೇಡ,” ಎಂದು ಹೇಳಿ ಅವನನ್ನು ಮನೆಗೆ ಕಳುಹಿಸಿಬಿಟ್ಟರು.
फिर उसने उसको उसके घर की तरफ़ रवाना किया और कहा, “इस गाँव के अन्दर क़दम न रखना।”
27 ಯೇಸುವೂ ಅವರ ಶಿಷ್ಯರೂ ಕೈಸರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಯೇಸು ದಾರಿಯಲ್ಲಿ ತಮ್ಮ ಶಿಷ್ಯರಿಗೆ, “ನಾನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.
फिर ईसा और उसके शागिर्द क़ैसरिया फ़िलिप्पी के गाँव में चले आए और रास्ते में उसने अपने शागिर्दों से पूछा, “लोग मुझे क्या कहते हैं?”
28 ಅವರು, “ಕೆಲವರು ಸ್ನಾನಿಕನಾದ ಯೋಹಾನನು, ಮತ್ತೆ ಕೆಲವರು ಎಲೀಯನು, ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಎನ್ನುತ್ತಾರೆ,” ಎಂದು ಹೇಳಿದರು.
उन्हों ने जवाब दिया, “यूहन्ना बपतिस्मा देनेवाला; कुछ एलियाह और कुछ नबियों में से कोई।”
29 ಅದಕ್ಕೆ ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ನೀನು ಕ್ರಿಸ್ತನೇ,” ಎಂದನು.
उसने उनसे पूछा, “लेकिन तुम मुझे क्या कहते हो?” पतरस ने जवाब में उस से कहा, “तू मसीह है।”
30 ತಮ್ಮ ವಿಷಯವಾಗಿ ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು.
फिर उसने उनको ताकीद की कि मेरे बारे में किसी से ये न कहना।
31 ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು.
फिर वो उनको ता'लीम देने लगा, कि ज़रूर है कि इबने आदम बहुत दु: ख उठाए और बुज़ुर्ग और सरदार काहिन और आलिम उसे रद्द करें, और वो क़त्ल किया जाए, और तीन दिन के बाद जी उठे।
32 ಯೇಸು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು ಯೇಸುವನ್ನು ಗದರಿಸಲಾರಂಭಿಸಿದನು.
उसने ये बात साफ़ साफ़ कही पतरस उसे अलग ले जाकर उसे मलामत करने लगा।
33 ಆದರೆ ಯೇಸು ತಿರುಗಿ ತಮ್ಮ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದು ಹೇಳಿದರು.
मगर उसने मुड़ कर अपने शागिर्दों पर निगाह करके पतरस को मलामत की और कहा, “ऐ शैतान मेरे सामने से दूर हो; क्यूँकि तू ख़ुदा की बातों का नहीं बल्कि आदमियों की बातों का ख़याल रखता है।”
34 ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
फिर उसने भीड़ को अपने शागिर्दों समेत पास बुला कर उनसे कहा, “अगर कोई मेरे पीछे आना चाहे तो अपने आप से इन्कार करे और अपनी सलीब उठाए, और मेरे पीछे हो ले।
35 ತಮ್ಮ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವರು ಅದನ್ನು ಕಳೆದುಕೊಳ್ಳುವರು. ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಉಳಿಸಿಕೊಳ್ಳುವರು.
क्यूँकि जो कोई अपनी जान बचाना चाहे वो उसे खोएगा, और जो कोई मेरी और इन्जील की ख़ातिर अपनी जान खोएगा, वो उसे बचाएगा।
36 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು?
आदमी अगर सारी दुनिया को हासिल करे और अपनी जान का नुक़्सान उठाए, तो उसे क्या फ़ाइदा होगा?
37 ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?
और आदमी अपनी जान के बदले क्या दे?
38 ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.
क्यूँकि जो कोई इस बे ईमान और बुरी क़ौम में मुझ से और मेरी बातों से शरमाए गा, इबने आदम भी अपने बाप के जलाल में पाक फ़रिश्तों के साथ आएगा तो उस से शरमाएगा।”

< ಮಾರ್ಕನು 8 >