< ಮತ್ತಾಯನು 17 >

1 ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಅವನ ಸಹೋದರ ಯೋಹಾನನನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.
Վեց օր ետք՝ Յիսուս առաւ իրեն հետ Պետրոսը, Յակոբոսն ու անոր եղբայրը՝ Յովհաննէսը, հանեց զանոնք բարձր լեռ մը՝ առանձին,
2 ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು. ಅವರ ಮುಖವು ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಬೆಳಗಿತು.
եւ այլակերպեցաւ անոնց առջեւ. իր երեսը փայլեցաւ արեւի պէս, ու իր հանդերձները ճերմակ եղան՝ լոյսի պէս:
3 ಇದಲ್ಲದೆ ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.
Եւ ահա՛ Մովսէս ու Եղիա երեւցան անոնց, եւ կը խօսակցէին իրեն հետ:
4 ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲಿಯೇ ಇರುವುದು ಒಳ್ಳೆಯದು. ನಿಮಗೆ ಮನಸ್ಸಿದ್ದರೆ ನಾನು ನಿಮಗೊಂದು, ಮೋಶೆಗೊಂದು, ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ಕಟ್ಟುವೆನು,” ಎಂದು ಹೇಳಿದನು.
Պետրոս ըսաւ Յիսուսի. «Տէ՛ր, լաւ է որ կենանք հոս. եթէ կ՚ուզես, շինենք հոս երեք վրան, մէկը՝ քեզի, մէկը՝ Մովսէսի, ու մէկը՝ Եղիայի»:
5 ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.
Մինչ ան կը խօսէր, լուսաւոր ամպ մը հովանի եղաւ անոնց վրայ, եւ ձայն մը եկաւ ամպէն՝ ըսելով. «Ա՛յս է իմ սիրելի Որդիս՝ որուն հաճեցայ. անո՛ր մտիկ ըրէք»:
6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
Երբ աշակերտները լսեցին, իրենց երեսին վրայ ինկան ու սաստիկ վախցան:
7 ಆಗ ಯೇಸು ಬಂದು ಅವರನ್ನು ಮುಟ್ಟಿ, “ಏಳಿರಿ, ಹೆದರಬೇಡಿರಿ,” ಎಂದು ಹೇಳಿದರು.
Յիսուս մօտենալով՝ դպաւ անոնց եւ ըսաւ. «Ոտքի՛ ելէք, մի՛ վախնաք»:
8 ಅವರು ತಮ್ಮ ಕಣ್ಣೆತ್ತಿ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
Իրենց աչքերը բարձրացուցին ու ո՛չ մէկը տեսան՝ բայց միայն Յիսուսը:
9 ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.
Երբ լեռնէն վար կ՚իջնէին, Յիսուս հրահանգեց անոնց. «Այդ տեսիլքը ո՛չ մէկուն պատմեցէք, մինչեւ որ մարդու Որդին մեռելներէն յարութիւն առնէ»:
10 ಆಗ ಯೇಸುವಿನ ಶಿಷ್ಯರು ಅವರಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.
Աշակերտները հարցուցին իրեն. «Հապա ինչո՞ւ դպիրները կ՚ըսեն թէ “պէտք է որ նախ Եղիա գայ”»:
11 ಯೇಸು ಉತ್ತರವಾಗಿ ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವುಗಳನ್ನು ಪುನಃ ಸ್ಥಾಪಿಸುವುದು ನಿಜವೇ.
Յիսուս պատասխանեց անոնց. «Իրաւ է թէ նախ Եղիա պիտի գայ եւ վերահաստատէ ամէն բան:
12 ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
Բայց ձեզի կ՚ըսեմ թէ Եղիա արդէն եկած է, ու չճանչցան զայն, հապա ինչ որ ուզեցին՝ ըրին անոր. նոյնպէս ալ մարդու Որդին պիտի չարչարուի անոնցմէ»:
13 ಸ್ನಾನಿಕ ಯೋಹಾನನ ವಿಷಯದಲ್ಲಿ ಯೇಸು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
Այն ատեն աշակերտները հասկցան թէ Յովհաննէս Մկրտիչին մասին ըսաւ իրենց:
14 ಅವರು ಜನಸಮೂಹದ ಬಳಿಗೆ ಬಂದಾಗ, ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ,
Երբ եկան բազմութեան քով, մարդ մը մօտեցաւ անոր, եւ ծնրադրելով՝ ըսաւ.
15 “ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು. ಏಕೆಂದರೆ ಅವನು ಮೂರ್ಛಾರೋಗದಿಂದ ಬಹಳವಾಗಿ ಕಷ್ಟಪಡುತ್ತಾನೆ. ಅನೇಕ ಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
«Տէ՛ր, ողորմէ՜ որդիիս, որ կը լուսնոտի ու չարաչար կը տանջուի. քանի որ յաճախ կրակի մէջ կ՚իյնայ, եւ յաճախ՝ ջուրի մէջ:
16 ನಾನು ಅವನನ್ನು ನಿಮ್ಮ ಶಿಷ್ಯರ ಬಳಿಗೆ ಕರೆತಂದೆನು. ಆದರೆ ಅವರು ಅವನನ್ನು ಸ್ವಸ್ಥ ಮಾಡದೆ ಹೋದರು,” ಎಂದು ಹೇಳಿದನು.
Զինք բերի քու աշակերտներուդ, ու չկրցան զինք բժշկել»:
17 ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.
Յիսուս պատասխանեց. «Ո՛վ անհաւատ եւ խոտորեալ սերունդ, մինչեւ ե՞րբ պիտի ըլլամ ձեզի հետ, մինչեւ ե՞րբ պիտի հանդուրժեմ ձեզի: Հո՛ս՝ ինծի՛ բերէք զայն»:
18 ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.
Յիսուս սաստեց զայն, դեւը ելաւ անկէ, ու պատանին բժշկուեցաւ նոյն ժամուն:
19 ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಓಡಿಸುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.
Այն ատեն աշակերտները գացին Յիսուսի քով՝ առանձին, եւ ըսին. «Մե՛նք ինչո՞ւ չկրցանք հանել զայն»:
20 ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.
Յիսուս ըսաւ. «Ձեր թերահաւատութեա՛ն պատճառով. քանի որ ճշմա՛րտապէս կը յայտարարեմ ձեզի. “Եթէ մանանեխի հատիկի չափ հաւատք ունենաք, պիտի ըսէք այս լերան. "Փոխադրուէ՛ ասկէ հոն", ու պիտի փոխադրուի, եւ ոչինչ անկարելի պիտի ըլլայ ձեզի”:
21 ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.
Սակայն այս տեսակը ուրիշ բանով դուրս չ՚ելլեր, բայց միայն աղօթքով ու ծոմապահութեամբ»:
22 ಅವರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದಾಗ ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು.
Մինչ անոնք Գալիլեայի մէջ կը մնային, Յիսուս ըսաւ անոնց. «Մարդու Որդին պիտի մատնուի մարդոց ձեռքը,
23 ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.
ու պիտի սպաննեն զինք. բայց յարութիւն պիտի առնէ երրորդ օրը»: Անոնք ալ չափազանց տրտմեցան:
24 ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, “ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?” ಎಂದು ಕೇಳಿದರು.
Երբ անոնք եկան Կափառնայում, երկդրամեան տուրքը գանձողները եկան Պետրոսի եւ ըսին. «Ձեր վարդապետը չի՞ վճարեր երկդրամեանը»: Ան ալ ըսաւ. «Այո՛, կը վճարէ»:
25 ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು.
Երբ տուն մտաւ, Յիսուս կանխեց զինք՝ ըսելով. «Ի՞նչ է քու կարծիքդ, Սիմո՛ն. երկրի թագաւորները որմէ՞ կը ստանան հարկը կամ տուրքը, իրենց որդիներէ՞ն՝ թէ օտարներէն»:
26 “ಪರರಿಂದ,” ಎಂದು ಪೇತ್ರನು ಹೇಳಿದನು. ಯೇಸು ಅವನಿಗೆ, “ಹಾಗಾದರೆ ಪುತ್ರನು ಕಟ್ಟಬೇಕಾಗಿಲ್ಲ.
Պետրոս ըսաւ. «Օտարներէ՛ն»: Յիսուս ըսաւ անոր. «Ուրեմն որդիները ազատ են:
27 ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.
Բայց որպէսզի չգայթակղեցնենք զանոնք, գնա՛ ծովը ու կա՛րթ նետէ, եւ ա՛ռ առաջին ձուկը որ կ՚ելլէ: Երբ անոր բերանը բանաս՝ սատեր մը պիտի գտնես. ա՛ռ զայն ու տո՛ւր անոնց՝ ինծի եւ քեզի համար»:

< ಮತ್ತಾಯನು 17 >