< ಮತ್ತಾಯನು 21 >

1 ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಬೇತ್ಫಗೆ ಬಂದಾಗ, ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ,
जब हि यरूशलेम नगर को जवर पहुंच्यो अऊर जैतून पहाड़ी पर बैतफगे गांव को जवर आयो, त यीशु न दोय चेलावों ख यो कह्य क भेज्यो,
2 ಅವರಿಗೆ, “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ತಕ್ಷಣವೇ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಿರುವುದನ್ನು ನೀವು ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ.
“आगु को गांव म जावो। उत पहुंचतोच एक गधी को बछड़ा ख खोल क मोरो जवर लावो।
3 ಯಾವನಾದರೂ ನಿಮಗೆ ಏನಾದರೂ ಕೇಳಿದರೆ, ನೀವು ಅವನಿಗೆ, ‘ಇವು ಕರ್ತದೇವರಿಗೆ ಅವಶ್ಯವಾಗಿವೆ’ ಎಂದು ಹೇಳಿರಿ. ಆಗ ಅವನು ಅವುಗಳನ್ನು ಕೂಡಲೇ ಕಳುಹಿಸುವನು,” ಎಂದು ಹೇಳಿದರು.
यदि तुम सी कोयी कुछ कहेंन, त कहजो कि प्रभु ख येकी जरूरत हय, तब ऊ तुरतच उन्ख भेज देयेंन।”
4 ಇದೆಲ್ಲವೂ ಪವಿತ್ರ ವೇದದಲ್ಲಿ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಆಯಿತು. ಅದೇನೆಂದರೆ,
यो येकोलायी भयो कि जो वचन भविष्यवक्ता सी कह्यो गयो होतो, ऊ पूरो होय:
5 “ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’”
“सिय्योन की बेटी सी कहो, ‘देख, तोरो राजा तोरो जवर आवय हय; ऊ नम्र हय, अऊर गधी को बच्चा पर बैठ्यो हय; जो मेहनती गधी को बछड़ा पर।’”
6 ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆ ಕೊಟ್ಟಂತೆಯೇ ಮಾಡಿದರು.
चेलावों न जाय क, जसो यीशु न उन्को सी कह्यो होतो, वसोच करयो।
7 ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದರು; ಯೇಸು ಅದರ ಮೇಲೆ ಕೂತುಕೊಂಡರು.
अऊर गधी अऊर बछड़ा दोयी ख लाय क, उन पर अपनो कपड़ा डाल्यो, अऊर ऊ ओको पर बैठ गयो।
8 ಆಗ ಜನರ ದೊಡ್ಡ ಸಮೂಹವು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರಗಳಿಂದ ಕೊಂಬೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.
तब बहुत सो लोगों न उन्को स्वागत की अपेक्षा सी अपनो कपड़ा रस्ता म बिछायो, अऊर दूसरों लोगों न झाड़ों सी डगाली काट क रस्ता म बिछायी।
9 ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.
जो भीड़ आगु-आगु जात होती अऊर पीछू-पीछू चली आवत होती, पुकार-पुकार क कहत होती, “दाऊद की सन्तान की जय होय, धन्य हय ऊ जो प्रभु को नाम सी आवय हय, दाऊद की सन्तान की महिमा हो।”
10 ಯೆರೂಸಲೇಮಿಗೆ ಪ್ರವೇಶಿಸಿದಾಗ, ಪಟ್ಟಣದಲ್ಲಿ ಕೋಲಾಹಲವುಂಟಾಗಿ, “ಇವರು ಯಾರು?” ಎಂದು ಕೇಳಿದರು.
जब यीशु यरूशलेम म सिरन लग्यो, त सारो नगर म हलचल मच गयी, अऊर लोग कहन लग्यो, “यो कौन आय?”
11 ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು.
लोगों न कह्यो, “यो त गलील को नासरत नगर को भविष्यवक्ता यीशु आय।”
12 ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.
यीशु न परमेश्वर को मन्दिर म जाय क उन सब ख, जो मन्दिर म सामान लेन-देन कर रह्यो होतो, उन्ख निकाल दियो, अऊर धन्दा करन वालो को पीढ़ा अऊर कबूत्तर बेचन वालो की पीढ़ा उलटाय दियो;
13 ಯೇಸು ಅವರಿಗೆ, “‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.
अऊर उन्को सी कह्यो, “लिख्यो हय, ‘मोरो घर प्रार्थना को घर कहलायेंन;’ पर तुम ओख डाकुवों को अड्डा बनावय हय।”
14 ಆಗ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಅವರ ಬಳಿಗೆ ಬಂದರು. ಯೇಸು ಅವರನ್ನು ಸ್ವಸ್ಥಮಾಡಿದರು.
तब अन्धा अऊर लंगड़ा, मन्दिर म ओको जवर आयो, अऊर ओन उन्ख चंगो करयो।
15 ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು.
पर जब मुख्य याजकों अऊर धर्मशास्त्रियों न इन आश्चर्य कामों ख, जो ओन करयो होतो, देख्यो अऊर बच्चां ख जो मन्दिर म यो पुकार रह्यो होतो, “दाऊद की सन्तान की महिमा हो,” पुकारतो हुयो देख्यो, त हि गुस्सा भयो!
16 “ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.
अऊर ओको सी कहन लग्यो, “का तय सुनय हय कि यो का कह्य रह्यो हंय?” यीशु न उन्को सी कह्यो, “हव; का तुम्न यो शास्त्र म कभी नहीं पढ़्यो: ‘बच्चां अऊर दूध पीतो बच्चां को मुंह सी तय न स्तुति करायी?’”
17 ಯೇಸು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ, ಅಲ್ಲಿ ರಾತ್ರಿ ಉಳಿದುಕೊಂಡರು.
तब ऊ उन्ख छोड़ क नगर को बाहेर बैतनिय्याह ख गयो अऊर उत रात बितायी।
18 ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ, ಯೇಸುವಿಗೆ ಹಸಿವಾಯಿತು.
भुन्सारो ख जब यीशु नगर ख लौटतो समय ओख भूख लगी।
19 ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು. (aiōn g165)
त सड़क को किनार पर अंजीर को एक झाड़ देख क ऊ ओको जवर गयो, अऊर पाना ख छोड़ ओको म अऊर कुछ नहीं पा क ओको सी कह्यो। “अब सी तोरो म फिर कभी फर नहीं लगे।” अऊर अंजीर को झाड़ तुरतच सूख गयो। (aiōn g165)
20 ಶಿಷ್ಯರು ಅದನ್ನು ಕಂಡು ಆಶ್ಚರ್ಯದಿಂದ, “ಇಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ?” ಎಂದು ಕೇಳಿದರು.
यो देख क चेलावों ख अचम्भा भयो अऊर उन्न कह्यो, “यो अंजीर को झाड़ तुरतच कसो सूख गयो?”
21 ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.
यीशु न उन्ख उत्तर दियो, “मय तुम सी सच कहूं हय, यदि तुम विश्वास रखो अऊर शक मत करो, त नहीं केवल यो करजो जो यो अंजीर को झाड़ सी करयो गयो हय, पर यदि यो पहाड़ी सी भी कहो, ‘उखड़ जा अऊर समुन्दर म जाय गिर,’ त यो होय जायेंन।
22 ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.
अऊर जो कुछ तुम प्रार्थना म विश्वास सी मांगो ऊ सब तुम्ख मिल जायेंन।”
23 ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
ऊ मन्दिर म फिर सी जाय क उपदेश देत होतो, त मुख्य याजकों अऊर लोगों को बुजूर्गों न ओको जवर आय क पुच्छ्यो, “तय यो काम कौन्को अधिकार सी करय हय? अऊर तोख यो अधिकार कौन न दियो हय?”
24 ಅದಕ್ಕೆ ಯೇಸು, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಎಂದು ಹೇಳಿ,
यीशु न उन्ख उत्तर दियो, “मय भी तुम सी एक बात पूछू हय; यदि ऊ मोख बतावो, त मय भी तुम्ख बताऊं कि यो काम कौन्सो अधिकार सी करू हय।
25 ದೀಕ್ಷಾಸ್ನಾನ ಕೊಡುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ?” ಎಂದು ಕೇಳಿದ್ದಕ್ಕೆ, ಅವರು ತಮ್ಮತಮ್ಮೊಳಗೆ ತರ್ಕಿಸುತ್ತಾ, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.
यूहन्ना को बपतिस्मा कित सी होतो? स्वर्ग को तरफ सी यां आदमियों को तरफ सी?” तब हि आपस म विवाद करन लग्यो, “यदि हम कहबोंन ‘स्वर्ग को तरफ सी,’ त ऊ हम सी कहेंन, ‘फिर तुम न ओको विश्वास कहाली नहीं करयो?’
26 ‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.
अऊर यदि कहेंन ‘आदमियों को तरफ सी,’ त हम्ख भीड़ को डर हय, कहालीकि हि सब यूहन्ना ख भविष्यवक्ता मानय हंय।”
27 ತರುವಾಯ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದರು. ಅದಕ್ಕೆ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.
येकोलायी उन्न यीशु ख उत्तर दियो, “हम नहीं जानजे।” ओन भी उन्को सी कह्यो, “त मय भी तुम्ख नहीं बताऊ कि यो काम कौन्सो अधिकार सी करू हय।
28 ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು.
“तुम का सोचय हय? कोयी आदमी को दोय बेटा होतो; ओन पहिलो बेटा को जवर जाय क कह्यो, ‘हे बेटा, अज अंगूर की बाड़ी म काम कर।’
29 “ಮಗನು ಉತ್ತರವಾಗಿ, ‘ನಾನು ಹೋಗುವುದಿಲ್ಲ’ ಎಂದು ಹೇಳಿ, ಅನಂತರ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.
ओन उत्तर दियो, ‘मय नहीं जाऊं,’ पर बाद म पछताय गयो।
30 “ಆಮೇಲೆ ತಂದೆ ಎರಡನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಉತ್ತರವಾಗಿ, ‘ಅಪ್ಪಾ, ನಾನು ಹೋಗುತ್ತೇನೆ,’ ಎಂದು ಹೇಳಿದರೂ ಹೋಗಲಿಲ್ಲ.
तब बाप न दूसरों बेटा को जवर जाय क असोच कह्यो, ओन उत्तर दियो, ‘जी हव मय जाऊं हय,’ पर नहीं गयो।
31 “ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ನಡೆದವನು?” ಎಂದು ಕೇಳಲು ಅವರು ಯೇಸುವಿಗೆ, “ಮೊದಲನೆಯವನೇ,” ಎಂದರು. ಆಗ ಯೇಸು ಅವರಿಗೆ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
इन दोयी म सी कौन बाप की इच्छा पूरी करी?” उन्न कह्यो, “बड़ो न।” यीशु न उन्को सी कह्यो, “मय तुम सी सच कहू हय कि, कर लेनवालो अऊर वेश्यायें तुम सी पहिले परमेश्वर को राज्य म सिरय हंय।
32 ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.”
कहालीकि यूहन्ना सच्चायी को रस्ता दिखातो हुयो तुम्हरो जवर आयो, अऊर तुम्न ओको विश्वास नहीं करयो; पर कर लेनवालो अऊर वेश्यावों न ओको विश्वास करयो: अऊर तुम यो देख क बाद म भी नहीं पछतायो कि ओको विश्वास कर लेतो।
33 “ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.
“एक अऊर दृष्टान्त सुनो: एक जमीन को मालिक होतो, जेन अंगूर की बाड़ी लगायी, ओको चारयी तरफ बाड़ी रुन्द्यो, ओको म रस को गड्डा खोद्यो अऊर मचान बनायो, अऊर किसान ख ओको ठेका दे क परदेश चली गयो।
34 ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.
जब फर को समय जवर आयो, त ओन अपनो सेवकों ख ओको फर लेन को लायी किसानों को जवर भेज्यो।
35 “ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
पर किसानों न ओको सेवकों ख पकड़ क्, कोयी ख पिट्यो, अऊर कोयी ख मार डाल्यो, अऊर कोयी पर गोटा सी मारयो।
36 ಯಜಮಾನನು ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು. ಗೇಣಿಗೆದಾರರು ಅವರಿಗೂ ಹಾಗೆಯೇ ಮಾಡಿದರು.
तब ओन पहिलो सी जादा अऊर सेवकों ख भेज्यो, अऊर उन्न उन्को सी भी वसोच करयो।
37 ಕೊನೆಗೆ ಯಜಮಾನನು, ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು’ ಎಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.
आखरी म ओन अपनो बेटा ख उन्को जवर यो सोच क भेज्यो कि हि मोरो बेटा को आदर करेंन।
38 “ಆದರೆ ಗೇಣಿಗೆದಾರರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಬನ್ನಿರಿ, ನಾವು ಇವನನ್ನು ಕೊಂದು ಇವನ ಆಸ್ತಿಯನ್ನು ಕಿತ್ತುಕೊಳ್ಳೋಣ,’ ಎಂದುಕೊಂಡು,
पर किसानों न मालिक को बेटा ख देख क आपस म कह्यो, ‘यो त वारिस आय, आवो, येख मार डालो अऊर येकी जायजाद ले ले।’
39 ಅವನನ್ನು ಹಿಡಿದು ದ್ರಾಕ್ಷಿಯ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದುಹಾಕಿದರು.
येकोलायी उन्न ओख पकड़्यो अऊर अंगूर की बाड़ी सी बाहेर निकाल क मार डाल्यो।
40 “ಹೀಗಿರುವುದರಿಂದ ದ್ರಾಕ್ಷಿತೋಟದ ಯಜಮಾನನೇ ಬಂದಾಗ, ಆ ಗೇಣಿಗೆದಾರರಿಗೆ ಏನು ಮಾಡುವನು?” ಎಂದು ಯೇಸು ಕೇಳಲು,
“येकोलायी, यीशु न पुच्छ्यो, जब अंगूर की बाड़ी को मालिक आयेंन, त उन किसान को संग का करेंन?”
41 ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.
उन्न ओको सी कह्यो, “ऊ उन बुरो लोगों ख बुरी रीति सी नाश करेंन; अऊर अंगूर की बाड़ी को ठेका दूसरों किसानों ख देयेंन, जो समय पर ओख फसल दियो करेंन।”
42 ಯೇಸು ಅವರಿಗೆ, “‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?
यीशु न उन्को सी कह्यो, “का तुम न कभी पवित्र शास्त्र म यो नहीं पढ़्यो:” “जो गोटा ख राजमिस्त्रियों न नकारयो होतो, उच गोटा को कोना को सिरा मतलब महत्वपूर्ण भय गयो? यो प्रभु को तरफ सी भयो, अऊर हमरी नजर म अद्भुत हय।”
43 “ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.
“येकोलायी मय तुम सी कहू हय कि परमेश्वर को राज्य तुम सी ले लियो जायेंन अऊर जो लोग परमेश्वर की आज्ञा मान क सच बाते करय हय, ओख फर दियो जायेंन।
44 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.
जो यो गोटा पर गिरेंन, ऊ तुकड़ा-तुकड़ा होय जायेंन; अऊर जेक पर ऊ गिरेंन, ओख पीस डालेंन।”
45 ಮುಖ್ಯಯಾಜಕರೂ ಫರಿಸಾಯರೂ ಯೇಸುವಿನ ಸಾಮ್ಯಗಳನ್ನು ಕೇಳಿದಾಗ, ತಮ್ಮ ವಿಷಯದಲ್ಲಿಯೇ ಅದನ್ನು ಹೇಳಿದರೆಂದು ಅರ್ಥಮಾಡಿಕೊಂಡರು.
मुख्य याजक अऊर फरीसी ओको दृष्टान्तों ख सुन क समझ गयो कि ऊ उन्को बारे म कह्य हय।
46 ಅವರು ಯೇಸುವನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೂ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿಯೆಂದು ನಂಬಿದ್ದರು.
अऊर उन्न ओख पकड़नो चाह्यो, पर लोगों सी डर गयो कहालीकि हि ओख भविष्यवक्ता मानत होतो।

< ಮತ್ತಾಯನು 21 >