< ಮತ್ತಾಯನು 27 >

1 ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
जब सबेरे भयी त सब मुख्य याजकों अऊर बुजूर्गों लोगों न यीशु ख मार डालन की योजना बनायी।
2 ಅವರು ಯೇಸುವನ್ನು ಕಟ್ಟಿ, ಕರೆದುಕೊಂಡು ಹೋಗಿ ರಾಜ್ಯಪಾಲ ಪಿಲಾತನಿಗೆ ಒಪ್ಪಿಸಿದರು.
उन्न ओख बान्ध्यो अऊर ले जाय क पिलातुस शासक को हाथ म सौंप दियो।
3 ಯೇಸುವಿಗೆ ದ್ರೋಹಮಾಡಿದ ಯೂದನು ಗುರುವಿಗೆ ಮರಣ ದಂಡನೆಯ ತೀರ್ಪಾದದ್ದನ್ನು ಕಂಡು ವಿಷಾದಿಸಿ, ಆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಮರಳಿ ತಂದನು.
जब ओको सौंपन वालो यहूदा न देख्यो कि ऊ दोषी ठहरायो गयो हय त ऊ पछतायो अऊर हि तीस चांदी को सिक्का मुख्य याजकों अऊर बुजूर्गों को जवर वापस देन गयो
4 ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.
अऊर कह्यो, “मय न निर्दोष ख मारन लायी सौंप क पाप करयो हय!” उन्न कह्यो, “हम्ख ओकी का परवाह हय? उन्न जवाब दियो। अपनो तयच देख ले।”
5 ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.
तब ऊ उन सिक्का ख मन्दिर म फेक क चली गयो, अऊर जाय क अपनो आप ख फासी दे दियो।
6 ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.
मुख्य याजकों न उन सिक्का ले क कह्यो, “इन्क, भण्डार म रखनो ठीक नहाय, कहालीकि यो खून को दाम आय।”
7 ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಳಿಡುವುದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
येकोलायी उन्न सलाह कर क् उन सिक्का सी परदेशियों को गाड़्यो जान लायी कुम्हार को खेत ले लियो।
8 ಈ ಕಾರಣದಿಂದ ಆ ಹೊಲವನ್ನು “ರಕ್ತದ ಹೊಲ” ಎಂದು ಈ ದಿನದವರೆಗೆ ಕರೆಯಲಾಗುತ್ತಿದೆ.
यो वजह ऊ खेत अज तक खून को खेत कहलावय हय।
9 ಹೀಗೆ ಪ್ರವಾದಿ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ, “ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು,
तब जो वचन यिर्मयाह भविष्यवक्ता सी कह्यो गयो होतो ऊ पूरो भयो: “उन्न हि तीस सिक्का यानेकि ऊ ठहरायो हुयो कीमत ख जेक इस्राएल की सन्तान म सी कितनो न सम्मति सी ठहरायो होतो ऊ ले लियो,
10 ಕರ್ತನು ನನಗೆ ಆಜ್ಞಾಪಿಸಿದಂತೆ ಅವುಗಳನ್ನು, ‘ಕುಂಬಾರನ ಹೊಲ’ ಕೊಳ್ಳಲು ಕೊಟ್ಟರು,” ಎಂಬುದು.
अऊर जसो प्रभु न मोख आज्ञा दियो होतो वसोच उन्ख कुम्हार को खेत ख मोल म ले लियो।”
11 ಯೇಸು ರಾಜ್ಯಪಾಲನ ಮುಂದೆ ನಿಂತಿದ್ದರು. ಆಗ ಅವನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ, “ನೀನೇ ಹೇಳುತ್ತಿದ್ದಿ,” ಎಂದರು.
जब यीशु रोमन शासक को आगु खड़ो होतो त शासक न ओको सी पुच्छ्यो, “का तय यहूदियों को राजा आय?” यीशु न ओको सी कह्यो, “तय खुदच कह्य रह्यो हय।”
12 ಆಗ ಮುಖ್ಯಯಾಜಕರೂ ಹಿರಿಯರೂ ಯೇಸುವಿನ ಮೇಲೆ ದೂರು ಹೇಳುತ್ತಿದ್ದರೂ ಅವರು ಏನೂ ಉತ್ತರ ಕೊಡಲಿಲ್ಲ.
जब मुख्य याजक अऊर बुजूर्ग ओको पर दोष लगाय रह्यो होतो, त यीशु न कुछ उत्तर नहीं दियो।
13 ಆಗ ಪಿಲಾತನು ಯೇಸುವಿಗೆ, “ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುತ್ತಿರುವುದು ನಿನಗೆ ಕೇಳಿಸುವುದಿಲ್ಲವೋ?” ಎಂದನು.
येको पर पिलातुस न ओको सी कह्यो, “का तय नहीं सुनय कि यो तोरो विरोध म कितनी गवाही दे रह्यो हय?”
14 ಒಂದು ಮಾತಿಗಾದರೂ ಯೇಸು ಅವನಿಗೆ ಉತ್ತರ ಕೊಡದೆ ಇದ್ದುದರಿಂದ ರಾಜ್ಯಪಾಲನು ಅತ್ಯಾಶ್ಚರ್ಯಪಟ್ಟನು.
पर यीशु न ओख एक बात को भी उत्तर नहीं दियो, यहां तक कि शासक ख बड़ो आश्चर्य भयो।
15 ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯಾಳನ್ನು ರಾಜ್ಯಪಾಲನು ಬಿಟ್ಟುಕೊಡುವ ಪದ್ಧತಿಯಿತ್ತು.
शासक की यो रीति होती कि ऊ पर्व म लोगों लायी कोयी एक बन्दी ख जेक हि चाहत होतो, छोड़ देत होतो।
16 ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧ ಸೆರೆಯಾಳು ಅವರಲ್ಲಿ ಇದ್ದನು.
ऊ समय उन्को इत बरअब्बा नाम को एक बदनाम आदमी बन्दी होतो।
17 ಜನಸಮೂಹ ಕೂಡಿಬಂದಿದ್ದಾಗ ಪಿಲಾತನು ಅವರಿಗೆ, “ನಿಮಗೆ ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.
येकोलायी जब हि जमा भयो, त पिलातुस न उन्को सी कह्यो, “तुम कौन्क चाहवय हय कि मय तुम्हरो लायी छोड़ देऊ? बरअब्बा ख, यां यीशु ख जो मसीह कहलावय हय?”
18 ಯೇಸುವನ್ನು ಅವರು ಹೊಟ್ಟೆಕಿಚ್ಚಿನಿಂದ ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.
कहालीकि ऊ जानत होतो कि उन्न ओख धोका सी पकड़वायो हय।
19 ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.
जब पिलातुस न्याय कि गद्दी पर बैठ्यो हुयो होतो त ओकी पत्नी न ओख कह्यो, “तय ऊ सच्चो को मामला म हाथ मत डालजो, कहालीकि मय न अज सपनो म ओको वजह बहुत दु: ख उठायो हय।”
20 ಆದರೆ ಮುಖ್ಯಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸುವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹವನ್ನು ಒಡಂಬಡಿಸಿದರು.
मुख्य याजकों अऊर बुजूर्गों लोगों न पिलातुस ख बहकायो कि हि बरअब्बा ख मांग ले, अऊर यीशु को नाश करायो।
21 ರಾಜ್ಯಪಾಲನು ಅವರಿಗೆ, “ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕೆನ್ನುತ್ತೀರಿ?” ಎಂದು ಕೇಳಲು ಅವರು, “ಬರಬ್ಬನನ್ನು,” ಎಂದರು.
लेकिन पिलातुस न भीड़ सी पुच्छ्यो, “तुम इन दोयी म सी कौन्सो चाहवय हय कि मय तुम्हरो लायी फुकट म छोड़ देऊ?” उन्न कह्यो, “बरअब्बा” ख।
22 ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು.
पिलातुस न ओको सी पुच्छ्यो, “फिर यीशु ख, जो मसीह कहलावय हय, का करू?” सब न ओको सी कह्यो, “ऊ क्रूस पर चढ़ायो जाय!”
23 ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
शासक न कह्यो, “कहाली, ओन का बुरायी करी हय?” पर हि अऊर भी चिल्लाय-चिल्लाय क कहन लग्यो, “ऊ क्रूस पर चढ़ायो जाये।”
24 ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.
जब पिलातुस न देख्यो कि कुछ बन नहीं पड़य पर येको विरुद्ध हल्ला बढ़तो जावय हय, त ओन पानी ले क भीड़ को आगु अपनो हाथ धोयो अऊर कह्यो, “मय यो सच्चो को खून सी निर्दोष हय; तुमच जानो।”
25 ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.
सब लोगों न उत्तर दियो, “येको खून हम पर अऊर हमरी सन्तान पर हो!”
26 ಆಗ ಪಿಲಾತನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
येको पर ओन बरअब्बा ख उन्को लायी छोड़ दियो, अऊर यीशु ख कोड़ा मरवाय क सौंप दियो, कि क्रूस पर चढ़ायो जाये।
27 ತರುವಾಯ ರಾಜ್ಯಪಾಲನ ಸೈನಿಕರು ಯೇಸುವನ್ನು ರಾಜಭವನದೊಳಕ್ಕೆ ತೆಗೆದುಕೊಂಡುಹೋಗಿ ಸೈನ್ಯದ ಪೂರ್ಣತಂಡವನ್ನು ಯೇಸುವಿನ ಸುತ್ತಲೂ ಕೂಡಿಸಿದರು.
तब शासक को सिपाहियों न यीशु ख राजभवन म ले जाय क पूरी पलटन ओको चारयी तरफ जमा करयो,
28 ಅವರು ಯೇಸುವಿನ ಬಟ್ಟೆಗಳನ್ನು ತೆಗೆದುಹಾಕಿ ಕಡುಗೆಂಪು ನಿಲುವಂಗಿಯನ್ನು ಅವರಿಗೆ ತೊಡಿಸಿದರು.
अऊर ओको कपड़ा उतार क ओख लाल रंग को चोंगा पहिनायो,
29 ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು.
अऊर काटा को मुकुट गूथ क ओको मुंड पर रख्यो, अऊर ओको दायो हाथ म सरकण्डा दियो अऊर ओको आगु घुटना टेक क ओकी मजाक उड़ावन लग्यो अऊर कह्यो, “हे यहूदियों को राजा, प्रनाम!”
30 ಅವರು ಯೇಸುವಿನ ಮೇಲೆ ಉಗುಳಿ, ಆ ಬೆತ್ತವನ್ನು ತೆಗೆದುಕೊಂಡು ಅವರ ತಲೆಯ ಮೇಲೆ ಮತ್ತೆ ಮತ್ತೆ ಹೊಡೆದರು.
अऊर ओको पर थूक्यो; अऊर उच सरकण्डा ले क ओको मुंड पर मारन लग्यो।
31 ಹೀಗೆ ಹಾಸ್ಯ ಮಾಡಿದ ಮೇಲೆ, ಆ ನಿಲುವಂಗಿಯನ್ನು ಯೇಸುವಿನಿಂದ ತೆಗೆದುಹಾಕಿ ಅವರ ವಸ್ತ್ರವನ್ನು ಹೊದಿಸಿ, ಯೇಸುವನ್ನು ಶಿಲುಬೆಗೆ ಹಾಕುವುದಕ್ಕಾಗಿ ನಡೆಸಿಕೊಂಡು ಹೋದರು.
जब हि ओकी मजाक उड़ाय लियो त ऊ चोंगा ओको पर सी उतार क फिर ओकोच कपड़ा ओख पहिनायो, अऊर क्रूस पर चढ़ान लायी ले गयो।
32 ಅವರು ಹೊರಗೆ ಹೋಗುತ್ತಿರುವಾಗ, ಕುರೇನೆ ಗ್ರಾಮದ ಸೀಮೋನನೆಂಬ ಮನುಷ್ಯನನ್ನು ಕಂಡು, ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
बाहेर जातो हुयो उन्ख शिमोन नाम को एक कुरेनी आदमी मिल्यो। उन्न ओख बेकार म पकड़्यो कि ओको क्रूस ख उठाय क ले चल्यो।
33 ಆಮೇಲೆ ಅವರು “ಗೊಲ್ಗೊಥಾ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಬಂದರು. ಅದರ ಅರ್ಥ “ತಲೆಬುರುಡೆಯ ಸ್ಥಳ” ಎಂಬುದು.
ऊ जागा पर जो गुलगुता यानेकि खोपड़ी की जागा कहलावय हय, पहुंच क
34 ಆಗ ಅವರು ಯೇಸುವಿಗೆ ಕಹಿ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಯೇಸು ಅದನ್ನು ರುಚಿ ನೋಡಿ ಕುಡಿಯಲು ಇಷ್ಟಪಡಲಿಲ್ಲ.
उन्न पित्त मिलायो हुयो अंगूररस ओख पीवन ख दियो, पर ओन चख क पीनो नहीं चाह्यो।
35 ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ, ಅವರ ಬಟ್ಟೆಗಳಿಗಾಗಿ ಸೈನಿಕರು ಚೀಟುಹಾಕಿ ಹಂಚಿಕೊಂಡರು
तब उन्न ओख क्रूस पर चढ़ायो, अऊर चिट्ठियां डाल क ओको कपड़ा बाट लियो,
36 ಮತ್ತು ಅವರು ಅಲ್ಲಿ ಕೆಳಗೆ ಕುಳಿತು ಕಾವಲು ಕಾಯುತ್ತಿದ್ದರು.
अऊर उत बैठ क ओकी पहरेदारी करन लग्यो।
37 ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: ಈತನು ಯೆಹೂದ್ಯರ ಅರಸನಾದ ಯೇಸು.
अऊर ओकी दोष कि चिट्ठी ओकी मुंड को ऊपर लगायो, कि “यो यहूदियों को राजा यीशु आय।”
38 ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.
तब यीशु को संग दोय डाकू ख क्रूस पर चढ़ायो गयो एक ख दायो तरफ अऊर एक ख बायो तरफ।
39 ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ,
आन–जान वालो मुंड हिला–हिलाय क ओकी निन्दा करत होतो,
40 “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು.
अऊर यो कहत होतो, “हे मन्दिर ख गिरावन वालो अऊर तीन दिन म बनावन वालो, अपनो आप ख त बचाव! यदि तय परमेश्वर को बेटा आय, त क्रूस पर सी उतर आव।”
41 ಅದೇ ಮೇರೆಗೆ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವನ್ನು ಹಾಸ್ಯಮಾಡಿ,
योच रीति सी मुख्य याजक भी धर्मशास्त्रियों अऊर बुजूर्गों समेत मजाक कर क् कहत होतो,
42 “ಈತನು ಬೇರೆಯವರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! ಈತನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗೆ ಇಳಿದು ಬರಲಿ. ಆಗ ನಾವು ಈತನನ್ನು ನಂಬುವೆವು.
“येन बहुतों ख बचायो, अऊर अपनो आप ख नहीं बचाय सकय। यो त ‘इस्राएल को राजा’ आय। अब क्रूस पर सी उतर आयो त हम ओको पर विश्वास करबो।
43 ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು.
ओन परमेश्वर पर भरोसा रख्यो हय; यदि ऊ येख चाहवय हय, त अब येख छुड़ाय ले, कहालीकि येन कह्यो होतो, ‘मय परमेश्वर को बेटा आय।’”
44 ಯೇಸುವಿನ ಜೊತೆಗೆ ಶಿಲುಬೆಗೇರಿಸಲಾಗಿದ್ದ ಕಳ್ಳರು ಸಹ ಅದೇ ರೀತಿಯಾಗಿ ಅವರನ್ನು ನಿಂದಿಸಿದರು.
योच तरह डाकू भी जो ओको संग क्रूस पर चढ़ायो गयो होतो, ओकी निन्दा करत होतो।
45 ಆಗ ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
दोपहर सी ले क तीन बजे तक ऊ पूरो प्रदेश म अन्धारो छायो रह्यो।
46 ಸುಮಾರು ಮೂರು ಗಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ?” ಅಂದರೆ, “ನನ್ನ ದೇವರೇ, ನನ್ನ ದೇವರೇ ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿ ಹೇಳಿದರು.
तीन बजे को जवर यीशु न बड़ो आवाज सी पुकार क कह्यो, “एली, एली, लमा शबक्तनी?” यानेकि “हे मोरो परमेश्वर, हे मोरो परमेश्वर, तय न मोख कहाली छोड़ दियो?”
47 ಆಗ ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.
जो उत खड़ो होतो, उन्म सी कुछ न यो सुन क कह्यो, “ऊ त एलिय्याह ख पुकार रह्यो हय।”
48 ಕೂಡಲೇ ಅವರಲ್ಲಿ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯುವುದಕ್ಕೆ ಕೊಟ್ಟನು.
उन्म सी एक तुरतच दौड़्यो, अऊर स्पंज ले क सिरका म डुबायो, अऊर सरकण्डा पर रख क ओख चुसायो।
49 ಉಳಿದವರು, “ಇರಲಿ ಬಿಡು, ಎಲೀಯನು ಬಂದು ಈತನನ್ನು ರಕ್ಷಿಸುವನೇನೋ ನೋಡೋಣ,” ಎಂದರು.
दूसरों न कह्यो, “रह्य जावो, देखो एलिय्याह ओख बचावन आवय हय कि नहीं।”
50 ಯೇಸು ತಿರುಗಿ ಗಟ್ಟಿಯಾಗಿ ಕೂಗಿ, ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.
तब यीशु न फिर ऊचो आवाज सी चिल्लाय क जीव छोड़ दियो।
51 ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.
अऊर देखो, मन्दिर को परदा ऊपर सी खल्लो तक फट क दोय टुकड़ा भय गयो: अऊर जमीन हल गयी अऊर चट्टान तड़क गयी,
52 ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು.
अऊर कब्रें खुल गयी, अऊर सोयो हुयो पवित्र लोगों को बहुत सो शरीर जीन्दो भयो,
53 ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
अऊर ओको जीन्दो होन को बाद हि कब्रो म सी निकल क पवित्र नगर यरूशलेम म गयो अऊर बहुत लोगों ख दिखायी दियो।
54 ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.
तब सूबेदार अऊर जो ओको संग यीशु की पहरेदारी करत होतो, भूईडोल अऊर जो कुछ भयो होतो ओख देख क बहुतच डर गयो अऊर कह्यो, “सच म यो परमेश्वर को बेटा होतो!”
55 ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ, ಅವರಿಗೆ ಸೇವೆಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
उत बहुत सी बाईयां होती जो गलील सी यीशु की सेवा करती हुयी ओको संग आयी होती, दूर सी यो देख रही होती।
56 ಅವರಲ್ಲಿ ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಜೆಬೆದಾಯನ ಮಕ್ಕಳ ತಾಯಿ ಇದ್ದರು.
उन्म मरियम मगदलीनी, अऊर याकूब अऊर योसेस की माय मरियम, अऊर जब्दी की पत्नी भी होती।
57 ಸಂಜೆಯಾದಾಗ, ಅರಿಮಥಾಯ ಊರಿನ ಯೋಸೇಫನೆಂಬ ಹೆಸರುಳ್ಳ ಧನವಂತನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
जब शाम भयी त यूसुफ नाम को अरिमतिया को एक धनी आदमी जो खुदच यीशु को चेला होतो, ऊ आयो।
58 ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ಕೇಳಿಕೊಂಡನು. ಆಗ ಪಿಲಾತನು ದೇಹವನ್ನು ಅವನಿಗೆ ಒಪ್ಪಿಸುವಂತೆ ಅಪ್ಪಣೆಕೊಟ್ಟನು.
ओन पिलातुस को जवर जाय क यीशु की लाश मांग्यो। पिलातुस न शरीर ख यूसुफ ख दियो जान की आज्ञा दियो।
59 ಯೋಸೇಫನು ಆ ದೇಹವನ್ನು ತೆಗೆದುಕೊಂಡ ಮೇಲೆ, ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತ್ತಿ,
त यूसुफ न लाश लियो, अऊर ओख उज्वल चादर म लपेट्यो,
60 ಬಂಡೆಯಲ್ಲಿ ತಾನು ಕೊರೆದಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು, ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.
अऊर ओन अपनी नयी कब्र म रख्यो, जो ओन चट्टान म खुदवायी होती, अऊर कब्र को द्वार पर बड़ो गोटा लुढ़काय क चली गयो।
61 ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು.
मरियम मगदलीनी अऊर दूसरी मरियम उत कब्र को आगु बैठी होती।
62 ಮರುದಿನ, ಅಂದರೆ ಪಸ್ಕಹಬ್ಬದ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರು, ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು,
दूसरों दिन जो आराम दिन को बाद को दिन होतो, मुख्य याजकों अऊर फरीसियों न पिलातुस को जवर जमा होय क कह्यो,
63 “ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.
“हे महाराज, हम्ख याद हय कि ऊ भरमावन वालो न जब ऊ जीन्दो होतो, त कह्यो होतो, ‘मय तीन दिन को बाद जीन्दो होऊं।’
64 ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ಆತನನ್ನು ಕದ್ದುಕೊಂಡು ಹೋಗಿ, ಯೇಸು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿಯಾರು. ಆಗ ಮೊದಲನೆಯ ಮೋಸಕ್ಕಿಂತ ಕಡೆಯ ಮೋಸವು ಕೆಡುಕಾದೀತು. ಆದಕಾರಣ ಮೂರನೆಯ ದಿನದವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆಕೊಡಬೇಕು,” ಎಂದರು.
येकोलायी आज्ञा दे कि तीसरो दिन तक कब्र की पहरेदारी करी जाये, असो नहीं होय कि ओको चेला आय क ओख चोर क लिजाये अऊर लोगों सी कहन लग्यो, ‘ऊ मरयो हुयो म सी जीन्दो भयो हय।’ तब पिछलो धोका पहिलो सी भी बुरो होयेंन।”
65 ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲಾ, ಹೋಗಿ ನಿಮಗೆ ತಿಳಿದಮಟ್ಟಿಗೆ ಅದನ್ನು ಭದ್ರಪಡಿಸಿರಿ,” ಎಂದನು.
पिलातुस न उन्को सी कह्यो, “तुम्हरो जवर पहरेदार त हंय। जावो, अपनी समझ सी कब्र ख रखवाली करो।”
66 ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು.
येकोलायी हि पहरेदारों ख संग ले क गयो, अऊर गोटा पर मुहर लगाय क कब्र ख सुरक्षित कर दियो।

< ಮತ್ತಾಯನು 27 >