< ನೆಹೆಮೀಯನು 10 >

1 ಮುದ್ರೆ ಹಾಕಿದವರು ಯಾರೆಂದರೆ: ಅಧಿಪತಿಯಾದ ಹಕಲ್ಯನ ಮಗ ನೆಹೆಮೀಯನು. ಚಿದ್ಕೀಯ,
ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ,
2 ಸೆರಾಯ, ಅಜರ್ಯ, ಯೆರೆಮೀಯ,
ಸೆರಾಯ, ಅಜರ್ಯ, ಯೆರೆಮೀಯ,
3 ಪಷ್ಹೂರ, ಅಮರ್ಯ, ಮಲ್ಕೀಯನ,
ಪಷ್ಹೂರ್, ಅಮರ್ಯ, ಮಲ್ಕೀಯ,
4 ಹಟ್ಟೂಷ್, ಶೆಬನ್ಯ, ಮಲ್ಲೂಕ್,
ಹಟ್ಟೂಷ್, ಶೆಬನ್ಯ, ಮಲ್ಲೂಕ್,
5 ಹಾರಿಮ್, ಮೆರೇಮೋತ್, ಓಬದ್ಯ,
ಹಾರಿಮ್, ಮೆರೇಮೋತ್, ಓಬದ್ಯ,
6 ದಾನಿಯೇಲ, ಗಿನ್ನೆತೋನ್, ಬಾರೂಕ್,
ದಾನೀಯೇಲ್, ಗಿನ್ನೆತೋನ್, ಬಾರೂಕ್,
7 ಮೆಷುಲ್ಲಾಮ್, ಅಬೀಯ, ಮಿಯಾಮಿನ್,
ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,
8 ಮಾಜ್ಯ, ಬಿಲ್ಗೈ, ಶೆಮಾಯ ಇವರು ಯಾಜಕರಾಗಿದ್ದರು.
ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು.
9 ಲೇವಿಯರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್ ಎಂಬವನ ಮಕ್ಕಳಲ್ಲಿ ಬಿನ್ನೂಯ್, ಕದ್ಮಿಯೇಲ್,
ಲೇವಿಯರಲ್ಲಿ: ಅಜನ್ಯನ ಮಗನಾದ ಯೇಷೂವ, ಹೇನಾದಾದ್, ಬಿನ್ನೂಯ್, ಕದ್ಮೀಯೇಲ್ ಎಂಬುವರು.
10 ಅವರ ಸಂಗಡಿಗರಾದ ಶೆಬನ್ಯ, ಹೋದೀಯ, ಕೆಲೀಟ, ಪೆಲಾಯ, ಹಾನಾನ್,
೧೦ಇವರ ಬಂಧುಗಳಾದ ಶೆಬನ್ಯ, ಹೋದೀಯ. ಕೆಲೀಟ, ಪೆಲಾಯ, ಹಾನಾನ್,
11 ಮೀಕ, ರೆಹೋಬ್, ಹಷಬ್ಯ,
೧೧ಮೀಕ, ರೆಹೋಬ್, ಹಷಬ್ಯ,
12 ಜಕ್ಕೂರ್, ಶೇರೇಬ್ಯ, ಶೆಬನ್ಯ,
೧೨ಜಕ್ಕೂರ್, ‍ ಶೇರೇಬ್ಯ, ಶೆಬನ್ಯ,
13 ಹೋದೀಯ, ಬಾನೀ, ಬೆನೀನೂ ಎಂಬವರು.
೧೩ಹೋದೀಯ, ಬಾನೀ, ಬೆನೀನೂ ಎಂಬುವರು.
14 ಜನರ ಮುಖ್ಯಸ್ಥರು ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ,
೧೪ಜನಪ್ರಧಾನರಲ್ಲಿ ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ,
15 ಬುನ್ನಿ, ಅಜ್ಗಾದ್, ಬೇಬೈ,
೧೫ಬುನ್ನೀ, ಅಜ್ಗಾದ್, ಬೇಬೈ
16 ಅದೋನೀಯ, ಬಿಗ್ವೈ, ಅದೀನ್,
೧೬ಅದೋನೀಯ, ಬಿಗ್ವೈ, ಆದೀನ್,
17 ಆಟೇರ್, ಹಿಜ್ಕೀಯ, ಅಜ್ಜೂರ್,
೧೭ಆಟೇರ್, ಹಿಜ್ಕೀಯ, ಅಜ್ಜೂರ್,
18 ಹೋದೀಯ, ಹಾಷುಮ್, ಬೇಚೈ,
೧೮ಹೋದೀಯ, ಹಾಷುಮ್, ಬೇಚೈ,
19 ಹಾರೀಫ್, ಅನಾತೋತ್, ನೇಬೈ,
೧೯ಹಾರೀಫ್, ಅನಾತೋತ್, ನೇಬೈ,
20 ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್,
೨೦ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್,
21 ಮೆಷೇಜಬೇಲ್, ಚಾದೋಕ್, ಯದ್ದೂವ,
೨೧ಮೆಷೇಜಬೇಲ್, ಚಾದೋಕ್, ಯದ್ದೂವ,
22 ಪೆಲಟ್ಯ, ಹಾನಾನ್, ಅನಾಯ,
೨೨ಪೆಲಟ್ಯ, ಹಾನಾನ್, ಆನಾಯ,
23 ಹೋಶೇಯ, ಹನನ್ಯ, ಹಷ್ಷೂಬ್,
೨೩ಹೋಷೇಯ, ಹನನ್ಯ, ಹಷ್ಷೂಬ್,
24 ಹಲ್ಲೋಹೇಷ್, ಪಿಲ್ಹ, ಶೋಬೇಕ್,
೨೪ಹಲೋಹೇಷ್, ಪಿಲ್ಹ, ಶೋಬೇಕ್,
25 ರೆಹೂಮ್, ಹಷಬ್ನ, ಮಾಸೇಯ
೨೫ರೆಹೂಮ್, ಹಷಬ್ನ, ಮಾಸೇಯ,
26 ಅಹೀಯ, ಹಾನಾನ್, ಆನಾನ್,
೨೬ಅಹೀಯ, ಹಾನಾನ್, ಆನಾನ್,
27 ಮಲ್ಲೂಕ್, ಹಾರಿಮ್, ಬಾಣನು.
೨೭ಮಲ್ಲೂಕ್, ಹಾರಿಮ್, ಬಾನ ಎಂಬುವರು.
28 ಜನರಲ್ಲಿ ಉಳಿದವರಾದ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ, ದೇವರ ನಿಯಮದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರೆಲ್ಲರೂ, ಅವರ ಹೆಂಡತಿಯರೂ, ಅವರ ಪುತ್ರರೂ, ಅವರ ಪುತ್ರಿಯರೂ, ತಿಳುವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ,
೨೮ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.
29 ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;
೨೯ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:
30 ನಾವು ನಮ್ಮ ಪುತ್ರಿಯರನ್ನು ಇತರ ಜನರಿಗೆ ಕೊಡುವುದಿಲ್ಲ, ನಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳುವುದಿಲ್ಲ ಎಂದು ಆಣೆ ಮಾಡುತ್ತೇವೆ.
೩೦ಈ ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ ಮತ್ತು ನಮ್ಮ ಗಂಡು ಮಕ್ಕಳಿಗೋಸ್ಕರ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ.
31 ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.
೩೧ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.
32 ವರ್ಷಕ್ಕೆ 4 ಗ್ರಾಂ ಬೆಳ್ಳಿಯನ್ನು ನಮ್ಮ ದೇವರ ಆಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.
೩೨ವರ್ಷಕ್ಕೆ ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.
33 ಈ ಹಣವನ್ನು, ಸಮ್ಮುಖದ ರೊಟ್ಟಿಗೋಸ್ಕರವೂ, ನಿತ್ಯಧಾನ್ಯ ಕಾಣಿಕೆಗೋಸ್ಕರವೂ, ವಿಶ್ರಾಂತಿಯ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಅರ್ಪಿಸುವ ನಿತ್ಯ ದಹನಬಲಿಗಳಿಗೋಸ್ಕರವೂ, ನೇಮಿಸಿದ ಹಬ್ಬಗಳಿಗೋಸ್ಕರವೂ, ಇಸ್ರಾಯೇಲರ ಪ್ರಾಯಶ್ಚಿತ್ತವಾದ ದೋಷಪರಿಹಾರದ ಬಲಿಗೋಸ್ಕರವೂ, ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ಉಪಯೋಗಿಸಬೇಕು.
೩೩ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.
34 ಮೋಶೆಯ ನಿಯಮದಲ್ಲಿ ಬರೆದ ಹಾಗೆ ನಮ್ಮ ದೇವರಾಗಿರುವ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸುವುದಕ್ಕೆ ನೇಮಿತವಾದ ಕಾಲಗಳಲ್ಲಿ, ವರ್ಷ ವರ್ಷಕ್ಕೆ ನಮ್ಮ ಪಿತೃಗಳ ಗೋತ್ರಗಳ ಪ್ರಕಾರ ನಮ್ಮ ದೇವಾಲಯದೊಳಗೆ ತೆಗೆದುಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ, ಲೇವಿಯರಿಗೂ, ಜನರಿಗೂ ಚೀಟಿಗಳನ್ನು ಹಾಕಿದೆವು.
೩೪ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.
35 ಯೆಹೋವ ದೇವರ ಆಲಯಕ್ಕೆ ಪ್ರತಿ ವರ್ಷದಲ್ಲಿಯೂ ನಮ್ಮ ಭೂಮಿಯ ಫಲಗಳಿಂದ ಪ್ರಥಮ ಫಲಗಳನ್ನು ತರುವುದಕ್ಕೂ,
೩೫ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು.
36 ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ನಮ್ಮ ಪುತ್ರರಲ್ಲಿಯೂ, ನಮ್ಮ ಪಶುಗಳಲ್ಲಿಯೂ ಚೊಚ್ಚಲಾದವುಗಳನ್ನು; ನಮ್ಮ ದನಗಳಲ್ಲಿಯೂ, ಮಂದೆಗಳಲ್ಲಿಯೂ ಚೊಚ್ಚಲಾದವುಗಳನ್ನು, ನಮ್ಮ ದೇವರ ಆಲಯಕ್ಕೆ ತಂದು, ನಮ್ಮ ದೇವರ ಆಲಯದಲ್ಲಿ ಸೇವಿಸುವ ಯಾಜಕರಿಗೆ ಕೊಡುತ್ತೇವೆ;
೩೬ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.
37 ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನು ನಮ್ಮ ಕಾಣಿಕೆಗಳನ್ನೂ, ಸಕಲ ಮರಗಳ ಫಲವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ಲೇವಿಯರು ಒಕ್ಕಲುತನವಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವುದಕ್ಕೂ ಪ್ರಮಾಣ ಮಾಡಿದೆವು.
೩೭ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.
38 ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.
೩೮ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.
39 ಏಕೆಂದರೆ ಪರಿಶುದ್ಧ ಸ್ಥಾನದ ಸಲಕರಣೆಗಳೂ, ಸೇವೆ ಮಾಡುವ ಯಾಜಕರೂ, ದ್ವಾರಪಾಲಕರೂ, ಹಾಡುಗಾರರೂ ಇರುವ ಕೊಟ್ಟಡಿಗಳಿಗೆ ಇಸ್ರಾಯೇಲರೂ, ಲೇವಿಯರ ಮಕ್ಕಳೂ, ಕಾಣಿಕೆಯಾದ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ತರಬೇಕು. “ನಾವು ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯಮಾಡುವುದಿಲ್ಲ,” ಎಂದು ಬರೆದುಕೊಟ್ಟರು.
೩೯ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.

< ನೆಹೆಮೀಯನು 10 >