< ನೆಹೆಮೀಯನು 2 >

1 ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷದ, ನಿಸಾನ ತಿಂಗಳಲ್ಲಿ, ಅವನ ಮುಂದೆ ದ್ರಾಕ್ಷಾರಸವನ್ನು ತೆಗೆದುಕೊಂಡು ಅರಸನಿಗೆ ಕೊಟ್ಟೆನು. ನಾನು ಅವನ ಸಮ್ಮುಖದಲ್ಲಿ ಹಿಂದೆ ಎಂದೂ ದುಃಖಿತನಾಗಿದ್ದಿಲ್ಲ.
अर्तहशश्त राजाच्या कारकिर्दीच्या विसाव्या वर्षी नीसान महिन्यात त्याने द्राक्षरस निवडला होता आणि मी द्राक्षरस घेतला आणि तो राजाला दिला. यापूर्वी मी कधी त्याच्या उपस्थितीत असताना उदास झालो नव्हतो.
2 ಆದಕಾರಣ ಅರಸನು ನನಗೆ, “ನಿನಗೆ ಕಾಯಿಲೆ ಇಲ್ಲದೆ ಇರುವಾಗ, ನಿನ್ನ ಮುಖವು ದುಃಖದಿಂದಿರುವುದೇನು? ನಿನಗೆ ರೋಗ ಏನೂ ಇಲ್ಲವಲ್ಲ? ಇದು ಮನೋವೇದನೆಯೇ ಹೊರತು ಬೇರೇನೂ ಅಲ್ಲ,” ಎಂದನು. ಆಗ ನಾನು ಬಹು ಭಯಪಟ್ಟು ಅರಸನಿಗೆ,
म्हणून राजाने मला विचारले, “तुझा चेहरा असा उदास का दिसतो? तू आजारी दिसत नाहीस. तू तर मनातून दु: खी दिसतोस.” मग मी फार घाबरलो.
3 “ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.
मी राजाला म्हणालो, “राजा चिरायु होवो! माझ्या पूर्वजांच्या जेथे कबरी आहेत ते नगर उद्ध्वस्त झाले आहे, नगराच्या वेशीसुध्दा आगीत भस्म झाल्या आहेत, तर माझा चेहरा उदास का होणार नाही?”
4 ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ
यावर राजा मला म्हणाला, “तुझ्यासाठी मी काय करावे असे तुला वाटते?” मी स्वर्गातील देवाची प्रार्थना केली.
5 ಅರಸನಿಗೆ, “ಅರಸನಿಗೆ ಮೆಚ್ಚಿಗೆಯಾದರೆ ಮತ್ತು ನಿಮ್ಮ ಸೇವಕನಿಗೆ ನಿಮ್ಮ ಮುಂದೆ ದಯೆ ದೊರಕಿದರೆ, ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವುದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು,” ಎಂದೆನು.
मग मी राजाला उत्तर दिले, “महाराजांची मर्जी असेल आणि आपल्या दासावर आपली कृपादृष्टी झाली असेल तर मला माझ्या पूर्वजांच्या कबरी जेथे आहेत त्या यहूदातील यरूशलेमास जाऊन नगराची पुन्हा बांधणी करण्यास पाठवा.”
6 ರಾಣಿಯು ಅವನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ, “ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರುಗಿ ಯಾವಾಗ ಬರುತ್ತೀ?” ಎಂದನು. ನಾನು ಅರಸನಿಗೆ ಸಮಯ ಗೊತ್ತು ಮಾಡಿದೆನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿಸಿದನು.
(राणीसुद्धा त्याच्याजवळच बसलेली होती) राजाने मला विचारले, “तुला या कामासाठी जाऊन यायला किती दिवस लागतील? तू परत केव्हा येशील?” राजा मला आनंदाने पाठविण्यास तयार झाला जेव्हा मी त्यास वेळ ठरवून दिली.
7 ತರುವಾಯ ನಾನು ಅರಸನಿಗೆ, “ಯೂಫ್ರೇಟೀಸ್ ನದಿ ಆಚೆಯ ರಾಜ್ಯಪಾಲರು ತಮ್ಮ ಪ್ರಾಂತಗಳಲ್ಲಿ ಹಾದು, ಯೆಹೂದದ ನಾಡಿಗೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಬೇಕಾಗುತ್ತದೆ.
मग मी राजाला असेही म्हणालो, “राजाची माझ्यावर मर्जी असेल तर माझी आणखी एक विनंती आहे. मी यहूदा देशी पोहचेपर्यंत नदीच्या पश्चिमेकडील प्रदेशातून जाऊ देण्याविषयी तेथल्या अधिकाऱ्यांच्या नावानिशी पत्रे द्यावीत.
8 ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.
प्रार्थनामंदिराच्या भोवतालच्या व नगराच्या भिंती आणि माझे घर यांच्यासाठी मला मजबूत लाकूड लागणार आहे. त्यासाठी राजाचा वनाधिकारी आसाफ याला पत्र द्यावे.” राजाने मला तशी पत्रे आणि मी मागितले ते सर्वकाही दिले. देवाची माझ्यावर कृपा असल्यामुळे राजाने हे दिले.
9 ಆಗ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು, ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ, ಕುದುರೆ ಸವಾರರನ್ನೂ ಕಳುಹಿಸಿದನು.
मग मी नदीच्या पश्चिमेकडे असलेल्या, प्रदेशाच्या अधिकाऱ्यांकडे गेलो आणि त्यांना राजाने दिलेली पत्रे दिली. राजाने माझ्यासोबत सैन्यातले अधिकारी आणि घोडेस्वारही पाठवले होते.
10 ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.
१०होरोनी शहराचा सनबल्लट आणि अम्मोनी तोबीया यांना माझा बेत ऐकून माहीत होता, इस्राएलींच्या मदत शोधण्यासाठी कोणी एकजण आला आहे म्हणून ते खूप नाराज झाले.
11 ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ, ನಾನೂ, ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು.
११याकरिता मी यरूशलेमेला गेलो आणि तेथे तीन दिवस होतो.
12 ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟಿದ್ದನ್ನು ಯಾರಿಗೂ ತಿಳಿಸಲಿಲ್ಲ. ನಾನು ಸವಾರಿಮಾಡುತ್ತಿದ್ದ ವಾಹನ ಪಶುವಿನ ಹೊರತು ಬೇರೆ ಪಶು ನನ್ನೊಂದಿಗಿರಲಿಲ್ಲ.
१२मग मी रात्री उठलो, मी काहीजणांना घेऊन बाहेर पडलो. यरूशलेमसाठी काही करण्याचा जो विचार देवाने माझ्या मनात घातला होता त्याबद्दल मी कोणाला काही सांगितले नाही. मी ज्याच्यावर बसलो होतो तो सोडून माझ्याबरोबर कोणताही पशू नव्हता.
13 ನಾನು ರಾತ್ರಿಯಲ್ಲಿ ಕಣಿವೆಯ ಬಾಗಿಲಿಂದ ಹೊರಟು, ಸರ್ಪದ ಬಾವಿಯನ್ನು ದಾಟಿ, ತಿಪ್ಪೆ ದಿಬ್ಬೆಯ ಬಾಗಿಲಿಗೆ ಬಂದು, ಯೆರೂಸಲೇಮಿನ ಕೆಡವಿ ಹಾಕಲಾದ ಗೋಡೆಗಳನ್ನೂ, ಬೆಂಕಿಯಿಂದ ಸುಡಲಾದ ಅದರ ಬಾಗಿಲುಗಳನ್ನೂ ಚೆನ್ನಾಗಿ ಕಂಡೆನು.
१३मी रात्री खोरे वेशीने बाहेर पडून अजगराच्या झऱ्याकडे, उकिरडा वेशीकडे जाऊन यरूशलेमची मोडलेली तटबंदीची भिंत आणि त्यातील आगीच्या भक्ष्यस्थानी पडलेली प्रवेशद्वारे यांची पाहाणी केली.
14 ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು, ಅರಸನ ಕೊಳಕ್ಕೆ ಹೋದೆನು. ನನ್ನ ವಾಹನ ಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ,
१४मग कारंजाचे प्रवेशद्वार आणि राजाचा तलाव यांच्याकडे गेलो. पण माझा घोडा पलीकडे जाऊ शकेल इतकीही जागा नव्हती.
15 ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆನು.
१५तेव्हा मी रात्री भिंतीची बारकाईने तपासणी करत खोऱ्यातून वेशीतून आत शिरलो आणि परत फिरलो.
16 ನಾನು ಎಲ್ಲಿ ಹೋದೆನೆಂದೂ, ಏನು ಮಾಡಿದೆನೆಂದೂ ಅಧಿಕಾರಿಗಳು ತಿಳಿಯದೆ ಇದ್ದರು. ಅಲ್ಲಿಯವರೆಗೆ ನಾನು ಯೆಹೂದ್ಯರಿಗಾದರೂ, ಯಾಜಕರಿಗಾದರೂ, ಶ್ರೀಮಂತರಿಗಾದರೂ, ಅಧಿಕಾರಿಗಳಿಗಾದರೂ, ಕೆಲಸ ಮಾಡುವ ಇತರ ಜನರಿಗಾದರೂ ಗೊತ್ತಿರಲಿಲ್ಲ.
१६मी कोठे गेलो आणि मी काय केले हे अधिकाऱ्यांना माहित नव्हते आणि यहूदी, याजक, राजाचे कुटुंबीय, अधिकारी आणि जे बांधकामाचे काम करणार होते यांच्यापैकी कोणालाही मी काही बोललो नव्हतो.
17 ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.
१७मग मी या सगळयांना म्हणालो, “इथे आपल्याला काय त्रास आहे तो तुम्ही पाहतच आहात. यरूशलेम उजाड आणि उद्ध्वस्त झाले आहे व त्याच्या वेशी आगीत जळून गेल्या आहेत. चला, आता आपण यरूशलेमची तटबंदी पुन्हा बांधू या, म्हणजे आपली आणखी अप्रतिष्ठा होणार नाही.”
18 ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.
१८देवाची माझ्यावर कृपा असल्याचे व राजा माझ्याशी काय बोलला ते मी त्यांना सांगितले. तेव्हा ते म्हणाले, “आपण आताच उठू आणि बांधू!” म्हणून आम्ही या सत्कार्याला सुरुवात केली.
19 ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.
१९पण आम्ही पुन्हा बांधकाम करत असल्याची खबर होरोनाचा सनबल्लट, अम्मोनी अधिकारी तोबीया आणि अरबी गेशेम यांना लागली तेव्हा त्यांनी अगदी नीच पातळीवर जाऊन आमचा उपहास केला. आणि ते म्हणाले, “हे काय करताय तुम्ही? राजाविरुध्द बंड करणार आहात का?”
20 ಆಗ ನಾನು ಅವರಿಗೆ, “ಪರಲೋಕದ ದೇವರು ನಮಗೆ ಸಫಲತೆ ಅನುಗ್ರಹಿಸುವರು. ಅವರ ಸೇವಕರಾದ ನಾವು ಪುನಃ ಕಟ್ಟುವ ಕಾರ್ಯ ಪ್ರಾರಂಭಿಸುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಯಾವುದೇ ಪಾಲಾದರೂ ಹಕ್ಕಾದರೂ ಐತಿಹಾಸಿಕ ಬಾಧ್ಯತೆಯಾದರೂ ಇರುವುದಿಲ್ಲ,” ಎಂದು ಹೇಳಿದೆನು.
२०पण मी त्यांना असे म्हणालो “स्वर्गातील देवच आम्हास यश देईल. आम्ही देवाचे सेवक असून आम्ही हे नगर पुन्हा उभारू. पण यरूशलेमात तुमचा काहीएक अधिकार, वाटा व ऐतिहासीक हक्क नाही.”

< ನೆಹೆಮೀಯನು 2 >