< ಅರಣ್ಯಕಾಂಡ 22 >

1 ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು.
नंतर इस्राएल लोक मवाबामधल्या यार्देन नदीच्या खोऱ्याकडे निघाले. यरीहोच्या पलिकडे असलेल्या यार्देन नदीजवळ त्यांनी तळ दिला.
2 ಆದರೆ ಚಿಪ್ಪೋರನ ಮಗ ಬಾಲಾಕನು ಇಸ್ರಾಯೇಲರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ನೋಡಿದನು.
सिप्पोराच्या मुलाने, बालाक याने इस्राएल लोकांनी अमोरी लोकांचे काय केले ते पाहिले होते.
3 ಇದಲ್ಲದೆ ಮೋವಾಬಿನವರು, ಇಸ್ರಾಯೇಲರು ಬಹಳ ಜನರಾಗಿರುವುದರಿಂದ ಅವರಿಗೆ ಬಹಳವಾಗಿ ಅಂಜಿದರು. ಮೋವಾಬಿನವರು ಇಸ್ರಾಯೇಲರಿಗೆ ದಿಗಿಲುಪಟ್ಟರು.
मवाबाचा राजा खूप घाबरला कारण इस्राएलचे लोक खूप होते. मवाब त्यांना खरोखरच भीत होता.
4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.
मवाबाचा राजा मिद्यानीं लोकांच्या वडीलांना म्हणाला, बैल जसा शेतातले सगळे गवत खाऊन टाकतो तसेच हे लोक आपला नाश करतील. त्यावेळी सिप्पोराचा मुलगा बालाक मवाबाचा राजा होता.
5 ಇವನು ಸ್ವಜನರ ನಾಡಾದ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ, ಬೆಯೋರನ ಮಗ ಬಿಳಾಮನನ್ನೂ ಕರೆಯಿಸಿ, “ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ. ಅದು ದೇಶವನ್ನೆಲ್ಲಾ ಆವರಿಸಿಕೊಂಡು, ನನಗೆದುರಾಗಿ ವಾಸಿಸುತ್ತಿದೆ.
त्याने बौराचा मुलगा बलाम ह्याला बोलवायला काही माणसे पाठवली. बलाम फरात नदीकाठी पथोर शहरात राहत होता. इथेच बलामचे लोक राहत असत. बालाकाचा निरोप हा होता. एका नवीन राष्ट्राचे लोक मिसर देशातून आले आहेत. ते इतके आहेत की ते सगळा प्रदेश व्यापून टाकतात. त्यांनी माझ्याजवळच तळ दिला आहे.
6 ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.
तर आता ये, मी तुला विनंती करतो, तू या लोकांस माझ्यासाठी शाप दे. कारण ते माझ्यापेक्षा खूप भारी आहेत. कदाचित मी त्यांना मारावयास समर्थ होऊन देशातून घालवून टाकील. कारण मला माहीत आहे. जर तू एखाद्याला आशीर्वाद दिलास तर त्यास आशीर्वाद मिळतो. आणि जर एखाद्यास शाप दिलास तर त्यास शाप लागतो.
7 ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
मवाबी वडील आणि मिद्यानी वडील बलामाशी बोलावयास गेले. त्याच्या कामाचा मोबदला म्हणून त्यांनी बरोबर पैसै नेले. नंतर त्यांनी बालाक काय म्हणाला ते बलामास सांगितले.
8 ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು.
बलाम त्यांना म्हणाला, “रात्री इथे रहा. मी परमेश्वराशी बोलेन आणि तो काय उत्तर देतो ते तुम्हास सांगेन.” मवाबाचे पुढारी त्या रात्री बलामाबरोबर राहिले.
9 ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು?” ಎಂದರು.
देव बलामाकडे आला आणि त्याने विचारले, “तुझ्याकडे हे कोण लोक आले आहेत?”
10 ಬಿಳಾಮನು ದೇವರಿಗೆ, “ಚಿಪ್ಪೋರನ ಮಗನಾಗಿಯೂ ಮೋವಾಬಿನ ಅರಸನಾಗಿಯೂ ಇರುವ ಬಾಲಾಕನು ನನ್ನ ಬಳಿಗೆ ಹೇಳಿ ಕಳುಹಿಸಿದ್ದೇನೆಂದರೆ:
१०बलाम देवाला म्हणाला, सिप्पोराचा मुलगा बालाकाने, मवाबाच्या राजाने यांना माझ्याकडे एक निरोप देऊन पाठवले आहे.
11 ‘ಇಗೋ, ಈಜಿಪ್ಟ್ ದೇಶದಿಂದ ಹೊರಟಿರುವ ಒಂದು ಜನಾಂಗವು ದೇಶವನ್ನೆಲ್ಲಾ ಆವರಿಸಿಕೊಂಡಿದೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ಒಂದು ವೇಳೆ ಅವರ ಸಂಗಡ ಯುದ್ಧಮಾಡಿ ಹೊರಗೆ ಹಾಕುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,’ ಎಂದು ಹೇಳಿ ಕಳುಹಿಸಿದ್ದಾನೆ,” ಎಂದನು.
११तो निरोप हा, एका नवीन राष्ट्राचे लोक मिसर देशामधून आले आहेत. ते इतके आहेत की ते सगळा प्रदेश व्यापून टाकतात. म्हणून आता तू येऊन माझ्यासाठी त्यांना शाप दे. नंतर कदाचित मी त्या लोकांचा पराभव करु शकेन आणि त्यांना माझ्या देशातून जायला भाग पाडू शकेन.
12 ಆಗ ದೇವರು ಬಿಳಾಮನಿಗೆ, “ನೀನು ಅವರ ಸಂಗಡ ಹೋಗಬೇಡ, ನೀನು ಆ ಜನರನ್ನು ಶಪಿಸಬೇಡ, ಏಕೆಂದರೆ ಅವರು ನನ್ನಿಂದ ಆಶೀರ್ವಾದ ಹೊಂದಿದವರು,” ಎಂದರು.
१२पण देव बलामास म्हणाला, त्यांच्याबरोबर जाऊ नकोस. तू त्या लोकांस शाप देऊ नको. कारण ते माझे आशीर्वादित लोक आहेत.
13 ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ, “ನಿಮ್ಮ ದೇಶಕ್ಕೆ ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಲಿಲ್ಲ,” ಎಂದನು.
१३दुसऱ्या दिवशी बलाम उठला आणि बालाकाच्या पुढाऱ्यांना म्हणाला, तुम्ही तुमच्या देशात परत जा. परमेश्वर मला तुमच्याबरोबर जाऊ देणार नाही
14 ಆದಕಾರಣ ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಸಂಗಡ ಬರಲಿಲ್ಲ,” ಎಂದರು.
१४त्यामुळे मवाबाचे पुढारी बालाककडे परत गेले आणि त्यांनी त्यास हे सांगितले. ते म्हणाले, बलामाने आमच्याबरोबर यायला नकार दिला.
15 ಆದರೆ ಬಾಲಾಕನು ತಿರುಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಧಾನರನ್ನು ಕಳುಹಿಸಿದನು.
१५म्हणून बालाकाने बलामाकडे दुसरे पुढारी पाठवले. यावेळी त्याने पहिल्या वेळेपेक्षा खूप जास्त पुढारी पाठवले. हे पुढारी पहिल्या पुढाऱ्यांपेक्षा अधिक महत्वाचे होते.
16 ಅವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗ ಬಾಲಾಕನು ಹೀಗೆ ಹೇಳುತ್ತಾನೆ: ನೀನು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬಾರದು.
१६ते बलामाकडे गेले आणि म्हणाले, बालाक, सिप्पोराचा मुलगा तुला हे सांगतो, तुझ्या इथे येण्याच्या आड कोठलीही गोष्ट येऊ देवू नको.
17 ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.
१७मी जे सांगतो ते तू केलेस तर मी तुला नक्कीच मान देईन आणि तू मला जे काही विनवशील ते मी करीन परंतु तू ये व माझ्यासाठी या लोकांस शाप दे.
18 ಬಿಳಾಮನು ಪ್ರತ್ಯುತ್ತರವಾಗಿ ಬಾಲಾಕನ ಸೇವಕರಿಗೆ, “ಬಾಲಾಕನು ನನಗೆ ತನ್ನ ಮನೆ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾಗಿರುವ ಯೆಹೋವ ದೇವರ ಮಾತನ್ನು ಮೀರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
१८बलामाने बालाकाच्या पुढाऱ्यांना उत्तर दिले. तो म्हणाला, परमेश्वर माझा देव ह्याच्या शब्दाबाहेर मला कमीजास्त काहीएक करता येत नाही. बालाकाने माझे घर सोन्या चांदीने भरुन दिले तरीही मी काही करणार नाही.
19 ಆದರೆ ಈಗ ಯೆಹೋವ ದೇವರು ನನಗೆ ಮತ್ತೇನು ಹೇಳುವರೆಂದು ನಾನು ತಿಳಿದುಕೊಳ್ಳುವ ಹಾಗೆ, ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ,” ಎಂದನು.
१९तरीपण रात्री तुम्ही येथे राहा आणि परमेश्वर मला काय सांगतो ते मला कळू शकेल.
20 ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು.
२०त्या रात्री देव बलामाकडे आला. देव म्हणाला, “तुला घेऊन जाण्यासाठी हे लोक पुन्हा आले आहेत. म्हणून तू त्यांच्याबरोबर जाऊ शकतोस. पण मी जे सांगेन तेवढेच तू कर.”
21 ಬಿಳಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಯನ್ನು ಹತ್ತಿ, ಮೋವಾಬಿನ ಪ್ರಧಾನರ ಸಂಗಡ ಹೋದನು.
२१दुसऱ्या दिवशी सकाळी बलाम उठला आणि त्याने आपल्या गाढवीवर खोगीर घातले. नंतर तो मवाबाच्या पुढाऱ्यांबरोबर चालला.
22 ಆದರೆ ಅವನು ಹೋದದ್ದರಿಂದ ದೇವರಿಗೆ ಕೋಪ ಬಂದಿತು. ಯೆಹೋವ ದೇವರ ದೂತನು ಅವನಿಗೆ ಎದುರಾಳಿಯಾಗಿ ಮಾರ್ಗದಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
२२बलाम त्याच्या गाढवीवर बसला होता. त्याचे दोन नोकर त्याच्याबरोबर होते. बलाम प्रवास करीत होता तेव्हा देव त्याच्यावर रागावला. परमेश्वराचा दूत रस्त्यावर बलामापुढे येऊन उभा राहिला. देवदूत बलामास थांबवणार होता.
23 ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು.
२३बलामाच्या गाढवीने परमेश्वराच्या दूताला रस्त्यात उभे असलेले पाहिले. देवदूताने हातात तलवार घेतली होती. म्हणून गाढवी रस्ता सोडून शेतात गेली. बलामास देवदूत दिसू शकला नाही. म्हणून तो गाढवीवर खूप रागावला. त्याने गाढवीला मारले आणि जबरदस्तीने रस्त्यावर आणले.
24 ಆದರೆ ಯೆಹೋವ ದೇವರ ದೂತನು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ಹಾದಿಯಲ್ಲಿ ಎರಡೂ ಕಡೆಯಲ್ಲಿ ಗೋಡೆ ಇದ್ದಲ್ಲಿ ನಿಂತನು.
२४नंतर परमेश्वराचा दूत रस्ता जिथे अरुंद होता तिथे थांबला. हा दोन द्राक्षांच्या मव्व्यांच्या मधला भाग होता. रस्ताच्या दोन्ही बाजूला भिंती होत्या.
25 ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು, ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು. ಅವನು ಅದನ್ನು ಮತ್ತೆ ಹೆಚ್ಚಾಗಿ ಹೊಡೆದನು.
२५गाढवीने पुन्हा परमेश्वराच्या दूताला पाहिले म्हणून ती एका भिंतीला चिकटून चालू लागली त्यामुळे बलामाचा पाय भिंतीला लागून चिरडला गेला. म्हणून बलामने गाढवीला पुन्हा मारले.
26 ಆಗ ಯೆಹೋವ ದೇವರ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವುದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.
२६नंतर परमेश्वराचा दूत दुसऱ्या ठिकाणी उभा राहिला. अरुंद रस्ता असलेले हे दुसरे ठिकाण होते. येथे वळायला सुद्धा मुळीच जागा नव्हती गाढवीला त्यास वळसा घालून जाणे शक्य नव्हते.
27 ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
२७गाढवीने परमेश्वराच्या दूताला पाहिले म्हणून बलाम तिच्यावर बसला असतानाच ती खाली बसली त्यामुळे बलाम खूप रागावला आणि त्याने गाढवीला त्याच्या काठीने मारायला सुरुवात केली.
28 ಆಗ ಯೆಹೋವ ದೇವರು ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ಈಗ ನನ್ನನ್ನು ಮೂರು ಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು?” ಎಂದು ಕೇಳಿತು.
२८नंतर परमेश्वराने गाढवीला बोलते केले. गाढवी बलामास म्हणाली, तू माझ्यावर का रागावला आहेस? मी तुला काय केले आहे? तू मला तीन वेळा मारलेस.
29 ಬಿಳಾಮನು ಕತ್ತೆಗೆ, “ನೀನು ನನಗೆ ಹಾಸ್ಯಮಾಡಿದೆಯಲ್ಲಾ? ನನ್ನ ಕೈಯಲ್ಲಿ ಖಡ್ಗ ಇದ್ದಿದ್ದರೆ, ನಾನು ಈಗಲೇ ನಿನ್ನನ್ನು ಕೊಂದು ಹಾಕುತ್ತಿದ್ದೆ,” ಎಂದನು.
२९बलामने गाढवीला उत्तर दिले, तू मला मूर्ख बनवलेस. जर माझ्या हातात तलवार असती तर मी तुला मारुन टाकले असते.
30 ಕತ್ತೆಯು ಬಿಳಾಮನಿಗೆ, “ಈ ದಿವಸದವರೆಗೂ ನೀನು ಯಾವಾಗಲೂ ಸವಾರಿಮಾಡುತ್ತಿದ್ದ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ರೀತಿ ಮಾಡಿದೆನೋ?” ಎಂದು ಪ್ರಶ್ನಿಸಿತು. ಅದಕ್ಕವನು, “ಇಲ್ಲ,” ಎಂದನು.
३०पण गाढवी बलामास म्हणाली, बघ मी तुझीच गाढवी आहे. खूप वर्षे तू माझ्यावर बसत आला आहेस. आणि यापूर्वी मी असे काही केले नाही हे तुला माहीत आहे. बलाम म्हणाला, नाही.
31 ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.
३१नंतर परमेश्वराने बलामाचे डोळे उघडले, तेव्हा त्यास परमेश्वराचा दूत दिसला. तो रस्त्यात तलवार घेऊन उभा होता. त्याने परमेश्वराच्या दूताला रस्त्यात जमिनीपर्यंत वाकून नमस्कार केला.
32 ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ.
३२परमेश्वराच्या दूताने बलामास विचारले, तू तुझ्या गाढवीला तीनदा का मारलेस? तुला थांबवण्यासाठी मी आलो आहे. पण अगदी ऐनवेळी
33 ಆ ಕತ್ತೆ ನನ್ನನ್ನು ನೋಡಿ, ನನ್ನ ಮುಂದೆ ಈಗ ಮೂರು ಸಾರಿ ಓರೆಯಾಗಿ ಹೋಯಿತು. ಅದು ನನ್ನ ಮುಂದೆ ಓರೆಯಾಗಿ ಹೋಗದಿದ್ದರೆ, ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದುಹಾಕಿ ಕತ್ತೆಯನ್ನು ಉಳಿಸುತ್ತಿದ್ದೆನು,” ಎಂದನು.
३३तुझ्या गाढवीने मला पाहिले आणि ती दूर गेली. असे तीन वेळा घडले. जर गाढवी वळली नसती तर आतापर्यंत मी तुला मारले असते आणि तुझ्या गाढवीला जिवंत राहू दिले असते.
34 ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.
३४तेव्हा बलाम परमेश्वराच्या दूताला म्हणाला, मी पाप केले आहे. तू रस्त्यात उभा आहेस हे मला माहीत नव्हते. मी जर चूक करीत असेन तर मी घरी परत जाईन.
35 ಆದರೆ ಯೆಹೋವ ದೇವರ ದೂತನು ಬಿಳಾಮನಿಗೆ, “ಈ ಮನುಷ್ಯರ ಸಂಗಡ ಹೋಗು ಆದರೆ ನಾನು ನಿನಗೆ ಹೇಳುವುದನ್ನೇ ಹೇಳಬೇಕೇ ಹೊರತು ಬೇರೆ ಯಾವದನ್ನೂ ಹೇಳಬಾರದು,” ಎಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
३५तेव्हा परमेश्वराचा दूत बलामास म्हणाला, नाही! तू या लोकांबरोबर जाऊ शकतोस. पण सावध रहा. मी जे सांगेन तेच शब्द बोल. म्हणून बलाम बालाकाने पाठवलेल्या पुढाऱ्यांबरोबर गेला.
36 ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ, ಅವನು ಕಡೆಯ ಮೇರೆಯಲ್ಲಿರುವ ಅರ್ನೋನ್ ಹೊಳೆಯ ತೀರದಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಬರಮಾಡಿಕೊಳ್ಳಲು ಹೊರಟನು.
३६बलाम येत असल्याचे बालाकाला समजले. म्हणून तो बलामास भेटायला आर्णोन नदीजवळच्या मवाबाच्या शहरात गेला. ते त्याच्या देशाच्या उत्तर सरहद्दीवर होते.
37 ಬಾಲಾಕನು ಬಿಳಾಮನಿಗೆ, “ನಾನು ನಿನಗೆ ತುರ್ತಾಗಿ ಬರುವಂತೆ ಹೇಳಿ ಕಳುಹಿಸಲಿಲ್ಲವೋ? ನೀನು ನನ್ನ ಬಳಿಗೆ ಏಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯವುಳ್ಳವನಲ್ಲವೋ?” ಎಂದನು.
३७जेव्हा बालाकाने बलामास पाहिले तेव्हा तो त्यास म्हणाला, मी तुला आधीच यायला सांगितले होते. तुला साजेसा सन्मान करण्यास मी समर्थ नव्हतो काय?
38 ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು.
३८बलामाने बालाकाला उत्तर दिले, पण आताच मी येथे आलो आहे. मी आलो आहे पण तू सांगितलेल्या गोष्टी मला कदाचित करता येणार नाहीत. परमेश्वर देव जेवढे सांगेल तेवढेच मी बोलू शकतो.
39 ಆಗ ಬಿಳಾಮನು ಬಾಲಾಕನ ಸಂಗಡ ಹೋದನು. ಇಬ್ಬರು ಕಿರ್ಯತ್ ಹುಚೋತಿಗೆ ಬಂದರು.
३९नंतर बलाम बालाकाबरोबर किर्याथ-हसोथ येथे गेला.
40 ಬಾಲಾಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಅದರಲ್ಲಿ ಸ್ವಲ್ಪವನ್ನು ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಭುಗಳಿಗೂ ಕಳುಹಿಸಿದನು.
४०बालाकाने काही गुरे व मेंढ्या बली म्हणून मारल्या. त्याने थोडे मांस बलामास दिले आणि थोडे त्याच्याबरोबर असलेल्या पुढाऱ्यांना दिले.
41 ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು.
४१दुसऱ्या दिवशी सकाळी बालाक बलामास घेऊन बामोथ-बआल शहरी गेला. तेथून त्यांना इस्राएल लोकांच्या तळाचा शेवटचा भाग दिसू शकत होता.

< ಅರಣ್ಯಕಾಂಡ 22 >