< ಜ್ಞಾನೋಕ್ತಿಗಳು 16 >

1 ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.
لِلْإِنْسَانِ تَدَابِيرُ ٱلْقَلْبِ، وَمِنَ ٱلرَّبِّ جَوَابُ ٱللِّسَانِ.١
2 ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ, ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ.
كُلُّ طُرُقِ ٱلْإِنْسَانِ نَقِيَّةٌ فِي عَيْنَيْ نَفْسِهِ، وَٱلرَّبُّ وَازِنُ ٱلْأَرْوَاحِ.٢
3 ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು, ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
أَلْقِ عَلَى ٱلرَّبِّ أَعْمَالَكَ فَتُثَبَّتَ أَفْكَارُكَ.٣
4 ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.
اَلرَّبُّ صَنَعَ ٱلْكُلَّ لِغَرَضِهِ، وَٱلشِّرِّيرَ أَيْضًا لِيَوْمِ ٱلشَّرِّ.٤
5 ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.
مَكْرَهَةُ ٱلرَّبِّ كُلُّ مُتَشَامِخِ ٱلْقَلْبِ. يَدًا لِيَدٍ لَا يَتَبَرَّأُ.٥
6 ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
بِٱلرَّحْمَةِ وَٱلْحَقِّ يُسْتَرُ ٱلْإِثْمُ، وَفِي مَخَافَةِ ٱلرَّبِّ ٱلْحَيَدَانُ عَنِ ٱلشَّرِّ.٦
7 ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.
إِذَا أَرْضَتِ ٱلرَّبَّ طُرُقُ إِنْسَانٍ، جَعَلَ أَعْدَاءَهُ أَيْضًا يُسَالِمُونَهُ.٧
8 ಅನ್ಯಾಯದ ದೊಡ್ಡ ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
اَلْقَلِيلُ مَعَ ٱلْعَدْلِ خَيْرٌ مِنْ دَخْلٍ جَزِيلٍ بِغَيْرِ حَقٍّ.٨
9 ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.
قَلْبُ ٱلْإِنْسَانِ يُفَكِّرُ فِي طَرِيقِهِ، وَٱلرَّبُّ يَهْدِي خَطْوَتَهُ.٩
10 ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ.
فِي شَفَتَيِ ٱلْمَلِكِ وَحْيٌ. فِي ٱلْقَضَاءِ فَمُهُ لَا يَخُونُ.١٠
11 ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ. ಚೀಲದ ತೂಕಗಳು ಅವರ ಕೈಕೆಲಸವೇ.
قَبَّانُ ٱلْحَقِّ وَمَوَازِينُهُ لِلرَّبِّ. كُلُّ مَعَايِيرِ ٱلْكِيسِ عَمَلُهُ.١١
12 ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು. ಏಕೆಂದರೆ ನೀತಿಯಿಂದ ಸಿಂಹಾಸನವು ಸ್ಥಾಪಿಸಲಾಗುತ್ತದೆ.
مَكْرَهَةُ ٱلْمُلُوكِ فِعْلُ ٱلشَّرِّ، لِأَنَّ ٱلْكُرْسِيَّ يُثَبَّتُ بِٱلْبِرِّ.١٢
13 ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ.
مَرْضَاةُ ٱلْمُلُوكِ شَفَتَا حَقٍّ، وَٱلْمُتَكَلِّمُ بِٱلْمُسْتَقِيمَاتِ يُحَبُّ.١٣
14 ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.
غَضَبُ ٱلْمَلِكِ رُسُلُ ٱلْمَوْتِ، وَٱلْإِنْسَانُ ٱلْحَكِيمُ يَسْتَعْطِفُهُ.١٤
15 ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ, ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
فِي نُورِ وَجْهِ ٱلْمَلِكِ حَيَاةٌ، وَرِضَاهُ كَسَحَابِ ٱلْمَطَرِ ٱلْمُتَأَخِّرِ.١٥
16 ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.
قِنْيَةُ ٱلْحِكْمَةِ كَمْ هِيَ خَيْرٌ مِنَ ٱلذَّهَبِ، وَقِنْيَةُ ٱلْفَهْمِ تُخْتَارُ عَلَى ٱلْفِضَّةِ!١٦
17 ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.
مَنْهَجُ ٱلْمُسْتَقِيمِينَ ٱلْحَيَدَانُ عَنِ ٱلشَّرِّ. حَافِظٌ نَفْسَهُ حَافِظٌ طَرِيقَهُ.١٧
18 ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.
قَبْلَ ٱلْكَسْرِ ٱلْكِبْرِيَاءُ، وَقَبْلَ ٱلسُّقُوطِ تَشَامُخُ ٱلرُّوحِ.١٨
19 ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳುವದಕ್ಕಿಂತ, ದೀನರೊಂದಿಗೆ ದೀನ ಆತ್ಮವುಳ್ಳವರಾಗಿ ಇರುವುದು ಉತ್ತಮ.
تَوَاضُعُ ٱلرُّوحِ مَعَ ٱلْوُدَعَاءِ خَيْرٌ مِنْ قَسْمِ ٱلْغَنِيمَةِ مَعَ ٱلْمُتَكَبِّرِينَ.١٩
20 ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು. ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು.
ٱلْفَطِنُ مِنْ جِهَةِ أَمْرٍ يَجِدُ خَيْرًا، وَمَنْ يَتَّكِلُ عَلَى ٱلرَّبِّ فَطُوبَى لَهُ.٢٠
21 ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.
حَكِيمُ ٱلْقَلْبِ يُدْعَى فَهِيمًا، وَحَلَاوَةُ ٱلشَّفَتَيْنِ تَزِيدُ عِلْمًا.٢١
22 ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ.
ٱلْفِطْنَةُ يَنْبُوعُ حَيَاةٍ لِصَاحِبِهَا، وَتَأْدِيبُ ٱلْحَمْقَى حَمَاقَةٌ.٢٢
23 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.
قَلْبُ ٱلْحَكِيمِ يُرْشِدُ فَمَهُ وَيَزِيدُ شَفَتَيْهِ عِلْمًا.٢٣
24 ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ, ಎಲುಬುಗಳಿಗೆ ಕ್ಷೇಮವೂ ಆಗಿವೆ.
اَلْكَلَامُ ٱلْحَسَنُ شَهْدُ عَسَلٍ، حُلْوٌ لِلنَّفْسِ وَشِفَاءٌ لِلْعِظَامِ.٢٤
25 ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.
تُوجَدُ طَرِيقٌ تَظْهَرُ لِلْإِنْسَانِ مُسْتَقِيمَةً وَعَاقِبَتُهَا طُرُقُ ٱلْمَوْتِ.٢٥
26 ದುಡಿಯುವವನಿಗೆ ಅವನ ಹಸಿವೇ ದುಡಿಯುವಂತೆ ಮಾಡುವುದು, ಅವನ ಹಸಿವು ಅವನನ್ನು ಒತ್ತಾಯ ಮಾಡುವುದು.
نَفْسُ ٱلتَّعِبِ تُتْعِبُ لَهُ، لِأَنَّ فَمَهُ يَحِثُّهُ.٢٦
27 ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. ಅವನ ತುಟಿಗಳು ಉರಿಯುವ ಬೆಂಕಿಯಂತಿವೆ.
ٱلرَّجُلُ ٱللَّئِيمُ يَنْبُشُ ٱلشَّرَّ، وَعَلَى شَفَتَيْهِ كَٱلنَّارِ ٱلْمُتَّقِدَةِ.٢٧
28 ಮೂರ್ಖನು ಜಗಳವನ್ನು ಬಿತ್ತುತ್ತಾನೆ. ಚಾಡಿಕೋರನು ಪ್ರಮುಖ ಸ್ನೇಹಿತರನ್ನು ಅಗಲಿಸುತ್ತಾನೆ.
رَجُلُ ٱلْأَكَاذِيبِ يُطْلِقُ ٱلْخُصُومَةَ، وَٱلنَّمَّامُ يُفَرِّقُ ٱلْأَصْدِقَاءَ.٢٨
29 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುತ್ತಾನೆ.
اَلرَّجُلُ ٱلظَّالِمُ يُغْوِي صَاحِبَهُ وَيَسُوقُهُ إِلَى طَرِيقٍ غَيْرِ صَالِحَةٍ.٢٩
30 ವಕ್ರಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ. ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
مَنْ يُغَمِّضُ عَيْنَيْهِ لِيُفَكِّرَ فِي ٱلْأَكَاذِيبِ، وَمَنْ يَعَضُّ شَفَتَيْهِ، فَقَدْ أَكْمَلَ شَرًّا.٣٠
31 ನರೆಗೂದಲು ಉಜ್ವಲ ಕಿರೀಟ, ಅದು ನೀತಿಯ ಜೀವಿತದಲ್ಲಿ ಒದಗುತ್ತದೆ.
تَاجُ جَمَالٍ: شَيْبَةٌ تُوجَدُ فِي طَرِيقِ ٱلْبِرِّ.٣١
32 ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.
اَلْبَطِيءُ ٱلْغَضَبِ خَيْرٌ مِنَ ٱلْجَبَّارِ، وَمَالِكُ رُوحِهِ خَيْرٌ مِمَّنْ يَأْخُذُ مَدِينَةً.٣٢
33 ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.
ٱلْقُرْعَةُ تُلْقَى فِي ٱلْحِضْنِ، وَمِنَ ٱلرَّبِّ كُلُّ حُكْمِهَا.٣٣

< ಜ್ಞಾನೋಕ್ತಿಗಳು 16 >