< ಜ್ಞಾನೋಕ್ತಿಗಳು 20 >
1 ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.
दाखमद्य खिल्ली उडाउने कुरो हो र मदिराचाहिँ कचिङ्गाल मच्चाउने कुरो हो । मदिराद्वारा बहकाइने कोही पनि बुद्धिमान् हुँदैन ।
2 ಅರಸನ ಭಯವು ಸಿಂಹದ ಘರ್ಜನೆಯಂತಿದೆ; ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು.
राजाको डर गर्जिरहेको जवान सिंहको डरजस्तै हुन्छ । तिनलाई रिस उठाउनेले आफ्नो जीवन गुमाउँछ ।
3 ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.
द्वन्द्वलाई हटाउनु हरेकको लागि आदर हो, तर हरेक मूर्खचाहिँ तर्क-वितर्कमा फस्छ ।
4 ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ.
अल्छेले शरद् ऋतुमा जोत्दैन । त्यसले कटनीको बेला फसल खोज्छ, तर केहीँ पाउने छैन ।
5 ಮನುಷ್ಯನ ಹೃದಯದ ಆಲೋಚನೆಯು ಆಳವಾದ ಬಾವಿಯ ನೀರಿನಂತಿದೆ; ವಿವೇಕಿಯು ಅದನ್ನು ಸೇದುವನು.
मानवीय हृदयमा भएको उद्धेश्य गहिरो पानीजस्तै हो, तर समझशक्ति भएको मानिसले यसलाई बाहिर निकाल्ने छ ।
6 ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
धैरेले आफू भक्त भएको घोषणा गर्छन्, तर कसले विश्वासयोग्य जन पाउन सक्छ?
7 ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.
धर्मात्मा आफ्नो सत्यनिष्ठामा चल्छ, र त्यसलाई पछ्याउने त्यसका छोराहरू आशिषित् हुने छन् ।
8 ಅರಸನು ತನ್ನ ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವಾಗ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
न्यायको काम गर्दै सिंहासनमा बस्ने राजाले आफ्नो सामु भएका सबै खराबी आफ्नै आँखाले केलाउँछन् ।
9 “ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು?
कसले भन्न सक्छ, “मैले मेरो हृदय शुद्ध राखेको छु । म मेरो पापबाट सफा छु?”
10 ಮೋಸದ ತೂಕಗಳೂ, ಮೋಸದ ಅಳತೆಗಳೂ ಇವೆರಡೂ ಯೆಹೋವ ದೇವರಿಗೆ ಅಸಹ್ಯ.
नमिल्ने नापहरू असमान ढकहरू दुवैलाई परमप्रभु घृणा गर्नुहुन्छ ।
11 ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ, ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ.
एउटा बालकलाई पनि त्यसका गतिविधिहरूबाट त्यसको आचरण शुद्ध र सोझो छ कि छैन भनेर चिनिन्छ ।
12 ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಯೆಹೋವ ದೇವರು ಉಂಟುಮಾಡಿದ್ದಾನೆ.
सुन्ने कान र देख्ने आँखा दुवैलाई परमप्रभुले बनाउनुभयो ।
13 ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!
निद्रालाई प्रेम नगर्, नत्रता तँ दरिद्र हुने छस् । तेरा आँखा खोल्, र तँसित खानलाई प्रशस्त हुने छ ।
14 “ಇದು ಒಳ್ಳೆಯದಲ್ಲ ಇದು ಒಳ್ಳೆಯದಲ್ಲ!” ಎಂದು ಕೊಳ್ಳುವವನು ಹೇಳುತ್ತಾನೆ; ಆದರೆ ಅವನು ಕೊಂಡು ಹೋದ ಮೇಲೆ ಅದನ್ನೇ ಹೊಗಳುತ್ತಾನೆ.
“यो खराब छ, यो खराब छ,” ग्राहकले भन्छ, तर पर पुगेपछि त्यसले घमण्ड गर्छ ।
15 ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.
सुन छ, र प्रशस्त महङ्गा मणिहरू छन्, तर ज्ञानको ओठ बहुमूल्य रत्न हो ।
16 ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.
परदेशीको जमानी बस्नेको खास्टो पनि खोस्नू, र त्यसले अनैतिक स्त्रीको लागि यसो गरेको भए त्यो धरौटी राख्नू ।
17 ವಂಚನೆಯಿಂದ ಸಿಕ್ಕಿದ ಆಹಾರವು ರುಚಿ; ಆದರೆ ಆಮೇಲೆ ಅವನ ಬಾಯಿಯು ಮರಳಿನಿಂದ ತುಂಬುವುದು.
छलद्वारा प्राप्त रोटीको स्वाद मिठो होला, तर पछि त्यसको मुखभरि रोडा हालेसरह हुन्छ ।
18 ಸಲಹೆಯಿಂದ ಯೋಜನೆಗಳು ನೆರವೆರುವವು; ಜ್ಞಾನಿಯ ಸಲಹೆಯಿಲ್ಲದೆ ಯುದ್ಧಕ್ಕೆ ಹೋಗಬೇಡಿ.
सरसल्लाहद्वारा योजनाहरू स्थापित हुन्छन्, र बुद्धिमान् मार्ग-दर्शनद्वारा मात्र तैँले लडाइँ लड् ।
19 ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ.
कुरौटेले गुप्त कुराहरू बाहिर ल्याउँछ । त्यसैले धेरै कुरा गर्ने मानिसहरूसित सङ्गत नगर् ।
20 ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.
कसैले आफ्नो बुबा वा आफ्नी आमालाई सराप्यो भने निस्पट्ट अन्धकारमा त्यसो बत्ती निभाइने छ ।
21 ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ.
सुरुमा झट्टै प्राप्त गरेको पैतृक-सम्पत्तिले अन्त्यमा थोरै भलाइ गर्ने छ ।
22 ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.
यसो नभन्, “म यस खराबीको बदला लिने छु ।” परमप्रभुको प्रतीक्षा गर्, र उहाँले तँलाई छुटकारा दिनुहुने छ ।
23 ವ್ಯತ್ಯಾಸದ ತೂಕಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಅಪ್ರಾಮಾಣಿಕ ತಕ್ಕಡಿಗಳು ಅವರನ್ನು ಮೆಚ್ಚಿಸುವುದಿಲ್ಲ.
परमप्रभुले असमान ढकहरूलाई घृणा गर्नुहुन्छ, र बेइमान तराजुहरू ठिक होइनन् ।
24 ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು?
मानिसका कदमहरू परमप्रभुद्वारा निर्देशित हुन्छन् भने तब त्यसले कसरी आफ्नो मार्ग बुझ्न सक्ला त?
25 ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.
“यो कुरो पवित्र छ,” भनी हतारमा भन्ने र भाकल गरिसकेपछि मात्र त्यसको बारेमा सोच्नु मानिसको लागि पासो हुन्छ ।
26 ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು.
बुद्धिमान् राजाले दुष्टहरूलाई पन्साउँछन्, र तिनले अन्न चुट्ने चक्काले तिनीहरूलाई प्रहार गर्छन् ।
27 ಮನುಷ್ಯನ ಆತ್ಮವು ಯೆಹೋವ ದೇವರ ದೀಪವಾಗಿದೆ. ಅದು ಅವನ ಅಂತರಂಗವನ್ನು ಶೋಧಿಸುತ್ತದೆ.
मानिसको आत्मा परमप्रभुको बत्ती हो जसले त्यसका भित्री भागहरूको खोजी गर्छ ।
28 ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
करारको विश्वसनीयता र भरोसाले राजालाई जोगाउँछ । प्रेमद्वारा नै तिनको सिंहासन सुरक्षित हुन्छ ।
29 ಯೌವನಸ್ಥರ ಮಹಿಮೆ ಅವರ ಬಲವೇ; ಮುದುಕರ ವೈಭವ ನರೆತ ತಲೆಯೇ.
युवाहरूको महिमा तिनीहरूको शक्ति हो, र पाकाहरूको शोभा तिनीहरूको फुलेको कपाल हो ।
30 ಗಾಯಗೊಳಿಸುವ ಏಟುಗಳು ದುಷ್ಟತ್ವವನ್ನು ತೊಳೆಯುತ್ತವೆ; ಪೆಟ್ಟುಗಳು ಅಂತರಂಗವನ್ನೂ ಶುದ್ಧಿಗೊಳಿಸುತ್ತವೆ.
चोट लगाउने मुक्काले खराबीलाई साफ गर्छ, र पिटाइले भित्री भागहरूलाई शुद्ध पार्छ ।