< ಜ್ಞಾನೋಕ್ತಿಗಳು 29 >
1 ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.
१जर एखाद्या मनुष्यावर खूप दोष असूनही, जो आपली मान ताठ करतो, तो अचानक तुटतो आणि त्यावर काही उपाय चालत नाही.
2 ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.
२जेव्हा नीतिमानाची वाढ होते, लोक आनंदित होतात, पण जेव्हा दुर्जन अधिकार चालवतात तेव्हा लोक शोक करतात.
3 ಜ್ಞಾನಪ್ರಿಯನು ತಂದೆಗೆ ಆನಂದ ಆದರೆ ವೇಶ್ಯೆಯರ ಸಹವಾಸದಿಂದ ಆಸ್ತಿಯ ವಿನಾಶ.
३ज्या कोणाला ज्ञानाची आवड आहे तो आपल्या पित्याला आनंदित करतो, पण जो कोणी वेश्येशी सोबत करतो तर तो आपल्या संपत्तीचा नाश करतो.
4 ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ.
४राजा न्यायाने देश दृढ करतो, पण जो कोणी लाचेची मागणी करतो तो त्याचे वाटोळे करतो.
5 ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ.
५जो कोणी मनुष्य आपल्या शेजाऱ्याची फाजील स्तुती करतो, तो त्याच्या पावलासाठी जाळे पसरतो.
6 ಕೆಟ್ಟವನು ತನ್ನ ಪಾಪದಿಂದಲೇ ಸಿಕ್ಕಿಹಾಕಿಕೊಳ್ಳುತ್ತಾನೆ, ಆದರೆ ನೀತಿವಂತನು ಸಂತೋಷದಿಂದ ಹಾಡಿ ಹರ್ಷಿಸುತ್ತಾನೆ.
६दुष्ट मनुष्य आपल्या स्वतःच्या पापाने पाशात पडतो, पण नीतिमान गाणे गाऊन आनंदित होतो.
7 ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ. ಆದರೆ ದುಷ್ಟನಿಗೆ ಅಂಥಾ ಚಿಂತೆಯೇ ಇಲ್ಲ.
७नीतिमान गरिबांच्या वादासाठी विनंती करतो; दुर्जनाला तो समजण्याची बुद्धी नसते.
8 ಪರಿಹಾಸ್ಯಗಾರರು ಪಟ್ಟಣದಲ್ಲಿ ಗಲಾಟೆ ಎಬ್ಬಿಸುತ್ತಾರೆ. ಆದರೆ ಜ್ಞಾನಿಗಳು ಕೋಪವನ್ನು ಆರಿಸುವರು.
८थट्टा करणारे शहराला पेटवतात; पण सुज्ञजन क्रोधापासून दूर निघून जातात.
9 ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯಮಾಡುವಾಗ, ಮೂರ್ಖನು ರೇಗಿದರೂ ಅಪಹಾಸ್ಯಮಾಡಿದರೂ ಸಮಾಧಾನವೇ ಇರುವುದಿಲ್ಲ.
९जर सुज्ञ मनुष्याचा मूर्खाशी वाद असला तर, मुर्ख रागावला किंवा हसला तरी काही स्वस्थता नसते.
10 ಕೊಲೆಪಾತಕರು ಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ಆದರೆ ಯಥಾರ್ಥವಂತರನ್ನು ನಾಶಮಾಡಲು ಯತ್ನಿಸುತ್ತಾರೆ.
१०रक्तपिपासू सात्विकाचा द्वेष करतात, आणि सरळ मनुष्यास ठार मारण्यासाठी ते त्याचा शोध घेतात.
11 ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು. ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ.
११मूर्ख आपल्या मनातील सारा राग प्रगट करतो, पण शहाणा मनुष्य तो आवरून धरतो आणि शांत राहतो.
12 ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ.
१२जर अधिकाऱ्याने खोट्या गोष्टींकडे लक्ष दिले, तर त्याचे सगळे अधिकारी वाईट होतात.
13 ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು: ಯೆಹೋವ ದೇವರು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವರು ಎಂಬುದೇ.
१३गरीब मनुष्य आणि जुलूम करणारा या दोघांमध्ये एक गोष्ट समान आहे; परमेश्वर दोघांच्याही डोळ्यांना दृष्टी देतो.
14 ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು.
१४जर राजाने गरीबांचा न्याय सत्याने केला, तर त्याचे राजासन सर्वकाळ स्थापित होईल.
15 ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
१५छडी आणि सुबोध ज्ञान देतात, पण मोकळे सोडलेले मूल आपल्या आईला लाज आणते.
16 ದುಷ್ಟರು ವೃದ್ಧಿಯಾದಾಗ, ಪಾಪವು ವೃದ್ಧಿಯಾಗುತ್ತದೆ. ಆದರೆ ನೀತಿವಂತರು ದುಷ್ಟರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
१६जेव्हा दुष्ट वाढतात, तेव्हा अपराध वाढतात; पण धार्मिकांना त्यांचे वतन पाहावयास मिळते.
17 ನಿನ್ನ ಮಕ್ಕಳನ್ನು ಶಿಕ್ಷಿಸಿದರೆ, ಅವರು ನಿನಗೆ ಮನಶಾಂತಿಯನ್ನು ಕೊಡುವರು; ಹೌದು, ಅವರು ನೀನು ಬಯಸುವ ಹರ್ಷವನ್ನು ನಿನಗೆ ತರುವರು.
१७आपल्या मुलाला शिस्त लाव आणि तो तुला विसावा देईल आणि तो तुझा जीव आनंदित करील.
18 ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು.
१८जेथे कोठे भविष्यसूचक दृष्टांत न झाल्यास लोक अनावर होतात, पण जो कोणी नियम पाळतो तो सुखी होतो.
19 ಮಾತಿನಿಂದ ಮಾತ್ರ ಕೆಲಸಗಾರರನ್ನು ತಿದ್ದಲು ಸಾಧ್ಯವಿಲ್ಲ; ಏಕೆಂದರೆ ಅವರು ಅರ್ಥಮಾಡಿಕೊಂಡರೂ, ಅದರಂತೆ ನಡೆಯುವುದಿಲ್ಲ.
१९दास शब्दाने सुधारत नाही, कारण जरी त्यास समजले तरी तो प्रतिसाद देणार नाही.
20 ದುಡುಕಿ ಮಾತನಾಡುವ ವ್ಯಕ್ತಿಯನ್ನು ನೀನು ನೋಡಿದ್ದೀಯೋ? ಅಂಥವನಿಗಿಂತಲೂ ಬುದ್ಧಿಹೀನನ ವಿಷಯದಲ್ಲಿ ಹೆಚ್ಚು ನಿರೀಕ್ಷೆ ಇದೆ.
२०कोणी आपल्या बोलण्यात उतावळा आहे अशा मनुष्यास पाहतोस काय? तर त्याच्यापेक्षा मूर्खाविषयी अधिक आशा आहे.
21 ಬಾಲ್ಯದಿಂದ ಕೆಲಸಗಾರನನ್ನು ಅನುಕೂಲವಾಗಿ ಸಾಕಿ ಬಿಟ್ಟರೆ, ತರುವಾಯ ಅವನು ಎದುರು ಬೀಳಲು ಸಾಧ್ಯ.
२१जर कोणी आपल्या दासास बालपणापासून लाडाने वाढवले तर त्याच्या शेवटी तो त्रासदायकच होईल.
22 ಕೋಪಿಷ್ಟನು ಜಗಳವನ್ನೆಬ್ಬಿಸುವನು, ಮುಂಗೋಪಿಯು ಅನೇಕ ಪಾಪಗಳನ್ನು ಮಾಡುತ್ತಾನೆ.
२२रागावलेला मनुष्य संकटे आणतो; आणि क्रोधी मनुष्याकडून पुष्कळ अपराध घडतात.
23 ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.
२३गर्व मनुष्यास खाली आणतो, पण जो कोणी विनम्र आत्म्याचा असतो त्याचा आदर होतो.
24 ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು. ಅವರು ಆಣೆ ಇಟ್ಟರೂ ಅವರಲ್ಲಿ ಬದಲಾವಣೆ ಇರುವುದಿಲ್ಲ.
२४जो कोणी चोराचा भागीदार होतो, तो स्वतःचाच शत्रू आहे; ते शपथेखाली ठेवले जातात आणि ते काहीच बोलू शकत नाही.
25 ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.
२५मनुष्याची भीती पाशरूप होते, पण जो कोणी परमेश्वरावर विश्वास ठेवतो तो सुरक्षित राहतो.
26 ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ.
२६पुष्कळजन अधिपतीची मर्जी संपादण्याचा शोध करतात, पण परमेश्वरच लोकांचा न्याय करतो.
27 ನೀತಿವಂತರು ಅಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ದುಷ್ಟರು ಪ್ರಾಮಾಣಿಕರನ್ನು ತಿರಸ್ಕರಿಸುತ್ತಾರೆ.
२७अप्रामाणीक मनुष्याचा धार्मिकाला वीट येतो; आणि सरळमार्गी मनुष्याचा दुष्टाला वीट येतो.