< ಕೀರ್ತನೆಗಳು 10 >
1 ಯೆಹೋವ ದೇವರೇ, ನೀವು ದೂರದಲ್ಲಿ ನಿಂತುಕೊಳ್ಳುವುದು ಏಕೆ? ಇಕ್ಕಟ್ಟಿನ ಕಾಲಗಳಲ್ಲಿ ನೀವು ಮರೆಯಾಗಿರುವುದೂ ಏಕೆ?
हे परमप्रभु, तपाईं किन टाढा खडा हुनुहुन्छ? कष्टको समयमा तपाईं किन आफैलाई लुकाउनुहुन्छ?
2 ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.
आफ्नो अहङ्कारको कारणले दुष्ट मानिसहरूले थिचोमिचोमा परेकाहरूलाई लखेट्छन् । तर दुष्टहरूलाई तिनीहरू आफैले बनाएका योजनाहरूका पासोमा पर्न दिनुहोस् ।
3 ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.
किनकि दुष्ट व्यक्तिले आफ्ना गहिरा इच्छाहरूमा घमण्ड गर्छ । त्यसले लालचीलाई आशिष् दिन्छ र परमप्रभुको अपमान गर्छ ।
4 ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.
दुष्ट मानिसको मुहार अहङ्कारपूर्ण छ । त्यसले परमेश्वरलाई खोज्दैन । त्यसले परमेश्वरको बारेमा कदापि विचार गर्दैन किनभने त्यसले उहाँको बारेमा केही वास्तै गर्दैन ।
5 ಅವನ ಮಾರ್ಗಗಳು ಯಾವಾಗಲೂ ಸಮೃದ್ಧಿಯಾಗಿರುತ್ತವೆ; ಆದರೆ ನಿಮ್ಮ ನಿಯಮಗಳು ಅವನ ದೃಷ್ಟಿಗೆ ಬಹು ದೂರವಾಗಿವೆ; ಅವನು ತನ್ನ ಎಲ್ಲಾ ವೈರಿಗಳನ್ನು ಹೀಯಾಳಿಸುತ್ತಾನೆ.
त्यो हर समय ढुक्क हुन्छ, तर तपाईंका धार्मिक आदेशहरू त्यसको निम्ति अति उच्च छन् । त्यसले आफ्ना सबै शत्रुलाई घृणा गर्छ ।
6 ಅವನು ತನ್ನ ಹೃದಯದಲ್ಲಿ ಹೀಗೆ ಹೇಳುವನು, “ಯಾವುದೂ ಎಂದೂ ನನ್ನನ್ನು ಕದಲಿಸುವುದಿಲ್ಲ.” ಅವನು ಹೀಗೆ ಶಪಥ ಮಾಡುವನು, “ಯಾರೂ ಎಂದಿಗೂ ನನಗೆ ಕೇಡುಮಾಡಲಾರರು.”
त्यसले आफ्नो मनमा भन्छ, “म कहिल्यै असफल हुन्नँ । सारा पुस्ताभरि नै मैले दुर्दिन देख्नेछैन ।”
7 ಅವನ ಬಾಯಿ ಸುಳ್ಳಿನಿಂದಲೂ ಬೆದರಿಕೆಯಿಂದಲೂ ತುಂಬಿದೆ. ಕೇಡೂ ನಾಶನವೂ ಅವನ ನಾಲಿಗೆಯ ಕೆಳಗೆ ಇರುತ್ತವೆ.
त्यसको मुख सराप, छलले र हानिकारक शब्दहरूले पूर्ण हुन्छ । त्यसको जिब्रोले घायल पार्छ र नाश गर्छ ।
8 ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ;
त्यो गाउँको नजिकै ढुकेर बस्छ । गुप्त ठाउँहरूमा त्यसले निर्दोषको हत्या गर्छ । त्यसका आँखाले बेसाहारा पिडितलाई खोज्छ ।
9 ಸಿಂಹದ ಹಾಗೆ, ಮರೆಯಲ್ಲಿ ಹೊಂಚುಹಾಕುತ್ತಾನೆ; ಅಸಹಾಯಕರನ್ನು ಹಿಡಿಯಲು ಕಾಯುತ್ತಾನೆ ಕುಗ್ಗಿದವನನ್ನು ಹಿಡಿದೆಳೆದು ತನ್ನ ಬಲೆಯಲ್ಲಿ ಹಾಕುತ್ತಾನೆ.
सिंह झाडीमा लुकेझैं त्यो गुप्तमा ढुक्छ । थिचोमिचोमा परेकाहरूलाई समात्न त्यो पर्खेर बस्छ । त्यसले आफ्नो जाल तान्दा थिचोमिचोमा परेकाहरूलाई समाउँछ ।
10 ಅವನ ಕೈಯಲ್ಲಿ ಸಿಕ್ಕುವವರು ಜಜ್ಜಿಹೋಗುತ್ತಾರೆ, ಅವನ ಬಲದ ಎದುರು ಸೋತುಹೋಗುತ್ತಾರೆ.
त्यसका पन्जामा परेकाहरूलाई टेकिन्छन् र पिटिन्छन् । तिनीहरू त्यसको बलियो जालहरूमा फस्छन् ।
11 “ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.
त्यसले आफ्नो मनमा भन्छ, “परमेश्वरले बिर्सनुभएको छ । उहाँले आफ्नो मुहार ढाक्नुहुन्छ । उहाँले हेर्ने कष्ट गर्नुहुनेछैन ।”
12 ಯೆಹೋವ ದೇವರೇ, ಎದ್ದೇಳಿರಿ! ದೇವರೇ, ನಿಮ್ಮ ಕೈ ಎತ್ತಿರಿ. ನಿಸ್ಸಹಾಯಕರನ್ನು ಮರೆಯಬೇಡಿರಿ.
हे परमप्रभु, उठ्नुहोस्! हे परमेश्वर, आफ्नो हात उठाउनुहोस्! तिचिएकाहरूलाई नबिर्सनुहोस् ।
13 ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ? “ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ,” ಎಂದು ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?
किन दुष्ट मानिसले परमेश्वरलाई इन्कार गर्छन् र आफ्नो हृदयमा यसो भन्छ, “तपाईंले मलाई जवाफदेही बनाउनु हुनेछैन”?
14 ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.
तपाईंले ध्यान दिनुभएको छ, किनकि विपद र दुःख ल्याउनेलाई तपाईंले सदासर्वदा हेर्नुहुन्छ । बेसाहाराले आफैलाई तपाईंमा सुम्पन्छ । तपाईंले अनाथहरूलाई छुटकारा दिनुहुन्छ ।
15 ದುಷ್ಟನ ಭುಜಬಲವನ್ನು ಮುರಿದುಬಿಡಿರಿ; ಕೆಟ್ಟದ್ದನ್ನು ಮಾಡುವವರಿಗೆ ಅವರ ಕೆಟ್ಟತನಕ್ಕೆ ಲೆಕ್ಕ ಕೇಳಿರಿ; ಇಲ್ಲದಿದ್ದರೆ ನೀವು ಅವನನ್ನು ಲೆಕ್ಕ ಕೇಳುವುದಿಲ್ಲ ಅಂದುಕೊಳ್ಳುವನು.
दुष्ट र खराब मानिसहरूको पाखुरा भाँच्नुहोस् । त्यसलाई आफ्नो दुष्ट कामहरूको लेखा लिनुहोस्, जुन तपाईंले पत्ता लगाउनु हुन्न भनी त्यसले सोच्यो ।
16 ಯೆಹೋವ ದೇವರು ಯುಗಯುಗಾಂತರಗಳಿಗೂ ಅರಸರಾಗಿದ್ದಾರೆ; ರಾಷ್ಟ್ರಗಳು ಅವರ ದೇಶದೊಳಗಿಂದ ಹೊರಹಾಕಲಾಯಿತು.
परमप्रभु सदासर्वदा राजा हुनुहुन्छ । जातिहरू उहाँको देशबाट लखेटिन्छन् ।
17 ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.
हे परमप्रभु, थिचोमिचोमा परेकाहरूको खाँचोहरूका बारेमा तपाईंले सुन्नुभएको छ । तपाईंले तिनीहरूका हृदयलाई मजबुत पार्नुहुन्छ, तपाईंले तिनीहरूका प्रार्थना सुन्नुहुन्छ ।
18 ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.
तपाईंले अनाथहरू र थिचोमिचोमा परेकाहरूको रक्षा गर्नुहुन्छ ताकि पृथ्वीका कुनै पनि मानिसले फेरि आतङ्कित नपारोस् ।