< ಕೀರ್ತನೆಗಳು 32 >

1 ದಾವೀದನ ಕೀರ್ತನೆ. ಮಾಸ್ಕಿಲ ಪದ್ಯ. ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.
दाविदाचे स्तोत्र; मासकील (शिक्षण) ज्याच्या अपराधांना क्षमा केली गेली आहे, ज्याचे अपराध झाकले गेले आहेत ते आशीर्वादित आहेस.
2 ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.
परमेश्वर ज्याच्या ठायी काही अपराध गणत नाही, आणि ज्याच्या आत्म्यात कपट नाही तो सुखी आहे.
3 ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದು ಹೋದವು.
मी गप्प राहिलो, तेव्हा पूर्ण दिवस माझ्या, ओरडण्याने माझी हाडे जर्जर झाली.
4 ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.
कारण रात्रंदिवस तुझा हात माझ्यावर भारी होता. उन्हाळ्यात उष्णतेमुळे माझी शक्ती सुकून गेली आहे.
5 ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.
तेव्हा मी परमेश्वरासमोर माझे अपराध कबूल केले, आणि मी माझा अपराध लपवला नाही, मी म्हणालो, परमेश्वरासमोर मी आपले पाप कबूल करीन, आणि तू मला माझ्या सर्व अपराधांबद्दल क्षमा केलीस.
6 ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.
याच कारणास्तव प्रत्येक देवभक्त तू पावशील तेव्हा तुझी प्रार्थना करो. संकटे जेव्हा महापुरासारखी येतात तेव्हा ती तुझ्या भक्तांपर्यंत नक्कीच जाणार नाहीत.
7 ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ; ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ.
तू माझे लपण्याचे ठिकाण आहेस. तू मला संकटांपासून वाचवशील, विजयाच्या गीताने तू मला वेढशील. (सेला)
8 ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.
परमेश्वर म्हणतो, “मी तुला बोध करीन आणि ज्या मार्गात, तू चालावे तो मी तुला शिकवीन. तुझ्यावर माझी नजर ठेवून मी तुला बोध करीन.
9 ವಿವೇಕವಿಲ್ಲದ ಕುದುರೆಯ ಹಾಗೆಯೂ, ಹೇಸರಗತ್ತೆಯ ಹಾಗೆಯೂ ಇರಬೇಡಿರಿ; ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.
म्हणून घोड्यासारखा व गाढवासारखा मूर्ख होऊ नकोस, ज्यांना काही समजत नाही. त्यांना आवरण्यासाठी लगाम व बागदोर असलाच पाहिजे. नाहीतर ते तुमच्या जवळ येणार नाहीत.”
10 ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು.
१०वाईट लोकांस खूप दु: ख भोगावे लागेल, परंतु जे परमेश्वरावर विश्वास ठेवतात त्यांच्या भोवती देवाच्या खऱ्या प्रेमाचे कडे आहे.
11 ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.
११अहो न्यायी जनहो, परमेश्वराच्या ठायी आनंद व हर्ष करा. अहो सरळ जनहो हर्षाने तुम्ही जल्लोष करा.

< ಕೀರ್ತನೆಗಳು 32 >