< ಕೀರ್ತನೆಗಳು 58 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಅಲ್ತಷ್ಖೇತೆಂಬ ರಾಗವನ್ನು ಆಧರಿಸಿದೆ. ದಾವೀದನ ಮಿಕ್ಟಮ್ ಹಾಡಿನ ಸಂಯೋಜನೆ. ದಾವೀದನ ಕೀರ್ತನೆ. ಜನನಾಯಕರೇ, ನೀವು ನ್ಯಾಯವಾಗಿ ತೀರ್ಪನ್ನು ನುಡಿಯುತ್ತೀರೋ? ಜನರಲ್ಲಿ ನೀವು ಯಥಾರ್ಥವಾಗಿ ನ್ಯಾಯತೀರಿಸುವಿರೋ?
संगीत निर्देशक के लिये. “अलतशख़ेथ” धुन पर आधारित. दावीद की मिकताम गीत रचना. न्यायाधीशो, क्या वास्तव में तुम्हारा निर्णय न्याय संगत होता है? क्या, तुम्हारा निर्णय वास्तव में निष्पक्ष ही होता है?
2 ಇಲ್ಲಾ, ನಿಮ್ಮ ಹೃದಯದಲ್ಲಿ ದುಷ್ಟತನವನ್ನು ಕಲ್ಪಿಸುತ್ತೀರಲ್ಲಾ, ದೇಶದಲ್ಲಿ ನಿಮ್ಮ ಕೈಗಳಿಂದ ಹಿಂಸಾಚಾರವನ್ನು ತೂಗುತ್ತೀರಲ್ಲಾ.
नहीं, मन ही मन तुम अन्यायपूर्ण युक्ति करते रहते हो, पृथ्वी पर तुम हिंसा परोसते हो.
3 ದುಷ್ಟರು ಗರ್ಭದಿಂದಲೇ ದಾರಿತಪ್ಪುತ್ತಾರೆ. ಹುಟ್ಟಿದಂದಿನಿಂದಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
दुष्ट लोग जन्म से ही फिसलते हैं, गर्भ से ही; परमेश्वर से झूठ बोलते हुए भटक जाते है.
4 ಹಾವಿನ ವಿಷದ ಹಾಗೆ ಅವರಲ್ಲಿ ವಿಷ ಇದೆ. ಘಟಸರ್ಪದ ಹಾಗೆ ಮಂದವಾಗಿದ್ದಾರೆ.
उनका विष विषैले सर्प का विष है, उस बहरे सर्प के समान, जिसने अपने कान बंद कर रखे हैं.
5 ಚಮತ್ಕಾರದಿಂದ ಆಕರ್ಷಿಸಿ, ಕೌಶಲ್ಯದಿಂದ ನುಡಿಸುವ ಹಾವಾಡಿಗನ ನಾದವನ್ನು ಕೇಳದ ಹಾವಿನಂತೆ ಇದ್ದಾರೆ.
कि अब उसे संपेरे की धुन सुनाई न दे, चाहे वह कितना ही मधुर संगीत प्रस्तुत करे.
6 ಓ, ದೇವರೇ, ಅವರ ಹಲ್ಲುಗಳು ಮುರಿದು ಬೀಳಲಿ. ಯೆಹೋವ ದೇವರೇ, ಪ್ರಾಯದ ಸಿಂಹಗಳಂತಿರುವ ಅವರ ಕೋರೆಹಲ್ಲುಗಳು ನಾಶವಾಗಲಿ.
परमेश्वर, उनके मुख के भीतर ही उनके दांत तोड़ दीजिए; याहवेह, इन सिंहों के दाढों को ही उखाड़ दीजिए!
7 ಅವರು ನೀರಿನಂತೆ ಕರಗಿಹೋಗಲಿ. ಅವರು ತಮ್ಮ ಬಾಣಗಳನ್ನು ಗುರಿಯಿಡುವಾಗ ಡೊಂಕಾಗಿ ಹೋಗಲಿ.
वे जल के जैसे बहकर विलीन हो जाएं; जब वे धनुष तानें, उनके बाण निशाने तक नहीं पहुंचें.
8 ಕರಗುವ ಗೊಂಡೆ ಹುಳದಂತೆ ಅವರು ನಾಶವಾಗಲಿ. ದಿನತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ಕಾಣದಿರಲಿ.
वे उस घोंघे के समान हो जाएं, जो सरकते-सरकते ही गल जाता है, अथवा उस मृत जन्मे शिशु के समान, जिसके लिए सूर्य प्रकाश का अनुभव असंभव है.
9 ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ.
इसके पूर्व कि कंटीली झाड़ियों में लगाई अग्नि का ताप पकाने के पात्र तक पहुंचे, वह जले अथवा अनजले दोनों ही को बवंडर में उड़ा देंगे.
10 ನೀತಿವಂತರು ದುಷ್ಟರಿಗಾಗುವ ಪ್ರತಿದಂಡನೆಯನ್ನು ಕಂಡು ಹಿಗ್ಗಿ ತಮ್ಮ ಪಾದಗಳನ್ನು ದುಷ್ಟನ ರಕ್ತದ ಮೇಲಿಡಲಿ.
धर्मी के लिए ऐसा पलटा आनन्द-दायक होगा, वह दुष्टों के रक्त में अपने पांव धोएगा.
11 ಆಗ ಜನರು ಹೀಗೆ ಹೇಳಿಕೊಳ್ಳುವರು, “ನಿಶ್ಚಯವಾಗಿ ನೀತಿವಂತನಿಗೆ ಫಲವಿದೆ. ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯತೀರಿಸುವ ದೇವರು ಇದ್ದಾರೆ.”
तब मनुष्य यह कह उठेंगे, “निश्चय धर्मी उत्तम प्रतिफल प्राप्‍त करते हैं; यह सत्य है कि परमेश्वर हैं और वह पृथ्वी पर न्याय करते हैं.”

< ಕೀರ್ತನೆಗಳು 58 >