< ಕೀರ್ತನೆಗಳು 94 >

1 ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.
हे परमेश्वरा, देवा तुझ्याकडे सूड घेणे आहे, तुझ्याकडे सूड घेणे आहे; तू हे देवा आपले तेज प्रगट कर.
2 ಭೂಲೋಕದ ನ್ಯಾಯಾಧಿಪತಿಯೇ, ಗರ್ವಿಷ್ಠರಿಗೆ ತಕ್ಕ ಪ್ರತೀಕಾರವನ್ನು ಸಲ್ಲಿಸ ಬನ್ನಿರಿ.
पृथ्वीच्या न्यायाधीशा, ऊठ, गर्विष्ठांना त्यांचे उचित प्रतिफल दे.
3 ಯೆಹೋವ ದೇವರೇ, ಎಲ್ಲಿಯವರೆಗೆ? ದುಷ್ಟರು ಎಷ್ಟರವರೆಗೆ ಹಿಗ್ಗುತ್ತಿರಬೇಕು?
हे परमेश्वरा, दुष्ट किती काळ, दुष्ट किती काळ विजयोत्सव करतील?
4 ಕೆಡುಕರು ಉಬ್ಬಿಕೊಂಡು ಮಾತನಾಡುತ್ತಾರೆ. ಕೇಡು ಮಾಡುವವರೆಲ್ಲರೂ ಕೊಚ್ಚಿಕೊಳ್ಳುತ್ತಾರೆ.
ते बडबड करतात आणि उर्मटपणे बोलतात आणि फुशारकी मारतात.
5 ಯೆಹೋವ ದೇವರೇ, ನಿಮ್ಮ ಜನರನ್ನು ಅವರು ಕುಗ್ಗಿಸುತ್ತಾರೆ. ನಿಮ್ಮ ಬಾಧ್ಯತೆಯನ್ನು ಬಾಧಿಸುತ್ತಾರೆ.
हे परमेश्वरा, ते तुझ्या लोकांस चिरडतात; जे तुझ्या मालकीचे राष्ट्र आहे त्यांना ते पीडितात.
6 ವಿಧವೆಯನ್ನೂ ಪರದೇಶಸ್ಥನನ್ನೂ ಅವರು ಹತ್ಯಮಾಡುತ್ತಾರೆ. ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
ते विधवांना आणि उपऱ्यांचा जीव घेतात, आणि ते अनाथांचा खून करतात.
7 “ಯೆಹೋವ ದೇವರು ನೋಡುವುದಿಲ್ಲ, ಯಾಕೋಬನ ದೇವರು ಗ್ರಹಿಸುವುದಿಲ್ಲ,” ಎಂದು ಅವರು ಹೇಳುತ್ತಾರೆ.
ते म्हणतात की, परमेश्वर बघणार नाही, याकोबाचा देव लक्ष देत नाही.
8 ಜನರಲ್ಲಿ ಬುದ್ಧಿಹೀನರೇ, ನೀವು ಗ್ರಹಿಸಿರಿ. ಮೂರ್ಖರೇ, ಯಾವಾಗ ಬುದ್ಧಿವಂತರಾಗುವಿರಿ?
अहो तुम्ही मूर्ख लोकांनो, समजून घ्या; मूर्खांनो, तुम्ही कधीपर्यंत शिकणार आहात?
9 ಕಿವಿಯನ್ನು ನಿರ್ಮಿಸಿದ ದೇವರು ಕೇಳದಿರುವರೇ? ಕಣ್ಣನ್ನು ರೂಪಿಸಿದವರು ನೋಡುವುದಿಲ್ಲವೇ?
ज्याने आपला कान घडविला तो ऐकणार नाही काय? ज्याने आपला डोळा बनविला तो पाहणार नाही काय?
10 ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ? ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ?
१०जो राष्ट्रांना शिस्त लावतो, तो शिक्षा करणार नाही का? जो मनुष्यांना ज्ञान शिकवतो. तो अज्ञानी असणार का?
11 ಮನುಷ್ಯನ ಯೋಚನೆಗಳು ವ್ಯರ್ಥವಾದವುಗಳೆಂದು ಯೆಹೋವ ದೇವರು ತಿಳಿದುಕೊಳ್ಳುತ್ತಾರೆ.
११परमेश्वर मनुष्यांचे विचार जाणतो, ते भ्रष्ट आहेत.
12 ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು.
१२हे परमेश्वरा ज्या मनुष्यास तू शिस्त लावतोस, ज्याला आपल्या नियमशास्रातून शिकवितोस तो आशीर्वादित आहे.
13 ದುಷ್ಟನಿಗಾಗಿ ಕುಣಿಯು ಅಗಿಯುವವರೆಗೆ ಅಂಥವನಿಗೆ ವಿಶ್ರಾಂತಿಯನ್ನು ಕೊಡುವಿರಿ.
१३दुष्टासाठी खाच खणली जाईपर्यंत, तू त्यास संकटसमयी विसावा देशील.
14 ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.
१४कारण परमेश्वर आपल्या लोकांस किंवा आपल्या वतनाला सोडून देणार नाही.
15 ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು.
१५कारण न्याय नितीमानाकडे वळेल; आणि सरळ मनाचे सर्व तो अनुसरतील.
16 ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು?
१६माझ्यासाठी दुष्कर्म करणाऱ्याविरूद्ध कोण लढेल? अन्याय करणाऱ्याविरूद्ध माझ्यासाठी कोण उभा राहिल?
17 ಯೆಹೋವ ದೇವರು ನನಗೆ ಸಹಾಯ ಕೊಡದಿದ್ದರೆ, ನಾನು ಬೇಗನೇ ಮರಣದ ಮೌನದಲ್ಲಿ ವಾಸಿಸುತ್ತಿದ್ದೆನು.
१७जर परमेश्वराने मला मदत केली नसती, तर माझा जीव निवांतस्थानी कधीच जाऊन पडला असता.
18 “ನನ್ನ ಕಾಲು ಜಾರುತ್ತಿದೆ,” ಎಂದು ನಾನು ಹೇಳುತ್ತಿರುವಾಗಲೇ, ಯೆಹೋವ ದೇವರೇ, ನಿಮ್ಮ ಪ್ರೀತಿಯು ನನ್ನನ್ನು ಎತ್ತಿ ಹಿಡಿಯಿತು.
१८जेव्हा मी म्हणतो, माझा पाय घसरला आहे, तेव्हा, परमेश्वरा, तुझा विश्वासाचा करार मला उचलून धरतो.
19 ನನ್ನ ಚಿಂತೆಗಳು ನನ್ನೊಳಗೆ ಹೆಚ್ಚುತ್ತಿರುವಾಗ, ನಿಮ್ಮ ಸಂತೈಸುವಿಕೆಯು ನನ್ನ ಮನಸ್ಸನ್ನು ಆನಂದಪಡಿಸುತ್ತದೆ.
१९जेव्हा माझे मन खूप चिंताग्रस्त होते तेव्हा तुझ्यापसून लाभणारे सांत्वन माझ्या जिवाला आनंदित करते.
20 ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು ನಿಮ್ಮ ಸಂಗಡ ಅನ್ಯೋನ್ಯವಾಗಿರುವುದೋ?
२०जे दुष्टपणाचे राजासन कायद्याने अरिष्ट योजते ते तुझ्याशी संबंध ठेवाल काय?
21 ನೀತಿವಂತನ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ಅವರ ನಿರಪರಾಧಿಗಳನ್ನು ಮರಣಕ್ಕೆ ಒಪ್ಪಿಸುತ್ತಾರೆ.
२१ते नितीमानाच्या जिवाविरूद्ध एकवट होतात, आणि निर्दोष्यांस देहांत शिक्षा देतात;
22 ಆದರೆ ಯೆಹೋವ ದೇವರು ನನಗೆ ದುರ್ಗವೂ, ನನ್ನ ದೇವರೂ, ನನ್ನ ಆಶ್ರಯದ ಬಂಡೆಯೂ ಆಗಿದ್ದಾರೆ.
२२परंतु परमेश्वर माझा उंच बुरुज आहे, आणि माझा देव मला आश्रयाचा खडक आहे.
23 ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು.
२३त्याने त्यांचा अन्याय त्यांच्यावरच आणला आहे; आणि त्यांच्याच दुष्टपणात तो त्यांना नाहीसे करील. आमचा देव परमेश्वर त्यांना नाहीसे करील.

< ಕೀರ್ತನೆಗಳು 94 >