< ರೋಮಾಪುರದವರಿಗೆ 10 >

1 ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.
हे बिश्वासी भाईयो, मेरै मन की इच्छा अर मेरे यहूदी माणसां खात्तर, परमेसवर तै मेरी याए प्रार्थना सै के वे बचाए जावै।
2 ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ.
क्यूँके मै उनकी गवाही द्यूँ सूं, के उन ताहीं परमेसवर कै खात्तर उत्साह रहवै सै, पर सही समझकै गेल्या न्ही।
3 ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.
क्यूँके वा धार्मिकता जो परमेसवर की ओड़ तै आवै सै, उस ताहीं वे समझण म्ह नाकामयाब रहे अर अपणे तरिक्कें तै धर्मी बणण की कोशिश करी, वे परमेसवर की धार्मिकता के अधीन न्ही होए।
4 ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.
क्यूँके मसीह नै पैहले तै ए उस मकसद ताहीं पूरा कर लिया सै। जिस खात्तर नियम-कायदे दिए गये थे, उसका नतिज्जां यो होया के जो यीशु मसीह पै बिश्वास करै सै वो धर्मी बणाए जावैंगे।
5 ನಿಯಮದಿಂದ ಬರುವ ನೀತಿಯ ಬಗ್ಗೆ ಮೋಶೆಯು ಬರೆದಿರುವುದು ಏನೆಂದರೆ: “ನಿಯಮದಲ್ಲಿ ಬರೆದಿರುವ ಎಲ್ಲವನ್ನೂ ಮಾಡುವವರೇ ಬಾಳುವವರು,” ಎಂಬುದಾಗಿ ಬರೆದನು.
क्यूँके मूसा नबी नै नियम-कायदा तै धर्मी बणण के बारें म्ह पवित्र ग्रन्थ म्ह यो लिख्या सै, के जो माणस उननै मान्नै सै, वो इस्से कारण तै जिन्दा रह्वैगा।
6 ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’
पर बिश्वास के जरिये धर्मी बणाये जाण के बारें म्ह पवित्र ग्रन्थ या कहवै सै, के “तू अपणे मन म्ह न्यू ना कहिये, के मसीह ताहीं नीच्चै ल्याण खात्तर सुर्ग पै कौण चढ़ैगा?”
7 ಅಥವಾ, ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು ಯಾರು ಪಾತಾಳಕ್ಕೆ ಇಳಿದು ಹೋಗುವರು?’ ಎಂದು ಮನಸ್ಸಿನಲ್ಲಿ ಹೇಳಿಕೊಳ್ಳಬೇಡ.” (Abyssos g12)
या “अधोलोक म्ह कौण उतरैगा?” (यानिके मसीह ताहीं मरे होया म्ह तै जिन्दा उप्पर लाण कै खात्तर!) (Abyssos g12)
8 ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.
पर के कहवै सै, योए के “परमेसवर का वचन तेरे धोरै सै, ताके तू उसनै अपणे मुँह तै अंगीकार कर सकै अर अपणे मन म्ह राक्ख सकै,” यो वोए बिश्वास का वचन सै, जो हम प्रचार करा सां।
9 ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.
जै तू माणसां के स्याम्ही यीशु नै प्रभु मान ले, अर अपणे मन तै बिश्वास करै के परमेसवर नै उस ताहीं मरे होया म्ह तै जिन्दा करया, तो परमेसवर तन्नै बचावैगा।
10 ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.
क्यूँके हम अपणे मन तै बिश्वास करां सां, तो हम परमेसवर के जरिये धर्मी बणाए जावै सै, अर हम मुँह तै अंगीकार करां सां, के हम मसीह पै बिश्वास करां सां, तो इस करकै हम बच जावांगे।
11 ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.”
क्यूँके यशायाह नै पवित्र ग्रन्थ म्ह मसीह के बारें म्ह यो लिख्या सै, “जो कोए उसपै बिश्वास करैगा वो शर्मिन्दा कोनी होवैगा।”
12 ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.
यहूदियाँ अर यूनानियाँ म्ह किमे फर्क कोनी, ज्यांतै के परमेसवर सारया का प्रभु सै, जो उसका नाम लेवै सै उस ताहीं वो बचावै सै।
13 ಏಕೆಂದರೆ, “ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.”
क्यूँके पवित्र ग्रन्थ म्ह लिख्या सै के “जो कोए प्रभु का नाम लेवैगा, वो बचाया जावैगा।”
14 ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ?
पर जिन माणसां नै मसीह पै बिश्वास न्ही करया, तो वे उसनै मदद खात्तर किस तरियां पुकारैंगे? अर जिसकै बारें म्ह सुण्या न्ही उसपै किस तरियां बिश्वास करैंगें? अर वे किस तरियां सुणैगें जिब तक कोए प्रचारक ना जावै।
15 ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.
जै प्रचारक भेज्जे ना जावै, तो किस तरियां प्रचार करै? जिसा पवित्र ग्रन्थ म्ह लिख्या सै, “जो आच्छी बात्तां का सुसमाचार लेकै आवै सै, उनके पाँव कितने सुहावने सै।”
16 ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.
पर सारया नै उस सुसमाचार पै बिश्वास कोनी करया जिसा यशायाह नबी कहवै सै, “हे प्रभु, किस्से नै भी म्हारै सन्देस पै बिश्वास न्ही करया?”
17 ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.
पर मसीह के बारें म्ह वचन सुणण तै बिश्वास होवै सै।
18 ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”
पर मै पूच्छु सूं, के यहूदियाँ नै, मसीह के बारें म्ह न्ही सुण्या? सुण्या तो जरुर सै, क्यूँके पवित्र ग्रन्थ म्ह लिख्या सै, “उनके बोल साब्ती धरती पै, अर उनके वचन दुनिया के कुणे ताहीं पोंहोचगे सै।”
19 ಆದರೆ ಇಸ್ರಾಯೇಲರಿಗೆ ಅರ್ಥವಾಗಲಿಲ್ಲವೇ? ಎಂದು ನಾನು ಪ್ರಶ್ನಿಸುತ್ತೇನೆ. ಮೊದಲನೆಯದಾಗಿ ಮೋಶೆಯು, “ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ತಿಳುವಳಿಕೆಯಿಲ್ಲದ ಜನಾಂಗದವರ ಮೂಲಕ ನೀವು ಕೋಪಗೊಳ್ಳುವಂತೆ ಮಾಡುವೆನು,” ಎಂದು ಹೇಳುತ್ತಾನೆ.
फेर मै पूच्छु सूं, के इस्राएली लोग मसीह के बारें म्ह सन्देस ताहीं समझै सै? पैहल्या तो प्रभु नै मूसा नबी के जरिये यो कह्या, “मै उन गैर यहूदियाँ के जरिये थारे मन म्ह जळण पैदा करुँगा, मै थमनै यहूदियाँ कै जरिये मूर्ख समझण आळे माणसां तै गुस्सा दिलाऊँगा।”
20 ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.
फेर जो बात प्रभु नै कही वा बात यशायाह नबी बड़ी हिम्मत करकै कहवै सै, “जो मन्नै न्ही टोहवैं थे, उननै मेरै ताहीं पा लिया, अर जो मन्नै बुझ्झै भी कोनी थे, उनपै मै जाहिर होया।”
21 ಆದರೆ ಇಸ್ರಾಯೇಲರ ಕುರಿತಾಗಿ, “ನನಗೆ ಅವಿಧೇಯರೂ ಎದುರುಮಾತಾಡುವವರೂ ಆಗಿರುವ ಜನರಿಗೆ, ದಿನವೆಲ್ಲಾ ನಾನು ಕೈಚಾಚಿ ಕರೆದೆನು,” ಎಂದು ಹೇಳುತ್ತಾನೆ.
पर इस्राएल देश के माणसां कै बारै म्ह, परमेसवर यशायाह नबी के जरिये न्यू भी कहवै सै, “मै सारा दिन अपणे हाथ, एक हुकम ना मानण आळी अर विवाद करण आळी प्रजा कै कान्ही पसारे रहया।”

< ರೋಮಾಪುರದವರಿಗೆ 10 >