< लूका 9 >
1 तब यीशु न बारयी चेला ख बुलाय क उन्ख सब दुष्ट आत्मावों अऊर बीमारियों ख दूर करन की सामर्थ अऊर अधिकार दियो,
೧ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,
2 अऊर उन्ख स्वर्ग को राज्य को प्रचार करन अऊर बीमारों ख अच्छो करन लायी भेज्यो।
೨ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.
3 ओन उन्को सी कह्यो, “रस्ता लायी कुछ मत लेवो, नहीं लाठी, नहीं झोला, नहीं रोटी, नहीं रुपया अऊर नहीं दोय-दोय कुरता।
೩ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.
4 जो कोयी घर म तुम जावो, उतच रहो, अऊर उतच सी बिदा हो।
೪ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ.
5 जो कोयी तुम्ख स्वीकार नहीं करेंन, ऊ नगर सी निकलतो हुयो अपनो पाय की धूरला झाड़तो हुयो वापस लौट जावो कि उन पर गवाही होय।”
೫ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.
6 येकोलायी हि निकल क गांव-गांव सुसमाचार सुनावतो, अऊर जित उत लोगों ख चंगो करतो हुयो फिरत रह्यो।
೬ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಿಗಳನ್ನು ವಾಸಿಮಾಡುತ್ತಿದ್ದರು.
7 देश को चौथाई को राजा हेरोदेस जो गलील को शासक होतो यो सब सुन क घबराय गयो, कहालीकि कुछ न कह्यो कि यूहन्ना बपतिस्मा देन वालो मरयो हुयो म सी फिर सी जीन्दो भयो हय,
೭ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ,
8 अऊर कुछ न यो कह्यो कि एलिय्याह दिखायी दियो हय, अऊर दूसरों न यो कि पुरानो भविष्यवक्तावों म सी कोयी फिर सी जीन्दो भयो हय।
೮ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು.
9 पर हेरोदेस न कह्यो, “यूहन्ना को मुंड त मय न कटवाय दियो, अब यो कौन आय जेको बारे म असी बाते सुनू हय?” अऊर ओन यीशु ख देखन की इच्छा करी।
೯ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.
10 तब प्रेरितों न लौट क जो कुछ उन्न करयो होतो, यीशु ख बताय दियो; अऊर ऊ उन्ख अलग कर क् बैतसैदा नाम को नगर ख ले गयो।
೧೦ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.
11 यो जान क भीड़ ओको पीछू भय गयी, अऊर ऊ खुशी को संग उन्को सी मिल्यो, अऊर उन्को सी परमेश्वर को राज्य की बाते करन लग्यो, अऊर जो चंगो होनो चाहत होतो उन्ख चंगो करयो।
೧೧ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.
12 जब दिन डुबन लग्यो त बारा चेलावों न आय क ओको सी कह्यो, “भीड़ ख बिदा कर कि चारों तरफ को गांवो अऊर बस्तियों म जाय क रूकन की अऊर जेवन को व्यवस्था करेंन, कहालीकि हम इत सुनसान जागा म हंय।”
೧೨ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,
13 यीशु न उन्को सी कह्यो, “तुमच उन्ख खान ख दे।” उन्न कह्यो, “हमरो जवर पाच रोटी अऊर दोय मच्छी ख छोड़ अऊर कुछ नहाय; पर हां, यदि हम जाय क इन सब लोगों लायी भोजन ले लेबो, त होय सकय हय।” हि लोग त पाच हजार पुरुषों को लगभग होतो।
೧೩ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.
14 तब यीशु न अपनो चेलावों सी कह्यो, “उन्ख पचास-पचास कर क् पंगत-पंगत सी बैठाय दे।”
೧೪ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, “ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ” ಎಂದು ಹೇಳಲು,
15 उन्न असोच करयो, अऊर सब ख बैठाय दियो।
೧೫ಅವರು ಅದರಂತೆ ಮಾಡಿ ಎಲ್ಲರನ್ನೂ ಕುಳ್ಳಿರಿಸಿದರು.
16 तब यीशु न हि पाच रोटी अऊर दोय मच्छी धरी, अऊर स्वर्ग की तरफ देख क परमेश्वर ख धन्यवाद करयो, अऊर तोड़-तोड़ क चेलावों ख देतो गयो कि लोगों ख परोसो।
೧೬ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.
17 तब सब खाय क सन्तुष्ट भयो, अऊर चेलावों न बच्यो हुयो टुकड़ा सी भरी बारा टोकनी उठायी।
೧೭ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.
18 जब यीशु एकान्त जागा म प्रार्थना कर रह्यो होतो अऊर चेला ओको संग होतो, त ओन उन्को सी पुच्छ्यो, “लोग मोख का कह्य हंय?”
೧೮ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು,
19 उन्न उत्तर दियो, “यूहन्ना बपतिस्मा देन वालो, अऊर कोयी कोयी एलिय्याह, अऊर कोयी यो कि पुरानो भविष्यवक्तावों म सी कोयी फिर सी जीन्दो भयो हय।”
೧೯ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.
20 ओन उन्को सी पुच्छ्यो, “पर तुम मोख का कह्य हय?” पतरस न उत्तर दियो, “परमेश्वर को द्वारा भेज्यो हुयो मसीहा।”
೨೦ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
21 तब यीशु न उन्ख आदेश दे क कह्यो कि यो कोयी सी मत कहजो।
೨೧ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು.
22 तब यीशु न कह्यो, “आदमी को बेटा लायी जरूरी हय कि ऊ बहुत दु: ख उठायेंन, अऊर बुजूर्गों अऊर मुख्य याजक अऊर धर्मशास्त्री ओख ठुकराय क मार डालेंन, अऊर ऊ तीसरो दिन फिर सी जीन्दो होयेंन।”
೨೨ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.
23 ओन सब सी कह्यो, “यदि कोयी मोरो पीछू आवनो चाहवय, त अपनो आप सी इन्कार कर अऊर हर दिन जो मोरो लायी अपनो जीवन देन लायी तैयार हय मोरो पीछू आव।
೨೩ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
24 कहालीकि जो कोयी अपनो जीव बचावनो चाहेंन ऊ ओख खोयेंन, पर जो कोयी मोरो लायी अपनो जीव खोयेंन उच ओख बचायेंन।
೨೪ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
25 यदि आदमी पूरो जगत ख पा ले अऊर अपनो जीव खोय दे यां ओकी हानि उठाये, त ओख का फायदा होयेंन?
೨೫ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
26 जो कोयी मोरो सी अऊर मोरी शिक्षा सी शर्मायेंन, आदमी को बेटा भी, जब अपनी अऊर अपनो बाप की अऊर पवित्र स्वर्गदूतों की महिमा सहित आयेंन, त ओको सी शर्मायेंन।
೨೬ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.
27 मय तुम सी सच कहू हय, कि जो इत खड़ो हंय, उन्म सी कुछ असो हंय कि जब तक परमेश्वर को राज्य नहीं देख ले, तब तक नहीं मरेंन।”
೨೭ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
28 इन बातों को कोयी आठ दिन बाद यीशु पतरस, यूहन्ना अऊर याकूब ख संग ले क प्रार्थना करन लायी पहाड़ी पर गयो।
೨೮ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.
29 जब ऊ प्रार्थना करतच होतो, त ओको चेहरा को रूप बदल गयो, अऊर ओको कपड़ा उज्वल होय क चमकन लग्यो।
೨೯ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು.
30 अऊर अचानक, मूसा अऊर एलिय्याह, हि दोय आदमी ओको संग बाते कर रह्यो होतो।
೩೦ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ.
31 हि स्वर्ग की महिमा सहित दिखायी दियो अऊर यीशु को मरन की चर्चा कर रह्यो होतो, परमेश्वर को उद्देश जो कि यरूशलेम म पूरो होन वालो होतो।
೩೧ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
32 पतरस अऊर ओको संगी की आंखी म नींद छायी होती, अऊर जब हि अच्छी तरह सचेत भयो, त यीशु की महिमा अऊर उन दोय आदमी ख, जो ओको संग खड़ो होतो, देख्यो।
೩೨ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.
33 जब हि ओको जवर सी जान लग्यो, त पतरस न यीशु सी कह्यो, “हे मालिक, हमरो इत रहनो भलो हय: येकोलायी हम तीन मण्डप बनायबो, एक तोरो लायी, एक मूसा लायी, अऊर एक एलिय्याह लायी।” ऊ जानत नहीं होतो कि का कह्य रह्यो हय।
೩೩ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ.
34 ऊ यो कहतच रह्यो होतो कि एक बादर न आय क उन्ख छाय लियो; अऊर जब बादर सी घिरन लग्यो त चेला डर गयो।
೩೪ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು.
35 तब ऊ बादर म सी यो आवाज निकल्यो, “यो मोरो बेटा अऊर मोरो चुन्यो हुयो आय, येकी सुनो।”
೩೫ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.
36 यो आवाज बन्द होनो पर यीशु अकेलो पायो गयो; अऊर हि चुप रह्यो, अऊर जो कुछ देख्यो होतो ओकी कोयी बात उन दिनो म कोयी सी नहीं कहीं।
೩೬ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿನಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.
37 दूसरों दिन जब यीशु अऊर ओको तीन चेलावों पहाड़ी सी उतरयो त एक बड़ी भीड़ ओको सी आय क मिली।
೩೭ಮರುದಿನ ಅವರು ಬೆಟ್ಟದಿಂದ ಇಳಿದು ಬಂದಾಗ ಜನರ ದೊಡ್ಡ ಗುಂಪೊಂದು ಆತನನ್ನು ಎದುರುಗೊಂಡಿತು.
38 अऊर देखो, भीड़ म सी एक आदमी न चिल्लाय क कह्यो, “हे गुरु, मय तोरो सी बिनती करू हय कि मोरो बेटा पर दयादृष्टि कर; कहालीकि ऊ मोरो एकलौतो बेटा आय।
೩೮ಆಗ ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು.
39 एक दुष्ट आत्मा ओख पकड़य हय, अऊर ऊ अचानक चिल्लावन लगय हय; अऊर ऊ ओख असो मुरकटय हय कि ऊ मुंह म फेस भर लावय हय; अऊर ओख कठिनायी सी गिराय क छोड़य हय।
೩೯ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.
40 मय न तोरो चेलावों सी बिनती करी कि दुष्ट आत्मा ख निकाले, पर हि नहीं निकाल सक्यो।”
೪೦ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು” ಎಂದು ಹೇಳಿದನು.
41 यीशु न उन्ख उत्तर दियो, “हे अविश्वासी अऊर जिद्दी लोगों, मय कब तक तुम्हरो संग रहूं अऊर तुम्हरी सहू? अपनो बेटा ख इत ले आव।”
೪೧ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
42 बेटा आयच रह्यो होतो कि दुष्ट आत्मा न ओख पटक क मुरकट्यो, पर यीशु न दुष्ट आत्मा ख डाट्यो अऊर बेटा ख अच्छो कर क् ओको बाप ख सौंप दियो।
೪೨ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.
43 तब सब लोग परमेश्वर को महासामर्थ सी अचम्भित भयो। पर जब सब लोग उन सब कामों सी जो कुछ यीशु करत होतो, अचम्भित होतो, त ओन अपनो चेलावों सी कह्यो,
೪೩ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,
44 “तुम इन बातों पर कान लगावो, कहालीकि आदमी को बेटा आदमियों को हाथ म सौंप्यो जायेंन।”
೪೪“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.
45 पर चेलावों या बात ख नहीं जान सक्यो, अऊर यो उन्को सी लूकी रही कि हि ओख समझ नहीं पायो; अऊर हि या बात को बारे म ओको सी पूछन सी डरत होतो।
೪೫ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.
46 तब उन्म यो विवाद होन लग्यो कि हम म सी बड़ो कौन हय।
೪೬ತರುವಾಯ ಶಿಷ್ಯರೊಳಗೆ, ತಮ್ಮಲ್ಲಿ ಯಾವನು ಹೆಚ್ಚಿನವನು ಎಂಬ ವಿಚಾರಹುಟ್ಟಿತು.
47 पर यीशु न उन्को मन को बिचार जान लियो, अऊर एक बच्चा ख ले क अपनो जवर खड़ो करयो,
೪೭ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ,
48 अऊर उन्को सी कह्यो, “जो कोयी मोरो नाम सी यो बच्चा ख स्वीकारय हय, ऊ मोख स्वीकारय हय; अऊर जो कोयी मोख स्वीकारय हय, ऊ मोरो भेजन वालो ख स्वीकारय हय, कहालीकि जो तुम म सब सी छोटो सी छोटो हय, उच बड़ो हय।”
೪೮ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.
49 तब यूहन्ना न कह्यो, “हे मालिक, हम न एक आदमी ख तोरो नाम सी दुष्ट आत्मावों ख निकालता देख्यो, अऊर हम न ओख मना करयो, कहालीकि ऊ हमरो संग होय क तोरो अनुसरन नहीं करत होतो।”
೪೯ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು,
50 यीशु न यूहन्ना अऊर दूसरों चेला सी कह्यो, “ओख मना मत करो; कहालीकि जो तुम्हरो विरोध म नहाय, ऊ तुम्हरो तरफ हय।”
೫೦ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ” ಎಂದು ಹೇಳಿದನು.
51 जब यीशु ख स्वर्ग म उठायो जान को दिन पूरो होन पर होतो, त ओन यरूशलेम जान को बिचार ठान लियो।
೫೧ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.
52 ओन अपनो आगु दूत भेज्यो। हि सामरियों को एक गांव म गयो कि ओको लायी जागा तैयार करे।
೫೨ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು.
53 पर उन लोगों न ओख उतरन नहीं दियो, कहालीकि ऊ यरूशलेम जाय रह्यो होतो।
೫೩ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.
54 यो देख क ओको चेलावों याकूब अऊर यूहन्ना न कह्यो, “हे प्रभु, का तय चाहवय हय कि हम आज्ञा दे, कि आसमान सी आगी गिर क उन्ख भस्म कर दे?”
೫೪ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,
55 पर यीशु न मुड़ क उन्ख डाट्यो।
೫೫ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು.
56 यीशु अऊर ओको चेला कोयी दूसरों गांव म चली गयो।
೫೬ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು.
57 जब हि रस्ता म जाय रह्यो होतो, त कोयी न यीशु सी कह्यो, “जित-जित तय जाजो, मय तोरो पीछू होय जाऊं।”
೫೭ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
58 यीशु न ओको सी कह्यो, “लोमड़ियों को गुफा अऊर आसमान को पक्षिंयों को घोसला होवय हंय, पर आदमी को बेटा ख मुंड लूकान की भी जागा नहीं।”
೫೮ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
59 यीशु न दूसरों सी कह्यो, “मोरो पीछू होय जा।” ओन कह्यो, “हे प्रभु, मोख पहिले जान दे कि अपनो बाप ख गाड़ देऊ।”
೫೯ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.
60 यीशु न ओको सी कह्यो, “मरयो हुयो ख अपनो मुर्दा गाड़न दे, पर तय जाय क परमेश्वर को राज्य को सुसमाचार प्रचार कर।”
೬೦ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು.
61 कोयी अऊर न भी कह्यो, “हे प्रभु, मय तोरो पीछू होय जाऊं; पर पहिले मोख जान दे कि अपनो घर को लोगों सी बिदा ले लेऊ।”
೬೧ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.
62 यीशु न ओको सी कह्यो, “जो कोयी अपनो हाथ नांगर पर रख क पीछू देखय हय, ऊ परमेश्वर को राज्य को लायक नहाय।”
೬೨ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.