< 1 इतिहास 13 >

1 दावीदाने हजारांचे आणि शंभरांचे सेनापती यापैकी प्रत्येक पुढारी यांचा सल्ला घेतला.
ದಾವೀದನು ಸಾವಿರ ಮಂದಿಗೂ, ನೂರು ಮಂದಿಗೂ ಪ್ರಧಾನರಾದವರ ಸಂಗಡ, ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.
2 मग दावीदाने इस्राएलमधील सर्व मंडळीस म्हटले. “तुम्हास जर हे योग्य वाटत असेल आणि आपला देव परमेश्वर याच्याकडून हे असेल तर आपले भाऊ, इस्राएलाच्या सर्व प्रदेशात राहिलेले आहेत त्यास आपापल्या नगरांत व खेड्यांत त्यांच्याबरोबर जे याजक आणि लेवी आहेत त्यांना आपणाकडे एकत्र जमण्यास त्यांच्याकडे दूत पाठवू.
ದಾವೀದನು ಇಸ್ರಾಯೇಲಿನ ಸಮಸ್ತ ಜನರಿಗೆ, “ನಿಮಗೆ ಒಳ್ಳೆಯದಾಗಿ ಕಂಡರೆ, ನಮ್ಮ ದೇವರಾದ ಯೆಹೋವ ದೇವರ ಚಿತ್ತವಾದರೆ, ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲದರಲ್ಲಿ ಉಳಿದಿರುವ ನಮ್ಮ ಸಹೋದರರನ್ನೂ, ತಮ್ಮ ಪಟ್ಟಣಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕರನ್ನೂ, ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೆಯಕಳುಹಿಸಿ,
3 आपल्या देवाचा कोश आपणाकडे पुन्हा आणू. शौल राज्य करत असताना आपण त्याचा शोध केला नाही.”
ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.
4 तेव्हा सर्व मंडळीने या गोष्टी करण्याची सहमती दिली कारण ती गोष्ट सर्व लोकांच्या दृष्टीने बरोबर होती.
ಹಾಗೆಯೇ ಮಾಡೋಣ ಎಂದು ಕೂಟದವರೆಲ್ಲರೂ ಹೇಳಿದರು. ಏಕೆಂದರೆ ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.
5 किर्याथ-यारीमाहून देवाचा कोश आणण्यासाठी दावीदाने मिसरमधील शीहोर नदीपासून लेबो हमाथच्या प्रदेशापर्यंत पसरलेल्या सर्व इस्राएल लोकांस एकत्र जमवले.
ಹೀಗೆ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತರುವುದಕ್ಕೆ ದಾವೀದನು ಈಜಿಪ್ಟಿನ ಶೀಹೋರ್ ನದಿ ಮೊದಲ್ಗೊಂಡು ಲಿಬೋ ಹಮಾತಿನ ಪ್ರದೇಶದವರೆಗೆ ಇರುವ ಸಮಸ್ತ ಇಸ್ರಾಯೇಲರನ್ನು ಕೂಡಿಸಿದನು.
6 करुबांवरती राहणारा देवाचा कोश, ज्याला परमेश्वर देवाचे नाव ठेवले आहे तो, यहूदातील बाला म्हणजेच किर्याथ-यारीम येथून आणावा म्हणून दावीदासह सर्व इस्राएली तिकडे चढून वर गेले.
ಆಗ ಕೆರೂಬಿಗಳ ನಡುವೆ ವಾಸವಾಗಿರುವ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು, ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಹೂದಕ್ಕೆ ಸೇರಿದ ಕಿರ್ಯತ್ ಯಾರೀಮಿನ ಬಾಲಾ ಎಂಬಲ್ಲಿಗೆ ಹೋದರು.
7 मग त्यांनी देवाचा कोश अबीनादाबाच्या घरातून काढून, तो नव्या गाडीवर ठेवला. उज्जा आणि अह्यो हे दोघेजण ही गाडी हाकत होते.
ಅವರು ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು.
8 दावीद आणि सर्व इस्राएल आपल्या सर्व शक्तीने देवापुढे जल्लोष करत चालले होते. ते स्तुतिगीते गात, वीणा, सतार, डफ झांजा, कर्णे इत्यादी वाद्ये वाजवत ते चालले होते.
ಆಗ ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ದೇವರ ಮುಂದೆ ಹೋದರು.
9 किदोनाच्या खळ्यापर्यंत ते पोहचले. तेव्हा गाडी ओढणारे बैल अडखळले. तेव्हा उज्जाने कोश धरण्यास हात पुढे केला.
ಆದರೆ ಅವರು ಕಿದೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.
10 १० तेव्हा परमेश्वराचा उज्जावर कोप भडकला व उज्जाने कोशाला हात लावला म्हणून त्याने त्यास मारले आणि तेथे तो देवासमोर मेला.
ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸಿದರು. ಅವನು ಅಲ್ಲಿಯೇ ದೇವರ ಮುಂದೆ ಮರಣಹೊಂದಿದನು.
11 ११ परमेश्वराने उज्जाला असा मार दिला. याचे दावीदाला वाईट वाटले. तेव्हापासून आजपर्यंत त्या ठिकाणाचे नाव पेरेस-उज्जा असे आहे.
ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ.
12 १२ दावीदाला त्यादिवशी देवाची भीती वाटली. तो म्हणाला, “आपल्या घरी मी देवाचा कोश कसा आणू?”
ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು.
13 १३ त्यामुळे दावीदाने दावीद नगरात तो कोश आणला नाही, पण तो ओबेद-अदोम गीत्ती याच्या घरात एकाबाजूला नेऊन ठेवला.
ಹಾಗೆಯೇ ದಾವೀದನು ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.
14 १४ मग देवाचा कोश ओबेद-अदोम याच्या घरात तीन माहिने राहिला. परमेश्वराने त्याच्या घराला आणि त्याचे जे काही होते त्या सगळ्याला आशीर्वादित केले.
ದೇವರ ಮಂಜೂಷವು ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ, ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದರು.

< 1 इतिहास 13 >