< 1 इतिहास 21 >

1 आणि सैतान इस्राएलाविरुध्द उठला व त्याने दावीदाला इस्राएलाची मोजणी करण्यास भाग पाडले.
ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.
2 दावीद यवाबाला आणि सैन्याच्या अधिकाऱ्यांना म्हणाला, “जा बैर-शेबापासून दानापर्यंत सर्व इस्राएल लोकांची मोजणी करा आणि मग मला त्यांची एकंदर संख्या माहित व्हावी म्हणून मला परत येऊन अहवाल द्या.”
ಆದ್ದರಿಂದ ದಾವೀದನು ಯೋವಾಬನನ್ನೂ ಜನರ ಪ್ರಧಾನರನ್ನೂ ಕರೆದು ಅವರಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀವು ಹೋಗಿ ಬೇರ್ಷೆಬವು ಮೊದಲುಗೊಂಡು, ದಾನ್ ಊರಿನವರೆಗೆ ಇಸ್ರಾಯೇಲರನ್ನು ಲೆಕ್ಕಿಸಿ, ಅವರ ಲೆಕ್ಕವನ್ನು ನನಗೆ ತೆಗೆದುಕೊಂಡು ಬನ್ನಿರಿ,” ಎಂದನು.
3 यवाब म्हणाला “परमेश्वर आपले सैन्य आहे त्यापेक्षा शंभर पटीने अधिक वाढवो. पण माझ्या प्रभू राजा, ते सर्व माझ्या धन्याचे सेवा करत नाही का? मग माझ्या धन्याला हे का पाहिजे? इस्राएलावर त्याने दोष का आणावा?”
ಆಗ ಯೋವಾಬನು, “ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ. ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರೂ ನನ್ನ ಒಡೆಯನ ಸೇವಕರಲ್ಲವೋ, ನನ್ನ ಒಡೆಯನು ಈ ಕಾರ್ಯವನ್ನು ಅಪೇಕ್ಷಿಸುವುದು ಏಕೆ? ಇದು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವುದು,” ಎಂದನು.
4 पण राजाचा शब्द यवाबाविरुध्द अंतिम होता, यामुळे यवाब निघून गेला आणि सर्व इस्राएलातून फिरला. मग यरूशलेमाला परत आला.
ಆದರೆ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆಗ ಅವನು ಹೊರಟು, ಇಸ್ರಾಯೇಲಿನ ಸಮಸ್ತ ಪ್ರಾಂತಗಳಿಗೆ ಹೋಗಿ, ಯೆರೂಸಲೇಮಿಗೆ ತಿರುಗಿಬಂದನು.
5 मग यवाबाने दावीदाला एकंदर लढाई करणाऱ्यांची मोजणी सांगितली. इस्राएलात अकरा लाख तलवार काढणारे पुरुष होते. यहूदात चार लाख सत्तर हजार पुरुष होते.
ಯೋವಾಬನು ದಾವೀದನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಸಮಸ್ತ ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಹನ್ನೊಂದು ಲಕ್ಷಮಂದಿ ಇದ್ದರು. ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಇದ್ದರು.
6 पण लेवी आणि बन्यामीन यांच्या घराण्यांची मोजदाद केली नव्हती, कारण यवाबाला राजाच्या आज्ञेचा अत्यंत तिटकारा आला होता.
ಆದರೆ ಲೇವಿಯರನ್ನೂ, ಬೆನ್ಯಾಮೀನರನ್ನೂ ಅವರಲ್ಲಿ ಎಣಿಸಲಿಲ್ಲ. ಏಕೆಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
7 देवाला या कृतीमुळे वाईट वाटले म्हणून त्याने इस्राएलावर मारा केला.
ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದ್ದಾದದ್ದರಿಂದ, ದೇವರು ಇಸ್ರಾಯೇಲನ್ನು ಶಿಕ್ಷಿಸಿದರು.
8 मग दावीद देवाला म्हणाला, “मी ही गोष्ट करून महान पाप केले आहे. आता आपल्या सेवकाचे अपराध दूर कर, कारण मी फार मूर्खपणाची कृती केली आहे.”
ದಾವೀದನು ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ, ಮಹಾಪಾಪ ಮಾಡಿದೆನು. ನೀವು ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ. ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.
9 परमेश्वर दावीदाचा संदेष्टा गादला म्हणाला,
ಆಗ ಯೆಹೋವ ದೇವರು ದಾವೀದನ ದರ್ಶಿಯಾದ ಗಾದನಿಗೆ,
10 १० “जाऊन दावीदाला सांग, ‘परमेश्वराचे म्हणणे असे आहे, मी तुझ्यापुढे तीन पर्याय ठेवतो. त्यातील एक निवड.”
“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ,’ ಎಂದು ಹೇಳು,” ಎಂದರು.
11 ११ मग गाद दावीदाकडे गेला व त्यास म्हणाला, “परमेश्वराचे म्हणणे असे आहे, ‘त्यातून एक निवड.
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನೇ ಆಯ್ದುಕೋ,
12 १२ तीन वर्षाचा दुष्काळ पडावा, किंवा तीन महिने तुझ्या शत्रूने तलवारीने तुझा पाठलाग करावा आणि तुझा नाश करावा किंवा इस्राएलाच्या सर्व देशात परमेश्वराचा दूत लोकांचा संहार करीत असताना देशात तीन दिवस परमेश्वराची तलवार म्हणजे मरी असावी? तर आता, ज्याने मला पाठवले, त्यास मी काय उत्तर द्यावे ते तू ठरवून मला सांग.”
ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳವರೆಗೆ ನಿನ್ನ ಶತ್ರುಗಳ ಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಯೆಹೋವ ದೇವರ ದೂತನು ಇಸ್ರಾಯೇಲಿನ ಸಮಸ್ತ ಪ್ರಾಂತಗಳಲ್ಲಿ ಯೆಹೋವ ದೇವರ ಖಡ್ಗದಿಂದ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ನೀನು ಆರಿಸಿಕೋ. ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.
13 १३ मग दावीद गादला म्हणाला, “मी गंभीर अडचणीत आहे. मला लोकांच्या हातात पडण्यापेक्षा परमेश्वराच्या हातात पडू दे, कारण त्याच्या दयेची कृती फार महान आहे.”
ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಯೆಹೋವ ದೇವರ ಕೈಯಲ್ಲಿಯೇ ಬೀಳುತ್ತೇನೆ. ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.
14 १४ तेव्हा परमेश्वराने इस्राएलावर मरी पसरवली आणि त्यामध्ये सत्तर हजार लोक मृत्युमुखी पडले.
ಆದಕಾರಣ ಯೆಹೋವ ದೇವರು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
15 १५ यरूशलेमेचा नाश करण्यास देवाने दूत पाठवला. तो तिचा नाश करणार, हे परमेश्वराने पाहिले व हानी करण्यापासून त्याचे मन बदलले. तो त्या नाश करणाऱ्या दूताला म्हणाला, “पुरे झाले, आता तुझा हात मागे घे.” त्यावेळी परमेश्वराचा दूत अर्णान यबूसी याच्या खळ्याजवळ उभा होता.
ಇದಲ್ಲದೆ ಯೆರೂಸಲೇಮನ್ನು ನಾಶಮಾಡುವುದಕ್ಕೆ ದೇವರು ದೂತನನ್ನು ಕಳುಹಿಸಿದರು. ಅವನು ನಾಶಮಾಡುವುದನ್ನು ಯೆಹೋವ ದೇವರು ನೋಡಿ, ಆ ದಂಡನೆಗೋಸ್ಕರ ದುಃಖಪಟ್ಟು, ಜನರನ್ನು ನಾಶಮಾಡುವ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
16 १६ दावीदाने वर पाहिले व तेव्हा त्यास परमेश्वराचा दूत आकाश व पृथ्वी यांच्यामध्ये उभा असलेला दिसला. त्याच्या हातात उपसलेली तलवार असून त्याने ती यरूशलेमेवर उगारलेली होती. तेव्हा गोणताट घातलेले दावीद आणि वडील जमिनीकडे तोंड करून खाली पडले.
ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.
17 १७ दावीद देवाला म्हणाला, “सैन्याची मोजणी करण्याचा हूकूम मी दिला होता की नाही? मीच हे पाप केले आहे, मीच हे दुष्ट काम केले आहे. पण या मेंढरांनी काय केले आहे? हे परमेश्वरा माझ्या देवा, मी विनंती करतो तुझा हात माझ्यावर व माझ्या घराण्यावर पडून तू आम्हास शिक्षा दे, पण तुझ्या लोकांस या मरीने शिक्षा देऊ नको.”
ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.
18 १८ मग परमेश्वराच्या दूताने गादला आज्ञा केली की, तू दावीदाला सांग, दावीदाने वर जाऊन अर्णान यबूसी याच्या खळ्यात परमेश्वरासाठी एक वेदी बांधावी.
ಆಗ ಯೆಹೋವ ದೇವರ ದೂತನು ಗಾದನಿಗೆ, “ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು,” ಎಂದನು.
19 १९ मग गादाने परमेश्वराच्या नावाने बोलून जे सांगितले त्यावरून दावीद वरती गेला.
ಗಾದನು ಯೆಹೋವ ದೇವರ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.
20 २० अर्णान तेव्हा गव्हाची मळणी करत होता, तो मागे वळला व त्याने देवदूताला पाहिले. तो व त्याचे चारही पुत्र त्याच्याबरोबर होते ते लपले.
ಒರ್ನಾನನು ಗೋಧಿಯನ್ನು ತುಳಿಸುತ್ತಿರುವಾಗ, ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ, ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಪುತ್ರರೂ ಅಡಗಿಕೊಂಡಿದ್ದರು.
21 २१ आणि दावीद अर्णानाकडे आला, तेव्हा अर्णानाने वर दृष्टी करून व दावीदाला पाहिले. तो खळ्यातून निघाला आणि त्याने दावीदाला तोंड जमिनीपर्यंत लववून नमस्कार केला.
ಆದರೆ ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡನು, ಆಗ ಅವನು ಕಣದಿಂದ ಹೊರಟು, ದಾವೀದನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.
22 २२ मग दावीद अर्णानला म्हणाला, “हे खळे मला विकत दे. त्याची पूर्ण किंमत मी तुला देईन. लोकांवरून मरी बंद व्हावी म्हणून तेथे मी परमेश्वराकरता वेदी बांधीन.”
ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು.
23 २३ अर्णान दावीदाला म्हणाला, “माझ्या स्वामी राजाला जे काही तुमच्या दृष्टीने जे चांगले आहे ते करा. पाहा, होमार्पण करण्यासाठी मी बैल, तसेच वेदीवरील होमात जाळण्यासाठी मळणीची लाकडे, आणि अन्नार्पणासाठी गहू हे सर्व मी तुम्हास देईन.”
ಒರ್ನಾನನು ದಾವೀದನಿಗೆ, “ನಿನಗಾಗಿ ತೆಗೆದುಕೋ, ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ, ಧಾನ್ಯ ಸಮರ್ಪಣೆಗೋಸ್ಕರ ಗೋಧಿ ಕೊಡುವುದಲ್ಲದೆ, ಸಮಸ್ತವನ್ನೂ ಕೊಡುವೆನು,” ಎಂದನು.
24 २४ तेव्हा राजा दावीद अर्णानाला म्हणाला, “नाही, मी तुला त्याची पूर्ण किंमत देऊनच विकत घेईन. कारण जे तुझे आहे ते मी परमेश्वरासाठी घेणार नाही. आणि किंमत दिल्यावाचून घेतलेले होमार्पण मी अर्पण करणार नाही.”
ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು, ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.
25 २५ आणि दावीदाने त्या जागेसाठी अर्णानाला सहाशें शेकेल सोने दिले.
ಅಂತೆಯೇ ಆ ಭೂಮಿಗಾಗಿ ಒರ್ನಾನನಿಗೆ ಏಳು ಕಿಲೋಗ್ರಾಂ ಬಂಗಾರವನ್ನು ಕೊಟ್ಟು,
26 २६ दावीदाने तेथे परमेश्वराकरता वेदी बांधली आणि त्यावर त्याने होमार्पणे आणि शांत्यर्पणे अर्पण केली. त्याने परमेश्वरास हाक मारली व त्याने स्वर्गातून होमार्पणाच्या वेदीवर अग्नी पाठवून उत्तर दिले.
ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು. ಆಗ ಅವರು ಆಕಾಶದಿಂದ ದಹನಬಲಿಪೀಠದ ಮೇಲೆ ಅಗ್ನಿಯಿಂದ ಅವನಿಗೆ ಉತ್ತರಕೊಟ್ಟರು.
27 २७ मग परमेश्वराने देवदूताला आज्ञा केली आणि त्याने आपली तलवार म्यानात परत घातली.
ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು.
28 २८ त्या वेळेस, जेव्हा दावीदाने पाहिले की अर्णान यबूसीच्या खळ्यात परमेश्वराने आपल्याला उत्तर दिले तेव्हा त्याने तेथे यज्ञ केले.
ಯೆಹೋವ ದೇವರು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಉತ್ತರ ಕೊಟ್ಟರೆಂದು ದಾವೀದನು ಕಂಡಾಗ, ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.
29 २९ कारण मोशेने रानात केलेला परमेश्वराचा निवासमंडप आणि होमार्पणाची वेदी, त्याकाळी गिबोनामध्ये उच्च स्थानावर होती.
ಮರುಭೂಮಿಯಲ್ಲಿ ಮೋಶೆಯು ಮಾಡಿದ ಯೆಹೋವ ದೇವರ ಗುಡಾರವೂ, ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.
30 ३० पण परमेश्वराच्या दूताच्या तलवारीच्या भीतीने दावीद देवापुढे मार्ग विचारायला जाण्यास घाबरत होता.
ದಾವೀದನು ದೇವರ ಹತ್ತಿರ ವಿಚಾರಿಸಲು, ಅದರ ಬಳಿಗೆ ಹೋಗಲಾರದೆ ಇದ್ದನು. ಏಕೆಂದರೆ ಅವನು ಯೆಹೋವ ದೇವರ ದೂತನ ಖಡ್ಗದ ನಿಮಿತ್ತ ಹೆದರಿದ್ದನು.

< 1 इतिहास 21 >