< 1 राजे 20 >
1 १ बेन-हदाद अरामाचा राजा होता. त्याने आपल्या सर्व सैन्याची जमवाजमव केली. त्याच्या बाजूला बत्तीस राजे होते. त्यांच्याकडे घोडे आणि रथ होते. त्यांनी शोमरोनला वेढा घातला आणि युध्द पुकारले.
೧ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.
2 २ इस्राएलचा राजा अहाब याच्याकडे नगरात बेनहदादने दूतांकरवी निरोप पाठवला
೨ಅವನು ಆ ಪಟ್ಟಣದಲ್ಲಿದ್ದ ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
3 ३ संदेश असा होता, “बेन-हदादचे म्हणणे आहे, तुमच्याकडील सोने रुपे तुम्ही मला द्यावे. तसेच तुझ्या स्त्रिया आणि पुत्रेही माझ्या हवाली करावी.”
೩“ನಿನ್ನ ಬೆಳ್ಳಿಬಂಗಾರ ನನ್ನದು. ನಿನ್ನ ಪ್ರಿಯ ಹೆಂಡತಿ ಮಕ್ಕಳು ನನ್ನವರೇ ಎಂದು ತಿಳಿದುಕೋ” ಎಂಬುದಾಗಿ ತಿಳಿಸಿದನು.
4 ४ यावर इस्राएलाच्या राजाचे उत्तर असे होते, “महाराज मी तर आता तुमच्याच ताब्यात आहे, हे मला मान्य आहे. त्यामुळे जे माझे ते सर्व तुमचेच आहे.”
೪ಅದಕ್ಕೆ ಇಸ್ರಾಯೇಲರ ಅರಸನು, “ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ, ನನಗಿರುವುದೆಲ್ಲವೂ ನಿನ್ನದೇ” ಎಂದು ಉತ್ತರಕೊಟ್ಟು ಕಳುಹಿಸಿದನು.
5 ५ अहाबाकडे हे दूत पुन्हा एकदा आले आणि म्हणाले, “बेन-हदादचे म्हणणे असे आहे, ‘तुझ्याजवळचा सोन्याचांदीचा ऐवज तसेच बायकामुले तू माझ्या स्वाधीन केली पाहिजेस.
೫ಆ ದೂತರು ತಿರುಗಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲಾ.
6 ६ उद्याच मी माझ्या मनुष्यांचे एक शोधपथक तिकडे पाठवणार आहे. ते तुझ्या तसेच तुझ्या कारभाऱ्यांच्या घराची झडती घेतील. त्यांच्या डोळ्यांना जे आवडेल ते स्वत: च्या हाताने घेतील. ती माणसे त्या वस्तू मला आणून देतील.”
೬ನಾಳೆ ಇಷ್ಟು ಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ಅನ್ನುತ್ತಾನೆ” ಎಂದು ತಿಳಿಸಿದರು.
7 ७ तेव्हा इस्राएलचा राजा अहाबाने आपल्या देशातील सर्व वडिलधाऱ्या मनुष्यांची सभा घेतली. अहाब त्यांना म्हणाला, “हे पाहा, हा मनुष्य माझे कसे अनिष्ट करू पाहत आहे. आधी त्याने माझ्या जवळचे सोनेचांदी तसेच माझी स्त्रिया पुत्रे मागितली. त्यास मी कबूल झालो. आणि आता त्यास सर्वच हवे आहे.”
೭ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.
8 ८ यावर ती वडिलधारी मंडळी आणि इतर लोक अहाबाला म्हणाले, “त्याच्या म्हणण्याला मान झुकवू नको. तो म्हणतो तसे करु नको.”
೮ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, “ನೀನು ಈ ಮಾತಿಗೆ ಒಪ್ಪಬೇಡ” ಎಂದರು.
9 ९ मग राजा अहाबाने बेन-हदादकडे निरोप्याला सांगितले की “माझा स्वामी अहाब राजास सांग” तुझी पहिली मागणी मला मान्य आहे. पण तुझ्या दुसऱ्या आज्ञेचे मी पालन करु शकत नाही. बेन-हदादला त्याच्या दूतांनी हा निरोप सांगितला.
೯ಆದುದರಿಂದ ಅವನು ಬಂದಂಥ ದೂತರ ಮುಖಾಂತರವಾಗಿ ಬೆನ್ಹದದನಿಗೆ, “ನನ್ನ ಒಡೆಯನೇ, ಅರಸನೇ, ನಾನು ನಿನ್ನ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ. ಆದರೆ ಎರಡನೆಯ ಮಾತಿಗೆ ಒಪ್ಪಲಾರೆನು” ಎಂದು ಹೇಳಿ ಕಳುಹಿಸಿದನು. ದೂತರು ಬಂದು ಈ ಮಾತನ್ನು ಬೆನ್ಹದದನಿಗೆ ತಿಳಿಸಿದರು.
10 १० तेव्हा बेन-हदादकडून अहाबाला दुसरा निरोप आला. त्या निरोपात म्हटले होते, “शोमरोनचा मी पूर्ण विध्वंस करीन. तिथे काहीही शिल्लक उरणार नाही. आठवणी दाखल काही घेऊन यावे असेही माझ्या मनुष्यांना काही राहणार नाही. असे झाले नाहीतर देव माझे तसे करो व त्यापेक्षा अधिक करो.”
೧೦ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.
11 ११ इस्राएलच्या राजाचे त्यास उत्तर गेले. त्यामध्ये म्हटले होते. “बेन-हदादला जाऊन सांगा की, जो चिलखत चढवतो त्याने, जो ते उतरवण्याइतक्या दीर्घ काळापर्यंत जगतो त्याने इतकी फुशारकी मारू नये.”
೧೧ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.
12 १२ राजा बेन-हदाद इतर राजांच्या बरोबर आपल्या तंबूत मद्यपान करत बसला होता. त्यावेळी हे दूत आले आणि राजाला हा संदेश दिला. त्याबरोबर बेनहदादने आपल्या मनुष्यांना नगरापुढे चढाईचा व्यूह रचायला सांगितले. “त्याप्रमाणे लोकांनी आपापल्या जागा घेतल्या.”
೧೨ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
13 १३ तेव्हा इकडे एक संदेष्टा इस्राएलाचा अहाब राजांकडे आला. राजाला तो म्हणाला, “अहाब राजा, परमेश्वराचे तुला सांगणे आहे की, ‘एवढी मोठी सेना बघितलीस? मी, प्रत्यक्ष परमेश्वर, तुझ्या हस्ते या सैन्याचा पराभव करवीन. म्हणजे मग मीच परमेश्वर असल्याबद्दल तुझी खात्री पटेल.”
೧೩ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು.
14 १४ अहाबाने विचारले. “या पराभवासाठी तू कोणाला हाताशी धरशील?” तेव्हा तो संदेष्टा म्हणाला, “प्रांत अधिकाऱ्यांच्या हाताखालच्या तरुणांची परमेश्वर मदत घेईल” यावर राजाने विचारले, “या सैन्याचे नेतृत्व कोण करील?” “तूच ते करशील” असे संदेष्ट्याने सांगितले.
೧೪ಅಹಾಬನು ಅವನನ್ನು, “ಇದು ಯಾರ ಮುಖಾಂತರವಾಗಿ ಆಗುವುದು?” ಎಂದು ಕೇಳಿದ್ದಕ್ಕೆ ಅವನು, “ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳ ಮುಖಾಂತರವಾಗಿ ಆಗುವುದು ಎಂದು ಯೆಹೋವನು ಅನ್ನುತ್ತಾನೆ” ಎಂದು ಉತ್ತರಕೊಟ್ಟನು. ಅಹಾಬನು ಪುನಃ ಅವನನ್ನು, “ಯುದ್ಧ ಪ್ರಾರಂಭಮಾಡತಕ್ಕವರು ಯಾರು?” ಎಂದು ಕೇಳಲು ಅವನು, “ನೀನೇ” ಎಂದು ಹೇಳಿದನು.
15 १५ तेव्हा अहाब राजाने अधिकाऱ्यांच्या हाताखालच्या तरुणांची कुमक गोळा केली. त्या तरुणांची संख्या दोनशे बत्तीस भरली. मग राजाने इस्राएलाच्या सर्व फौजेला एकत्र बोलावले. तेव्हा ते एकंदर सात हजार होते.
೧೫ಅಹಾಬನು ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಜನರಿದ್ದರು. ಇಸ್ರಾಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಜನರಿದ್ದರು.
16 १६ राजा बेन-हदाद आणि त्याच्या बाजूचे बत्तीस राजे दुपारी आपापल्या तंबूमध्ये मद्यपान करण्यात आणि नशेत गुंग होते. त्यावेळी अहाबाने हल्ला चढवला.
೧೬ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.
17 १७ तरुण मदतनीस आधी चालून गेले. तेव्हा “शोमरोनमधून सैन्य बाहेर आल्याचे राजा बेन-हदादच्या मनुष्यांनी त्यास सांगितले.”
೧೭ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು.
18 १८ तेव्हा बेन-हदाद म्हणाला, “ते हल्ला करायला आले असतील किंवा सलोख्याची किनंती करायला आले असतील. त्यांना जिवंत पकडा.”
೧೮ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು.
19 १९ राजा अहाबाच्या तरुणांची तुकडी नगरातून बाहेर पडली आणि इस्राएलचे सैन्य मागोमाग येत होते.
೧೯ಮೊದಲು ಹೊರಟುಬಂದಿದ್ದ ದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್ ಸೈನ್ಯದವರೂ ಬಂದರು.
20 २० प्रत्येक इस्राएलीने समोरुन येणाऱ्याला ठार केले. त्याबरोबर अरामामधली माणसे पळ काढू लागली. इस्राएलाच्या सैन्याने त्यांचा पाठलाग केला. राजा बेन-हदाद तर एका रथाच्या घोड्यावर बसून पळाला.
೨೦ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮ್ಯರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.
21 २१ इस्राएल राजाने सेनेचे नेतृत्व करून अरामाच्या फौजेतील सर्व घोडे आणि रथ पळवले. अरामाची मोठी कत्तल उडवली.
೨೧ಇಸ್ರಾಯೇಲರ ಅರಸನು ಹೊರಟು ಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.
22 २२ यानंतर तो संदेष्टा इस्राएल राजा अहाबाकडे गेला आणि म्हणाला, “अरामाचा राजा बेन-हदाद पुढच्या वसंत ऋतुत पुन्हा तुझ्यावर चालून येईल. तेव्हा तू आता परत जा आणि आपल्या सैन्याची ताकद आणखी वाढव. काळजीपूर्वक आपल्या बचावाचे डावपेच आख.”
೨೨ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು.
23 २३ अरामाच्या राजाचे अधिकारी त्यास म्हणाले, “इस्राएलाचा देव हा पहाडावरील देव आहे. आपण डोंगराळ भागात लढलो. म्हणून इस्राएलांचा जय झाला. तेव्हा आता आपण सपाटीवर लढू म्हणजे जिंकू.
೨೩ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.
24 २४ आता तुम्ही असे करायला हवे त्या राजांकडे सैन्याचे नेतृत्व न देता त्यांच्या जागी सेनापती नेमा.
೨೪ನೀನು ಆಯಾ ಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸು.
25 २५ जेवढ्या सेनेचा संहार झाला तेवढी पुन्हा उभी करा. घोडे आणि रथ मागवा. मग आपण सपाटीवर इस्राएली लोकांचा सामना करु म्हणजे जय आपलाच.” बेनहदादने हा सल्ला मानला आणि सर्व तजवीज केली.
೨೫ಅನಂತರ ನಮ್ಮ ಸೈನ್ಯದಿಂದ ನಷ್ಟವಾಗಿ ಹೋದಷ್ಟು ಜನರನ್ನು, ಕುದುರೆಗಳನ್ನೂ, ರಥಗಳನ್ನೂ ತಿರುಗಿ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ. ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ” ಎಂದು ಹೇಳಿದನು. ಅವನು ಅದರಂತೆಯೇ ಮಾಡಿದನು.
26 २६ वसंत ऋतुत बेन-हदादने अराममधील लोकांस एकत्र आणले आणि तो इस्राएलवरील हल्ल्यासाठी अफेक येथे आला.
೨೬ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.
27 २७ इस्राएलही युध्दाला सज्ज झाले. अरामी सैन्याविरुध्द लढायला गेले. अराम्यांच्या समोरच त्यांनी आपला तळ दिला. शत्रूसैन्याशी तुलना करता, इस्राएल म्हणजे शेरडांच्या दोन लहान कळपांसारखे दिसत होते. अरामी फौजेने सगळा प्रदेश व्यापला होता.
೨೭ಇಸ್ರಾಯೇಲರು ಸಹ ಆಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.
28 २८ एक देवाचा मनुष्य (संदेष्टा) इस्राएलाच्या राजाकडे एक निरोप घेऊन आला. निरोप असा होता. “परमेश्वर म्हणतो, ‘मी डोंगराळ भागातला देव आहे असे या अरामी लोकांचे म्हणणे आहे. सपाटीवरचा मी देव नव्हे असे त्यांना वाटते. तेव्हा या मोठ्या सेनेचा मी तुमच्या हातून पराभव करणार आहे. म्हणजे संपूर्ण प्रदेशाचा मी परमेश्वर आहे हे तुम्ही जाणाल.”
೨೮ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.
29 २९ दोन्ही सेना सात दिवस समोरासमोर तळ देऊन बसल्या होत्या. सातव्या दिवशी लढाईला सुरुवात झाली. इस्राएल लोकांनी अरामाचे एक लक्ष सैनिक एका दिवसात ठार केले.
೨೯ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.
30 ३० जे बचावले ते अफेक येथे पळून गेले. यातील सत्तावीस हजार सैनिकांवर शहराची भिंत कोसळून पडली. बेन-हदादनेही या शहरात पळ काढला होता. तो एका आतल्या खोलीत लपला होता.
೩೦ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು.
31 ३१ त्याचे सेवक त्यास म्हणाले, “इस्राएलाचे राजे दयाळू आहेत असे आम्ही ऐकून आहो. आपण कबंरेस गोणताट नेसून आणि डोक्याभोवती दोरखंड आवळून इस्राएलाच्या राजाकडे जाऊ कदाचित् तो आपल्याला जीवदान देईल.”
೩೧ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು” ಎಂದು ಹೇಳಿದರು.
32 ३२ त्या सर्वांनी मग गोणताट घातले. डोक्याभोवती दोरी बांधली आणि ते इस्राएलाच्या राजाकडे आले. त्यास म्हणाले, “तुमचा दास बेन-हदाद तुमच्याकडे जीवदान मागत आहे.” अहाब म्हणाला, “म्हणजे तो अजून जिवंत आहे? तो माझा बंधूच आहे.”
೩೨ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ” ಅಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು” ಎಂದು ಉತ್ತರಕೊಟ್ಟನು.
33 ३३ बेन-हदादला अहाब ठार करणार नाही अशा अर्थाचे त्याने काहीतरी आश्वासक बोलावे अशी बेनहदादच्या बरोबरच्या लोकांची इच्छा होती. तेव्हा अहाबाने बेन-हदादला भाऊ म्हटल्यावर ते ताबडतोब, “हो, बेन-हदाद तुमचा भाऊ जिवंत आहे” अहाब म्हणाल, “जा आणि त्यास आणा” त्याप्रमाणे तो आला. मग राजा अहाबाने त्यास आपल्याबरोबर रथात बसायला सांगितले.
೩೩ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು, “ಬೆನ್ಹದದನು ನಿನ್ನ ಸಹೋದರನೇ ಹೌದು” ಅಂದರು. ಅವನು ಅವರಿಗೆ, “ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
34 ३४ बेन-हदाद अहाबाला म्हणाला, “माझ्या वडिलांनी तुझ्या वडिलांकडून जी गावे घेतली ती मी तुला परत करीन. मग, माझ्या वडिलांनी शोमरोनात जशा बाजारपेठा वसवल्या तशा तुला दिमिष्कात करता येतील” अहाब त्यावर म्हणाला, “या करारावर ती तुला मुक्त करायला तयार आहे.” तेव्हा या दोन राजांनी आपसात शांतीचा करार केला. मग राजा अहाबाने राजा बेन-हदादला मुक्त केले.
೩೪ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.
35 ३५ त्यानंतर संदेष्टयांच्या शिष्यापैकी एका संदेष्ट्याने दुसऱ्या संदेष्ट्याला म्हटले, “मला एक फटका मार.” परमेश्वराचीच तशी आज्ञा होती म्हणून तो असे म्हणाला, पण दुसऱ्या संदेष्ट्यांने तसे करायचे नाकारले.
೩೫ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.
36 ३६ तेव्हा पहिला संदेष्टा म्हणाला, “तू परमेश्वराची आज्ञा पाळली नाहीस. तेव्हा तू इथून बाहेर पडशील तेव्हा सिंह तुझा जीव घेईल” तो दुसरा संदेष्टा तेथून निघाला तेव्हा खरोखरच सिंहाने त्यास ठार मारले.
೩೬ಆಗ ಪ್ರವಾದಿಯು ಅವನಿಗೆ, “ನೀನು ಯೆಹೋವನ ಮಾತನ್ನು ಕೇಳದೆ ಹೋದುದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೇ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು” ಎಂದನು. ಅವನು ಅವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದು ಹಾಕಿತು.
37 ३७ मग हा पहिला संदेष्टा एका मनुष्याकडे गेला. त्यास त्याने स्वत: ला “फटका मारायला” सांगितले. त्या मनुष्याने तसे केले आणि संदेष्ट्याला घायाळ केले.
೩೭ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡಿ” ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.
38 ३८ त्या संदेष्ट्याने मग स्वत: च्या तोंडाभोवती एक फडके गुंडाळून घेतले. त्यामुळे तो कोण हे कोणालाही ओळखू येऊ शकत नव्हते. हा संदेष्टा मग वाटेवर राजाची वाट पाहत बसला.
೩೮ಆಗ ಅವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತನು.
39 ३९ राजा तिथून जात होता. तेव्हा संदेष्टा त्यास म्हणाला, “मी लढाईवर गेलो होतो. आपल्यापैकी एकाने एका शत्रू सैनिकाला माझ्यापुढे आणले आणि मला सांगितले, ‘याच्यावर नजर ठेव. हा पळाला तर याच्या जागी तुला आपला जीव द्यावा लागेल किंवा शंभर रत्तल चांदीचा दंड भरावा लागेल.’
೩೯ಅವನು ಹಾದು ಹೋಗುವಾಗ ಅವನಿಗೆ, “ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.
40 ४० पण मी इतर कामात गुंतलो होतो. तेव्हा तो मनुष्य पळून गेला यावर इस्राएलाचा राजा म्हणाला, त्या सैनिकाला तू निसटू दिलेस हा तुझा गुन्हा तुला मान्य आहे.” तेव्हा निकाल उघडच आहे. “तो मनुष्य म्हणाला ते तू केले पाहिजेस.”
೪೦ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು” ಎಂದು ಮೊರೆಯಿಟ್ಟನು. ಇಸ್ರಾಯೇಲರ ಅರಸನು ಇವನಿಗೆ “ನಿನಗೆ ಆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?” ಎಂದು ನುಡಿದನು.
41 ४१ आता त्या संदेष्ट्याने तोंडावरचे फडके काढले. इस्राएली राजाने त्यास पाहिले आणि तो संदेष्टा असल्याचे त्याने ओळखले.
೪೧ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು.
42 ४२ मग तो संदेष्टा राजाला म्हणाला, “परमेश्वर म्हणतो, मी ज्याचा वध करावा म्हणून सांगितले. त्यास तू मोकळे सोडलेस. तेव्हा आता त्याच्या जागी तू आहेस. तू मरशील. तुझ्या शत्रूच्या ठिकाणी तुझे लोक असतील तेही जिवाला मुकतील.”
೪೨ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
43 ४३ यानंतर इस्राएलचा राजा शोमरोनाला आपल्या घरी परतला. तो अतिशय संतापला होता आणि चितांग्रस्त झाला होता.
೪೩ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.