< 1 शमुवेल 11 >
1 १ मग नाहाश अम्मोनी याने जाऊन याबेश-गिलादास वेढा घातला. तेव्हा याबेशांतल्या सर्व मनुष्यांनी नाहाशाला म्हटले, “आम्हाशी करार कर म्हणजे आम्ही तुझी सेवा करू.”
೧ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
2 २ तेव्हा नाहाश अम्मोनी त्यांना म्हणाला, “मी तुम्हाशी अशा अटीवर करार करीन की, मी तुम्हातील प्रत्येकाचा उजवा डोळा फोडून सर्व इस्राएलाची मानहानी करीन.”
೨ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.
3 ३ तेव्हा याबेशच्या वडिल जनांनी त्यास म्हटले, “आम्हांला सात दिवसाचा अवकाश दे, म्हणजे इस्राएलाच्या सर्व प्रातांत आम्ही दूत पाठवू. मग जर आम्हास सोडवायला कोणी येत नसला, तर आम्ही बाहेर तुझ्याकडे येऊ.”
೩ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
4 ४ आणि त्या दूतांनी शौलाच्या गिब्याकडे येऊन या गोष्टी लोकांच्या कानावर घातल्या; तेव्हा सर्व लोक मोठ्याने आवाज काढून रडू लागले.
೪ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.
5 ५ आणि पाहा शौल शेतातून गाईबैलांच्या मागून चालत येत होता. शौल म्हणाला, “लोकांस काय झाले? म्हणून ते रडत आहेत?” तेव्हा त्यांनी त्यास याबेशातील माणसे काय म्हणाली ते सांगितले.
೫ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
6 ६ तेव्हा शौलाने या गोष्टी ऐकल्यावर देवाचा आत्मा जोराने त्याच्यावर आला आणि त्याचा राग फारच भडकला.
೬ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
7 ७ मग बैलांची जोडी घेऊन त्याने त्यांचे तुकडे तुकडे केले आणि दूतांच्या हातून ते इस्राएलाच्या सर्व प्रांतात पाठवून सांगितले की, “जो कोणी शौलामागे व शमुवेलाच्यामागे येत नाही त्याच्या बैलांना असे करण्यात येईल.” तेव्हा परमेश्वराचे भय लोकांवर पडले व ते एक मनाचे होऊन एकत्र होऊन निघाले.
೭ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.
8 ८ मग जेव्हा त्याने बेजेकात त्यांची नोंद केली, तेव्हा इस्राएलाचे लोक तीन लाख होते, आणि यहूदाचे लोक तीस हजार होते.
೮ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
9 ९ तेव्हा जे दूत आले होते त्यांना त्यांनी म्हटले, “याबेश-गिलादाच्या मनुष्यांना असे सांगा की, उद्या सूर्य तापेल तेव्हा तुमची सुटका होईल.” मग दूतांनी जाऊन याबेशाच्या मनुष्यांना तसे सांगितले; तेव्हा ते आनंदीत झाले.
೯ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.
10 १० मग याबेशांतील माणसे नाहाशाला म्हणाली, “उद्या आम्ही बाहेर तुम्हाकडे येऊ तेव्हा तुम्हास बरे दिसेल तसे आमचे करा.”
೧೦ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು.
11 ११ मग सकाळी असे झाले की शौलाने लोकांच्या तीन टोळ्या केल्या आणि त्यांनी पहाटेच्या प्रहरी छावणीमध्ये येऊन दिवस तापे पर्यंत अम्मोन्यांवर हल्ला केला आणि त्यांचा पराभव केला. आणि असे झाले की, जे उरले त्यातले दोन देखील एकत्र एका ठिकाणी राहिले नाहीत, जे वाचले त्यांची पांगापांग झाली.
೧೧ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
12 १२ मग लोक शमुवेलाला म्हणाले, “शौल आम्हावर राज्य करील काय? असे जे बोलले ते कोण आहेत? ती माणसे काढून दे, म्हणजे आम्ही त्याना जिवे मारू.”
೧೨ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
13 १३ तेव्हा शौल बोलला, “आज कोणाही मनुष्यास जिवे मारायचे नाही कारण आज परमेश्वराने इस्राएलास सोडवले आहे.”
೧೩ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.
14 १४ तेव्हा शमुवेलाने लोकांस म्हटले, “चला आपण गिलगालास जाऊन तेथे नव्याने राज्य स्थापन करू.”
೧೪ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು
15 १५ मग सर्व लोक गिलगालास गेले आणि गिलगालात त्यांनी परमेश्वराच्यासमोर शौलाला राजा केले आणि तेथे परमेश्वराच्यासमोर त्यांनी शांत्यर्पणांचे यज्ञ अर्पण केले; तेव्हा तेथे शौल व इस्राएलाची सर्व माणसे यांना फार आनंद झाला.
೧೫ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.