< 1 शमुवेल 26 >
1 १ जीफी लोक शौलाकडे गिबा येथे येऊन म्हणाले, “यशीमोनासमोर हकीला डोंगरात दावीद लपला आहे की नाही?”
ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ,” ಎಂದರು.
2 २ तेव्हा शौल उठला व आपल्याबरोबर इस्राएलाच्या तीन हजार निवडक मनुष्यांना घेऊन दावीदाचा शोध करायला जीफ रानात गेला.
ಆಗ ಸೌಲನು ಎದ್ದು ಜೀಫ್ ಮರುಭೂಮಿಯಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿನಲ್ಲಿ ಆಯ್ದ ಮೂರು ಸಾವಿರ ಜನರ ಸಂಗಡ ಜೀಫ್ ಮರುಭೂಮಿಗೆ ಹೊರಟುಹೋಗಿ,
3 ३ शौलाने यशीमोनासमोरील मार्गाजवळ हकीला डोंगरावर तळ दिला; तेव्हा दावीद रानात राहत होता आणि त्याने पाहिले की आपला पाठलाग करायला शौल रानात आला आहे.
ಯೆಷಿಮೋನಿಗೆ ಎದುರಾದ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿಸಿದನು. ದಾವೀದನು ಸೌಲನು ತನ್ನ ಹಿಂದೆ ಮರುಭೂಮಿಗೆ ಬಂದದ್ದನ್ನು ನೋಡಿ, ಮರುಭೂಮಿಯಲ್ಲಿ ನಿಂತನು.
4 ४ म्हणून दावीदाने हेर पाठवले आणि शौल खचित आला आहे असे त्यास समजले.
ದಾವೀದನು ಗೂಢಚಾರರನ್ನು ಕಳುಹಿಸಿ, ಸೌಲನು ಬಂದದ್ದು ನಿಶ್ಚಯವೆಂದು ತಿಳಿದುಕೊಂಡನು.
5 ५ मग दावीद उठून शौलाने तळ दिला होता त्या ठिकाणावर आला आणि जेथे शौल व त्याचा सेनापती नेराचा मुलगा अबनेर हे निजले होते ते ठिकाण दावीदाने पाहिले; शौल तर छावणीत निजला होता व त्याच्यासभोवती लोकांनी तळ दिला होता.
ದಾವೀದನು ಎದ್ದು ಸೌಲನು ಇಳಿದುಕೊಂಡಿದ್ದ ಸ್ಥಳಕ್ಕೆ ಬಂದನು. ಸೌಲನೂ, ಅವನ ದಂಡಿನ ನಾಯಕನಾಗಿರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಸೌಲನು ಮಧ್ಯದಲ್ಲಿ ಮಲಗಿದ್ದನು. ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.
6 ६ तेव्हा अहीमलेख हित्ती व सरूवेचा मुलगा अबीशय यवाबाचा भाऊ यांना दावीदाने उत्तर देऊन म्हटले, “छावणीत शौलाकडे खाली माझ्याबरोबर कोण येईल?” तेव्हा अबीशय म्हणाला, “मी तुझ्याबरोबर खाली येईन.”
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು.
7 ७ मग दावीद व अबीशय रात्री लोकांजवळ गेले आणि पाहा शौल छावणीत निजला आहे व त्याचा भाला त्याच्या उशाजवळ भूमीत रोवलेला व त्याच्यासभोवती अबनेर व लोक निजलेले आहेत.
ದಾವೀದನೂ, ಅಬೀಷೈಯನೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಸೌಲನು ಕಂದಕದೊಳಗೆ ಮಲಗಿ ನಿದ್ರೆ ಮಾಡುತ್ತಿದ್ದನು. ಅವನ ಈಟಿಯು ಅವನ ತಲೆದಿಂಬಿನ ಬಳಿಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲು ಅಬ್ನೇರನೂ, ಜನರೂ ಮಲಗಿದ್ದರು.
8 ८ तेव्हा अबीशय दावीदाला म्हणाला, “आज परमेश्वराने तुझा शत्रू तुझ्या हाती दिला आहे; तर आता मी तुला विनंती करतो मला भाल्याने एकदाच घाव मारून त्यास भूमीवर ठार करून दे, मी त्यास दुसरा घाव मारणार नाही.”
ಆಗ ಅಬೀಷೈಯನು ದಾವೀದನಿಗೆ, “ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಿಂದ ನೆಲಕ್ಕೆ ಹತ್ತುವಂತೆ ತಿವಿಯಲು ಅಪ್ಪಣೆಕೊಡಬೇಕು; ಎರಡು ಸಾರಿ ಹೊಡೆಯುವುದಿಲ್ಲ,” ಎಂದನು.
9 ९ पण दावीद अबीशयाला म्हणाला, “त्यांचा वध करू नकोस कारण परमेश्वराच्या अभिषिक्तावर आपला हात टाकून कोण निर्दोष राहील?”
ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.
10 १० दावीद म्हणाला, “परमेश्वर जिवंत आहे; परमेश्वर त्यास मारील किंवा त्याचा मरण्याचा दिवस येईल किंवा तो खाली लढाईत जाऊन नष्ट होईल.
ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
11 ११ मी आपला हात परमेश्वराच्या अभिषिक्तावर टाकावा असे परमेश्वराने माझ्याकडून घडू देऊ नये; परंतु आता मी तुला विनंती करतो की, तू त्याच्या उशाजवळचा भाला व पाण्याचा लोटा घे; मग आपण जाऊ.”
ನಾನು ನನ್ನ ಕೈಯನ್ನು ಯೆಹೋವ ದೇವರ ಅಭಿಷಿಕ್ತನ ಮೇಲೆ ಹಾಕದ ಹಾಗೆ ಯೆಹೋವ ದೇವರು ನನಗೆ ತಡೆಯಲಿ. ಈಗ ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೋ ನಾವು ಹೋಗೋಣ,” ಎಂದನು.
12 १२ तेव्हा शौलाच्या उशाजवळून भाला व पाण्याचा लोटा हे दावीदाने घेतले मग कोणाला न दिसता व कोणाला न कळता व कोणी जागा न होता ते निघून गेले कारण ते सर्व झोपेत होते. परमेश्वराकडून त्याच्यांवर गाढ झोप आली होती.
ದಾವೀದನು ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೊಂಡನು. ಅವರು ಹೊರಟು ಹೋದರು. ಒಬ್ಬರಾದರೂ ನೋಡಲಿಲ್ಲ ಇಲ್ಲವೆ ತಿಳಿದುಕೊಳ್ಳಲಿಲ್ಲ, ಅರಿತಿದ್ದಿಲ್ಲ, ಯಾರೂ ಎಚ್ಚೆತ್ತಿರಲಿಲ್ಲ. ಏಕೆಂದರೆ ಯೆಹೋವ ದೇವರಿಂದ ಗಾಢನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರು ಗಾಢ ನಿದ್ರೆಯಲ್ಲಿದ್ದರು.
13 १३ नंतर दावीद पलीकडे डोंगराच्या शिखरावर जाऊन दूर उभा राहिला आणि त्याच्यामध्ये मोठे अंतर होते;
ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ, ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಉಂಟಾಗುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು,
14 १४ तेव्हा दावीदाने लोकांस व नेराचा मुलगा अबनेर याला हाक मारली. तो म्हणाला, “अबनेरा तू उत्तर करीत नाहीस काय?” तेव्हा अबनेराने उत्तर देऊन म्हटले, “राजाला हाक मारणारा असा तू कोण आहेस?”
ಸೈನಿಕರಿಗೂ ನೇರನ ಮಗನಾದ ಅಬ್ನೇರನಿಗೂ ಕೇಳಿಸುವಂತೆ ಕೂಗಿ, “ಅಬ್ನೇರನೇ, ನೀನು ಉತ್ತರ ಕೊಡುವುದಿಲ್ಲವೋ?” ಎಂದನು. ಅದಕ್ಕೆ ಅಬ್ನೇರನು ಉತ್ತರವಾಗಿ, “ಅರಸನಿಗೆ ಎದುರಾಗಿ ಕೂಗುವ ನೀನು ಯಾರು?” ಎಂದನು.
15 १५ मग दावीद अबनेराला म्हणाला, “तू वीर पुरुष नाहीस काय आणि इस्राएलात तुझ्यासारखा कोण आहे? तर तू आपला प्रभू राजा याच्यावर पहारा का केला नाही? कारण लोकातला कोणीएक तुझा प्रभू राजा याचा घात करायला आला होता.
ಆಗ ದಾವೀದನು ಅಬ್ನೇರನಿಗೆ, “ನೀನು ಪರಾಕ್ರಮಶಾಲಿಯಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವುದಕ್ಕೆ ಬಂದಿದ್ದನು.
16 १६ ही जी गोष्ट तू केली ती बरी नाही; परमेश्वर जिवंत आहे. तुम्ही आपला प्रभू परमेश्वराचा अभिषिक्त याला राखले नाही, म्हणून तुम्ही मरायला योग्य आहा. तर आता पाहा राजाचा भाला व पाण्याचा लोटा त्याच्या उशाजवळ होता तो कोठे आहे?”
ನೀನು ಮಾಡಿದ ಈ ಕಾರ್ಯ ಒಳ್ಳೆಯದಲ್ಲ. ಯೆಹೋವ ದೇವರ ಜೀವದಾಣೆ, ಯೆಹೋವ ದೇವರ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದ್ದರಿಂದ, ನೀವು ಮರಣಕ್ಕೆ ಯೋಗ್ಯರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ, ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು,” ಎಂದನು.
17 १७ तेव्हा शौल दावीदाची वाणी ओळखून म्हणाला, “माझ्या मुला दावीदा ही तुझी वाणी आहे काय?” दावीद म्हणाला, “माझ्या प्रभू राजा, ही माझी वाणी आहे.”
ಆಗ ಸೌಲನು ದಾವೀದನ ಸ್ವರವನ್ನು ತಿಳಿದುಕೊಂಡು, “ನನ್ನ ಪುತ್ರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ?” ಎಂದನು. ದಾವೀದನು, “ಅರಸನಾದ ನನ್ನ ಒಡೆಯನೇ, ನನ್ನ ಧ್ವನಿಯೇ ಹೌದು,” ಎಂದನು.
18 १८ तो म्हणाला, “माझा प्रभू आपल्या दासाच्या पाठीस का लागला आहे? मी तर काय केले आहे? माझ्या हाती काय वाईट आहे?
“ನನ್ನ ಒಡೆಯನು ತನ್ನ ಸೇವಕನನ್ನು ಹೀಗೆ ಹಿಂದಟ್ಟುವುದೇನು? ನಾನೇನು ಮಾಡಿದೆನು?
19 १९ तर आता मी तुम्हास विनंती करतो माझ्या प्रभू राजाने आपल्या दासाचे बोलणे ऐकावे: परमेश्वराने तुम्हास माझ्यावर चेतवले असले तर त्याने अर्पण मान्य करावे. परंतु मनुष्याच्या संतानांनी चेतवले असले, तर ती परमेश्वराच्यासमोर शापित होवोत. कारण आज मला परमेश्वराच्या वतनात वाटा मिळू नये म्हणून त्यांनी मला बाहेर लावून म्हटले की, जा अन्य देवांची सेवा कर.
ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
20 २० तर आता माझे रक्त परमेश्वराच्या समक्षतेपासून दूर भूमीवर पडू नये; कारण जसा कोणी डोंगरावर तितराची शिकार करतो तसा, एका पिसवेचा शोध करण्यास इस्राएलाचा राजा निघून आला आहे.”
ಆದ್ದರಿಂದ ಯೆಹೋವ ದೇವರ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ, ಇಸ್ರಾಯೇಲಿನ ಅರಸನು ಒಂದು ನೊಣವನ್ನು ಹುಡುಕಲು ಹೊರಟನು,” ಎಂದನು.
21 २१ तेव्हा शौल म्हणाला, “मी पाप केले आहे; माझ्या मुला दावीदा माघारा ये; माझा जीव आज तुझ्या दृष्टीने मोलवान होता, म्हणून मी यापुढे तुझे वाईट करणार नाही; पाहा मी मूर्खपणाने वागून फार अपराध केला आहे.”
ಆಗ ಸೌಲನು, “ನಾನು ಪಾಪಮಾಡಿದೆನು. ನನ್ನ ಮಗನಾದ ದಾವೀದನೇ ತಿರುಗಿ ಬಾ. ಏಕೆಂದರೆ ನನ್ನ ಪ್ರಾಣ ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡು ಮಾಡೆನು. ಇದುವರೆಗೆ ನಾನು ಮಾಡಿದ್ದು ಹುಚ್ಚುತನವೂ, ದೊಡ್ಡ ತಪ್ಪೂ ಆಗಿದೆ,” ಎಂದನು.
22 २२ मग दावीदाने असे उत्तर केले की, “हे राजा पाहा हा भाला, तरुणातील एकाने इकडे येऊन तो घ्यावा.
ದಾವೀದನು ಉತ್ತರವಾಗಿ, “ಅರಸನ ಈಟಿಯು ಇಲ್ಲಿ ಇದೆ. ಸೇವಕರಲ್ಲಿ ಒಬ್ಬನು ಈ ಕಡೆಗೆ ಬಂದು, ಅದನ್ನು ತೆಗೆದುಕೊಂಡು ಹೋಗಲಿ.
23 २३ परमेश्वर प्रत्येक मनुष्यास त्याचा न्याय व त्याचे विश्वासूपण याप्रमाणे परत करो. कारण आज परमेश्वराने तुम्हास माझ्या हाती दिले असता मी आपला हात परमेश्वराच्या अभिषिक्तावर टाकला नाही.
ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು.
24 २४ पाहा जसा तुमचा जीव माझ्या दृष्टीने मोलवान होता, तसा माझा जीव परमेश्वराच्या दृष्टीने मोलवान होवो; आणि तो सर्व संकटातून सोडवो.”
ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು.
25 २५ तेव्हा शौल दावीदाला म्हणाला, “माझ्या मुला दावीदा तू आशीर्वादित हो” तू मोठी कार्ये करशील व प्रबल होशील. मग दावीद आपल्या वाटेने गेला आणि शौलही आपल्या ठिकाणी परत गेला.
ಆಗ ಸೌಲನು ದಾವೀದನಿಗೆ, “ನನ್ನ ಮಗನಾದ ದಾವೀದನೇ, ದೇವರು ನಿನ್ನನ್ನು ಆಶೀರ್ವದಿಸಲಿ. ನೀನು ಮಹತ್ಕಾರ್ಯಗಳನ್ನು ಮಾಡುವೆ, ಗೆದ್ದೇ ಗೆಲ್ಲುವೆ,” ಎಂದನು. ಹಾಗೆಯೇ ದಾವೀದನು ತನ್ನ ಮಾರ್ಗವಾಗಿ ಹೋದನು. ಸೌಲನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.