< 2 इतिहास 20 >
1 १ यानंतर मवाबी, अम्मोनी आणि काही मऊनी लोक युध्दाच्या हेतूने यहोशाफाटावर चालून आले.
ಇದರ ತರುವಾಯ ಮೋವಾಬ್ಯರೂ, ಅಮ್ಮೋನಿಯರೂ, ಮೆಗೂನ್ಯರೂ ಯೆಹೋಷಾಫಾಟನ ಮೇಲೆ ಯುದ್ಧಮಾಡಲು ಬಂದರು.
2 २ काही लोकांनी येऊन यहोशाफाटाला खबर दिली की, “मृतसमुद्राच्या पलीकडून अराम देशाकडून मोठी सेना तुमच्यावर चाल करून येत आहे. ती हससोन-तामार!” म्हणजेच एन-गेदी येथे येऊन ठेपली सुध्दा.
ಆಗ ಕೆಲವರು ಬಂದು ಯೆಹೋಷಾಫಾಟನಿಗೆ, “ಅರಾಮಿನ ಈಚೆಯಲ್ಲಿರುವ ಲವಣ ಸಮುದ್ರದ ಆಚೆಯಿಂದ ನಿನಗೆ ವಿರೋಧವಾಗಿ ಮಹಾ ಸಮೂಹವೊಂದು ಬರುತ್ತದೆ. ಅವರು ಏನ್ಗೆದಿ ಎಂಬ ಹಜಜೋನ್ ತಾಮಾರಿನಲ್ಲಿ ಇದ್ದಾರೆ,” ಎಂದು ತಿಳಿಸಿದರು.
3 ३ यहोशाफाट घाबरला आणि त्याने याबाबतीत परमेश्वरास काय करावे, असे विचारायचे ठरवले. त्याने यहूदामध्ये सर्वांसाठी उपवासाची घोषणा केली.
ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.
4 ४ तेव्हा यहूदातून, यहूदाच्या सर्व नगरांमधून लोक यहूदाच्या साहाय्याची परमेश्वराकडे याचना करायला जमले.
ಆದ್ದರಿಂದ ಯೆಹೂದದವರು ಯೆಹೋವ ದೇವರಿಂದ ಸಹಾಯವನ್ನು ಕೇಳಿಕೊಳ್ಳಲು ಸಮಸ್ತ ಯೆಹೂದದ ಪಟ್ಟಣಗಳಿಂದ ಕೂಡಿಬಂದರು.
5 ५ यहोशाफाट, परमेश्वराच्या मंदिरात नवीन अंगणासमोर होता. यहूदा आणि यरूशलेमेच्या लोकांमध्ये तो उभा राहिला.
ಆಗ ಯೆಹೋಷಾಫಾಟನು ಹೊಸ ಅಂಗಳದ ಮುಂದೆ ಯೆಹೋವ ದೇವರ ಮಂದಿರದಲ್ಲಿರುವ ಯೆಹೂದದ ಯೆರೂಸಲೇಮಿನ ಜನಸಮೂಹದ ಮಧ್ಯದಲ್ಲಿ ನಿಂತು:
6 ६ तो म्हणाला, “आमच्या पूर्वजांच्या परमेश्वर देवा, स्वर्गातील परमेश्वर तूच आहेस. सर्व राष्ट्रामधल्या सर्व राज्यांचा तूच शास्ता आहेस. सगळे सामर्थ्य आणि सत्ता तुझ्या ठायी आहे. कोणीही तुझ्याविरुध्द जाऊ शकत नाही.”
“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?
7 ७ तूच आमचा परमेश्वर आहेस या प्रदेशातील रहिवाश्यांना तू हाकलून लावलेस. तुझ्या या इस्राएलादेखतच तू हे केलेस. तुझा मित्र अब्राहाम याच्या वंशजांना तू ही भूमी कायमची बहाल केलीस.
ನೀವು ನಿಮ್ಮ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿಬಿಟ್ಟು, ಅದನ್ನು ನಿಮ್ಮ ಸ್ನೇಹಿತನಾದ ಅಬ್ರಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀವು, ನಮ್ಮ ದೇವರಲ್ಲವೋ?
8 ८ अब्राहामाचे वंशज या प्रदेशात राहिले आणि तुझ्या नावाकरिता त्यांनी मंदिर बांधले.
ಅವರು ಅದರಲ್ಲಿ ನಿವಾಸಮಾಡಿ, ಅದರಲ್ಲಿ ನಿಮ್ಮ ಹೆಸರಿಗೆ ಪರಿಶುದ್ಧವಾದ ಸ್ಥಳವನ್ನು ಕಟ್ಟಿಸಿ,
9 ९ ते म्हणाले, तलवार, शासन, रोगराई किंवा दुष्काळ यांच्यारुपाने आमच्यावर अरिष्ट कोसळले असता आम्ही या मंदिरासमोर, आणि तुझ्यापुढे उभे राहू. या मंदिराला तुझे नाव दिले आहे, “संकटाच्या वेळी आम्ही तुझा मोठ्याने धावा करु, आमची हाक ऐकून तू आम्हास सोडव.”
‘ನಿಮ್ಮ ಹೆಸರು ಈ ಆಲಯದಲ್ಲಿರುವುದರಿಂದ ಖಡ್ಗವೂ ನ್ಯಾಯತೀರಿಸುವ ಶಿಕ್ಷೆಯೂ, ಘೋರವ್ಯಾಧಿಯೂ ಬರವೇನಾದರೂ ನಮ್ಮ ಮೇಲೆ ಬಂದರೆ, ನಾವು ಈ ಆಲಯದ ಮುಂದೆಯೂ, ನಿಮ್ಮ ಸಮ್ಮುಖದಲ್ಲಿಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿಮ್ಮನ್ನು ಕೂಗುವಾಗ, ನೀವು ಕೇಳಿ ರಕ್ಷಿಸುವಿರಿ,’ ಎಂದು ಹೇಳಲಿಲ್ಲವೇ?
10 १० “पण यावेळी अम्मोन, मवाब आणि सेईर पर्वत या भागातले हे लोक आहेत. इस्राएल लोक मिसरहून आले तेव्हा इस्राएल लोकांस तू त्यांच्या प्रदेशात प्रवेश करु दिला नाहीस. त्यामुळे इस्राएल लोकांनी तिकडे पाठ फिरवली आणि त्यांचे उच्चाटन केले नाही.
“ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.
11 ११ पण तेव्हाच त्यांच्या नायनाट न केल्याचे हे काय फळ मिळाले पाहा, ते आम्हास आमच्या प्रदेशातून हुसकावून लावायला निघाले आहेत. हा प्रदेश तू आम्हास बहाल केला आहेस.
ಅವರು ಬಂದು, ನೀವು ನಮಗೆ ಸ್ವಾಧೀನಮಾಡಿಕೊಳ್ಳಲು ಕೊಟ್ಟ ನಿಮ್ಮ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಡಿಸುವುದರಿಂದ ನಮಗೆ ಪ್ರತೀಕಾರ ಮಾಡುತ್ತಾರೆ.
12 १२ हे देवा, या लोकांस चांगले शासन कर. आमच्यावर चाल करून येणाऱ्या या भल्या थोरल्या सेनेला तोंड द्यायचे सामर्थ्य आमच्यात नाही. आम्हास काही सुचेनासे झाले आहे. म्हणून आमचे डोळे तुझ्याकडे लागलेले आहे.”
ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.
13 १३ यहूदातील सर्व मंडळी आपल्या पत्नी आणि तान्ह्या मुलांसकट सर्व अपत्यांना घेऊन परमेश्वरासमोर उभी होती.
ಹೀಗೆ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಯೆಹೋವ ದೇವರ ಮುಂದೆ ನಿಂತರು.
14 १४ तेव्हा यहजीएल याच्यात परमेश्वराच्या आत्म्याचा संचार झाला. यहजीएल हा जखऱ्याचा पुत्र. जखऱ्या बनायाचा पुत्र. बनाया यईएलाचा पुत्र. आणि यईएल मत्तन्याचा पुत्र. यहजीएल लेवी असून आसाफच्या वंशातला होता. या सभेत
ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.
15 १५ यहजीएल म्हणाला, “राजा यहोशाफाट, तसेच यहूदा आणि यरूशलेममधील रहिवाश्यांनो, मी काय म्हणतो ते ऐका. परमेश्वराचा संदेश असा आहे. एवढी मोठी सेना पाहून घाबरुन जाऊ नका किंवा काळजी करु नका. हे युध्द तुमचे नव्हे तर परमेश्वराचे युध्द आहे.
ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ.
16 १६ उद्या त्यांचा सामना करायला जा आणि लढा. ते सीसच्या खिंडीतून वर येत आहेत. दरीच्या टोकाला यरुएल वाळवंटाच्या दुसऱ्या बाजूला तुमची त्यांच्याशी गाठ पडेल.
ನಾಳೆ ಬೆಳಿಗ್ಗೆ ನೀವು ಅವರ ವಿರೋಧವಾಗಿ ಹೋಗಿರಿ. ಅವರು ಚೀಚ್ ಎಂಬ ಕಣಿವೆಯಿಂದ ಬರುತ್ತಾರೆ. ಯೆರೂಯೇಲ್ ಮರುಭೂಮಿಯ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
17 १७ तुम्हास या लढाईत लढावे असे लागणारच नाही. आपल्या जागी ठाम उभे राहा. परमेश्वराने तुमचे रक्षण केलेले तुम्हास आढळून येईल. यहूदा आणि यरूशलेम लोकहो, भिऊ नका, चिंता करु नका. परमेश्वर तुमच्यासोबत आहे. तेव्हा उद्या त्यांच्यावर चालून जा.”
ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.
18 १८ यहोशाफाटाने मस्तक भूमीपर्यंत लववले. यहूदा आणि यरूशलेममधील सर्व लोक यांनी परमेश्वरापुढे दंडवत घातले. त्या सर्वांनी परमेश्वराची आराधना केली.
ಆಗ ಯೆಹೋಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು. ಯೆಹೂದದವರೆಲ್ಲರೂ, ಯೆರೂಸಲೇಮಿನ ನಿವಾಸಿಗಳೆಲ್ಲರೂ ಯೆಹೋವ ದೇವರ ಮುಂದೆ ಅಡ್ಡಬಿದ್ದು ಯೆಹೋವ ದೇವರನ್ನು ಆರಾಧಿಸಿದರು.
19 १९ कहाथ आणि कोरह या घराण्यांतील लेवी इस्राएलच्या परमेश्वर देवाची भजने म्हणण्यास उभे राहिले. उच्च स्वरात त्यांनी परमेश्वराची भजने म्हटली.
ಇದಲ್ಲದೆ ಕೊಹಾತ್ಯರ ಮಕ್ಕಳಲ್ಲಿಯೂ, ಕೋರಹೀಯರ ಮಕ್ಕಳಲ್ಲಿರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ತುತಿಸಲು ಎದ್ದು ನಿಂತರು.
20 २० यहोशाफाटाचे सैन्य भल्यासकाळी तकोवाच्या वाळवंटात गेले. ते निघत असताना यहोशाफाट समोर उभा राहून त्यांना म्हणाला, “यहूदा आणि यरूशलेम नगरांमधील लोकहो, ऐका. आपल्या परमेश्वर देवावर श्रध्दा ठेवा आणि खंबीरपणे उभे राहा. परमेश्वराच्या संदेष्ट्यांवर विश्वास ठेवा. जय तुमचाच आहे.”
ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.
21 २१ यहोशाफाटाने लोकांस प्रोत्साहन दिले व सूचना दिल्या. परमेश्वराचे स्तवन करणारी माणसे त्याने निवडली. परमेश्वर पवित्र आणि कल्याणकारी आहे म्हणून त्याचे स्तवन करण्यासाठी त्याने या गायकांना नेमले. त्यांनी सैन्यासमोर उभे राहून स्तुतिगीते म्हटली. ते म्हणाले, “परमेश्वराचे स्तवन करा कारण त्याची प्रीती सर्वकाळ आहे.”
ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.
22 २२ लोकांनी देवाची स्तुतिगीते म्हणण्यास सुरुवात केल्याबरोबर परमेश्वराने यहूदावर चाल करून आलेल्या अम्मोनी, मवाबी आणि सेईर पर्वतांतील लोकांशी गनिमी काव्याने लढणारी फौज मोक्याच्या जागी बसवली.
ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.
23 २३ अम्मोनी आणि मवाबी लोक सेईर पर्वतातल्या लोकांशी लढू लागले. अम्मोन्यांनी आणि मवाब्यांनी त्यांचा पुरता संहार केला. सेईरातल्या लोकांचा बीमोड केल्यानंतर त्यांनी एकमेकांचा नाश केला.
ಅಮ್ಮೋನಿಯರು, ಮೋವಾಬ್ಯರು ಸೇಯೀರ್ ಪರ್ವತದ ನಿವಾಸಿಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯೀರನ ನಿವಾಸಿಗಳನ್ನು ಪೂರ್ಣವಾಗಿ ವಧಿಸಿದ ತರುವಾಯ, ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.
24 २४ यहूदी लोक वाळवंटातील टेहळणीच्या बुरुजापाशी आले. शत्रूचे विशाल सैन्य कुठे दिसते का हे ते पाहू लागले पण त्यांना फक्त जमिनीवर विखुरलेले मृतदेह तेवढे दिसले. कोणीही जिवंत राहिला नव्हता.
ಯೆಹೂದದವರು ಮರುಭೂಮಿಯಲ್ಲಿರುವ ಎತ್ತರದ ಸ್ಥಳಕ್ಕೆ ಬಂದು, ಅಲ್ಲಿನ ಗುಂಪನ್ನು ನೋಡಿದಾಗ, ಅವರಲ್ಲಿ ಒಬ್ಬನೂ ಉಳಿಯದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
25 २५ यहोशाफाट आणि त्याचे सैन्य लुटीसाठी मृतदेहापाशी आले. त्यामध्ये त्यांना खूप, धन, आणि मौल्यवान वस्तू मिळाल्या. त्या त्यांनी स्वत: ला घेतल्या. लूट एवढी होती की ती यहोशाफाट आणि त्याचे लोक यांना नेता येईना. ती प्रेतांमधून काढून न्यायला त्यांना तीन दिवस लागले.
ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.
26 २६ चौथ्या दिवशी यहोशाफाट आणि त्याचे सैन्य बराखाच्या खोऱ्यात जमले. याठिकाणी त्यांनी परमेश्वरास धन्यवाद दिले. म्हणून आजही या खोऱ्याचे नाव आशीर्वादाचे खोरे असे आहे.
ನಾಲ್ಕನೆಯ ದಿವಸದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡರು. ಅಲ್ಲಿ ಯೆಹೋವ ದೇವರನ್ನು ಸ್ತುತಿಸಿದರು. ಆದಕಾರಣ ಇಂದಿನವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
27 २७ मग यहोशाफाटाने समस्त यहूदा आणि यरूशलेम लोकांस यरूशलेम येथे माघारी नेले. परमेश्वराने त्यांच्या शत्रूंचा पाडाव केल्यामुळे त्यांच्यात आनंदी आनंद पसरला होता.
ಯೆಹೋವ ದೇವರು ಅವರ ಶತ್ರುಗಳ ಮೇಲೆ ಅವರು ಸಂತೋಷಪಡುವಂತೆ ಮಾಡಿದ್ದರಿಂದ, ಅವರು ಹರ್ಷಗೊಂಡು ಯೆರೂಸಲೇಮಿಗೆ ತಿರುಗಿ ಹೋಗುವುದಕ್ಕೆ ಯೆಹೂದ ಮತ್ತು ಯೆರೂಸಲೇಮಿನವರ ಮುಂಭಾಗದಲ್ಲಿ ಯೆಹೋಷಾಫಾಟನೂ ಹೊರಟು,
28 २८ यरूशलेमेला येऊन ते सतारी, वीणा व कर्णे घेऊन परमेश्वराच्या मंदिरात गेले.
ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದರು.
29 २९ परमेश्वराने इस्राएलाच्या शत्रू सैन्याशी लढा दिला हे ऐकून सर्व देशांमधल्या सर्व राज्यांमध्ये परमेश्वराविषयी धाक निर्माण झाला.
ಯೆಹೋವ ದೇವರು ಇಸ್ರಾಯೇಲರ ಶತ್ರುಗಳ ಮೇಲೆ ಯುದ್ಧ ಮಾಡಿದರೆಂದು ಜನರು ಕೇಳಿದಾಗ, ದೇವರ ಭಯವು ಆ ದೇಶದಲ್ಲಿ ಸಕಲ ರಾಜ್ಯಗಳ ಮೇಲೆ ಇತ್ತು.
30 ३० त्यामुळे यहोशाफाटाच्या राज्यात शांतता नांदली. देवाने यहोशाफाटाला सर्व बाजूंनी स्वास्थ्य दिले.
ಹೀಗೆ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು. ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿಕೊಟ್ಟರು.
31 ३१ यहोशाफाटाने यहूदा देशावर राज्य केले. राज्यावर आला तेव्हा तो पस्तीस वर्षांचा होता. त्याने यरूशलेमेवर पंचवीस वर्षे राज्य केले. यहोशाफाटाच्या आईचे नाव अजूबा ही शिल्हीची कन्या.
ಯೆಹೋಷಾಫಾಟನು ಯೆಹೂದ್ಯರ ಮೇಲೆ ಆಳಿದನು. ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.
32 ३२ आपले पिता आसा यांच्याप्रमाणेच यहोशाफाट योग्य मार्गाने वागला. त्याने मार्ग सोडला नाही. परमेश्वराच्या दृष्टीने भले तेच यहोशाफाटाने केले.
ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
33 ३३ पण उच्चस्थाने काढण्यात आली नव्हती. लोकांनीही आपले मन आपल्या पूर्वजांच्या परमेश्वराकडे वळवले नव्हते.
ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಜನರು ಅವರ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸ್ಥಿರ ಮಾಡಿಕೊಂಡಿರಲಿಲ್ಲ.
34 ३४ हनानीचा पुत्र येहू याच्या बखरीमध्ये यहोशाफाटाच्या बाकीच्या कृत्यांची संपूर्ण नोंद आहे. इस्राएलच्या राजांचा इतिहास या ग्रंथात या गोष्टींचा समावेश करून त्यांची नोंद केली आहे.
ಯೆಹೋಷಾಫಾಟನ ಇತರ ಕ್ರಿಯೆಗಳು, ಆರಂಭದಿಂದ ಅಂತ್ಯದವರೆಗೆ, ಇಸ್ರಾಯೇಲರ ಅರಸುಗಳ ಗ್ರಂಥದಲ್ಲಿ, ಅಂದರೆ, ಹನಾನೀಯ ಮಗನಾದ ಯೇಹುವಿನ ಗ್ರಂಥದಲ್ಲಿ ಬರೆದಿರುತ್ತವೆ.
35 ३५ इस्राएलचा राजा अहज्या याच्याशी पुढे यहूदाचा राजा यहोशाफाट याने करार केला. यहोशाफाट ने हे वाईट केले.
ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು, ಬಹು ದುಷ್ಟನಾಗಿ ನಡೆದ ಇಸ್ರಾಯೇಲಿನ ಅರಸನಾದ ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡನು.
36 ३६ तार्शीश नगराला जायच्या गलबतांबद्दल हा करार होता. एसयोन-गेबेर येथे त्यांनी या गलबतांची बांधणी केली.
ಇದಲ್ಲದೆ ತಾರ್ಷೀಷಿಗೆ ಹೋಗುವುದಕ್ಕಾಗಿ ಹಡಗುಗಳನ್ನು ಮಾಡಿಸಲು, ಅವನ ಸಂಗಡ ಒಪ್ಪಂದ ಮಾಡಿಕೊಂಡು ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಮಾಡಿಸಿದರು.
37 ३७ पुढे अलियेजर ने यहोशाफाटाविरुध्द भविष्य सांगितले. मारेशा नगरातला दोदावाहू याचा अलियेजर हा पुत्र. तो म्हणाला, “यहोशाफाट, तू अहज्याशी हातमिळवणी केलीस म्हणून परमेश्वर तुझ्या कामांचा विध्वंस करील.” आणि जहाजे फुटली. त्यामुळे यहोशाफाट आणि अहज्या यांना ती तार्शीशला पाठवता आली नाहीत.
ಆಗ ಮಾರೇಷಾ ಊರಿನ ದೋದವಾಹುವಿನ ಮಗನಾದ ಎಲೀಯೆಜೆರನು ಯೆಹೋಷಾಫಾಟನಿಗೆ ವಿರೋಧವಾಗಿ ಪ್ರವಾದಿಸಿ, “ನೀನು ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡಿದ್ದರಿಂದ, ಯೆಹೋವ ದೇವರು ನೀನು ಮಾಡಿದವುಗಳನ್ನು ನಾಶಮಾಡುವರು,” ಎಂದು ಹೇಳಿದನು. ಅದರಂತೆಯೇ, ಆ ಹಡಗುಗಳು ತಾರ್ಷೀಷಿಗೆ ಹೋಗದೆ ಒಡೆದುಹೋದವು.