< 2 इतिहास 30 >
1 १ हिज्कीयाने इस्राएल आणि यहूदामधील सर्व लोकांस निरोप पाठवले; तसेच एफ्राइम आणि मनश्शेच्या लोकांस पत्रे लिहिली. इस्राएलाचा परमेश्वर देव यांच्याप्रीत्यर्थ वल्हांडणाचा सण साजरा करायला यरूशलेमातील परमेश्वराच्या मंदिरात यावे असे त्याने त्या निरोप पत्रांद्वारे कळवले.
ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು.
2 २ यरूशलेम येथील मंडळी आणि सर्व सरदार यांच्याशी विचार विनिमय करून राजा हिज्कीयाने वल्हांडणाचा सण दुसऱ्या महिन्यात साजरा करायचे ठरवले.
ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.
3 ३ सणासाठी पुरेशा याजकांचे पवित्रीकरण झाले नव्हते तसेच यरूशलेमामध्ये सगळे लोक जमले नव्हते म्हणून नेहमीच्या वेळेला हा सण साजरा करता येणे शक्य नव्हते.
ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು.
4 ४ तेव्हा राजासह सर्व मंडळींना ही गोष्ट पसंत पडली.
ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು.
5 ५ बैर-शेबापासून दान पर्यंत इस्राएलभर त्यांनी दवंडी पिटली कि परमेश्वर देव ह्याच्याप्रीत्यर्थ वल्हांडणासाठी यरूशलेमेला यायला सर्व लोकांस आवाहन करण्यात आले. मोशेच्या नियमशास्त्रात सांगितलेल्या पारंपारिक पध्दतीने बहुसंख्य लोकांनी फार वर्षात हा सण साजरा केला नव्हता.
ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.
6 ६ त्यामुळे निरोप्यांनी राजाचा संदेश इस्राएल आणि यहूदाभर फिरवला. त्याचा मसुदा असा होता: “इस्राएल लोकहो, अब्राहाम, इसहाक आणि इस्राएल (याकोब) यांच्या परमेश्वर देवाकडे परत फिरा. म्हणजे अश्शूर राजांच्या तावडीतून सुटून जे सुखरुप राहिले आहेत त्यांना परमेश्वर जवळ करील.
ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು.
7 ७ आपले पिता किंवा भाऊबंद यांचे अनुकरण करु नका. परमेश्वर त्यांचा देव होता, पण त्यांनी त्याच्याकडे पाठ फिरवली. तेव्हा त्यांच्याविषयी परमेश्वराने इतरांच्या मनात घृणा निर्माण केली व त्यांना निंदेला प्रवृत्त केले. त्यामुळे झालेली दुर्दशा तुम्ही पाहिली आहेच.
ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
8 ८ आपल्या पूर्वजांसारखे ताठर बनू नका. मनोभावे परमेश्वरास शरण जा मंदिराच्या पवित्र गाभाऱ्याकडे या. परमेश्वराने ते पवित्रस्थान कायमचे पवित्र केले आहे. परमेश्वर देवाची सेवा करा. तरच परमेश्वराचा तुमच्यावर भडकलेला कोप शांत होईल.
ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.
9 ९ तुम्ही परमेश्वराकडे परत फिरलात तर ज्याने तुमच्या भाऊबंदांना आणि लेकरांना कैद करून नेले त्यांना दयेचा पाझर फुटेल आणि तुमचे भाऊबंद आणि लेकरे आपल्याकडे परत येतील. परमेश्वर तुमचा देव दयाळू आणि कृपाळू आहे. त्याच्या आसऱ्याला गेलात तर तो तुमचा धिक्कार करणार नाही.”
ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.
10 १० एफ्राइम आणि मनश्शेच्या प्रदेशात निरोपे गावोगाव फिरले. ते पार जबुलून पर्यंत गेले. पण लोकांनी मात्र उपहासाने वागून त्यांची हेटाळणी केली.
ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
11 ११ आशेर, मनश्शे आणि जबुलून मधल्या काहींनी मात्र असे न करता विनम्रतेने यरूशलेमेला प्रयाण केले.
ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
12 १२ पुढे परमेश्वराच्या कृपेनेच असे घडून आले की राजा हिज्कीया आणि त्याचे सरदार यांच्या आज्ञेप्रमाणे वागायला यहूदाचे लोक तयार झाले. अशा रीतीने त्यांनी देवाचा शब्द पाळला.
ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.
13 १३ दुसऱ्या महिन्यात बेखमीर भाकरीचा सण साजरा करण्यासाठी लोक प्रचंड संख्येने यरूशलेमेत जमले. तो एक विशाल समुदाय होता.
ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು.
14 १४ यरूशलेम मधल्या खोट्या नाट्या दैवतांसाठी उभारलेल्या वेद्या तसेच धूप जाळायच्या वेद्या या लोकांनी उखडून टाकल्या आणि किद्रोन खोऱ्यात नेऊन टाकून दिल्या.
ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.
15 १५ दुसऱ्या माहिन्याच्या चौदाव्या दिवशी त्यांनी वल्हांडणाच्या यज्ञपशूचा बली दिला. याजक आणि लेवी यांनी तेव्हा लज्जित होऊन स्वत: ला पवित्र केले आणि होमबली परमेश्वराच्या मंदिरात आणले.
ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.
16 १६ देवाचा मनुष्य मोशेच्या नियमशास्त्रात सांगितल्याप्रमाणे ते आपापल्या जागी स्थानापन्न झाले. याजकांनी लेवीच्या हातून रक्त घेऊन ते वेदीवर शिंपडले.
ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
17 १७ येथे जमलेल्या पुष्कळशा लोकांनी स्वत: चे शुद्धीकरण केलेले नव्हते त्यामुळे वल्हांडणाचे यज्ञपशू मारायचा त्यांना अधिकार नव्हता. अशांसाठी ते काम लेवींनाच करावे लागत होते. लेवींनी सर्व यज्ञपशूंचे परमेश्वराकरता शुद्धीकरण केले.
ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು.
18 १८ एफ्राइम, मनश्शे, इस्साखार आणि जबुलून इथून आलेल्या बऱ्याच लोकांनी वल्हांडणासाठी योग्य तऱ्हेने स्वत: चे शुद्धीकरण केलेले नव्हते. ही पध्दत मोशेच्या नियमशास्त्राला सोडून होती. पण हिज्कीयाने त्यांच्या वतीने प्रार्थना केली.
ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, “ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ,
19 १९ तो म्हणाला, “परमेश्वर देवा, तू भला आहेस. तुझी आराधना योग्य तऱ्हेने व्हावी असे या लोकांस मनापासून वाटते. पण धर्मशास्त्राप्रमाणे त्यांनी शुद्धीकरण केलेले नाही. त्यांना क्षमा कर. आमच्या पूर्वजांपासूनचा तूच आमचा देव आहेस. अत्यंत पवित्रस्थानाच्या नियमाप्रमाणे त्यांच्यापैकी कोणी पवित्र झालेले नसले तरी तू त्यांना क्षमा कर.”
ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.
20 २० राजा हिज्कीयाने केलेली प्रार्थना परमेश्वराने ऐकली आणि लोकांस क्षमा केली.
ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.
21 २१ इस्राएलाच्या प्रजेने यरूशलेमामध्ये बेखमीर भाकरीचा सण सात दिवस साजरा केला. लोक आनंदात होते. लेवी आणि याजक यांनी रोज मन: पूर्वक परमेश्वराची स्तुतिस्तोत्रे गाईली.
ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.
22 २२ परमेश्वराची सेवा कशी करावी याचे उत्तम ज्ञान असलेल्या लेवींना राजा हिज्कीया उत्तेजन देत होता. सणाचे सात दिवस आनंदात घालवत लोकांनी शांत्यर्पणे वाहिली आणि आपल्या पूर्वजांच्या परमेश्वर देवासमोर पापाची कबूली दिली.
ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.
23 २३ वल्हांडणाचा सण आणखी सात दिवस साजरा करावा असे सर्वानुमते ठरले. त्याप्रमाणे त्यांनी आनंदाने साजरा केला.
ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು.
24 २४ यहूदाचा राजा हिज्कीयाने एक हजार बैल आणि सात हजार मेंढरे व पुढाऱ्यांनी एक हजार बैल व दहा हजार मेंढरे या समुदायाला दिली. त्यासाठी बऱ्याच याजकांना पवित्र व्हावे लागले.
ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು.
25 २५ यहूदातील सर्व लोक, याजकवर्ग, लेवी, इस्राएलमधील समुदाय तसेच इस्राएलातून यहूदात आलेले विदेशी प्रवासी हे सर्वजण अतिशय खुशीत होते.
ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
26 २६ यरूशलेमामध्ये आनंद पसरला होता. इस्राएलचा राजा दावीद याचा पुत्र शलमोन याच्या कारकिर्दीनंतर आजतागायत असा आनंदाचा प्रसंग कधी घडलाच नव्हता.
ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ.
27 २७ याजक व लेवी यांनी उठून लोकांस आशीर्वाद देण्याची परमेश्वरास प्रार्थना केली. परमेश्वराने त्यांचे ऐकले. त्यांची प्रार्थना स्वर्गातील आपल्या पवित्र स्थानी परमेश्वरास ऐकू गेली.
ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.