< 2 राजे 7 >

1 अलीशा म्हणाला, परमेश्वराचा हा संदेश लक्षपूर्वक ऐका, परमेश्वर म्हणतो या वेळेपर्यंत अन्नधान्याची रेलचेल होईल. शिवाय ते स्वस्तही असेल. शोमरोनच्या वेशीजवळच्या बाजारपेठेत एका शेकेलला मणभर मैदा किंवा दोन मण सातू सहज मिळेल.
ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.
2 तेव्हा राजाच्या अगदी निकट असलेला एक अधिकारी अलीशाला म्हणाला, “परमेश्वराने आकाशाला खिंडारे पाडली तरी असे घडणे शक्य नाही.” अलीशा त्यास म्हणाला, “आपल्या डोळ्यांनी तू ते बघशीलच पण तू मात्र त्यातले काही खाऊ शकणार नाहीस.”
ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.
3 वेशीजवळ कोड झालेली चार माणसे बसलेली होती. ती आपापसात बोलताना म्हणाली, आपण मृत्यूची वाट पाहत इथे कशाला बसलो अहोत?
ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?
4 शोमरोनात अन्नाचा दुष्काळ आहे. आपण तिथे गेलो तरी मरणारच आहोत. इथे थांबलो तरी मरणार आहोत. तेव्हा आपण अरामी छावणीवरच जावे. त्यांनी जीवदान दिले तर जगू. त्यांनी मारले तर मरुन जाऊ.
ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು.
5 तेव्हा ते चौघेजण संध्याकाळी अरामी सैन्याच्या तळाजवळ आले आणि अगदी टोकाशी जाऊन पाहतात तर तिथे कोणाचाच पत्ता नाही.
ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.
6 परमेश्वराच्या करणीने अरामी लोकांस आपल्यावर घोडे, रथ, विशाल सेना चालून येत आहे असा भास झाला तेव्हा ते आपापसात म्हणाले, “इस्राएलाच्या राजाने हित्ती आणि मिसरी राजांना द्रव्य देऊन आपल्यावर चाल करण्यास पाठवलेले दिसते.”
ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,
7 आणि अरामी लोकांनी फार उशीर व्हायच्या आत संध्याकाळीच तेथून पळ काढला. आपले तंबू, घोडे, गाढवे सगळे जसेच्या तसेच टाकून ते ते आपला जीव घेऊन तेथून पळाले.
ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.
8 शत्रूच्या छावणीजवळ आल्यावर, कोड झालेली ती चार माणसे एका तंबूत शिरली. तिथे त्यांनी खाणेपिणे केले. तिथले कपडेलत्ते आणि सोनेचांदी त्यांनी उचलली. सगळ्या गोष्टी त्यांनी लपवून ठेवल्या. मग ते दुसऱ्या तंबूत शिरले. तिथली चिजवस्तू बाहेर काढली, दुसरीकडे नेऊन ती लपवली.
ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.
9 आणि मग ते एकमेकांना म्हणाले, “आपण करतो ते बरे नाही. आज आपल्याजवळ चांगली बातमी असून आपण गप्प आहोत. सकाळी उजाडेपर्यंत जर आपण हे कुणाला सांगितले नाहीतर आपल्याला नक्कीच शासन होईल. तेव्हा आपण आता राजवाड्यात राहणाऱ्या लोकांस या गोष्टीची वर्दी देऊ.”
ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.
10 १० मग कोड झालेली ही माणसे आली आणि नगराच्या रखवालदाराला हाक मारुन म्हणाले, “आम्ही अराम्यांच्या छावणीवर गेलो होतो, पण तिथे कोणाचीच चाहूल लागली नाही. एकही मनुष्य तिथे नव्हता. तंबू मात्र तसेच उभे होते आणि घोडे, गाढवे जशीच्या तशी बांधून ठेवली होती. मनुष्यांचा मात्र पत्ता नव्हता.”
೧೦ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.
11 ११ तेव्हा रखवालदारांनी मोठ्याने पुकारा करून राजाच्या महालातील लोकांस ही खबर दिली.
೧೧ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು.
12 १२ रात्रीची वेळ होती, पण राजा अंथरुणावरुन उठला आणि आपल्या कारभाऱ्यांना म्हणाला, “या अरामी सैन्याचा डाव काय आहे ते मी तुम्हास सांगतो. आपण भुकेले आहोत हे त्यांना माहित आहे. म्हणून ते छावणी सोडून शेतात दडून बसले आहेत. आपण नगर सोडून बाहेर पडलो की आपल्याला जिवंत पकडायचे आणि त्यांनी नगरात घुसायचे असा त्यांचा मनसुबा दिसतोय.”
೧೨ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಉಪಾಯವನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುವುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಜೀವ ಸಹಿತವಾಗಿ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ” ಎಂದನು.
13 १३ यावर एक कारभारी राजाला म्हणाला, “गावात पाच घोडे अजून कसेबसे जिवंत आहेत. त्यांच्यावर बसून काहीजणांना तिथे जाऊन प्रत्यक्ष परिस्थती पाहून येऊ द्या. इस्राएलाचा जो समुदाय बाकी राहिला आहे त्या मनुष्यासारखी त्यांची गती होईल.”
೧೩ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು.
14 १४ तेव्हा दोन रथ व घोडे जुंपून त्यांना अरामी सैन्यामागे पाठवले. राजाने त्यांना अरामी सैन्याच्या छावणीत पाठवून प्रत्यक्ष परिस्थिती पाहून यायला सांगितले.
೧೪ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು.
15 १५ हे लोक अरामी सैन्याच्या मार्गावर यार्देन नदीपर्यंत गेले. वाटेवर सर्वत्र कपडे आणि शस्त्रे पडलेली त्यांना आढळली. घाईघाईने पळून जाताना अरामी लोक या वस्तू टाकून गेले होते. दूतांनी शोमरोनला परत येऊन हे राजाला सांगितले.
೧೫ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
16 १६ तेव्हा ते लोक अरामी छावणीकडे पळत सुटले आणि त्यांनी तेथील मौल्यवान चीजवस्तू पळवल्या. प्रत्येकाला भरपूर वस्तू मिळाल्या परमेश्वर म्हणाला होता तसेच झाले. लोकांस एका शेकेलला मणभर मैदा किंवा दोन मण सातू सहज घेता आला.
೧೬ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.
17 १७ आपल्या निकटच्या कारभाऱ्याला राजाने वेशीवर द्वारपाल म्हणून नेमले पण लोक शत्रूच्या छावणीवर अन्नासाठी तूटून पडले तेव्हा त्या द्वारपालाला तुडवून पुढे गेले. त्यामुळे तो मरण पावला. अलीशा या संदेष्ट्याकडे राजा आला होता तेव्हा देवाच्या मनुष्याने जे सांगितले त्यानुसार हे घडले.
೧೭ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
18 १८ अलीशाने राजाला सांगितले होते, “लोकांस मणभर मैदा किंवा दोन मण सातू शोमरोनच्या वेशीजवळच्या बाजार पेठेत एका शेकेलला घेता येईल.”
೧೮ದೇವರ ಮನುಷ್ಯನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು” ಎಂದು ಹೇಳಿದನು.
19 १९ पण या कारभाऱ्याने तेव्हा अलीशाला सांगितले, “परमेश्वराने आकाशाला खिंडार पाडले तरी हे होणार नाही!” यावर अलीशा त्या कारभाऱ्याला म्हणाला, “तू हे सर्व आपल्या डोळ्यांदेखत पाहशील पण तुला त्यातले काहीही खाता येणार नाही.”
೧೯ಆ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?” ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ” ಎಂದು ನುಡಿದಿದ್ದನು.
20 २० त्या कारभाऱ्याच्या बाबतीत नक्की तसेच झाले. लोक वेशीपाशी त्यास तुडवून त्याच्या अंगावरुन गेले आणि तो मेला.
೨೦ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.

< 2 राजे 7 >