< 2 शमुवेल 11 >
1 १ वसंत ऋतूमध्ये ज्यावेळी राजे युध्द मोहिमांवर जातात त्यावेळी दावीदाने यवाबाला सर्व नोकरा चाकरांचा लवाजमा आणि समस्त इस्राएलांना अम्मोन्यांच्या संहारासाठी पाठवले. यवाबाच्या सैन्याने अम्मोन्यांच्या राब्बा या राजधानीच्या शहराला वेढा घातला दावीद मात्र यरूशलेम येथेच राहिला.
೧ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
2 २ संध्याकाळी तो आपल्या पलगांवरून उठला, आणि राजमहालाच्या छतावरून फिरु लागला. तिथून त्यास एक स्त्री स्नान करताना दिसली. ती अतिशय रुपवान होती.
೨ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.
3 ३ तेव्हा दावीदाने आपल्या सेवकवर्गाला बोलवून तिची माहिती काढली सेवकाने सांगितले ती अलीयमची मुलगी बथशेबा, उरीया हित्ती याची पत्नी आहे.
೩ಕೂಡಲೆ ದಾವೀದನು ಒಬ್ಬನನ್ನು ಕರೆದು, “ಆ ಸ್ತ್ರೀ ಯಾರು?” ಎಂದು ವಿಚಾರಿಸಲು ಅವನು, “ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?” ಎಂದು ಉತ್ತರ ಕೊಟ್ಟನು.
4 ४ तिला आपल्याकडे घेऊन यायला दावीदाने निरोप्याला पाठवले. ती आल्यावर दावीदाने तिच्याशी शरीरसंबंध केला, नंतर स्नान करून शुध्द होऊन ती पुन्हा आपल्या घरी परतली.
೪ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.
5 ५ पण बथशेबा गर्भवती राहिली दावीदाला तिने निरोप पाठवला तिने सांगितले, मी गरोदर आहे.
೫ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು.
6 ६ दावीदाने यवाबाला निरोप पाठवला की, उरीया हित्तीला माझ्याकडे पाठवा. तेव्हा यवाबाने उरीया हित्तीला दावीदाकडे पाठवले.
೬ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.
7 ७ उरीया आल्यावर दावीद त्याच्याशी बोलला. उरीयाला त्याने यवाब, सर्व सैन्य, लढाई यांचे वर्तमान विचारले.
೭ಊರೀಯನು ಬಂದಾಗ ದಾವೀದನು, “ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?” ಎಂದು ವಿಚಾರಿಸಿದ, ನಂತರ
8 ८ मग दावीद उरीयाला म्हणाला, घरी जा आणि आराम कर उरीया महालातून बाहेर पडला त्यानंतर त्याच्यासाठी राजातर्फे भेट पाठवण्यात आली.
೮ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.
9 ९ पण उरीया घरी गेला नाही. तो महालाच्या बाहेरच दाराशी झोपून राहिला. राजाच्या सेवक वर्गाप्रमाणेच तो तिथे झोपला.
೯ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.
10 १० उरीया घरी परतला नसल्याचे सेवकांनी दावीदाला सांगितले. तेव्हा दावीद उरीयाला म्हणाला, तू लांबून प्रवास करून आला आहेस, तर तू घरी का गेला नाहीस?
೧೦ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ತಿಳಿದಾಗ ಅವನು ಊರೀಯನಿಗೆ, “ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ, ಯಾಕೆ ಮನೆಗೆ ಹೋಗಲಿಲ್ಲ?” ಅಂದನು.
11 ११ उरीया दावीदाला म्हणाला, पवित्र कराराचा कोश, इस्राएलचे सैनिक, आणि यहूदा हे राहुट्यांमध्ये राहत आहेत. माझा धनी यवाब आणि महाराजांचे (दावीदाचे) सेवक ही खुल्या मैदानात तळ देऊन आहेत. अशावेळी मीच तेवढे घरी जाऊन खाणेपिणे करणे आणि पत्नीच्या सहवासात झोपणे योग्य होणार नाही.
೧೧ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.
12 १२ दावीद उरीयाला म्हणाला, आजच्या दिवस इथे राहा उद्या मी तुला युध्दभूमीवर पाठवतो. उरीयाने त्या दिवशी यरूशलेमेमध्येच मुक्काम केला.
೧೨ಆಗ ದಾವೀದನು ಅವನಿಗೆ, “ನೀನು ಈ ಹೊತ್ತು ಇಲ್ಲೇ ಇರು. ನಾಳೆ ನಿನ್ನನ್ನು ಕಳುಹಿಸುತ್ತೇನೆ” ಎಂದು ಆಜ್ಞಾಪಿಸಿದನು. ಊರೀಯನು ಆ ದಿನ ಯೆರೂಸಲೇಮಿನಲ್ಲೇ ಇದ್ದನು.
13 १३ दुसऱ्या दिवशी सकाळी दावीदाने त्यास भेटायला बोलावले. दावीदाबरोबर उरीयाने भोजन केले. दावीदाने त्यास बेहोश होईपर्यंत मद्य पाजले पण तरी उरीया घरी गेला नाही. त्या संध्याकाळीसुद्धा तो राजाच्या सेवकांबरोबरच महालाच्या दाराशी झोपायला गेला.
೧೩ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.
14 १४ दुसऱ्या दिवशी सकाळी दावीदाने यवाबासाठी एक पत्र लिहून ते उरीयाला न्यायला सांगितले.
೧೪ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.
15 १५ त्या पत्रात दावीदाने लिहिले होते, आघाडीवर जेथे तुंबळ युध्द चालले असेल, तेथे उरीयाला पाठवा. त्यास एकट्याला तेथे सोडा, म्हणजे तो युध्दात कामी येईल.
೧೫ಅದರಲ್ಲಿ, “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ” ಎಂಬುದಾಗಿ ಬರೆದಿದ್ದನು.
16 १६ यवाबाने नगराची टेहेळणी करून सर्वात लढवय्ये अम्मोनी कोठे आहेत ते पाहिले, आणि उरीयाला तेथे नेमले.
೧೬ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು.
17 १७ राब्बा नगरातील लोक यवाब विरूद्ध चालून आले. दावीदाची काही माणसे मारली गेली उरीया हित्ती हा त्यापैकी एक होता.
೧೭ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಸಹ ಸತ್ತನು.
18 १८ नंतर यवाबाने युध्दातील हकिकतीचे सविस्तरवृत्त संदेशवाहकाद्वारे दावीदाला पाठवले.
೧೮ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, “ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.
19 १९ युध्दात जे जे झाले ते सर्व सांगायला त्याने आपल्या नोकराला सांगितले.
೧೯ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದ ನಂತರ ಅರಸನು ಕೋಪಗೊಂಡು ನಿನ್ನನ್ನು,
20 २० यवाब सेवकाला म्हणाला, कदाचित राजा संतापून म्हणेल यवाबाचे सैन्य नगराच्या इतके जवळ भिडले कसे? शत्रू तटाच्या भिंतीवरून शिरसंधान करतील हे त्यास ठाऊक असायला हवे.
೨೦‘ನೀವು ಯುದ್ಧ ಮಾಡುವುದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರಗೋಡೆಯ ಮೇಲಣಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ?
21 २१ तेबेसमध्ये यरुब्बेशेथाचा पुत्र अबीमलेख याला एका स्त्रीने मारले हे आठवते ना? तिने तटबंदीवरून जात्याची तळी उचलून अबीमलेखवर टाकली. असे असताना हा इतक्या जवळ का गेला? राजा दावीद असे काही म्हणाला, तर त्यास हे ही म्हणावे की, उरीया हित्ती हा तुमचा सेवकही यामध्ये मारला गेला.
೨೧ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.
22 २२ निरोप्याने दावीदाकडे जाऊन यवाबाने जे जे सांगायला सांगितले ते सर्व कथन केले.
೨೨ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನೆಂದರೆ,
23 २३ तो म्हणाला, अम्मोन्यांनी आमच्यावर मैदानात हल्ला केला आम्ही त्यांचा सामना करून त्यांना नगराच्या वेशीपर्यंत पळवून लावले.
೨೩“ಆ ಊರಿನವರು ಮಹಾಸೈನ್ಯಬಲದೊಡನೆ ಯುದ್ಧಮಾಡುವುದಕ್ಕೆ ಬಯಲಿಗೆ ಬಂದರು. ನಾವು ಅವರನ್ನು ಊರ ಬಾಗಿಲಿನವರೆಗೂ ಹಿಂದಟ್ಟಿದೆವು.
24 २४ मग तटबंदीवरील काही लोकांनी आपल्या शिपायांवर बाणांचा वर्षाव केला त्यामध्ये काही जण ठार झाले उरीया हित्ती हा तुमचा सेवकही प्राणाला मुकला.
೨೪ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು” ಎಂದನು.
25 २५ दावीद त्या निरोप्याला म्हणाला, यवाबाला सांग निराश होऊ नको. हिम्मत सोडू नको. तलवारीने कोणाचाही संहार होऊ शकतो. राब्बावर आणखी जोरदार हल्ला चढवा, तुम्ही जिंकाल. यवाबाला माझा हा निरोप सांगून प्रोत्साहन दे.
೨೫ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು.
26 २६ उरीया मरण पावल्याचे बथशेबाला कळले तिने पतिनिधनाबद्दल शोक केला.
೨೬ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.
27 २७ काही काळाने तिचे दुःख ओसरल्यावर दावीदाने सेवकाकरवी तिला आपल्याकडे आणले. ती त्याची पत्नी झाली आणि त्याच्या पुत्राला तिने जन्म दिला. पण दावीदाचे हे नीच कृत्य परमेश्वरास पसंत पडले नाही.
೨೭ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.