< 2 शमुवेल 12 >

1 परमेश्वराने नाथानाला दावीदाकडे पाठवले. तेव्हा नाथान दावीदाकडे आला. नाथान म्हणाला, एका नगरात दोन माणसे होती एक श्रीमंत होता आणि एक गरीब.
ಯೆಹೋವ ದೇವರು ದಾವೀದನ ಬಳಿಗೆ ನಾತಾನನನ್ನು ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಅವನಿಗೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
2 श्रीमंत मनुष्याकडे मेंढरे आणि गुरे भरपूर होती.
ಐಶ್ವರ್ಯವಂತನಿಗೆ ಕುರಿದನಗಳು ಬಹಳವಾಗಿದ್ದವು.
3 पण गरीबाकडे त्याने विकत घेतलेल्या एका लहान मेंढी खेरीज काही नव्हते. त्याने मेंढीला खाऊपिऊ घातले. या गरीब मनुष्याच्या मुलाबाळांबरोबर ती वाढली त्याच्याच अन्नातला घास ती खाई त्याच्याच कपातले पाणी ती पिई त्याच्याच छातीवर डोके ठेवून झोपे त्या गरीबाला ती मेंढी मुलीसारखीच होती.
ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡ, ಅವನ ಮಕ್ಕಳ ಸಂಗಡ ಬೆಳೆದು, ಅವನ ಸ್ವಂತ ಆಹಾರ ತಿಂದು, ಅವನ ಪಾತ್ರೆಯಲ್ಲಿ ಕುಡಿದು, ಅವನ ಮಗ್ಗುಲಲ್ಲಿ ಮಲಗಿಕೊಂಡು, ಅವನಿಗೆ ಮಗಳ ಹಾಗಿತ್ತು.
4 एकदा एक पाहुणा त्या श्रीमंत मनुष्याकडे आला. त्या पाहुण्याला खाऊपिऊ घालायची श्रीमंत मनुष्याची इच्छा होती. पण आपल्या गुरामेंढरांमधून त्यास काही काढून घ्यायचे नव्हते, म्हणून त्याने त्या गरीब मनुष्याची मेंढी घेतली. तिला मारले आणि त्या पाहुण्यासाठी अन्न शिजवले.
“ಐಶ್ವರ್ಯವಂತನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ, ಐಶ್ವರ್ಯವಂತನು ಅತಿಥಿಗಾಗಿ ಅಡಿಗೆಯನ್ನು ಮಾಡಿಸುವುದಕ್ಕೆ ತನ್ನ ಕುರಿದನಗಳಲ್ಲಿ ಒಂದನ್ನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಕುರಿಯನ್ನು ತೆಗೆದುಕೊಂಡು, ತನ್ನ ಬಳಿಗೆ ಬಂದ ಮನುಷ್ಯನಿಗೋಸ್ಕರ ಅದನ್ನು ಅಡಿಗೆ ಮಾಡಿಸಿದನು,” ಎಂದನು.
5 दावीदाला त्या श्रीमंत मनुष्याचा फारच राग आला. तो नाथानला म्हणाला, परमेश्वराची शपथ या मनुष्यास प्राणदंड मिळाला पाहिजे
ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ, “ಯೆಹೋವ ದೇವರ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.
6 त्या मेंढीच्या चौपट पैसे त्याने भरले पाहिजेत, कारण त्याचे हे भयंकर कृत्य करताना त्यास दया आली नाही.
ಅವನು ಕನಿಕರಪಡದೆ ಈ ಕಾರ್ಯವನ್ನು ಮಾಡಿದ್ದರಿಂದ, ಆ ಕುರಿಗೋಸ್ಕರವಾಗಿ ನಾಲ್ಕರಷ್ಟು ತಿರುಗಿ ಕೊಡಬೇಕು,” ಎಂದನು.
7 तेव्हा नाथान दावीदाला म्हणाला, तूच तो मनुष्य आहेस. इस्राएलचा देव परमेश्वर म्हणतो, इस्राएलचा राजा म्हणून मी तुला अभिषेक केला, तुला शौलापासून वाचवले.
ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;
8 त्याचे घरदार आणि स्त्रिया तुझ्या स्वाधीन केल्या. इस्राएल आणि यहूदाचा तुला राजा केले. एवढे पुरेसे नव्हते म्हणून तुला आणखीही देत राहिलो.
ನಿನ್ನ ಯಜಮಾನನ ಮನೆಯನ್ನೂ, ನಿನ್ನ ಯಜಮಾನನ ಹೆಂಡತಿಯರನ್ನೂ ನಿನಗೆ ಕೊಟ್ಟು; ಇಸ್ರಾಯೇಲಿನ ಮನೆಯನ್ನೂ, ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ, ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು.
9 असे असताना तू परमेश्वराची आज्ञा का मोडलीस? त्याच्या दृष्टीने वाईट असे कृत्य का केलेस? उरीया हित्तीला तू तलवारीने मारलेस, आणि त्याच्या पत्नीचा स्वतःची पत्नी म्हणून स्विकार केलास. होय, अम्मोन्यांच्या तलवारीने तू त्याचा वध करवलास.
ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ.
10 १० तेव्हा आता ही तलवार तुझ्या कुटुंबाचा पिच्छा सोडणार नाही. तू उरीया हित्तीच्या पत्नीचे हरण केलेस. तुला माझी पर्वा नाही हेच यातून दिसते.
ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು.
11 ११ परमेश्वर म्हणतो, आता तुझ्यावर संकटे कोसळतील. अडचणींना सुरुवात तुझ्या घरातूनच होईल. तुझ्या स्त्रिया तुझ्यापासून मी हिरावून घेऊन. त्या तुझ्या एका आप्ताच्याच हवाली करीन. तो तुझ्या बायकां बरोबर झोपेल आणि ही गोष्ट सर्वांसमक्ष घडेल.
“ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ, ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು, ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲು ಹೊತ್ತಿನಲ್ಲಿಯೇ ಅವರ ಸಂಗಡ ಮಲಗುವನು.
12 १२ बथशेबाचा उपभोग तू गुपचूप घेतलास, पण हे मात्र सूर्याच्या साक्षीने, सर्व इस्राएलादेखत होईल.
ಏಕೆಂದರೆ ನೀನು ಮರೆಯಲ್ಲಿ ಅದನ್ನು ಮಾಡಿದೆ. ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲರೆಲ್ಲರ ಮುಂದೆಯೂ, ಹಗಲು ಹೊತ್ತಿನಲ್ಲಿಯೂ ಮಾಡುವೆನು,’” ಎಂದನು.
13 १३ मग दावीद नाथानला म्हणाला, माझ्याहातून परमेश्वराचा मोठा अपराध घडला आहे. नाथान तेव्हा दावीदाला म्हणाला, परमेश्वराने हा तुझा अपराध दूर केला आहे. तू मरणार नाहीस.
ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.
14 १४ पण परमेश्वराच्या शत्रूंना तू त्याचा उपहास करायला मोठे कारण दिलेस, म्हणून हा तुझा पुत्र मरेल.
ಹೇಗಿದ್ದರೂ ಈ ಕಾರ್ಯದಿಂದ ನೀನು ಯೆಹೋವ ದೇವರ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ, ನಿನಗೆ ಹುಟ್ಟಿದ ಮಗುವು ಖಂಡಿತವಾಗಿ ಸಾಯುವುದು,” ಎಂದನು.
15 १५ यानंतर नाथान घरी परतला. उरीयाची पत्नी बथशेबा आणि दावीद यांना झालेला मुलगा परमेश्वराच्या कोपामुळे खूप आजारी पडला.
ನಂತರ ನಾತಾನನು ತನ್ನ ಮನೆಗೆ ಹೋದನು. ಯೆಹೋವ ದೇವರು, ಊರೀಯನ ಹೆಂಡತಿಯು ದಾವೀದನಿಗೆ ಹೆತ್ತ ಕೂಸನ್ನು ಬಾಧಿಸಲು, ಅದು ಬಹಳ ಅಸ್ವಸ್ಥವಾಯಿತು.
16 १६ दावीदाने बाळासाठी देवाची प्रार्थना केली. दावीदाने अन्नपाण्याचा त्याग केला. घरात जाऊन रात्रभर जमिनीवर पडून राहिला.
ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು.
17 १७ घरातील वडीलधाऱ्या मनुष्यांनी येऊन दावीदाला जमिनीवरून उठवायचा खूप प्रयत्न केला. पण काही केल्या दावीद तेथून हलेना. त्यांच्याबरोबर खायला प्यायलाही त्याने नकार दिला.
ಅವನನ್ನು ಎಬ್ಬಿಸುವುದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು. ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಇದ್ದನು.
18 १८ सातव्या दिवशी ते मूल मरण पावले. मुलाच्या मृत्यूची बातमी दावीदाला द्यायला त्याचे नोकर कचरु लागले. ते म्हणाले, मुलगा जिवंत असतानाही आम्ही दावीदाशी बोलायला गेलो तरी तो ऐकत नसे, मग आता तर मूल मरण पावले असे आम्ही सांगितले तर तो आपल्या जिवाचे काही बरेवाईट करून घेईल.
ಮಗುವು ಏಳನೆಯ ದಿವಸ ಸತ್ತು ಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿಸುವುದಕ್ಕೆ ಭಯಪಟ್ಟರು. ಏಕೆಂದರೆ, “ಮಗುವು ಇನ್ನೂ ಬದುಕಿರುವಾಗ, ನಾವು ಅವನ ಸಂಗಡ ಮಾತನಾಡಿದಾಗ, ಅವನು ನಮ್ಮ ಮಾತನ್ನು ಕೇಳದೆ ಹೋದನು. ಈಗ ಮಗುವು ಸತ್ತು ಹೋಯಿತೆಂದು ನಾವು ಅವನಿಗೆ ಹೇಳಿದರೆ, ಅವನು ತನಗೆ ಏನಾದರೂ ಕೇಡುಮಾಡಿಕೊಳ್ಳುವನೋ?” ಎಂದುಕೊಂಡರು.
19 १९ पण आपल्या नोकरांची कुजबूज दावीदाने ऐकली त्यावरून मूल गेल्याचे तो मनोमन उमजला. त्याने नोकरांना विचारले, मूल गेले का? नोकरांनी होय म्हणून उत्तर दिले.
ಆದರೆ ದಾವೀದನು ತನ್ನ ಸೇವಕರು ಪಿಸುಗುಟ್ಟುವುದನ್ನು ಕಂಡು, ಮಗು ಸತ್ತು ಹೋಯಿತೆಂದು ಗ್ರಹಿಸಿಕೊಂಡನು. ದಾವೀದನು ತನ್ನ ಸೇವಕರಿಗೆ, “ಮಗುವು ಸತ್ತು ಹೋಯಿತೋ?” ಎಂದನು. ಅವರು, “ಸತ್ತು ಹೋಯಿತು,” ಎಂದರು.
20 २० तेव्हा दावीद जमिनीवरून उठला त्यांने आंघोळ केली, कपडे बदलून तयार झाला. मग आराधना करण्यासाठी परमेश्वराच्या मंदिरात गेला. त्यानंतर घरी जाऊन त्याने खायला मागितले. सेवकांनी त्यास वाढले आणि तो जेवला.
ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ, ತೈಲವನ್ನು ಹಚ್ಚಿಕೊಂಡವನಾಗಿ, ಬದಲು ವಸ್ತ್ರಗಳನ್ನು ಧರಿಸಿಕೊಂಡು, ಯೆಹೋವ ದೇವರ ಮನೆಗೆ ಹೋಗಿ, ಅವರನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನ ಕೋರಿಕೆಯ ಮೇರೆಗೆ ಅವರು ಅವನಿಗೆ ಆಹಾರವನ್ನು ಬಡಿಸಿದರು ಮತ್ತು ಅವನು ತಿನ್ನುತ್ತಿದ್ದನು.
21 २१ दावीदाचे सेवक त्यास म्हणाले, तुम्ही असे का वागलात? मूल जिवंत असताना तुम्ही अन्नत्याग केलात, शोक केलात. पण मुलगा वारल्यावर मात्र तुम्ही उठलात आणि खाल्लेत.
ಅವನ ಸೇವಕರು ಅವನಿಗೆ, “ಇದು ಏನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ, ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದೆ. ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದೆ,” ಎಂದರು.
22 २२ दावीदाने सांगितले, मूल जिवंत होते तेव्हा मी अन्न वर्ज्य केले आणि शोक केला, कारण मला वाटले न जाणो परमेश्वरास माझी दया येईल आणि बाळ जगेल.
ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು.
23 २३ पण आता ते गेलेच. तेव्हा आता मी कशासाठी उपास करू? मुलाचे तर प्राण मी परत आणू शकत नाही. ते गेलेच. एक दिवस मीच त्याच्या भेटीला जाईन पण तो आता परत येणे नाही.
ಆದರೆ ಈಗ ಸತ್ತಿದೆಯಲ್ಲಾ. ನಾನು ಉಪವಾಸ ಮಾಡುವುದು ಏಕೆ? ನಾನು ಅದನ್ನು ತಿರುಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು. ಆದರೆ ಅದು ನನ್ನ ಬಳಿಗೆ ತಿರುಗಿ ಬರುವುದಿಲ್ಲ,” ಎಂದನು.
24 २४ दावीदाने मग आपली पत्नी बथशेबा हिचे सांत्वन केले. तिच्याशी त्याने शरीरसंबंध केला. बथशेबा पुन्हा गरोदर राहिली. तिला दुसरा मुलगा झाला. दावीदाने त्याचे नाव शलमोन ठेवले. शलमोनावर परमेश्वराची प्रीती होती.
ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಳನ್ನು ಆಧರಿಸಿ, ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು. ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಯೆಹೋವ ದೇವರು ಅವನನ್ನು ಪ್ರೀತಿ ಮಾಡಿದರು.
25 २५ त्याने नाथान या संदेष्ट्यामार्फत दावीदाला निरोप पाठविला. नाथानने त्याचे नाव यदीद्या, म्हणजेच देवाला प्रिय असे ठेवले. परमेश्वराच्या वतीने नाथानने हे केले.
ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.
26 २६ अम्मोन्यांच्या राब्बावर हल्ला करून यवाबाने हे राजधानीचे नगर काबीज केले.
ಯೋವಾಬನು ಅಮ್ಮೋನಿಯರ ರಬ್ಬತಿನ ಮೇಲೆ ಯುದ್ಧಮಾಡಿ, ಅರಮನೆ ಇದ್ದ ಪಟ್ಟಣವನ್ನು ವಶಪಡಿಸಿಕೊಂಡನು.
27 २७ यवाबाने निरोप्यामार्फत दावीदाला निरोप पाठवला राब्बाशी लढाई देऊन मी हे जलनगर हस्तगत केले आहे.
ಯೋವಾಬನು ದಾವೀದನಿಗೆ, “ನಾನು ರಬ್ಬಕ್ಕೆ ವಿರೋಧವಾಗಿ ಯುದ್ಧಮಾಡಿ, ನೀರು ಪೂರೈಕೆಯ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.
28 २८ आता इतर लोकांस एकत्र आणून या शहराचा ताबा घ्या मी घेण्यापूर्वी हे करा. मी जर आधी ताबा घेतला तर ते नगर माझ्या नावाने ओळखले जाईल.
ಈಗ ನಾನು ಪಟ್ಟಣವನ್ನು ಹಿಡಿದು, ಅದು ನನ್ನ ಹೆಸರಿಗೆ ಕೀರ್ತಿ ಬಾರದ ಹಾಗೆ ನೀನು ಜನರನ್ನು ಕೂಡಿಸಿಕೊಂಡು ಬಂದು, ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ,” ಎಂದು ಹೇಳಿ ದೂತರನ್ನು ಕಳುಹಿಸಿದನು.
29 २९ मग दावीद सर्व लोकांस घेऊन राब्बाकडे गेला. राब्बा येथे लढाई करून त्याने त्याचा ताबा घेतला.
ಹಾಗೆಯೇ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿ ಅದನ್ನು ವಶಮಾಡಿಕೊಂಡನು.
30 ३० त्यांच्या राजाच्या मस्तकावरचा मुकुट दावीदाने काढला. हा मुकुट सोन्याचा असून त्याचे वजन सुमारे एक किक्कार होते. त्यामध्ये मौल्यवान रत्ने जडवलेली होती, तो मुकुट लोकांनी दावीदाच्या मस्तकावर ठेवला. दावीदाने बऱ्याच किंमती वस्तू आपल्याबरोबर आणल्या.
ಇದಲ್ಲದೆ ದಾವೀದನು ಅಮ್ಮೋನಿಯರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.
31 ३१ राब्बा नगरातील लोकांसही त्याने बाहेर नेले त्यांना कुऱ्हाडी, करवती, लोखंडी दाताळी यांनी काम करायला ठेवले. त्यांच्याकडून जबरदस्तीने वीट कामही करून घेतले. सर्व अम्मोनी नगरांमध्ये दावीदाने असेच केले. नंतर दावीद आपल्या सैन्यासह यरूशलेमेला परतला.
ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.

< 2 शमुवेल 12 >