< 2 शमुवेल 15 >

1 यानंतर अबशालोमने स्वत: साठी रथ आणि घोड्यांची तयारी केली, तो रथातून जात असताना पन्नास माणसे त्याच्यापुढे धावत असत.
ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.
2 रोज लवकर ऊठून सकाळीच तो वेशीपाशी जाई. आपल्या अडचणी घेऊन निवाड्यासाठी राजाकडे जायला निघालेल्या लोकांस भेटून त्यांच्याशी बोलत असे. चौकशी करून तो विचारी, तू कोणत्या शहरातून आलास? तो सांगत असे, मी इस्राएलच्या अमुक वंशातला.
ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.
3 तेव्हा अबशालोम म्हणे, तुमचे म्हणणे खरे आहे, पण राजा तुमच्या अडचणीत लक्ष घालणार नाही.
ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.
4 अबशालोम पुढे म्हणे, मला कोणी येथे न्यायाधीश म्हणून नेमले तर किती बरे होईल. तसे झाले तर फिर्याद घेऊन येणाऱ्या प्रत्येकाला मी मदत करू शकेन. यांच्या प्रकरणांना मी न्याय देऊ शकेन.
ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.
5 अशावेळी कोणी त्याच्याजवळ येऊन त्यास आभिवादन करू लागला, तर अबशालोम त्या मनुष्यास मित्रासारखी वागणूक देई. आपला हात पुढे करून तो त्यास स्पर्श करी त्याचे चुंबन घेई.
ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.
6 राजा दावीदाकडे न्याय मागण्यासाठी आलेल्या सर्व इस्राएलांना त्याने अशाच प्रकारची वागणुक देऊन सर्व इस्राएलांची मने जिंकली.
ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.
7 पुढे चार वर्षानी अबशालोम राजा दावीदाला म्हणाला, हेब्रोनमध्ये मी परमेश्वरास नवस बोललो होतो. तो फेडण्यासाठी मला जाऊ द्या.
ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.
8 अराममधील गशूर येथे राहत असताना मी तो बोललो होतो, परमेश्वराने मला पुन्हा यरूशलेमेला नेले, तर मी परमेश्वराच्या सेनेला वाहून घेईन असे मी बोललो होतो.
ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.
9 तेव्हा राजा दावीदाने त्यास निश्चिंत होऊन जाण्यास सांगितले. अबशालोम हेब्रोन येथे आला.
ಆಗ ಅರಸನು, “ಹೋಗಿಬಾ, ನಿನಗೆ ಶುಭವಾಗಲಿ” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.
10 १० पण त्याने इस्राएलच्या सर्व वंशामध्ये हेर पाठवून लोकांस कळवले रणशिंग फुंकल्याचे ऐकल्यावर अबशालोम हेब्रोनचा राजा झाला आहे असा तुम्ही घोष करा.
೧೦ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.
11 ११ अबशालोमने स्वत: बरोबर दोनशे माणसे घेतली यरूशलेम सोडून ती त्याच्या बरोबर निघाली. पण त्यांना त्याच्या बेताची कल्पना नव्हती.
೧೧ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.
12 १२ अहिथोफेल हा तेव्हा दावीदाचा एक सल्लागार होता. हा गिलो या गावाचा होता. यज्ञ करत असताना अबशालोमने अहिथोफेलला गिलोहून बोलावून घेतले. सर्व काही अबशालोमच्या योजने प्रमाणे सुरळीत चालले होते. त्यास अधिकाधिक पाठिंबा मिळत होता.
೧೨ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.
13 १३ एका निरोप्याने दाविदास वर्तमान सांगितले की इस्राएलच्या लोकांचा कल अबशालोमकडे झुकत आहे.
೧೩ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.
14 १४ तेव्हा यरूशलेमेमध्ये आपल्या भोवती असलेल्या सर्व सेवकांना दावीद म्हणाला, आता आपण पळ काढला पाहिजे. आपण येथून निसटलो नाही तर अबशालोमच्या तावडीत सापडू. त्याने पकडायच्या आतच आपण तातडीने निघून जाऊ. नाही तर तो आपल्यापैकी कोणालाही शिल्लक ठेवणार नाही. यरूशलेमेच्या लोकांस तो मारून टाकेल.
೧೪ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, “ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು” ಎಂದು ಹೇಳಿದನು.
15 १५ तेव्हा राजाचे सेवक त्यास म्हणाले, तुम्ही म्हणाल ते करायला आम्ही तयार आहोत.
೧೫ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು.
16 १६ आपल्या कुटुंबातील सर्वांसह राजा बाहेर पडला. आपल्या दहा उपपत्नी होत्या त्यांना त्याने घराचे रक्षण करायला म्हणून मागे ठेवले.
೧೬ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.
17 १७ राजा आणि त्याच्या मागोमाग सर्व लोक निघून गेले अगदी शेवटच्या घरापाशी ते थांबले.
೧೭ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.
18 १८ त्याचे सर्व सेवक तसेच एकूणएक करेथी, पलेथी आणि सहाशे गित्ती राजामागोमाग चालत गेले.
೧೮ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.
19 १९ गथ येथील इत्तयला राजा म्हणाला, तू ही आमच्याबरोबर कशाला येतोस? मागे फिर आणि नवीन राजा अबशालोम याला साथ दे. तू परकाच आहेस ही तुझी माय भूमी नव्हे.
೧೯ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.
20 २० तू कालच येऊन मला मिळालास. आम्ही वाट फुटेल तिकडे जाणार तू कशाला भटकत फिरतोस? तेव्हा तुझ्या बांधवांसह परत फिर, तुला प्रेमाची आणि न्यायाची वागणूक मिळो.
೨೦ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
21 २१ पण इत्तय राजाला म्हणाला परमेश्वराची शपथ, तुम्ही जिवंत असेपर्यंत मी तुमची साथ सोडणार नाही. आता जगणे मरणे तुमच्याबरोबरच.
೨೧ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.
22 २२ दावीद इत्तयला म्हणाला, मग चल तर, किद्रोन ओहोळा पलीकडे आपण जाऊ. तेव्हा इत्तय आपल्या बरोबरच्या सर्व मुला-मनुष्यांसह किद्रोन ओहोळा पलीकडे गेला.
೨೨ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.
23 २३ सर्व लोक मोठ्याने आकांत करत होते. राजाने ही किद्रोन झरा ओलांडला मग सर्वजण वाळवंटाकडे निघाले.
೨೩ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.
24 २४ सादोक आणि त्याच्या बरोबरचे सर्व लेवी देवाचा कोश घेऊन निघाले होते. त्यांनी देवाचा कराराचा कोश खाली ठेवला. यरूशलेमेमधून सर्व लोक बाहेर पडेपर्यंत अब्याथार कोशाजवळ उभा राहून अर्पणे अर्पित होता.
೨೪ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.
25 २५ राजा दावीद सादोकाला म्हणाला, हा देवाचा कोश यरूशलेमेला परत घेऊन जा. परमेश्वराची कृपा असेल तर तो मला पुन्हा येथे आणेल. यरूशलेम आणि हे त्याचे मंदिर मला पुन्हा पाहता येईल.
೨೫ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.
26 २६ पण तो माझ्यावर प्रसन्न नसेल तर त्याच्या मनात असेल ते माझे होईल.
೨೬ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು.
27 २७ पुढे राजा सादोक याजकाला म्हणाला, तू द्रष्टा आहेस तू सुखरुप नगरात परत जा. तुझा पुत्र अहीमास आणि अब्याथारचा मुलगा योनाथान यांनाही घेऊन जा.
೨೭ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.
28 २८ हा प्रदेश ओलांडून वाळवंट लागते, त्याठिकाणी मी तुझा संदेश येईपर्यंत थांबतो.
೨೮ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು” ಎಂದು ಹೇಳಿದನು.
29 २९ तेव्हा देवाचा कोश घेऊन सादोक आणि अब्याथार यरूशलेमेला परतले आणि तिथेच राहिले.
೨೯ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.
30 ३० दावीद शोक करत जैतूनाच्या डोंगरावर गेला. मस्तक झाकून, अनवाणी तो चालत राहिला त्याच्याबरोबरच्या लोकांनीही त्याचे अनुकरण केले तेही रडत होते.
೩೦ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.
31 ३१ एकाने दावीदाला सांगितले अहिथोफेल हा अबशालोम बरोबर कारस्थाने करणाऱ्यांपैकी आहे. तेव्हा दावीदाने देवाची करूणा भाकली तो म्हणाला, परमेश्वरा, अहिथोफेलचा सल्ला निष्फळ ठरु दे.
೩೧ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.
32 ३२ दावीद डोंगरमाथ्यावर पोहोचला येथे तो अनेकदा देवाची आराधना करत असे. त्या वेळी हूशय अर्की त्यास भेटायला आला. त्याचा अंगरखा फाटलेला होता. त्याने डोक्यात माती घालून घेतलेली होती.
೩೨ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.
33 ३३ दावीद हूशयला म्हणाला, तू माझ्याबरोबर आलास तर एवढे लोक आहेत त्यामध्ये आणखी तुझा भार.
೩೩ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ.
34 ३४ पण तू यरूशलेमेला परतलास तर अहिथोफेलची मसलत तू धुळीला मिळवू शकशील. अबशालोमला सांग, महाराज मी तुमचा दास आहे. मी तुमच्या वडीलांच्या सेवेत होतो, पण आता तुमची सेवा करीन.
೩೪ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.
35 ३५ सादोक आणि अब्याथार हे याजक तुझ्याबरोबर असतील. राजाच्या घरी जे ऐकशील ते सगळे त्यांच्या कानावर घालत जा.
೩೫ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ.
36 ३६ सादोकाचा मुलगा अहीमास आणि अब्याथारचा योनाथान हे ही त्यांच्या बरोबर आहेत. त्यांच्या मार्फत तू मला खबर कळवत जा.
೩೬ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.
37 ३७ तेव्हा दावीदाचा मित्र हूशय यरूशलेमेमध्ये परतला. अबशालोम ही तेथे आला.
೩೭ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.

< 2 शमुवेल 15 >