< 2 शमुवेल 21 >

1 दावीदाच्या कारकिर्दीत एकदा दुष्काळ पडला. हा दुष्काळ तीन वर्षे टिकला तेव्हा दावीदाने परमेश्वराची प्रार्थना केली परमेश्वराने सांगितले, “शौल आणि त्याचे खुनी रक्तपिपासू घराणे यावेळच्या दुष्काळाला जबाबदार आहेत. शौलने गिबोन्यांना मारले म्हणून हा दुष्काळ पडला.”
ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.
2 गिबोनी म्हणजे इस्राएली नव्हेत ते अमोरी होत इस्राएलींनी त्यांना दुखापत न करण्याचे वचन दिले होते. तरी शौलाने गिबोन्यांच्या वधाचा प्रयत्न केला. इस्राएली आणि यहूदा लोकांविषयीच्या अति उत्साहामुळे त्याने तसे केले गिबोन्यांना एकत्र बोलावून राजा दावीदाने त्यांच्याशी बोलणे केले.
ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.
3 दावीद त्यांना म्हणाला, “तुमच्यासाठी मी काय करू? इस्राएलाचा कलंक पुसला जाईल आणि तुम्ही या परमेश्वराच्या प्रजेला आशीर्वाद द्याल यासाठी मी काय करू शकतो?”
ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.
4 तेव्हा गिबोनी दावीदाला म्हणाला, “शौलाच्या घराण्याने जे केले त्याची सोन्यारुप्याने भरपाई होऊ शकत नाही. पण त्यासाठी इस्राएलींना जिवे मारण्याचाही आम्हास हक्क नाही.” दावीद म्हणाला, “ठीक तर तुमच्यासाठी मी आता काय करावे?”
ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿ ಬಂಗಾರದಿಂದ ಮುಗಿಯಲಾರದು. ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ” ಎಂದು ಉತ್ತರ ಕೊಟ್ಟರು. ಆಗ ಅರಸನು ಅವರಿಗೆ, “ಏನು ಮಾಡಬೇಕು ಹೇಳಿರಿ ಮಾಡುತ್ತೇನೆ” ಅಂದನು.
5 ते राजाला म्हणाले, “ज्या मनुष्याने आमचा नाश केला व इस्राएली प्रदेशात राहणाऱ्या आमच्या सर्व लोकांचा नाश करण्याचे ज्याने योजिले होते
ಆಗ ಅವರು, “ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು.
6 त्या शौलाच्या वंशातले सात मुले आमच्या हवाली कर. शौलाला परमेश्वराने राजा म्हणून निवडले होते. म्हणून शौलाच्या गिबा डोंगरावर त्याच्या मुलांना आम्ही देवासमक्षच फाशी देऊ.” राजा दावीद म्हणाला, “मला हे मान्य आहे. त्यांना मी तुमच्या हवाली करतो.”
ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.
7 पण योनाथानाचा मुलगा मफीबोशेथ याला राजाने अभय दिले. योनाथान हा शौलाचा मुलगा. पण दावीदाने त्यास त्याच्या कुटुंबियांच्या सुरक्षिततेचे परमेश्वरास स्मरून वचन दिले होते, म्हणून मफीबोशेथला राजाने इजा पोचू दिली नाही.
ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.
8 अरमोनी आणि मफीबोशेथ हे शौलाला अय्याची कन्या रिस्पा या पत्नीपासून झालेली अपत्य शौलला मीखल नावाची कन्याही होती. अद्रीएलशी तिचे लग्न झाले होते. महोलाथी येथील बर्जिल्ल्याचा हा पुत्र. या दांपत्याची पाच मुलेही दावीदाने ताब्यात घेतली.
ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.
9 या सात जणांना त्याने गिबोन्यांच्या स्वाधीन केले. गिबोन्यांनी त्यांना गिबा डोंगरावर परमेश्वरासमोर फाशी दिली. ते सातजण एकदमच प्राणाला मुकले त्यांना ठार केले गेले ते दिवस हंगामाच्या सुरुवातीचे होते. जवाच्या पिकाच्या सुरुवातीचा तो वसंतातील काळ होता.
ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು
10 १० अय्याची कन्या रिस्पा हिने शोकाकुल होऊन एक मोठे कापड त्या गिबाच्या खडकावर अंथरले. तेव्हापासून पावसास सुरुवात होईपर्यंत ते तसेच राहू दिले. रिस्पाने रात्रंदिवस त्या मृत देहांची निगराणी केली. दिवसा पक्ष्यांनी आणि रात्री जंगली जनावरांनी त्याचे लचके तोडू नयेत म्हणून राखण केली.
೧೦ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.
11 ११ शौलाची उपपत्नी व अय्याची कन्या रिस्पा काय करत आहे ते लोकांनी दावीदाच्या कानावर घातले.
೧೧ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.
12 १२ तेव्हा दावीदाने याबेश गिलाद मधील लोकांकडून शौल आणि योनाथान यांच्या अस्थी आणवल्या शौल आणि योनाथान यांचा गिलबोवा येथे वध झाल्यावर याबोश गिलादाच्या लोकांनी त्या नेल्या होत्या. बेथ-शान मधील भिंतीवर पलिष्ट्यांनी या दोघांचे देह टांगले होते. पण बेथशानच्या लोकांनी येऊन भरवस्तीतील ती प्रेते चोरून नेली.
೧೨ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
13 १३ याबेश-गिलाद मधून शौल आणि त्याचा पुत्र योनाथान या दोघांच्या अस्थी दावीदाने आणल्या. तसेच त्या फाशी दिल्या गेलेल्या सात जणांचे मृतदेहही आणले.
೧೩ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು.
14 १४ शौल आणि योनाथानाच्या अस्थी त्यांनी बन्यामीन प्रदेशातील सेला येथे पुरल्या. शौलाचे वडील कीश यांच्या कबरीत त्या पुरल्या राजाच्या आज्ञे बरहुकूम लोकांनी हे सर्व केले. तेव्हा देवाने लोकांची प्रार्थना ऐकली आणि तिला त्याने प्रतिसाद दिला.
೧೪ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.
15 १५ पलिष्ट्यांनी पुन्हा इस्राएलीशी युध्द पुकारले तेव्हा दावीद आपल्या लोकांबरोबर पलिष्ट्यांशी युध्द करायला निघाला. पण यावेळी दावीद फार थकून गेला.
೧೫ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.
16 १६ त्यावेळी तेथे रेफाई वंशातला इशबी-बनोब हा एक बलाढ्य मनुष्य होता. त्याच्या भाल्याचे वजनच तिनशे शेकेल पितळ होते. त्याच्याजवळ नवी कोरी तलवार होती. दावीदाला मारायचा त्याने प्रयत्न केला.
೧೬ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.
17 १७ पण सरुवेचा मुलगा अबीशय याने या पलिष्ट्याला मारले आणि दावीदाचे प्राण वाचवले. तेव्हा दावीदाबरोबरच्या लोकांनी दावीदाला शपथ घालून सांगितले, “तुम्ही आता लढाईवर येऊ नये. नाहीतर इस्राएल एका मोठ्या नेत्याला मुकेल.”
೧೭ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.
18 १८ यानंतर गोब येथे पलिष्ट्यांशी आणखी एकदा लढाई झाली. तेव्हा हूशाथी सिब्बखय याने रेफाई वंशातील सफ याचा वध केला.
೧೮ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು.
19 १९ गोब येथेच पुन्हा पलिष्ट्यांशी युध्द झाले. तेव्हा बेथलहेमचा यारे ओरगीम याचा मुलगा एलहानान याने गथचा गल्याथ याला ठार केले. विणकराच्या तुरीएवढा त्याचा भाला होता.
೧೯ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
20 २० गथ येथे आणखी एक युध्द झाले. तेथे एक धिप्पाड पुरुष होता. त्याच्या हातापायांना सहा सहा, म्हणजे एकंदर चोवीस बोटे होती. हा ही रेफाई वंशातला होता.
೨೦ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.
21 २१ त्याने इस्राएलाला आव्हान दिले पण योनाथानाने या मनुष्याचे प्राण घेतले. हा योनाथान म्हणजे दावीदाचा भाऊ शिमी याचा मुलगा.
೨೧ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.
22 २२ ही माणसे गथ येथील रेफाई वंशातील होती. दावीद आणि त्याचे लोक यांनी त्यांना ठार केले.
೨೨ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರೂ ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

< 2 शमुवेल 21 >