< 2 शमुवेल 24 >
1 १ इस्राएलवर परमेश्वराचा पुन्हा एकदा कोप झाला. आणि त्याने दावीदाला इस्राएलांविरुध्द चेतवले. दावीद म्हणाला, “आधी इस्राएल आणि यहूदा यांची शिरगणती करा.”
ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.
2 २ राजा दावीद सेनापती यवाबाला म्हणाला, “दानपासून बैर-शेबापर्यंत इस्राएलच्या झाडून सर्व वंशातील लोकांची मोजदाद करा, म्हणजे मग मला लोकसंख्या किती आहे ते कळेल.”
ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.
3 ३ पण यवाब राजाला म्हणाला, “आपले लोक कितीही असोत देव परमेश्वर त्यांना शतगुणित करो. तुम्हास हे सर्व पाहायला मिळो पण तुम्हास असे का करावेसे वाटते?”
ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.
4 ४ पण राजा दावीदाचे शब्द यवाबाच्या शब्दांपेक्षा प्रभावी ठरले. आणि त्यांनी यवाबाला आणि इतर सैन्याधिकाऱ्यांना इस्राएल प्रजेची मोजदाद करण्यास सांगितले. तेव्हा ते सर्व या कामाला लागले.
ಆದಾಗ್ಯೂ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆದ್ದರಿಂದ ಯೋವಾಬನೂ, ಸೈನ್ಯಾಧಿಪತಿಗಳೂ ಇಸ್ರಾಯೇಲರಲ್ಲಿ ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
5 ५ यार्देन ओलांडून त्यांनी अरोएर येथे तळ दिला. ही जागा नगराच्या उजवीकडे होती. (नगर याजेरच्या वाटेवर, गादच्या खोऱ्याच्या मध्यावर आहे.)
ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.
6 ६ तेथून ते गिलादला आणि पुढे तहतीम होदशी या प्रदेशात गेले. दान्यान आणि तिथून वळसा घेऊन सीदोन येथे गेले.
ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.
7 ७ सोर (तायर) हा गड आणि हिव्वी व कनानी यांची नगरे इकडे ते गेले. तेथून यहूदा देशाच्या दक्षिण दिशेला बैर-शेबा इथपर्यंत गेले.
ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.
8 ८ सगळा देश पालथा घालून ते नऊ महिने वीस दिवसानी यरूशलेम येथे पोहोचले.
ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
9 ९ यवाबाने प्रजेच्या मोजदादीची यादी राजाला दिली. इस्राएलमध्ये तलवारधारी पुरुष आठ लक्ष होते. यहूदात ही संख्या पाच लक्ष होती.
ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.
10 १० हे काम पार पाडल्यावर मात्र दावीदाला मनोमन लाज वाटली. तो परमेश्वरास म्हणाला, “माझ्याहातून हे मोठे पाप घडले आहे. या माझ्या अपराधाबद्दल मला क्षमा कर. माझा हा मोठाच मूर्खपणा झाला आहे.
ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.
11 ११ दावीद सकाळी उठला, तेव्हा दावीदाचा संदेष्टा गाद याला परमेश्वराची वाणी प्रकट झाली.”
ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,
12 १२ परमेश्वर त्यास म्हणाला, “दावीदाला जाऊन सांग, परमेश्वर म्हणतो, तुझ्यापुढे मी तीन गोष्टी ठेवतो त्यापैकी एकीची निवड कर.”
“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.
13 १३ गादने दावीदाकडे येऊन त्यास हे सर्व सांगितले. तो दावीदाला म्हणाला, “तिन्हीपैकी एकीची निवड कर. तुझ्या देशात सात वर्षे दुष्काळ पडावा, किंवा शत्रूंनी तीन महिने तुझा पाठलाग करावा, की तीन दिवस रोगराई पसरावी? विचार कर आणि मी परमेश्वरास काय सांगावे ते सांग.”
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.
14 १४ दावीद गादला म्हणाला, “मी पेचात सापडलो आहे खरा! पण परमेश्वर दयाळू आहे. परमेश्वरच मला शिक्षा देवो लोकांच्या हाती मी पडू नये.”
ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.
15 १५ तेव्हा परमेश्वराने इस्राएलवर रोगराई ओढवू दिली. सकाळी तिची सुरुवात होऊन नेमलेल्या काळपर्यंत ती राहिली. दानपासून बैर-शेबापर्यंत सत्तर हजार माणसे मृत्युमुखी पडली.
ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
16 १६ यरूशलेमेच्या संहारासाठी देवदूताचा हात उंचावला. पण झाल्या गोष्टीबद्दल परमेश्वरास फार वाईट वाटले. लोकांचा संहार करणाऱ्या देवदूताला परमेश्वर म्हणाला, “आता पुरे तुझा हात खाली घे.” तेव्हा हा देवदूत अरवना यबूसी याच्या खळ्याजवळ होता.
ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.
17 १७ लोकांस मारणाऱ्या देवदूताला दावीदाने पाहिले. दावीद परमेश्वरास म्हणाला, “माझे चुकले माझ्या हातून पाप घडले आहे. पण हे लोक मेंढरांसारखे माझ्या मागून आले. त्यांचे काहीच चुकले नाही. तेव्हा तू मला आणि माझ्या कुटुंबियांना शिक्षा कर.”
ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.
18 १८ त्या दिवशी गाद दावीदाकडे आला. तो म्हणाला, “अरवना यबूसीच्या खळ्यावर परमेश्वराप्रीत्यर्थ एक वेदी बांध.”
ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.
19 १९ दावीदाने मग परमेश्वराच्या इच्छेनुसार गादच्या म्हणण्याप्रमाणे केले. तो अरवनाला भेटायला गेला.
ಆಗ ದಾವೀದನು ಗಾದನ ಮುಖಾಂತರವಾಗಿ ತನಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಹೋದನು.
20 २० अरवनाने राजाला आणि त्याच्या सेवकांना येताना पाहिले. त्याने पुढे होऊन जमिनीपर्यंत लवून नमस्कार केला.
ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.
21 २१ अरवना म्हणाला, “माझे स्वामी का बरे आले आहेत? दावीद म्हणाला, तुझे खळे विकत घ्यायला. म्हणजे मग मी परमेश्वरा प्रित्यर्थ इथे एक वेदी बांधीन. मग रोगराई संपुष्टात येईल.”
ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.
22 २२ अरवना म्हणाला, “स्वामींनी मनाला येईल ते अर्पण करण्यासाठी घ्यावे. होमबलीसाठी हे बैल आहेत. इंधनासाठी मळणीची औते आणि बैलांचे सामान आहे.
ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು.
23 २३ अरवना महाराज, हवे ते मी तुम्हास देईन, महराजांवर परमेश्वराची मर्जी असावी. अशीही कामना त्याने पुढे व्यक्त केली.”
ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು.
24 २४ पण राजा अरवनाला म्हणाला नाही, “तुला मी खरे सांगतो, मी ही जमीन विकतच घेणार आहे फुकटात मिळालेले मी होमबली म्हणून परमेश्वर देवाला अर्पण करणार नाही.” तेव्हा दावीदाने खळे आणि बैल पन्नास शेकेल चांदी देऊन विकत घेतले.
ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.
25 २५ मग तेथे परमेश्वराप्रीत्यर्थ वेदी बांधली, होमबली आणि शांत्यर्पणे केली. परमेश्वराने त्याची प्रार्थना ऐकली. इस्राएलवरील रोगराई परमेश्वराने संपुष्टात आणली.
ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.